• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ಅಕ್ಟೋಬರ್ ಆತಂಕ; ಬೆಂಗಳೂರಿನಲ್ಲಿ ಜಗತ್ತಿನ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್

cknewsnow desk by cknewsnow desk
July 17, 2020
in NEWS IN USE
Reading Time: 1 min read
0
ಅಕ್ಟೋಬರ್ ಆತಂಕ; ಬೆಂಗಳೂರಿನಲ್ಲಿ ಜಗತ್ತಿನ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್
922
VIEWS
FacebookTwitterWhatsuplinkedinEmail

ಬೆಂಗಳೂರು: ಅಕ್ಟೋಬರ್ ತಿಂಗಳ ಹೊತ್ತಿಗೆ ಕೋವಿಡ್-19 ರಾಜಧಾನಿಯಲ್ಲಿ ಪರಾಕಾಷ್ಠೆಯ ಹಂತವನ್ನು ತಲುಪಲಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ಎಚ್ಚರಿಕೆ ನೀಡಿರುವ ಬೆನ್ನಲ್ಲಿಯೇ ರಾಜ್ಯ ಸರಕಾರ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡು ಸಜ್ಜಾಗಿದೆ.

ಕೆಲ ದಿನಗಳ ಹಿಂದೆ ಇದ್ದಕ್ಕಿದ್ದ ಹಾಗೆ ಪ್ರಕರಣಗಳು ದಿಢೀರನೇ ಹೆಚ್ಚಾಗಿದ್ದ ಕಾರಣಕ್ಕೆ ಬೇಸ್ತು ಬಿದ್ದಿದ್ದ ಸರಕಾರ ಸಾರ್ವಜನಿಕರಿಂದ ತೀವ್ರ ಟೀಕೆಗೆ ಗುರಿಯಾಗಿತ್ತು. ಸೋಂಕಿತರನ್ನು ಗುರುತಿಸಿ ಅವರನ್ನು ಸಕಾಲಕ್ಕೆ ಆಸ್ಪತ್ರೆಗೆ ಕರೆದೊಯ್ಯುವುದರಲ್ಲಿ ತೀವ್ರ ಗೊಂದಲ ಉಂಟಾಗಿತ್ತಲ್ಲದೆ, ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಾರದ ಕಾರಣಕ್ಕೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಬಿಬಿಎಂಪಿಯ ಈ ವಿಳಂಬತೆಯಿಂದ ಸರಕಾರದ ಮೇಲೆ ಮಾಧ್ಯಮಗಳು ಮುಗಿಬಿದ್ದಿದ್ದವು. ಅದರ ಬೆನ್ನಲ್ಲೇ ಮೈಕೊಡವಿಕೊಂಡು ಮೇಲಿದ್ದಿರುವ ಸರಕಾರ ಈಗ ಚುರುಕಾಗಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.

ಇದರ ಭಾಗವಾಗಿ ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ (ಬಿಐಇಎಸ್) ದಲ್ಲಿ 10,100 ಹಾಸಿಗೆಗಳ ಬೃಹತ್ ಚಿಕಿತ್ಸಾ ಕೇಂದ್ರವೊಂದು ಸಿದ್ಧವಾಗಿದೆ. ಇದು ಜಗತ್ತಿನಲ್ಲಿಯೇ ಅತಿದೊಡ್ಡ ಕೋವಿಡ್ ಚಿಕಿತ್ಸಾ ಕೇಂದ್ರ. ಕೆಲದಿನಗಳ ಹಿಂದೆ ದೆಹಲಿಯ ಛತರ್ಪುರದ ರಾಧಾಸ್ವಾಮಿ ಸತ್ಸಂಗ್ ಬಿಯಾಸ್ ನಲ್ಲಿ10,000 ಹಾಸಿಗೆಗಳ ಸಾಮರ್ಥ್ಯದ ಆರೈಕೆ ಕೇಂದ್ರವನ್ನು ಸ್ಥಾಪಿಸಲಾಗಿತ್ತು. ಅದಕ್ಕಿಂತ ಬಿಐಇಎಸ್ ಚಿಕಿತ್ಸಾ ಕೇಂದ್ರವು 100 ಹಾಸಿಗೆಗಳನ್ನ ಹೆಚ್ಚು ಹೊಂದಿದೆ.

ಬಿಐಇಎಸ್ ಕೇಂದ್ರವು ಇನ್ನೊಂದು ವಾರದಲ್ಲಿ ಸೇವೆಗೆ ಮುಕ್ತವಾಗಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಇಲ್ಲಿ ಏಕಕಾಲಕ್ಕೆ 10,100 ಸೋಂಕಿತರಿಗೆ ಚಿಕಿತ್ಸೆ ನೀಡಬಹುದು. ಅದಕ್ಕಾಗಿ ನುರಿತ 2200 ಸಿಬ್ಬಂದಿ 24/7 ಕೆಲಸ ಮಾಡಲಿದ್ದಾರೆ.

ಯಾಕೆ ಇಷ್ಟು ಚಿಕಿತ್ಸಾ ಕೇಂದ್ರ?:
ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಪ್ರಮಾಣ ನಾಗಾಲೋಟದಲ್ಲಿ ಏರುತ್ತಿದೆ. ಈಗಾಗಲೇ ವಿಕ್ಟೋರಿಯಾ, ಬೌರಿಂಗ್ ಸೇರಿದಂತೆ ಸರಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆಗಳು ಭರ್ತಿಯಾಗಿವೆ. ಹೀಗಾಗಿ ಖಾಸಗಿ ಆಸ್ಪತ್ರೆಗಳ ಹಾಸಿಗೆಗಳನ್ನು ಪಡೆಯಲಾಯಿತು. ಜತೆಗೆ, ಲಭ್ಯವಿರುವ ಅಪಾರ್ಟುಮೆಂಟುಗಳ ಕ್ಲಬ್ ಹೌಸುಗಳು, ಖಾಸಗಿ ಕಟ್ಟಡಗಳಲ್ಲಿ ಹಾಸಿಗೆಯ ವ್ಯವಸ್ಥೆ ಮಾಡಲಾಗುತ್ತಿದೆ.

ಸದ್ಯಕ್ಕೆ ಬೆಂಗಳೂರಿನಲ್ಲಿ ನಾಲ್ಕು ಕೋವಿಡ್ ಕೇರ್ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಆ ಪೈಕಿ ಜಿಕೆವಿಕೆಯಲ್ಲಿ 770, ಹಜ್ ಭವನದಲ್ಲಿ432, ರವಿಶಂಕರ್ ಗುರೂಜಿ ಆಶ್ರಮದಲ್ಲಿ 176, ಆಯುವೇದ ಆಸ್ಪತ್ರೆಯಲ್ಲಿ 64 ಬೆಡ್ ಗಳು ಸಿದ್ಧ ಇವೆ. ಜಿಕೆವಿಕೆ ಕ್ಯಾಂಪಸ್ಸಿನಲ್ಲಿರುವ ತೋಟಗಾರಿಕೆ ವಿಭಾಗದಲ್ಲಿ 450 ಬೆಡ್ ಗಳ ವ್ಯವಸ್ಥೆ ಮಾಡಲಾಗುವುದು. ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ 250 ಬೆಡ್ ಗಳು ಈಗಾಗಲೇ ರೆಡಿ ಇವೆ, ಜತೆಗೆ ಬೆಂಗಳೂರು ವಿವಿಯ ಬಾಲಕಿಯರ ಹಾಸ್ಟೆಲ್ಲಿನಲ್ಲಿ 200 ಬೆಡ್ ವ್ಯವಸ್ಥೆ ಮಾಡಲಾಗುತ್ತಿದೆ. ಇವುಗಳ ಜತೆಗೆ ಪ್ರತಿ ಕೋವಿಡ್ ಕೇಂದ್ರದಲ್ಲಿಯೂ ಕೊನೆಪಕ್ಷ 10 ಐಸಿಯುಗಳನ್ನಾದರೂ ಮಾಡಲೇಬೇಕು ಎಂಬುದು ಸರಕಾರದ ಇರಾದೆಯಾಗಿದೆ. ಇಷ್ಟಾದರೂ ಹಾಸಿಗೆಗಳ ಕೊರತೆ ಉಂಟಾಗಬಹುದು ಎಂಬ ಆತಂಕದಿಂದ ಬಿಐಇಎಸ್ ಕೇಂದ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಹಾಸಿಗೆಗಳ ವ್ಯವಸ್ಥೆ ಮಾಡುತ್ತಿದೆ.

ಏನೆಲ್ಲ ಇಲ್ಲಿ ಇರುತ್ತದೆ?:
ಪ್ರತಿ 100 ಜನ ಸೋಂಕಿತರಿಗೊಬ್ಬರು ವೈದ್ಯರು, ಇಬ್ಬರು ನರ್ಸುಗಳು, ಒಬ್ಬ ಸಹಾಯಕ, ಒಬ್ಬ ಸ್ವಚ್ಚತಾ ಸಿಬ್ಬಂದಿ ಹಾಗೂ ಇಬ್ಬರು ಮರ್ಷಲ್’ಗಳು ಸೇರಿ ಒಟ್ಟು 2200 ಸಿಬ್ಬಂದಿ ಇಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.

ಗಮನಿಸಬೇಕಾದ ಸಂಗತಿ ಎಂದರೆ, ಇಲ್ಲಿ ಸೋಂಕಿನ ಯಾವುದೇ ಲಕ್ಷಣಗಳು ಇಲ್ಲದ ಹಾಗೂ ಕಡಿಮೆ ಸೋಂಕಿನ ಲಕ್ಷಣಗಳು ಉಳ್ಳ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತದೆ. ಇಲ್ಲಿ ವೈದ್ಯಕೀಯ ಚಿಕಿತ್ಸೆ ಜತೆಗೆ ಐಸಿಯು ಸೌಲಭ್ಯ, ಐಸಿಯು ಚಿಕಿತ್ಸೆ, ಈಸಿಜಿ ಮತ್ತು ಆಮ್ಲಜನಕ ವ್ಯವಸ್ಥೆಯೂ ಇರುತ್ತದೆ.

ಮುಖ್ಯವಾಗಿ ಸ್ವಚ್ಚ ತೆಗೆ ಉತ್ತಮ ವ್ಯವಸ್ಥೆ ಮಾಡಲಾಗಿದೆ. ಪ್ರತಿದಿನವೂ ಬಟ್ಟೆ ತೊಳೆಯುವ ವ್ಯವಸ್ಥೆ ಇದೆ. ತ್ಯಾಜ್ಯ ವಿಲೇವಾರಿಗೆ ವೈಜ್ಞಾನಿಕ ವ್ಯವಸ್ಥೆ ಇದೆ. ರೋಗಿಗಳ ಮನರಂಜನೆಗೆ ಟಿ.ವಿ.ಯನ್ನು ಕೂಡ ಹಾಕಿಸಲಾಗಿದೆ. ಅಷ್ಟೇ ಅಲ್ಲದೆ, ರೋಗಿಗಳು ರೋಬೋಟ್ ತಂತ್ರಜ್ಞಾನದ ಮೂಲಕ ವಿಡಿಯೋ ಮೂಲಕ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡು ಚಿಕಿತ್ಸೆ ಪಡೆಯಬಹುದು.

ಬಿಐಇಎಸ್’ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ.

ಉಸ್ತುವಾರಿ ಬಗ್ಗೆ ಕಟ್ಟೆಚ್ಚರ:
ಒಂದು ಕ್ಷಣವೂ ಸರಕಾರ ಮೈಮೆರಯುತ್ತಿಲ್ಲ. ರೋಗಿಗಳಿಗೆ ಬೇಕಾದ ಎಲ್ಲ ವ್ಯವಸ್ಥೆ ಮಾಡಲಾಗಿದೆ. ದಿನದ 24 ಗಂಟೆಯೂ ಅವರ ಮೇಲೆ ನಿಗಾ ಇಡಲಾಗುವುದು. ಬೆಂಗಳೂರಿನಲ್ಲಿ ಸೋಂಕಿತರು ಹೆಚ್ಚುತ್ತಲೇ ಇರುವುದರಿಂದ ಹಾಸಿಗೆಗಳ ಸಾಮರ್ಥ್ಯವನ್ನು 30 ಸಾವಿರಕ್ಕೇರಿಸಲು ನಿರ್ಧರಿಸಲಾಗಿದೆ ಎಂದು ಬೆಂಗಳೂರು ಕೋವಿಡ್ ಕೇರ್ ಕೇಂದ್ರಗಳ ಉಸ್ತುವಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ,ಎನ್. ಅಶ್ವತ್ಥನಾರಾಯಣ ಅವರು ಸಿಕೆನ್ಯೂಸ್ ನೌ ಜತೆ ಮಾತನಾಡುತ್ತ ತಿಳಿಸಿದ್ದಾರೆ.

Tags: BengaluruKarnataka covid-19
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

ಮಾರ್ಚ್‌ 1ರಿಂದ ದ್ವಿತೀಯ ಪಿಯು, 20ರಿಂದ sslc ಪರೀಕ್ಷೆ

by cknewsnow desk
December 3, 2024
0

ಎಲ್ಲ ಪರೀಕ್ಷೆಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ

ಪೋಡಿ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

ಪೋಡಿ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

by cknewsnow desk
August 12, 2024
0

1,000 ಗ್ರಾಮ ಲೆಕ್ಕಿಗರು, 750 ಸರ್ವೇಯರ‍್ಸ್, 36 ಎಡಿಎಲ್‌ಆರ್‌ಗಳ ನೇಮಕ

kptclನಲ್ಲಿ 902 ಹುದ್ದೆಗೆ ನೇಮಕ

kptclನಲ್ಲಿ 902 ಹುದ್ದೆಗೆ ನೇಮಕ

by cknewsnow desk
May 24, 2024
0

ನೇಮಕಾತಿ ಆದೇಶ ನೀಡಿದ ಸರಕಾರ

ಕೆಸಿಇಟಿ-24 ಪರೀಕ್ಷೆ: ಜನವರಿ 10ರಿಂದ online ಅರ್ಜಿ ಸಲ್ಲಿಕೆಗೆ ಅವಕಾಶ

CET EXAM; ಔಟ್ ಆಫ್ ಸಿಲೆಬಸ್ ಪ್ರಶ್ನೆ ಕೈಬಿಟ್ಟು ಮೌಲ್ಯಮಾಪನ; ವಿದ್ಯಾರ್ಥಿಗಳಿಗೆ ನಿರಾಳ

by cknewsnow desk
April 28, 2024
0

ತಜ್ಞರ ಶಿಫಾರಸು ಒಪ್ಪಿಕೊಂಡ ರಾಜ್ಯ ಸರಕಾರ

ದ್ವಿತೀಯ ಪಿಯುಸಿ ಫಲಿತಾಂಶ: ಧೂಳೆಬ್ಬಿಸಿದ ಬಾಲಕಿಯರು

ದ್ವಿತೀಯ ಪಿಯುಸಿ ಫಲಿತಾಂಶ: ಧೂಳೆಬ್ಬಿಸಿದ ಬಾಲಕಿಯರು

by cknewsnow desk
April 11, 2024
0

ವಿಜ್ಞಾನದಲ್ಲಿ ವಿದ್ಯಾಲಕ್ಷ್ಮಿ ಪ್ರಥಮ

ಬೆಳಗ್ಗೆ 10.15 ಗಂಟೆಗೆ ದ್ವಿತೀಯ PUC ಪರೀಕ್ಷೆ; ಶುಭವಾಗಲಿ ವಿದ್ಯಾರ್ಥಿಗಳೇ

ನಾಳೆ ಬೆಳಗ್ಗೆ 10 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ

by cknewsnow desk
April 9, 2024
0

11 ಗಂಟೆ ನಂತರ ಅಂತರ್ಜಾಲದಲ್ಲಿ ಫಲಿತಾಂಶ ನೋಡಬಹುದು

Next Post
ಚೀನಾ ಕಕ್ಕುತ್ತಿರುವ ವಿಷ; ಅದು ಐದು ಸಾವಿರ ವರ್ಷಗಳ ದ್ವೇಷ

ಚೀನಾ ಕಕ್ಕುತ್ತಿರುವ ವಿಷ; ಅದು ಐದು ಸಾವಿರ ವರ್ಷಗಳ ದ್ವೇಷ

Leave a Reply Cancel reply

Your email address will not be published. Required fields are marked *

Recommended

ಕುಮಾರಸ್ವಾಮಿ ಕೇಂದ್ರ ಮಂತ್ರಿ ಆಗುವ ವಿಚಾರ; ಮೋದಿ ಮನಸಿನಲ್ಲಿ ಏನಿದೆಯೋ ನನಗೆ ಗೊತ್ತಿಲ್ಲ ಎಂದರು ಹೆಚ್.ಡಿ.ದೇವೇಗೌಡರು

ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿ; ಕೈಜೋಡಿಸಿ ಮನವಿ ಮಾಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು

1 year ago
ಚಿಕ್ಕಬಳ್ಳಾಪುರದಲ್ಲಿ ಶನಿವಾರ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಸತ್ಸಂಗ ಮತ್ತು ಸದ್ವಿಚಾರಗಳ ಶ್ರಾವಣ

ಚಿಕ್ಕಬಳ್ಳಾಪುರದಲ್ಲಿ ಶನಿವಾರ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಸತ್ಸಂಗ ಮತ್ತು ಸದ್ವಿಚಾರಗಳ ಶ್ರಾವಣ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ