• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಭಾರತೀಯ ಸಂಸ್ಕೃತಿ ಅಧ್ಯಯನ ಸಮಿತಿ ತುಂಬಾ ಉತ್ತರ ಭಾರತೀಯರು!! ದಕ್ಷಿಣ ಭಾರತಕ್ಕೆ ಅನ್ಯಾಯವಾಗಿದೆ ಎಂದ ಎಚ್‌ಡಿಕೆ

cknewsnow desk by cknewsnow desk
September 22, 2020
in STATE
Reading Time: 1 min read
0
ಭಾರತೀಯ ಸಂಸ್ಕೃತಿ ಅಧ್ಯಯನ ಸಮಿತಿ ತುಂಬಾ ಉತ್ತರ ಭಾರತೀಯರು!! ದಕ್ಷಿಣ ಭಾರತಕ್ಕೆ ಅನ್ಯಾಯವಾಗಿದೆ ಎಂದ ಎಚ್‌ಡಿಕೆ

ಚಿಣ್ಣರ ಕನ್ನಡ ಸಂಭ್ರಮ.

912
VIEWS
FacebookTwitterWhatsuplinkedinEmail

ಬೆಂಗಳೂರು: ಇದೇ ಸೆಪ್ಟೆಂಬರ್‌ 15ರಂದು ಆಚರಿಸಲಾದ ಹಿಂದಿ ದಿವಸಕ್ಕೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಮತ್ತೊಂದು ಅಂಶದ ಬಗ್ಗೆ ಕನ್ನಡಿಗರು ಮಾತ್ರವಲ್ಲ, ಎರಡು ರಾಜ್ಯಗಳ ತೆಲುಗು ಭಾಷಿಗರು, ತಮಿಳರು ಮತ್ತು ಮಲೆಯಾಳಿಗಳು ಬೇಸರಪಡುವಂಥ ಸುದ್ದಿಯೊಂದು ದಿಲ್ಲಿಯಿಂದ ಬಂದಿದೆ.

ಅದೇನು ಅಂತೀರಾ? ಮುಂದೆ ಓದಿ…

ಭಾರತದ ಸಮಗ್ರ ಇತಿಹಾಸ ಹಾಗೂ ನಮ್ಮ ದೇಶದ ಸಾಂಸ್ಕೃತಿಕ ಹುಟ್ಟು, ಅದರ ವಿಕಾಸವನ್ನು ಅಧ್ಯಯನ ಮಾಡುವ ಉದ್ದೇಶದಿಂದ ಕೇಂದ್ರ ಸರಕಾರದ ಸಂಸ್ಕೃತಿ ಇಲಾಖೆಯು 16 ಸದಸ್ಯರುಳ್ಳ ಸಮಿತಿಯೊಂದನ್ನು ರಚಿಸಿದೆ. ಆದರೆ, ಆ ಸಮಿತಿಯಲ್ಲಿ ಅಭಿಜಾತ ಭಾಷೆ ಕನ್ನಡಕ್ಕೆ ಸೇರಿದ ಒಬ್ಬೇ ಒಬ್ಬರಿಗೂ ಅವಕಾಶ ಸಿಕ್ಕಿಲ್ಲ. ಅಷ್ಟೇ ಅಲ್ಲದೆ, ದಕ್ಷಿಣದ ಪ್ರಮುಖ ಭಾಷೆಗಳಾದ ತಮಿಳು, ತೆಲುಗು ಹಾಗೂ ಮಲೆಯಾಳವನ್ನು ಪ್ರತಿನಿಧಿಸುವ ಒಬ್ಬರಿಗಾದರೂ ಜಾಗ ನೀಡದೆ ಕಡೆಗಣಿಸಲಾಗಿದೆ.

ಈ ಬಗ್ಗೆ ಕೇಂದ್ರ ಸರಕಾರ ಸೋಮವಾರವೇ (ಸೆ.14) ಪ್ರಕಟಣೆ ಹೊರಡಿಸಿ ಅಧ್ಯಯನ ಸಮಿತಿಗೆ ನೇಮಕಗೊಂಡವರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದರೆ, ಆ ಪಟ್ಟಿಯ ಬಗ್ಗೆ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಅಥವಾ ಕಾಂಗ್ರೆಸ್‌ಗೆ ಸೇರಿದ ಯಾವೊಬ್ಬ ನಾಯಕನೂ ಚಕಾರವೆತ್ತಿಲ್ಲ. ಆದರೆ, ಜೆಡಿಎಸ್‌ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪಟ್ಟಿಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಬುಧವಾರ ಟ್ವೀಟ್‌ ಮಾಡಿದ್ದಾರೆ. ಮಾತ್ರವಲ್ಲ, ಕನ್ನಡ ಹಾಗೂ ದಕ್ಷಿಣ ಭಾರತೀಯ ಭಾಷೆಗಳ ಬಗ್ಗೆ ಕೇಂದ್ರ ತಾಳುತ್ತಿರುವ ಮಲತಾಯಿ ಧೋರಣೆ ಬಗ್ಗೆ ಕಿಡಿಕಾರಿದ್ದಾರೆ.

ಈ ಪಟ್ಟಿಯಲ್ಲಿ ದಕ್ಷಿಣ ಭಾರತದ ಪರಂಪರೆಯ ಜ್ಞಾನವಿರುವ ಓರ್ವ ಕನ್ನಡಿಗರಾಗಲಿ, ಅಥವಾ ಮಹಿಳೆಯರಾಗಲಿ, ಇಲ್ಲವೇ ದ್ರಾವಿಡರಾಗಲಿ ಇಲ್ಲ ಬೇಸರ ವ್ಯಕ್ತಪಡಿಸಿರುವ ಕುಮಾರಸ್ವಾಮಿ, ಈ ಬಗ್ಗೆ ಸರಣಿ ಟ್ವೀಟ್‌ ಮಾಡಿ ಕೇಂದ್ರದ ನೀತಿಯನ್ನು ತೀವ್ರವಾಗಿ ಖಂಡಿಸಿದ್ದಾರೆ.

 ಭಾರತದ 12,000 ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರೆ  ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರಕಾರವು ಈಗ 16 ಸದಸ್ಯರ ತಜ್ಞರ ಸಮಿತಿ ರಚಿಸಿದೆಯಷ್ಟೇ. ಈ ಸಮಿತಿಯಲ್ಲಿ ಕನ್ನಡಿಗರಾಗಲಿ, ದ್ರಾವಿಡ ಪರಂಪರೆಗೆ ಸೇರಿದ ದಕ್ಷಿಣ ಭಾರತೀಯರಾಗಲಿ, ಮಹಿಳೆಯರಾಗಲಿ ಇಲ್ಲವೇ ಇಲ್ಲವಾಗಿರುವುದು ದುರದೃಷ್ಟಕರ.

“ಕನ್ನಡಿಗ ಪ್ರತಿನಿಧಿಗಳೇ ಇಲ್ಲದ ಸಮಿತಿಯಿಂದ ಕರ್ನಾಟಕದ ಇತಿಹಾಸ, ಪರಂಪರೆಯ ಅಧ್ಯಯನ ನಡೆಸುವುದು ಸಾಧ್ಯವಾಗುತ್ತದೆಯೇ? ದಕ್ಷಿಣ ಭಾರತವೇ ಇಲ್ಲದ ಇಡೀ ಭಾರತದ ಇತಿಹಾಸ ಅಧ್ಯಯನ ನಡೆಯುವುದಾದರೂ ಹೇಗೆ? ಈ ದೇಶವನ್ನು ತಾಯಿಗೆ ಹೋಲಿಸಿ ಪೂಜಿಸಿದವರು ನಾವು. ಹೆಣ್ಣನ್ನು ಪೂಜಿಸುವ ದೇಶದ ಸಂಸ್ಕೃತಿ ಅಧ್ಯಯನ ಮಾಡುವ ಸಮಿತಿಯಲ್ಲಿ ಮಹಿಳೆಗೇ ಸ್ಥಾನವೇ ಇಲ್ಲವೇ? ಕೂಡಲೇ ಸಮಿತಿಯ ಪುನಾರಚನೆ ಅತ್ಯಗತ್ಯ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಕ್ರಮ ಕೈಗೊಳ್ಳಲಿ” ಎಂದು ಅವರು ಒತ್ತಾಯ ಮಾಡಿದ್ದಾರೆ.

ಅನೇಕ ಸಂಗತಿಗಳ ಬಗ್ಗೆ ದಕ್ಷಿಣದ ರಾಜ್ಯಗಳು ಮತ್ತು ಕೇಂದ್ರದ ನಡುವೆ ತಿಕ್ಕಾಟ ನಡೆಯುತ್ತಲೇ ಇದೆ. ಇತ್ತೀಚೆಗೆ ಜಿಎಸ್‌ಟಿ ಪಾಲಿನ ಬಗ್ಗೆ ರಾಜ್ಯಗಳು ಅಸಮಾಧಾನ ವ್ಯಕ್ತಪಡಿಸಿದ್ದವು. ಅದಾದ ಮೇಲೆ ಹಿಂದಿ ದಿವಸ ಹೇರಿಕೆಯ ಬಗ್ಗೆ ಕೂಡ ಅತೃಪ್ತಿ ವ್ಯಕ್ತವಾಗಿತ್ತು. ಈಗ ಈ ಸಮಿತಿ ರಚನೆಗೆ ಸಂಬಂಧಿಸಿದಂತೆ ತಾರರಮ್ಯ ಕಣ್ಣಿಗೆ ರಾಚುವಂತೆ ಕಾಣುತ್ತಿದೆ. ಇದನ್ನು ಕೇಂದ್ರ ಸರಿಪಡಿಸಬೇಕಿದೆ.

The Centre has constituted a 16-member expert committee to study Indian culture for the past 12000years.
It is very unfortunate that the expert committee does not have any Kannadigas or South Indians who know Dravidian culture. The committee does not even have a woman member!
1/4 pic.twitter.com/QO2ZgHXCoD

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 16, 2020

Tags: ct ravihd kumaraswamykannadakarnataka historyKarnataka rajyotsavamalayalamsouth indiatamiltelugu
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಇತಿಹಾಸಕ್ಕೆ ಮರೆವಿನ ರೋಗ; ಬ್ರಹ್ಮಪುತ್ರನ ಒಡಲಿನ ಈಶಾನ್ಯದ ಕಣಿವೆಗಳ ಯುದ್ಧ ಕಥನಗಳು ಕಣ್ಣಿಗೆ ರಾಚಿದರೂ.. ನೋಡಲಿಲ್ಲ !! ಈಗಾದರೂ ಕಾಣುತ್ತವಾ?

ಇತಿಹಾಸಕ್ಕೆ ಮರೆವಿನ ರೋಗ; ಬ್ರಹ್ಮಪುತ್ರನ ಒಡಲಿನ ಈಶಾನ್ಯದ ಕಣಿವೆಗಳ ಯುದ್ಧ ಕಥನಗಳು ಕಣ್ಣಿಗೆ ರಾಚಿದರೂ.. ನೋಡಲಿಲ್ಲ !! ಈಗಾದರೂ ಕಾಣುತ್ತವಾ?

Leave a Reply Cancel reply

Your email address will not be published. Required fields are marked *

Recommended

ತೇಜಸ್ವಿ ಸ್ಮರಿಸುತ್ತಲೇ ಪ್ರಕೃತಿ ಉದ್ಧಾರದ ಪಾಠ ಮಾಡಿದ ಡಾ.ಕೆ.ಸುಧಾಕರ್‌

ತೇಜಸ್ವಿ ಸ್ಮರಿಸುತ್ತಲೇ ಪ್ರಕೃತಿ ಉದ್ಧಾರದ ಪಾಠ ಮಾಡಿದ ಡಾ.ಕೆ.ಸುಧಾಕರ್‌

4 years ago
CHAMARAJANAGAR OXYGEN TRAGEDY: ಮುಖ್ಯಮಂತ್ರಿ ಯಡಿಯೂರಪ್ಪ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ರಾಜೀನಾಮೆಗೆ ಕಾಂಗ್ರೆಸ್‌ ಒತ್ತಾಯ

CHAMARAJANAGAR OXYGEN TRAGEDY: ಮುಖ್ಯಮಂತ್ರಿ ಯಡಿಯೂರಪ್ಪ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ರಾಜೀನಾಮೆಗೆ ಕಾಂಗ್ರೆಸ್‌ ಒತ್ತಾಯ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ