• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS

ಕಂಟೈನರ್’ನಲ್ಲಿ ಕೋವಿಡ್ ಐಸಿಯು! ಇದು ಮೊಬೈಲ್ ಕ್ಯಾಂಟೀನ್ ಥರ !!

cknewsnow desk by cknewsnow desk
September 16, 2020
in NEWS & VIEWS
Reading Time: 1 min read
0
ಕಂಟೈನರ್’ನಲ್ಲಿ ಕೋವಿಡ್ ಐಸಿಯು! ಇದು ಮೊಬೈಲ್ ಕ್ಯಾಂಟೀನ್ ಥರ !!
914
VIEWS
FacebookTwitterWhatsuplinkedinEmail

ಬೆಂಗಳೂರು: ದಿನೇದಿನೆ ಕೋವಿಡ್ ಸೋಂಕಿತರ ಸಂಖ್ಯೆ ಗಗನಮುಖಿ ಆಗುತ್ತಿರುವ ಬೆನ್ನಲ್ಲಿಯೇ, ಹಾಸಿಗೆಗಳ ಕೊರತೆಯನ್ನು ನೀಗಿಸಲು ಮೊಬೈಲ್ ಐಸಿಯುಗಳು ರೆಡಿಯಾಗಿವೆ. ಇವುಗಳನ್ನು ಮಡಿಕಲ್ ಪರಿಭಾಷೆಯಲ್ಲಿ ’ಮಾಡ್ಯೂಲರ್ ಐಸಿಯು’ಗಳೆಂದು ಕರೆಯಲಾಗುತ್ತದೆ.

ಇವುಗಳ ಅನುಕೂಲವೆಂದರೆ, ಎಲ್ಲಿಗೆ ಬೇಕಾದರೂ ಇವುಗಳನ್ನು ಸುಲಭವಾಗಿ ಸಾಗಿಸಬಹುದು. ಸುಲಭವಾಗಿ ಇಡಬಹುದು. ಜತೆಗೆ ನಿರ್ವಹಣೆಯೂ ಅತ್ಯಂತ ಸುಲಭ. ಪ್ರಾಯೋಗಿಕವಾಗಿ ಇವುಗಳನ್ನು ಮೊದಲು ಮಲ್ಲೇಶ್ವರದ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಬಳಸಲಾಗುತ್ತಿದೆ. ಅಲ್ಲಿ ಒಮ್ಮೆಲೆ ಇಂಥ ಐದು ಐಸಿಯುಗಳನ್ನು ಹಾಕಲಾಗುತ್ತಿದ್ದು, ಪ್ರತಿ ಐಸಿಯುನಲ್ಲಿ ಐದು ಸುಸಜ್ಜಿತ, ಅತ್ಯಾಧುನಿಕ ಹಾಸಿಗೆಗಳು ಇರುತ್ತವೆ.

ಹೇಗಿರುತ್ತವೆ?:

ಇದರ ಗಾತ್ರ 40’x 11’x 9’. ಸಾಮಾನ್ಯವಾಗಿ ಹಡಗುಗಳಲ್ಲಿ ಸರಕು ಸಾಗಾಣಿಕೆಗೆ ಬಳಸಲಾಗುವ ಬೃಹತ್ ಗಾತ್ರದ ಕಂಟೈನರುಗಳಲ್ಲಿಈ ಐಸಿಯುಗಳನ್ನು ಡೆವಲಪ್ ಮಾಡಲಾಗಿದೆ. ಶಸ್ತ್ರಚಿಕಿತ್ಸಾ ಘಟಕ ಹಾಗೂ ಕ್ಲೀನ್ ರೂಮುಗಳನ್ನು ಅಭಿವೃದ್ಧಿಪಡಿಸುವಲ್ಲಿ ಹೆಸರಾಗಿರುವ ಬೆಂಗಳೂರು ಮೂಲದ ’ರಿನ್ಯಾಕ್’ ಎಂಬ ಕಂಪನಿ ಇವುಗಳನ್ನು ಅಭಿವೃದ್ಧಿಪಡಿಸಿದೆ. ಇದನ್ನು ಸಾಗಿಸುವುದು ಅತ್ಯಂತ ಸುಲಭ. ಯಾವುದೇ ವಾತಾವರಣಕ್ಕೂ ಸರಿಹೊಂದುವ ತಾಂತ್ರಿಕ ಸೌಲಭ್ಯವನ್ನು ಹೊಂದಿರುತ್ತವೆ. ಇವುಗಳನ್ನು ಜಾಗತಿಕ ಗುಣಮಟ್ಟವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಸಿದ್ಧಪಡಿಸಲಾಗಿದೆ.

ಏನೇನಿರುತ್ತದೆ?:

ಆಮ್ಲಜನಕ ವ್ಯವಸ್ಥೆ ಜತೆಗೆ ಹವಾನಿಯಂತ್ರಿತ ವ್ಯವಸ್ಥೆ ಮಾಡಲಾಗಿದೆ. ಕಂಪ್ಲೀಟ್ ಏರ್’ಟೈಟ್ ಆಗಿರುತ್ತದೆ. ಕ್ಯಾಮೆರಾ ಕೂಡ ಇದ್ದು, ಆನ್’ಲೈನ್ ಚಿಕಿತ್ಸೆ ನೀಡಲು ಬೇಕಾದ ಎಲ್ಲ ಪರಿಕರಗಳನ್ನುಅಳವಡಿಸಲಾಗಿದೆ. ಎಲ್ಲ ಕಂಟೈನರುಗಳಲ್ಲಿ ಶುದ್ಧ ಗಾಳಿಯನ್ನು ತುಂಬಿಸಲಾಗಿದೆ. ಪ್ರತ್ಯೇಕವಾದ ಸಿವಿಯೇಜ್ ಮತ್ತು ನೀರಿನ ಸಂಪರ್ಕವೂ ಇರುತ್ತದೆ. ಪ್ರತಿ ಕಂಟೈನರ್’ಗೆ 5 ಬೆಡ್ ಇದ್ದು, ಅದಕ್ಕೆ ಇನ್ನೊಂದು ಕಂಟೈನರ್ ಸೇರಿದರೆ 10 ಬೆಡ್’ಗಳಾಗುತ್ತವೆ. ಆಗ ಅದನ್ನು ಪ್ರತ್ಯೇಕ ನರ್ಸಿಂಗ್ ಹಾಗೂ ಮಾನಿಟರಿಂಗ್ ಸ್ಟೇಷನ್ ಎಂದು ಪರಿಗಣಿಸಿ ಚಿಕಿತ್ಸೆ ನೀಡುವುದು ಸುಲಭವಾಗುತ್ತದೆ. ಆ ವ್ಯವಸ್ಥೆಯೂ ಪ್ರತ್ಯೇಕವಾಗಿರುತ್ತದೆ. ಆಯಾ ಆಸ್ಪತ್ರೆಗಳ ವೈದ್ಯರೇ ಇವುಗಳಲ್ಲಿ ದಾಖಲಾಗಿರುವ ರೋಗಿಗಳಿಗೂ ಚಿಕಿತ್ಸೆ ನೀಡಬಹುದು ಎಂದು ’ರಿನ್ಯಾಕ್’ ಕಂಪನಿ ಅಧಿಕಾರಿಗಳು ಮಾಹಿತಿ ನೀಡಿದರು.

ವಿನೂತನ ಪ್ರಯೋಗ:

ಸರಕು ಸಾಗಣೆ ಮಾಡುವ ಕಂಟೈನರುಗಳಲ್ಲಿ ಐಸಿಯು ಮಾಡಬಹುದು ಎಂಬ ಆಲೋಚನೆಯೇ ವಿನೂತನ. ದೇಶದಲ್ಲೇ ಮೊತ್ತಮೊದಲ ಬಾರಿಗೆ ಇಂಥ ತುರ್ತು ಚಿಕಿತ್ಸಾ ಘಟಕಗಳನ್ನು ನಮ್ಮ ರಾಜ್ಯದಲ್ಲಿ ಸಿದ್ಧಪಡಿಸಲಾಗಿದೆ. ನಮ್ಮ ಸಂಶೋಧಕರು, ತಜ್ಞರ ಸೃಜನಶೀಲತೆಗೆ ಇದೊಂದು ಉತ್ತಮ ಉದಾಹರಣೆ. ಪ್ರಸಕ್ತ ಕಾಲದ ಅಗತ್ಯಕ್ಕೆ ತಕ್ಕಂತೆ ಇವುಗಳನ್ನು ಅತ್ಯಾಧುನಿಕವಾಗಿ ರೂಪಿಸಲಾಗಿದೆ. ಗುಣಮಟ್ಟಕ್ಕೆ ಹೆಚ್ಚು ಒತ್ತು ನೀಡಲಾಗಿದೆ ಹಾಗೂ ಬಳಸಲಾಗಿರುವ ಎಲ್ಲ ಉಪಕರಣಗಳು ಉತ್ತಮವಾಗಿವೆ ಎಂದು ಡಿಸಿಎಂ ಡಾ. ಸಿ.ಎನ್. ಅಶ್ವತ್ಥನಾರಾಯಣ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಿಕೆನ್ಯೂಸ್ ನೌ ಜತೆ ಮಾತನಾಡಿದ ’ರಿನಾಕ್’ ಕಂಪನಿಯ ಹಿರಿಯ ಉಪಾಧ್ಯಕ್ಷ ಸೋಜಿ ಅಬ್ರಹಾಂ, “ಕೇವಲ 10ರಿಂದ 15ದಿನಗಳಲ್ಲಿಇಷ್ಟು ಬೆಡ್’ಗಳನ್ನು ಸಿದ್ಧಪಡಿಸಲಾಗಿದೆ. ಈ ಐಡಿಯಾ ಬಹಳ ಹೊಸತು, ಈಗಿನ ಪರಿಸ್ಥಿತಿಗೆ ಹೆಚ್ಚು ಅನುಕೂಲ. ಸರಕಾರಕ್ಕೆ ಅಗತ್ಯಬಿದ್ದಷ್ಟು ಮಾಡ್ಯೂಲರ್ ಐಸಿಯುಗಳನ್ನು ನಾವು ಒದಗಿಸಬಲ್ಲೆವು. ಜಾಗತಿಕ ಗುಣಮಟ್ಟಕ್ಕೆ ಯಾವುದೇ ರೀತಿಯಲ್ಲೂ ತೆಗೆದುಹೋಗದಂತೆ, ಅದಕ್ಕಾಗಿ ಉತ್ತಮವಾಗಿ ನಾವು ಇವುಗಳನ್ನು ಸಿದ್ಧಪಡಿಸಿದ್ದೇವೆ ಎಂದು ತಿಳಿಸಿದರು.

ಕೆಸಿಜೆಗೆ 10 ಕಂಟೈನರ್:

ಪ್ರಾಯೋಗಿಕವಾಗಿ ಮೊದಲಿಗೆ ಮಲ್ಲೇಶ್ವರದ ಕೆ.ಸಿ. ಜನರಲ್ ಆಸ್ಪತ್ರೆಗೆ ಹತ್ತು ಕಂಟೈನರು ಗಳನ್ನುಒದಗಿಸಲಾಗುತ್ತಿದೆ. ಅಲ್ಲಿನ ವೈದ್ಯರೇ ಇವುಗಳಲ್ಲಿ ದಾಖಲಾಗುವ ರೋಗಿಗಳಿಗೆ ಚಿಕಿತ್ಸೆ ನೀಡುವರು. ಪ್ರತಿ ಕಂಟೈನರಿಗೆ 5 ಹಾಸಿಗೆಗಳು ಇರುತ್ತವೆ. ಕೋವಿಡ್ ನಂತರವೂ ಇವುಗಳನ್ನು ನಮ್ಮ ಅಗತ್ಯಕ್ಕೆ ತಕ್ಕಂತೆ ಬಳಸಬಹುದು. ತುರ್ತು ಸಂದರ್ಭಗಳು, ಅದರಲ್ಲೂ ನೈಸರ್ಗಿಕ ವಿಕೋಪದಂಥ ದುರಂತಗಳು ಎದುರಾದಾಗ ಇಂಥ ಐಸಿಯುಗಳು ಹೆಚ್ಚು ಪರಿಣಾಮಕಾರಿ. ಸ್ಥಳಾಭಾವ ಎದುರಿಸುತ್ತಿರುವ ಗ್ರಾಮೀಣ ಪ್ರದೇಶಗಳ ಪ್ರಾಥಮಿಕ, ಜಿಲ್ಲಾ ಮತ್ತು ಪಂಚಾಯಿತಿ ಮಟ್ಟದ ಆಸ್ಪತ್ರೆಗಳಲ್ಲೂ ಇವುಗಳನ್ನು ಇರಿಸಬಹುದಾಗಿದೆ.

Tags: Bengalurucovid-19 karnatakadr cn ashwath narayanmobile ICUModular ICUrinac
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕೊರೋನಾವನ್ನು ಒದ್ದೋಡಿಸೋಣ

ಕೊರೋನಾವನ್ನು ಒದ್ದೋಡಿಸೋಣ

Leave a Reply Cancel reply

Your email address will not be published. Required fields are marked *

Recommended

ಶಿಕ್ಷಣದಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಹೇಗೆ? ಡಾ.ಕಸ್ತೂರಿ ರಂಗನ್‌ ಅವರು ಹೇಳಿದ್ದೇನು?

ಶಿಕ್ಷಣದಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಹೇಗೆ? ಡಾ.ಕಸ್ತೂರಿ ರಂಗನ್‌ ಅವರು ಹೇಳಿದ್ದೇನು?

5 years ago
ಉಳುವವನಿಂದ ಉಳ್ಳವನಿಗೆ ಭೂಮಿ! ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಲ್ಲಿ ಏನಿದೆ ಸ್ವಾಮಿ?

ಉಳುವವನಿಂದ ಉಳ್ಳವನಿಗೆ ಭೂಮಿ! ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಲ್ಲಿ ಏನಿದೆ ಸ್ವಾಮಿ?

6 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ