• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಉನ್ನತ ಶಿಕ್ಷಣ ಡಿಜಿಟಲೀಕರಣ; ಜುಲೈ 15ರಿಂದ ಎಲ್ಲ ಆನ್‌ಲೈನ್

cknewsnow desk by cknewsnow desk
July 27, 2020
in STATE
Reading Time: 1 min read
0
ಉನ್ನತ ಶಿಕ್ಷಣ ಡಿಜಿಟಲೀಕರಣ; ಜುಲೈ 15ರಿಂದ ಎಲ್ಲ ಆನ್‌ಲೈನ್
912
VIEWS
FacebookTwitterWhatsuplinkedinEmail

ಬೆಂಗಳೂರು: ಕೋವಿಡ್ ನಡುವೆಯೂ ಉನ್ನತ ಶಿಕ್ಷಣ ಇಲಾಖೆಯಲ್ಲಿ ಸುಧಾರಣೆಗಳ ಪರ್ವ ಆರಂಭವಾಗಿದೆ. ಸಾಂಪ್ರದಾಯಿಕ ಶೈಲಿಯ ಆಡಳಿತಕ್ಕೆ ಮಂಗಳ ಹಾಡಿ ತಂತ್ರಜ್ಞಾನದ ನೆರವಿನಿಂದ ಇ-ಆಫೀಸ್ ಆರಂಭಿಸಿದೆ. ಇದರೊಂದಿಗೆ ಇಡೀ ಇಲಾಖೆಯಲ್ಲಿ ’ಕಡತ’ ಎಂಬ ಪದಕ್ಕೆ ಶಾಶ್ವತವಾಗಿ ಗೇಟ್’ಪಾಸ್ ನೀಡಲಾಗಿದೆ.  

ಉನ್ನತ ಶಿಕ್ಷಣದ ಗುಣಮಟ್ಟ ಸುಧಾರಿಸಲು, ಸಂಪೂರ್ಣ ಡಿಜಿಟಲೀಕರಣದತ್ತ ಹೆಜ್ಜೆ ಇಟ್ಟಿರುವ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೆಜ್ಜೆ ಇಟ್ಟಿದ್ದು, 2020ರ ಜುಲೈ 15ರಿಂದಲೇ ಎಲ್ಲ ವಿಶ್ವವಿದ್ಯಾಲಯಗಳೂ ಸರಕಾರದ ಜತೆ ಇ-ಆಫೀಸ್‌ (ಆನ್‌ಲೈನ್‌) ಮೂಲಕವೇ ವ್ಯವಹರಿಸಬೇಕು ಎನ್ನುವ ಕಟ್ಟಾಜ್ಞೆ ಹೊರಡಿಸಿಸಲಾಗಿದೆ.

ಉನ್ನತ ಶಿಕ್ಷಣ ಇಲಾಖೆ, ಎನ್‌ಐಸಿ ಸಹಯೋಗದಲ್ಲಿ ರೂಪಿಸಿರುವ ಶಿಕ್ಷಣ ಸಂಸ್ಥೆಗಳ ಆನ್‌ಲೈನ್‌ ಸಂಯೋಜನೆ (ಅಫಿಲಿಯೇಷನ್‌)ಯ ಪೋರ್ಟಲ್‌ ಆರಂಭವಾಗಿದ್ದು, ಇನ್ನು ಮುಂದೆ ವಿಶ್ವವಿದ್ಯಾಲಯ, ಸರಕಾರದ ನಡುವೆ ಕಡತ ವ್ಯವಹಾರ ಇರುವುದಿಲ್ಲ. ಇ-ಅಫೀಸ್‌ ಯಶಸ್ವಿ ಪ್ರಯೋಗವಾಗಿದ್ದು, ಅದರ ಮೂಲಕವೇ ಕಡತಗಳು ರವಾನೆ ಆಗುತ್ತಿವೆ. ಎಲ್ಲಿ ಯಾವ ಕಡತ ಇದೆ? ಅದಕ್ಕೆ ಕಾರಣ ಏನು ಎನ್ನುವುದನ್ನು ತಿಳಿಯಬಹುದು. ಅನಗತ್ಯವಾಗಿ ಕಡತಗಳನ್ನು ಹಿಡಿದಿಟ್ಟುಕೊಳ್ಳುವ ವ್ಯವಸ್ಥೆಗೆ ತಿಲಾಂಜಲಿ ನೀಡಲಾಗಿದೆ.

ಯಾವುದೇ ಕಾಲೇಜು ಅಥವಾ ಕೋರ್ಸ್‌ಗಳಿಗೆ ಮಾನ್ಯತೆ ನೀಡಬೇಕಾದರೂ ಆದಕ್ಕೆ ಸಂಬಂಧಿಸಿದ ಕಡತ ಅಥವಾ ಪತ್ರ ವ್ಯವಹಾರಗಳು ಆನ್‌ಲೈನ್‌ ಮೂಲಕವೇ ಆಗಬೇಕು. ಇದರಿಂದ ವಿಳಂಬ ಆಗುವುದು ತಪ್ಪುತ್ತದೆ; ವ್ಯವಸ್ಥೆಯಲ್ಲಿ ಸುಧಾರಣೆ ಕೂಡ ಕಾಣಬಹುದು. ಈ ಪ್ರಯತ್ನದಲ್ಲಿ ಇಲಾಖೆಗೆ ಉತ್ತಮ ಓಪೆನಿಂಗ್ ಸಿಕ್ಕಿದೆ ಎಂದು ಡಿಸಿಎಂ ತಿಳಿಸಿದ್ದಾರೆ.

ಡಾ.ಸಿ.ಎನ್‌.ಅಶ್ವತ್ಥನಾರಾಯಣ

ಮಾನ್ಯತೆ ನೀಡುವುದಕ್ಕೂ ಮುನ್ನ ಎಲ್ಲ ರೀತಿಯ ಮಾನದಂಡಗಳನ್ನು ಸರಿಯಾಗಿ ವಿಶ್ವವಿದ್ಯಾಲಯಗಳು ಪರಿಶೀಲಿಸಿರಬೇಕು. ಸರ್ಕಾರಕ್ಕೆ ಕಳುಹಿಸುವ ಎಲ್ಲ ಪ್ರಸ್ತಾವನೆಗಳು ಕಾನೂನುಬದ್ಧವಾಗಿಯೇ ಇರಬೇಕು. ಮೂಲಸೌಲಭ್ಯ ಇರುವ ಶಿಕ್ಷಣ ಸಂಸ್ಥೆಗಳಿಗೇ ವಿಶ್ವವಿದ್ಯಾಲಯಗಳು ಮಾನ್ಯತೆ ನೀಡಬೇಕು. ಒಟ್ಟಾರೆ ಸರ್ಕಾರಕ್ಕೆ ಕಳಹಿಸುವ ಕಡತಗಳು ದೋಷರಹಿತವಾಗಿರಬೇಕು. ಒಂದು ವೇಳೆ ಲೋಪಗಳು ಕಂಡುಬಂದಲ್ಲಿ, ಅದಕ್ಕೆ ಸಂಬಂಧಪಟ್ಟ ವಿಶ್ವವಿದ್ಯಾಲಯಗಳ ಕುಲಪತಿ ಹಾಗೂ ಕುಲಸಚಿವರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರ ಸರಕಾರ ಎಚ್ಚರಿಕೆ ನೀಡಿದೆ. ಅದರಂತೆ ಎಲ್ಲ ಕುಲಪತಿಗಳು ಈಗ ತಮ್ಮ ವ್ಯವಹಾರಗಳನ್ನು ಇ-ಆಫೀಸ್ ಮೂಲಕವೇ ನಡೆಸುತ್ತಿದ್ದಾರೆ.

ಸಂಯೋಜನೆ ವಿಷಯದಲ್ಲಿ ಅಕ್ರಮಗಳಿಗೆ ಅವಕಾಶ ಇಲ್ಲ. ಮೂಲಸೌಲಭ್ಯ ಇರುವ ಸಂಸ್ಥೆಗೆ ಸಂಯೋಜನೆ ನೀಡಿದರೆ ಗುಣಮಟ್ಟದ ಶಿಕ್ಷಣ ತನ್ನಿಂತಾನೆ ಬರುತ್ತದೆ. ಈ ವಿಚಾರದಲ್ಲಿ ಸರ್ಕಾರ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಈಗಾಗಲೇ ಡಿಸಿಎಂ ಸ್ಪಷ್ಟಪಡಿಸಿದ್ದಾರೆ. ಇದುವರೆಗೂ ಸಂಯೋಜನೆ ಹೆಸರಲ್ಲಿ ಬರೀ ಕಾಲಹರಣವಾಗುತ್ತಿತ್ತು. ಇದರಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದರಲ್ಲದೆ, ಸರ್ಕಾರಕ್ಕೂ ಕೆಟ್ಟ ಹೆಸರು ಬರುತ್ತಿತ್ತು. ಹೊಸ ವ್ಯವಸ್ಥೆಯಿಂದ ಎಲ್ಲವೂ ಪಾರದರ್ಶಕ. ಶಿಕ್ಷಕರ ಸಂಖ್ಯೆ, ಅವರ ಕಾರ್ಯದಕ್ಷತೆ, ವಿದ್ಯಾರ್ಥಿಗಳ ಪ್ರಮಾಣ, ಸೌಲಭ್ಯಗಳು ಸೇರಿ ಎಲ್ಲ ವಿಷಯಗಳ ಬಗ್ಗೆ ಪರಿಪೂರ್ಣ ಮಾಹಿತಿ ಸರ್ಕಾರಕ್ಕೆ ಇರುತ್ತದೆ.

“ಇದು ಉತ್ತಮ ಪ್ರಯೋಗ. ಟೆಕ್ನಾಲಜಿಯಿಂದ ಆಡಳಿತಕ್ಕೆ ವೇಗ ಸಿಗುತ್ತಿದೆ” ಎಂದು ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿ ಹೇಳಿದ್ದಾರೆ. ಪದವಿ ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಪ್ರಭಾಕರ್ ಈ ಮಾತಿಗೆ ದನಿಗೂಡಿಸಿದ್ದಾರೆ.

ಏನಿದು ಆನ್‌ಲೈನ್ ಸಂಯೋಜನೆ?:

  • ಇದುವರೆಗೂ ವಿವಿಗಳು ಮತ್ತು ಸರಕಾರದ ನಡುವೆ ಎಲ್ಲ ವ್ಯವಹಾರಗಳು ಕಡತ, ಟಪಾಲು ಇಲ್ಲವೇ ಪತ್ರ ಮುಕೇನ ನಡೆಯುತ್ತಿದ್ದವು. ಇನ್ನು ಮುಂದೆ ಇವೆಲ್ಲವೂ ಆನ್‌ಲೈನ್ ವ್ಯವಸ್ಥೆಯ ಮೂಲಕವೇ ನಡೆಯಲಿವೆ.
  • ಮ್ಯೂನುವಲ್ ಮಾಡುತ್ತಿದ್ದ ಪ್ರಕ್ರಿಯೆಯಲ್ಲಿ ಬಹಳಷ್ಟು ಲೋಪಗಳಿದ್ದವು. ಯುಜಿಸಿ ನಿಯಮಗಳಿಗೆ ವಿರುದ್ಧವಾಗಿದ್ದವು. ಇದೆಲ್ಲವನ್ನೂ ಆನ್‌ಲೈನ್ ಸಂಯೋಜನೆ ನಿವಾರಿಸಲಿದೆ.
  • ಇದನ್ನು “ವಿಶ್ವವಿದ್ಯಾಲಯ ನಿರ್ವಹಣಾ ವ್ಯವಸ್ಥೆ” ಎಂದು ಕರೆಯಲಾಗುತ್ತದೆ. ಈ ವ್ಯವಸ್ಥೆ ತುಂಬಾ ಆಧುನಿಕವಾಗಿದೆ. ಇದನ್ನು ರಾಷ್ಟ್ರೀಯ ಮಾಹಿತಿ ಕೇಂದ್ರದ (ಎನ್.ಐ.ಸಿ) ನೆರವಿನೊಂದಿಗೆ ಅಭಿವೃದ್ಧಿಪಡಿಸಲಾಗಿದ್ದು, ಏಕಗವಾಕ್ಷಿ ವ್ಯವಸ್ಥೆಯಂತೆ ಕೆಲಸ ಮಾಡುತ್ತದೆ. ಸಂಪೂರ್ಣ ದೋಷರಹಿತವಾಗಿದೆ.
  • ವಿವಿಗಳು ಹೊಸ ಕಾಲೇಜುಗಳಿಗೆ ಅನುಮತಿ, ಕೋರ್ಸುಗಳಿಗೆ ಒಪ್ಪಿಗೆಯೂ ಸೇರಿದಂತೆ ಮಾನ್ಯತೆ ನೀಡುವ ಹಾಗೂ ಆಡಳಿತಾತ್ಮಕ ವಿಚಾರಗಳನ್ನು ಇದರ ಮೂಲಕವೇ ಮಾಡಬೇಕು.
  • ಈ ವ್ಯವಸ್ಥೆಯಿಂದ ವಿವಿ ಮತ್ತು ಕಾಲೇಜುಗಳ ನಡುವಿನ ವ್ಯವಹಾರ ಸುಲಭ, ಸರಳವಾಗಿರುತ್ತದೆ.
  • ಈ ವ್ಯವಸ್ಥೆಯು ಕಾಲೇಜುಗಳಿಗೆ ಡೇಟಾ ಮತ್ತು ಡಾಕ್ಯುಮೆಂಟ್‌ಗಳನ್ನು ಅಫಿಲಿಯೇಶನ್ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಲು ಅವಕಾಶ ಮಾಡಿಕೊಟ್ಟಿದೆ. ಈ ಎಲ್ಲ ಮಾಹಿತಿ ಪಾರದರ್ಶಕ. ಪೋರ್ಟಲ್‌ನಲ್ಲಿ ವಿವಿಗಳು ಕಳುಹಿಸಿದ ಅಧಿಸೂಚನೆಗಳನ್ನು ಕಾಲೇಜುಗಳು ವೀಕ್ಷಿಸಬಹುದು.

ಆನ್‌ಲೈನ್ ಸಂಯೋಜನೆ ಉದ್ದೇಶ:

  • ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ
  • ಶಿಕ್ಷಣ ಸಂಸ್ಥೆಗಳ ಗುಣಮಟ್ಟವನ್ನು ಸುಧಾರಣೆ
  • ಆಡಳಿತಕ್ಕೆ ತ್ವರಿತ ನಿರ್ಧಾರ ಬೆಂಬಲದ ವ್ಯವಸ್ಥೆ

Lead photo: ಮೈಸೂರು ವಿವಿ ಶತಮಾನೋತ್ಸವ ಗಡಿಯಾರ ಗೋಪುರ, ಕೃಪೆ:ಮೈಸೂರು ವಿವಿ

Tags: dr cn ashwath narayankarnatakakarnataka higher education
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ವಿಂಡ್ಸರ್ ಮ್ಯಾನರ್ ಹೊಟೇಲ್ ಹೆಬ್ಬಾಗಿಲಲ್ಲಿ ತಡೆದು ನಿಲ್ಲಿಸಿದಾಗ ಸಣ್ಣಗೆ ನಗೆ ಬೀರಿದ್ದರು ಅನಂತ ಕುಮಾರ್!!

ವಿಂಡ್ಸರ್ ಮ್ಯಾನರ್ ಹೊಟೇಲ್ ಹೆಬ್ಬಾಗಿಲಲ್ಲಿ ತಡೆದು ನಿಲ್ಲಿಸಿದಾಗ ಸಣ್ಣಗೆ ನಗೆ ಬೀರಿದ್ದರು ಅನಂತ ಕುಮಾರ್!!

Leave a Reply Cancel reply

Your email address will not be published. Required fields are marked *

Recommended

ಸೋಶಿಯಲ್‌ ಮೀಡಿಯಾ ಮೂಲಕ ಜನರಿಗೆ ಇನ್ನಷ್ಟು ಹತ್ತಿರವಾಗಲು ಕಮಲ ಪಾಳೆಯ ಮಾಸ್ಟರ್‌ ಪ್ಲ್ಯಾನ್‌; ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಮೇಲೂ ಕಣ್ಣು

ರಾಜ್ಯ ಬಿಜೆಪಿ ಕೋರ್‌ ಕಮಿಟಿ ಪುನಾರಚನೆ; ನಾಲ್ವರಿಗೆ ಕೊಕ್‌, ಅವರ ಬದಲಿಗೆ ಮೂವರು ಡಿಸಿಎಂಗಳು, ನಿರ್ಮಲಕುಮಾರ್ ಸುರಾನಾಗೆ ಸ್ಥಾನ

4 years ago
ಅಕ್ಕಿಭಾಗ್ಯದ ಅಸಲಿಯೆತ್ತು ಬಿಚ್ಚಿಟ್ಟ ಎಚ್ಡಿಕೆ

ಅಕ್ಕಿಭಾಗ್ಯದ ಅಸಲಿಯೆತ್ತು ಬಿಚ್ಚಿಟ್ಟ ಎಚ್ಡಿಕೆ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ