• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

20ರಂದೇ ಸಿಇಟಿ ಫಲಿತಾಂಶ; ಶುಲ್ಕ, ಸೀಟು ಹಂಚಿಕೆಯಲ್ಲಿ ಬದಲಿಲ್ಲ

cknewsnow desk by cknewsnow desk
August 17, 2020
in NEWS IN USE, STATE
Reading Time: 1 min read
0
20ರಂದೇ ಸಿಇಟಿ ಫಲಿತಾಂಶ; ಶುಲ್ಕ, ಸೀಟು ಹಂಚಿಕೆಯಲ್ಲಿ ಬದಲಿಲ್ಲ
912
VIEWS
FacebookTwitterWhatsuplinkedinEmail

ಬೆಂಗಳೂರು: ಇದೇ ತಿಂಗಳ 20ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದ್ದು, ಕಳೆದ ವರ್ಷವಿದ್ದಷ್ಟೇ ಶುಲ್ಕ ಪ್ರಮಾಣ ಮತ್ತು ಸೀಟು ಹಂಚಿಕೆ ಅನುಪಾತವನ್ನು ಮುಂದುವರಿಸಲು ಸರಕಾರ ನಿರ್ಧರಿಸಿದೆ.

ಎಂಜಿನಿಯರಿಂಗ್‌ ಸೀಟುಗಳ ಹಂಚಿಕೆ ಮತ್ತು ಶುಲ್ಕ ನಿಗದಿ ಸಂಬಂಧ ಕಾಮೆಡ್‌-ಕೆ, ಕರ್ನಾಟಕ ಅನುದಾನರಹಿತ ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳ ಸಂಘ ಹಾಗೂ ರಾಜ್ಯ ಮತೀಯ ಅಲ್ಪಸಂಖ್ಯಾತ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಸಂಘದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ನಂತರ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಸೋಮವಾರ ಇಲ್ಲಿ ತಿಳಿಸಿದರು.

ʼಕೋವಿಡ್‌ ಮತ್ತು ನೆರೆ ಕಾರಣಕ್ಕೆ ಶುಲ್ಕ ಹೆಚ್ಚಳ ಮಾಡುತ್ತಿಲ್ಲ. ಜತೆಗೆ ಕಳೆದ ವರ್ಷದ ಸೀಟು ಹಂಚಿಕೆ ಪ್ರಮಾಣದಲ್ಲಿಯೇ ಈ ವರ್ಷ ಕೂಡ ಸೀಟು ಹಂಚಿಕೆ ಮಾಡುತ್ತಿದ್ದು, ಇದಕ್ಕೆ ಎಲ್ಲ ಸಂಘಗಳ ಪ್ರತಿನಿಧಿಗಳೂ ಒಪ್ಪಿಗೆ ಸೂಚಿಸಿದರು ಎಂದು ಅವರು ತಿಳಿಸಿದರು.

ಜುಲೈ 30-31 ಮತ್ತು ಆಗಸ್ಟ್‌ 1ರಂದು ಸಿಇಟಿ ಪರೀಕ್ಷೆ ನಡೆದಿತ್ತು. ರಾಜ್ಯದ ಇತಿಹಾಸದಲ್ಲಿಯೇ ಮೊತ್ತ ಮೊದಲ ಬಾರಿಗೆ ಪರೀಕ್ಷೆ ನಡೆದ ಕೇವಲ 19 ದಿನಗಳಲ್ಲಿ ಸಿಇಟಿ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ. ವಿದ್ಯಾರ್ಥಿಗಳ ಹಿತವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಸರಕಾರ ಈ ಕ್ರಮ ಕೈಗೊಂಡಿದೆ. ಈ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು.

ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ

45:30:25 ಅನುಪಾತ:

ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳು ಈ ವರ್ಷ ಯಾವುದೇ ಬೇಡಿಕೆಯನ್ನು ಮುಂದಿಟ್ಟಿಲ್ಲ. ಸರಕಾರದ ಪ್ರಸ್ತಾವನೆಯನ್ನೇ ಒಪ್ಪಿಕೊಂಡಿವೆ. ಶೇಕಡಾ 45:30:25ರ ಅನುಪಾತದ ಸೀಟು ಹಂಚಿಕೆಗೆ ಒಪ್ಪಿಗೆ ಸೂಚಿಸಲಾಗಿದೆ. ಇದರಲ್ಲಿ ಶೇ 45 ರಷ್ಟು ಸೀಟುಗಳನ್ನು ಸರ್ಕಾರಕ್ಕೆ ನೀಡಿದರೆ ಶೇ.30ರಷ್ಟು ಸೀಟುಗಳನ್ನು ಕಾಮೆಡ್‌-ಕೆಗೆ ಹಂಚಿಕೆ ಮಾಡಲಾಗುತ್ತಿದೆ. ಶೇ 25ರಷ್ಟು ಸೀಟುಗಳನ್ನು ಅನಿವಾಸಿ ಭಾರತೀಯರು/ ಮ್ಯಾನೇಜ್‌ಮೆಂಟ್‌ ಕೋಟಾಗೆ ಮೀಸಲಿಡಲಾಗಿದೆ. ಇನ್ನು ಅಲ್ಪಸಂಖ್ಯಾತರು ಮತ್ತು ಭಾಷಾ ಅಲ್ಪಸಂಖ್ಯಾತರಿಗೆ ಕ್ರಮವಾಗಿ ಶೇಕಡಾ 40:30:30ರ ಅನುಪಾತದಲ್ಲಿ ಸೀಟು ಹಂಚಿಕೆ ಮಾಡಲಾಗಿದೆ. ಇದರಲ್ಲಿ ಶೇ 40ರಷ್ಟು ಸೀಟುಗಳನ್ನು ಸರ್ಕಾರಕ್ಕೆ ಕೊಟ್ಟರೆ ಶೇ 30ರಷ್ಟು ಸೀಟುಗಳನ್ನು ಅಲ್ಪಸಂಖ್ಯಾತರು ಮತ್ತು ಭಾಷಾ ಅಲ್ಪಸಂಖ್ಯಾತರಿಗೆ ನೀಡಲಾಗುತ್ತದೆ. ಉಳಿದ ಶೇ 30ರಷ್ಟು ಸೀಟುಗಳನ್ನು ಅನಿವಾಸಿ ಭಾರತೀಯರು/ ಮ್ಯಾನೇಜ್‌ಮೆಂಟ್‌ ಕೋಟಾಗೆ ನೀಡಲಾಗುತ್ತದೆ.

ಶುಲ್ಕದಲ್ಲೂ ಬದಲಾವಣೆ ಇಲ್ಲ:

ಇನ್ನು ಶುಲ್ಕಕ್ಕೆ ಬಂದರೆ, ಒಂದು ಸಂರಚನೆಯಲ್ಲಿ; ಸಿಇಟಿ ವಿದ್ಯಾರ್ಥಿಗಳಿಗೆ ತಲಾ 65,360 ರೂ. ಹಾಗೂ ಕಾಮೆಡ್-ಕೆ ವಿದ್ಯಾರ್ಥಿಗಳಿಗೆ 1,43,748 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ. ಇನ್ನೊಂದರಲ್ಲಿ ಸಿಇಟಿ ವಿದ್ಯಾರ್ಥಿಗಳಿಗೆ 58,806 ರೂ. ಹಾಗೂ ಕಾಮೆಡ್‌-ಕೆ ವಿದ್ಯಾರ್ಥಿಗಳಿಗೆ 2,01,960 ರೂ. ನಿಗದಿ ಮಾಡಲಾಗಿದೆ.

ಆನ್‌ಲೈನ್‌ ಕೌನ್ಸೆಲಿಂಗ್:‌

ಕೋವಿಡ್‌ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಈ ವರ್ಷ ಅಕ್ಟೋಬರ್ ತಿಂಗಳ ಒಳಗೆ ಆನ್‌ಲೈನ್‌ ಕೌನ್ಸೆಲಿಂಗ್‌ ಮಾಡಲಾಗುವುದು. ವಿದ್ಯಾರ್ಥಿಗಳು ತಾವು ಇದ್ದ ಜಾಗದಿಂದಲೇ ಕೌನ್ಸೆಲಿಂಗ್‌ ಎದುರಿಸಬಹುದು. ಯಾರೂ ಬೆಂಗಳೂರಿನ ತನಕ ಬರುವ ಅಗತ್ಯವಿಲ್ಲ. ಕಾಲೇಜು ಆಯ್ಕೆ ಮಾಡಿಕೊಂಡ ಮೇಲೆ ಆಯಾ ಕಾಲೇಜಿಗೆ ತೆರಳಿ ನಿಗದಿತ ಅವಧಿಯೊಳಗೆ ಪ್ರವೇಶಾತಿ ಪಡೆಯಬೇಕು. ಎರಡು ರೌಂಡ್‌ ಕೌನ್ಸೆಲಿಂಗ್‌ ಮತ್ತು ಒಂದು ಬಾರಿ ವಿಸ್ತರಿತ ಕೌನ್ಸೆಲಿಂಗ್‌ ಇರುತ್ತದೆ. ಇದು ಬಿಟ್ಟು ಹೆಚ್ಚುವರಿ ಸುತ್ತಿನ ಕೌನ್ಸೆಲಿಂಗ್‌ ಈ ಬಾರಿ ನಡೆಸುವುದಿಲ್ಲ.

ಕಾಲೇಜು ಆಡಳಿತ ಮಂಡಳಿಗಳು ಕೂಡ ಭರ್ತಿಯಾಗದ ಸೀಟುಗಳನ್ನು ನಿಗದಿತ ಅವಧಿಯೊಳಗೆ ಸಿಇಟಿಗೆ ವಾಪಸ್‌ ಮಾಡಬೇಕು. ಹಾಗೆ ಮಾಡಿದ 24 ಗಂಟೆಗಳಲ್ಲೇ ಪುನಃ ಸೀಟುಗಳನ್ನು ಕಾಲೇಜುಗಳಿಗೇ ನೀಡಲಾಗುತ್ತದೆ. ಈ ವಿಷಯದಲ್ಲಿ ಯಾರೂ ವಿಳಂಬ ಮಾಡಬಾರದು ಎನ್ನುವ ಸೂಚನೆಯನ್ನು ಕೂಡ ಸಂಘಗಳ ಪ್ರತಿನಿಧಿಗಳಿಗೆ ಸೂಚಿಸಲಾಗಿದೆ. ಸೀಟ್‌ ಬ್ಲಾಕಿಂಗ್‌ ಗೆ ಅವಕಾಶ ಇಲ್ಲ. ಎಲ್ಲವೂ ಪಾರದರ್ಶಕವಾಗಿ ನಡೆಸಲಾಗುವುದು ಎಂದು ಹೇಳಿದ ಅವರು ಈ ಬಾರಿಯ ಸಿಇಟಿ ಕೌನ್ಸೆಲಿಂಗ್‌ ನೀಟ್‌ ಮತ್ತು ಜೆಇಇ ಕೌನ್ಸೆಲಿಂಗ್‌ ನಂತರ ನಡೆಯಲಿದೆ.

ಖಾಸಗಿ ಶಿಕ್ಷಣ ಸಂಸ್ಥೆಗಳ ಪರವಾಗಿ ಪಾಂಡುರಂಗ ಶೆಟ್ಟಿ, ಡಾ.ಹೇಮಚಂದ್ರ ಸಾಗರ್‌, ಸಿ.ಎಂ.ಲಿಂಗಪ್ಪ, ಶಫೀ ಅಹಮದ್‌ ಹಾಜರಿದ್ದರು. ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ರಮಣರೆಡ್ಡಿ, ವಿಟಿಯು ಕುಲಪತಿ ಕರಿಸಿದ್ದಪ್ಪ ಅವರು ಆನ್‌ಲೈನ್‌ ಮೂಲಕ ಸಭೆಗೆ ಹಾಜರಾಗಿದ್ದರು. ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ವೆಂಕಟ ರಾಜಾ, ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್‌ ಸಭೆಯಲ್ಲಿದ್ದರು.

Lead Photo: BNMK Photographs

Tags: cetcet resultdr cn ashwath narayankarnataka higher educationkcet
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಬಿಬಿಎಂಪಿಗೆ ಅಡ್ಮಿನಿಸ್ಟ್ರೇಟರ್?

ಬಿಬಿಎಂಪಿಗೆ ಅಡ್ಮಿನಿಸ್ಟ್ರೇಟರ್?

Leave a Reply Cancel reply

Your email address will not be published. Required fields are marked *

Recommended

ಬಾಗೇಪಲ್ಲಿ ಎಂಬ ಭಾಗ್ಯನಗರದಲ್ಲಿ ಕಿರಾಣಿ ಅಂಗಡಿಗಳಲ್ಲೂ ಕಿಕ್ಕೇರಿಸುವ ಎಣ್ಣೆ ಭರ್ಜರಿ ಮಾರಾಟ

ಬಾಗೇಪಲ್ಲಿ ಎಂಬ ಭಾಗ್ಯನಗರದಲ್ಲಿ ಕಿರಾಣಿ ಅಂಗಡಿಗಳಲ್ಲೂ ಕಿಕ್ಕೇರಿಸುವ ಎಣ್ಣೆ ಭರ್ಜರಿ ಮಾರಾಟ

4 years ago
ಹಿತವಾದ ಸುದ್ದಿ!; ಕನ್ನಡಕ್ಕೆ ಬರಲಿದೆ ಎಸ್ಪಿಬಿ, ಲಕ್ಷ್ಮೀ ನಟನೆಯ ದೃಶ್ಯಕಾವ್ಯ ಮಿಥುನಂ

ಹಿತವಾದ ಸುದ್ದಿ!; ಕನ್ನಡಕ್ಕೆ ಬರಲಿದೆ ಎಸ್ಪಿಬಿ, ಲಕ್ಷ್ಮೀ ನಟನೆಯ ದೃಶ್ಯಕಾವ್ಯ ಮಿಥುನಂ

5 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ