• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ಗೆದ್ದ ಸಿಇಟಿ; ಗೌರಿ-ಗಣೇಶ ಸಂಭ್ರಮದ ನಡುವೆ ರಿಸಲ್ಟೋಲ್ಲಾಸ

cknewsnow desk by cknewsnow desk
August 22, 2020
in NEWS IN USE, STATE
Reading Time: 3 mins read
0
ಗೆದ್ದ ಸಿಇಟಿ; ಗೌರಿ-ಗಣೇಶ ಸಂಭ್ರಮದ ನಡುವೆ ರಿಸಲ್ಟೋಲ್ಲಾಸ
933
VIEWS
FacebookTwitterWhatsuplinkedinEmail

KCET Result 2020: ಎಂಜಿನಿಯರಿಂಗ್: ರಕ್ಷಿತ್ ನಂ.1; ಬಿಎಸ್ಸಿ ಅಗ್ರಿ: ವರುಣ್ ಗೌಡ, ವೆಟರ್ನರಿ: ಸಾಯಿ ವಿವೇಕ್, ನ್ಯಾಚುರೋಪತಿ-ಯೋಗ ವಿಜ್ಞಾನದಲ್ಲಿ ಅರನವ್ ಅಯ್ಯಪ್ಪ

ಬೆಂಗಳೂರು: ಸಿಇಟಿ ಕಾರಣಕ್ಕೆ ರಾಜ್ಯವು ಇಡೀ ದೇಶದಲ್ಲಿಯೇ ಹೊಸ ಮೈಲುಗಲ್ಲು ಸ್ಥಾಪಿಸಿದೆ. ಕೋವಿಡ್ ಮಾರಿಗೆ ಹೆದರಿ ಇಂಥ ಪರೀಕ್ಷೆಗಳನ್ನು ನಡೆಸಲಾಗದೇ ಕೈಚೆಲ್ಲಿದ್ದ ಹಲವು ರಾಜ್ಯಗಳ ಮುಂದೆ ಕರ್ನಾಟಕ ಮಾದರಿ ರಾಜ್ಯವಾಗಿ ಹೊರಹೊಮ್ಮಿದೆ. ಪರೀಕ್ಷೆ ನಡೆಸಿದ ಕೇವಲ ಇಪ್ಪತ್ತೇ ದಿನಗಳಲ್ಲಿ ಫಲಿತಾಂಶವೂ ಹೊರವಿದ್ದು ಶೈಕ್ಷಣಿಕ ವಲಯದಲ್ಲಿ ಗೌರಿ-ಗಣೇಶ ಹಬ್ಬದ ಸಂಭ್ರಮ ಇಮ್ಮಿಡಿಸುವಂತೆ ಮಾಡಿದೆ.

ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಬೆಂಗಳೂರಿನಲ್ಲಿ ಶುಕ್ರವಾರ ಪ್ರಕಟಿಸಿದರು.

ಎಂಜಿನಿಯರಿಂಗ್, ಪಶುವೈದ್ಯಕೀಯ, ಬಿಎಸ್ಸಿ (ಕೃಷಿ), ಬಿ- ಫಾರ್ಮಾ, ಡಿ-ಪಾರ್ಮಾ, ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಕೋರ್ಸುಗಳ ಪ್ರವೇಶಕ್ಕಾಗಿ ಸಿಇಟಿ ನಡೆಸಲಾಗಿತ್ತು. ವರಮಹಾಲಕ್ಷ್ಮಿ ಹಬ್ಬದಂದು ಪರೀಕ್ಷೆ ನಡೆಸಿದ್ದ ಕೆಇಎ, ಗೌರಿ ಹಬ್ಬದಂದು ಫಲಿತಾಂಶ ಪ್ರಕಟಿಸಿದೆ. ದಾಖಲೆಯ ಅವಧಿಯಲ್ಲೇ ಫಲಿತಾಂಶ ಕೊಟ್ಟಿರುವುದು ಕೆಇಎನ ಹೆಗ್ಗಳಿಕೆ ಎಂದು ಉಪ ಮುಖ್ಯಮಂತ್ರಿ ಮೆಚ್ಚುಗೆ ವ್ಯಕ್ತಪಡಿಸಿದರು.

ಇಡೀ ದೇಶಕ್ಕೆ ಸಿಇಟಿಯನ್ನು ಕೊಟ್ಟು ಉನ್ನತ ಶಿಕ್ಷಣಕ್ಕೆ ಹೊಸ ಆಯಾಮ ನೀಡಿದ ಕರ್ನಾಟಕದಲ್ಲಿ ಈ ವರ್ಷ ಕೋವಿಡ್ ಕಾರಣಕ್ಕೆ ಪರೀಕ್ಷೆ ನಡೆಸುವುದೇ ಕಷ್ಟವೆನ್ನುವ ಪರಿಸ್ಥಿತಿ ತಲೆದೋರಿತ್ತು. ಆದರೆ, ವಿದ್ಯಾರ್ಥಿಗಳು ಹಾಗೂ ಪೋಷಕರ ಹಿತದೃಷ್ಟಿಯಿಂದ ಪರೀಕ್ಷೆಯನ್ನು ನಡೆಸಲಾಯಿತಲ್ಲದೆ, ಕೋವಿಡ್ ಪಾಸಿಟೀವ್ ಇದ್ದ 63 ವಿದ್ಯಾರ್ಥಿಗಳಿಗೂ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದು, ಸಿಇಟಿ ಇತಿಹಾಸದಲ್ಲಿ ಮೈಲುಗಲ್ಲಾಗಿ ಉಳಿಯಲಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ರಾಜ್ಯದ ಸಮಸ್ತ ಜನರಿಗೆ ಗೌರಿ-ಗಣೇಶ ಚತುರ್ಥಿಯ ಶುಭಾಶಯಗಳು.

ಇಡೀ ಜಗತ್ತೇ ಕೋವಿಡ್‌ ಬಿಕ್ಕಟ್ಟಿನಲ್ಲಿದ್ದಾಗ, ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಲು ಸಾಧ್ಯವೇ ಇಲ್ಲ ಎನ್ನುತ್ತಿದ್ದ ಅತ್ಯಂತ ಕಠಿಣ ಪರಿಸ್ಥಿತಿಯಲ್ಲಿ ನಾವು #KCET ಪರೀಕ್ಷೆಯನ್ನು ನಡೆಸಿದ್ದೇವೆ.

1/7 pic.twitter.com/mrVRtL11Mx

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) August 21, 2020

ಟಾಪ್ 10 ರಾಂಕ್ ಪಡೆದ ವಿದ್ಯಾರ್ಥಿಗಳ ವಿವರ ಹೀಗಿದೆ

ಪೋಷಕರ ಜತೆ ಎಂ. ರಕ್ಷಿತ್.

ಎಂಜಿನಿಯರಿಂಗ್:

1.ಎಂ. ರಕ್ಷಿತ್: ಆರ್.ವಿ. ಪಿಯು ಕಾಲೇಜು, ಬೆಂಗಳೂರು
2.ಆರ್. ಶುಭನ್: ಶ್ರೀ ಚೈತನ್ಯ ಇ ಟೆಕ್ನೋ ಕಾಲೇಜು, ಬೆಂಗಳೂರು
3.ಎಂ.ಶಶಾಂಕ್ ಬಾಲಾಜಿ: ಬೇಸ್ ಪಿಯು ಕಾಲೇಜು, ಹುಬ್ಬಳ್ಳಿ
4.ಪಿ. ಶಶಾಂಕ್: ಎಕ್ಸ್’ಪರ್ಟ್ ಕಾಲೇಜು, ಮಂಗಳೂರು
5.ಸಂದೀಪನ್ ನಸ್ಕರ್: ಹೊರನಾಡ ಕನ್ನಡಿಗ ವಿದ್ಯಾರ್ಥಿ

ಬಿಎಸ್ಸಿ ಅಗ್ರಿ:

ವರುಣ್ ಗೌಡ ಎ.ಬಿ.

1.ವರುಣ್ ಗೌಡ ಎ.ಬಿ.: ಎಕ್ಸ್’ಪರ್ಟ್ ಕಾಲೇಜು, ಮಂಗಳೂರು
2.ಕೆ. ಸಂಜನಾ: ಬೇಸ್ ಕಾಲೇಜು, ಮೈಸೂರು
3.ಲೋಕೇಶ್ ಬಿ. ಜೋಗಿ: ಶ್ರೀ ರಾಮಕೃಷ್ಣ ವಿದ್ಯಾಶಾಲ ಪಿಯು ಕಾಲೇಜು, ಮೈಸೂರು
4.ಪಿ.ಪಿ. ಅರನವ್ ಅಯ್ಯಪ್ಪ: ಆಳ್ವಾಸ್ ಕಾಲೇಜು, ಮೂಡಬಿದಿರೆ
5.ಪ್ರಜ್ವಲ್ ಕಶ್ಯಪ್: ವಿದ್ಯಾಮಂದಿರ ಪಿಯು ಕಾಲೇಜು, ಬೆಂಗಳೂರು

ಪಶುವೈದ್ಯ ವಿಜ್ಞಾನ:

1.ಪಿ. ಸಾಯಿ ವಿವೇಕ್: ನಾರಾಯಣ ಇ- ಟೆಕ್ನೋ ಶಾಲೆ, ಬೆಂಗಳೂರು
2.ಆರ್ಯನ್ ಮಹಾಲಿಂಗಪ್ಪ ಚನ್ನಲ್: ಪ್ರಗತಿ ಪಬ್ಲಿಕ್ ಶಾಲೆ, ಕೋಟ
3.ಕೆ. ಸಂಜನಾ: ಬೇಸ್ ಕಾಲೇಜು, ಮೈಸೂರು
4.ಪವನ್ ಎಸ್. ಗೌಡ: ನಾರಾಯಣ ಪಿಯು ಕಾಲೇಜು, ಬೆಂಗಳೂರು
5.ಪಿ.ಪಿ. ಅರ್ನವ್ ಅಯ್ಯಪ್ಪ: ಆಳ್ವಾಸ್ ಕಾಲೇಜು, ಮೂಡಬಿದಿರೆ

ಬಿ ಫಾರ್ಮಾ ಮತ್ತು ಡಿ ಫಾರ್ಮಾ:

1.ಪಿ. ಸಾಯಿ ವಿವೇಕ್: ನಾರಾಯಣ ಇ- ಟೆಕ್ನೋ ಶಾಲೆ, ಬೆಂಗಳೂರು
2.ಸಂದೀಪನ್ ನಸ್ಕರ್: ಹೊರನಾಡ ಕನ್ನಡಿಗ ವಿದ್ಯಾರ್ಥಿ
3.ಪವನ್ ಎಸ್. ಗೌಡ : ನಾರಾಯಣ ಪಿಯು ಕಾಲೇಜು, ಬೆಂಗಳೂರು
4.ಆರ್ಯನ್ ಮಹಾಲಿಂಗಪ್ಪ ಚನ್ನಲ್: ಪ್ರಗತಿ ಪಬ್ಲಿಕ್ ಶಾಲೆ, ಕೋಟ
5.ಕೆ. ಸಂಜನಾ: ಬೇಸ್ ಕಾಲೇಜು, ಮೈಸೂರು

ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ:

ಪಿ.ಪಿ. ಅರನವ್ ಅಯ್ಯಪ್ಪ

1.ಪಿ.ಪಿ. ಅರನವ್ ಅಯ್ಯಪ್ಪ: ಆಳ್ವಾಸ್ ಕಾಲೇಜು, ಮೂಡಬಿದಿರೆ
2.ಕೆ. ಸಂಜನಾ: ಬೇಸ್ ಕಾಲೇಜು, ಮೈಸೂರು
3.ಪಿ. ಸಾಯಿ ವಿವೇಕ್: ನಾರಾಯಣ ಇ- ಟೆಕ್ನೋ ಶಾಲೆ, ಬೆಂಗಳೂರು
4.ಕಾರ್ತಿಕ್ ರೆಡ್ಡಿ: ಶಾಹಿನ್ ಐಎನ್’ಡಿಪಿ ಕಾಲೇಜು, ಬೀದರ್
5.ವರುಣ್ ಗೌಡ ಎ.ಬಿ.: ಎಕ್ಸ್’ಪರ್ಟ್ ಕಾಲೇಜು, ಮಂಗಳೂರು

ವೆಬ್’ಸೈಟಿನಲ್ಲಿ ಫಲಿತಾಂಶ:

ಸಾಮಾನ್ಯ ಪ್ರವೇಶ ಪರೀಕ್ಷೆ (KCET)ಯ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಅಧಿಕೃತ ವೆಬ್​ಸೈಟ್​ cetonline.karnataka.gov.in/kea ದಲ್ಲಿ ನೋಡಿ, ಡೌನ್’ಲೋಡ್ ಮಾಡಿಕೊಳ್ಳಬಹುದಾಗಿದೆ.
ಫಲಿತಾಂಶ ನೋಡಲು ಕೆಳಗಿನ ಲಿಂಕ್’ಗಳನ್ನು ಕ್ಲಿಕ್​ ಮಾಡಬಹುದು.
http://karresults.nic.in/indexCET2020.asp
http://karresults.nic.in/indexCET2020.asp
http://karresults.nic.in/

ಇದನ್ನೂ ಓದಿ…

ಸಿಇಟಿ ರಿಸಲ್ಟ್ ಬೇಕೆ? ಇಲ್ಲಿ ನೋಡಿ, ಕ್ಲಿಕ್ ಮಾಡಿ

ಉತ್ತಮ ಪ್ರತಿಕ್ರಿಯೆ:

ಕೋವಿಡ್’ನಿಂದ ಎಷ್ಟೇ ಸಮಸ್ಯೆ ಎದುರಾದರೂ ಸರಕಾರ ಪರೀಕ್ಷೆ ನಡೆಸಿತು. ಯಾವುದೇ ಕಾರಣಕ್ಕೂ ಶೈಕ್ಷಣಿಕ ಚಟುವಟಿಕೆಗಳಿಗೆ ಧಕ್ಕೆ ಆಗಬಾರದು ಎಂಬುದು ಸರಕಾರದ ಅಚಲ ನಂಬಿಕೆಯಾಗಿತ್ತು. ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಎಲ್ಲ ಇಲಾಖೆಗಳ ಸಹಕಾರದಿಂದ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ಎಂಜಿನಿಯರಿಂಗ್ ಕೋರ್ಸ್’ಗೆ 1,94,419 ವಿದ್ಯಾರ್ಥಿಗಳು, ಅರ್ಜಿ ಸಲ್ಲಿಸಿದ್ದರೆ, ಆ ಪೈಕಿ 1,75,349 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಇವರಲ್ಲಿ 1,53,470 ವಿದ್ಯಾರ್ಥಿಗಳಿಗೆ ರಾಂಕ್‌ ನೀಡಲಾಗಿದೆ.

ಬಿಎಸ್ಸಿ ಅಗ್ರಿ ವಿಭಾಗದಲ್ಲೂ 1,27,627, ಪಶುವೈದ್ಯ ವಿಜ್ಞಾನ ವಿಭಾಗದಲ್ಲಿ 1,29,666, ಬಿ-ಫಾರ್ಮಾ, ಡಿ-ಫಾರ್ಮಾ ವಿಭಾಗದಲ್ಲಿ 1,55,552 ವಿದ್ಯಾರ್ಥಿಗಳು ರಾಂಕ್ ಪಡೆದಿದ್ದಾರೆ.

ಕೋವಿಡ್ ವಿದ್ಯಾರ್ಥಿಗಳಿಗೂ ರಾಂಕ್:

ಕೋವಿಡ್ ಪಾಸಿಟೀವ್ ಇದ್ದ ಒಟ್ಟು 63 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ ಒಬ್ಬ ವಿದ್ಯಾರ್ಥಿ 214ನೇ ರಾಂಕ್ ಹಾಗೂ ಇನ್ನೊಬ್ಬ ವಿದ್ಯಾರ್ಥಿ 615 ರಾಂಕ್ ಗಳಿಸಿದ್ದಾರೆ. ಇದರಿಂದ ನಮಗೆ ಹೆಚ್ಚೆ ಎನಿಸುತ್ತದೆ ಎಂದು ಡಾ. ಅಶ್ವತ್ಥನಾರಾಯಣ ಹೇಳಿದರು.

ಅಕ್ಟೋಬರ್‌ನಲ್ಲಿ ಕೌನ್ಸೆಲಿಂಗ್:

ಜೆಇಇ, ನೀಟ್ ಮುಂತಾದ ಪರೀಕ್ಷೆಗಳ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ನೋಡಿಕೊಂಡು ಸಿಇಟಿ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು. ಬಹುತೇಕ ಅಕ್ಟೋಬರ್‌ನಲ್ಲಿ ನಡೆಸುವುದು ಖಚಿತ. ಎಐಸಿಟಿ ಸೂಚನೆಯಂತೆ ನಡೆಯಲಿದೆ. ಆನ್‌ಲೈನ್‌ ಕೌನ್ಸೆಲಿಂಗ್‌ಗೆ ತಯಾರಿ ಮಾಡಿಕೊಂಡಿದ್ದೇವೆ. ಒಟ್ಟು ಎರಡು ಸುತ್ತಿನ ಕೌನ್ಸೆಲಿಂಗ್ ಮತ್ತು ಅಂತಿಮವಾಗಿ ಒಂದು ವಿಸ್ತರಣಾ ಸುತ್ತು ಇರುತ್ತದೆ. ಇದು ಕೇವಲ ಬದಲಾವಣೆ ಇತ್ಯಾದಿಗಳಿಗೆ ಸಂಬಂಧಿಸಿದ ಮಾಪಪ್ ರೌಂಡ್ ಆಗಿರುತ್ತದೆ ಎಂದು ಡಿಸಿಎಂ ಮಾಹಿತಿ ನೀಡಿದರು.

ಕೋವಿಡ್ ಸಂಕಷ್ಟ ಕಾಲದಲ್ಲಿ ಸಿಇಟಿ ಪರೀಕ್ಷೆಯನ್ನು ನಡೆಸಿದ ಕರ್ನಾಟಕ ಇತರೆ ರಾಜ್ಯಗಳಿಗೆ ಮಾದರಿಯಾಗಿದೆ. ಕೋವಿಡ್ ಸೋಂಕಿಗೆ ಒಳಗಾಗಿದ್ದ ವಿದ್ಯಾರ್ಥಿಗಳು ಕೂಡ ಉತ್ತಮ ಫಲಿತಾಂಶ ಸಾಧಿಸಿದ್ದಾರೆ. ಒಟ್ಟಾರೆಯಾಗಿ ಇಡೀ ಪರೀಕ್ಷೆಯ ಯಶಸ್ಸಿನಿಂದ ರಾಜ್ಯದ ಉನ್ನತ ಶಿಕ್ಷಣ ವ್ಯವಸ್ಥೆಗೆ ದೊಡ್ಡ ಬಲ ಬಂದಂತೆ ಆಗಿದೆ. ಇದಕ್ಕಾಗಿ ಶ್ರಮಿಸಿದ ಪ್ರತಿಯೊಬ್ಬರಿಗೂ ನನ್ನ ಕೃತಜ್ಞತೆಗಳು.

ಡಾ. ಸಿ.ಎನ್. ಅಶ್ವತ್ಥನಾರಾಯಣ, ಉಪ ಮುಖ್ಯಮಂತ್ರಿ

ದಾಖಲೆ ಸಲ್ಲಿಸಿ ಜಾಯಿನ್ ಆಗಿ:

2ನೇ ಸುತ್ತಿನ ಕೌನ್ಸೆಲಿಂಗ್ ಮುಗಿಯುತ್ತಿದ್ದಂತೆ ತಮ್ಮ ಕಾಲೇಜುಗಳನ್ನು ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳು ಕೊಂಚವೂ ತಡ ಮಾಡದೇ ತಮ್ಮ ಮೂಲ ದಾಖಲೆಗಳನ್ನು ಸಲ್ಲಿಸಿ ಕಾಲೇಜುಗಳಲ್ಲಿ ಪ್ರವೇಶಾತಿ ಪಡೆಯಬೇಕು. ಒಂದು ವೇಳೆ ಶುಲ್ಕ ಪಾವತಿ ಮಾಡಿ ದಾಖಲೆಗಳನ್ನು ಸಲ್ಲಿಸದಿದ್ದರೆ ಆ ಪ್ರವೇಶಾತಿ ತಾನಾಗಿಯೇ ರದ್ದಾಗುತ್ತದೆ. ಈ ಅಂಶವನ್ನು ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಗಮನದಲ್ಲಿ ಇಟ್ಟುಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಹೇಳಿದರು.


Photos: BNMK Photographs

Tags: counselling to be held onlinedocument verificationdr cn ashwath narayaneducationkcet results-2020KEA
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಹೊಸ ಬ್ಯಾಂಕೂ, ಹೊಸ ಕೆರನ್ಸಿ.. ಚೆನ್ನಾ…ಗಿದೆ!! ಆಹಾ! ನಿತ್ಯಾನಂದ!!

ಹೊಸ ಬ್ಯಾಂಕೂ, ಹೊಸ ಕೆರನ್ಸಿ.. ಚೆನ್ನಾ...ಗಿದೆ!! ಆಹಾ! ನಿತ್ಯಾನಂದ!!

Leave a Reply Cancel reply

Your email address will not be published. Required fields are marked *

Recommended

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಕಾವೇರಿ: ಸುಪ್ರೀಂ ಕೋರ್ಟ್ ಆದೇಶದಿಂದ ಸಿದ್ದು ಸರಕಾರಕ್ಕೆ ದಿಗಿಲು

2 years ago
ಅರಣ್ಯಾಧಿಕಾರಿಗಳ ವಶಕ್ಕೆ ಪುತ್ರನ ಪೆಂಡೆಂಟ್‌ ಕೊಟ್ಟ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

ಅರಣ್ಯಾಧಿಕಾರಿಗಳ ವಶಕ್ಕೆ ಪುತ್ರನ ಪೆಂಡೆಂಟ್‌ ಕೊಟ್ಟ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

2 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ