• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಕೋವಿಡ್ ಸೋಂಕಿತರ ಚಿಕಿತ್ಸೆಗೆ ಸುಸಜ್ಜಿತ ಮಾಡ್ಯೂಲರ್ ಐಸಿಯು

cknewsnow desk by cknewsnow desk
September 16, 2020
in COVID-19, STATE
Reading Time: 2 mins read
0
ಕಂಟೈನರ್’ನಲ್ಲಿ ಕೋವಿಡ್ ಐಸಿಯು! ಇದು ಮೊಬೈಲ್ ಕ್ಯಾಂಟೀನ್ ಥರ !!
916
VIEWS
FacebookTwitterWhatsuplinkedinEmail

ಬೆಂಗಳೂರು: ಮಲ್ಲೇಶ್ವರದ ಕೆಸಿ ಜನರಲ್ ಆಸ್ಪತ್ರೆ ಆವರಣದಲ್ಲಿ 100 ಹಾಸಿಗೆಗಳ ಕೋವಿಡ್ ಮಾಡ್ಯೂಲರ್ ಐಸಿಯು ಘಟಕವನ್ನು ಸ್ಥಾಪಿಸಲಾಗಿದ್ದು, ಅದು ಇನ್ನು ಹತ್ತು ದಿನಗಳಲ್ಲಿ ಕಾರ್ಯಾರಂಭ ಮಾಡಲಿದೆ. ಇದರ ಜತೆಗೆ, ಆಸ್ಪತ್ರೆ ಆವರಣದಲ್ಲೇ ಇದ್ದ ಐಪಿಪಿ ಕಟ್ಟಡವನ್ನು ತೆರವುಗೊಳಿಸಿ ಅದನ್ನೂ ರಿಮೋಟ್ ಐಸಿಯು ಆಗಿ ಸಿದ್ಧಪಡಿಸಲಾಗಿದೆ. ಇವೆರಡೂ ಘಟಕಗಳು ಇನ್ನು ಹತ್ತು ದಿನಗಳಲ್ಲಿ ಕಾರ್ಯಾರಂಭ ಮಾಡಲಿವೆ.

ಸರಕು ಸಾಗಣೆ ಕಂಟೇನರ್ ಗಳಲ್ಲಿ 50 ಹಾಸಿಗೆಗಳ ಐಸಿಯು ಮತ್ತು ಆಸ್ಪತ್ರೆ ಆವರಣದಲ್ಲೇ ಇದ್ದ ಐಪಿಪಿ ಕಟ್ಟಡದಲ್ಲಿ 50 ಹಾಸಿಗೆಗಳ ರಿಮೋಟ್ ಐಸಿಯು ಸಿದ್ಧಪಡಿಸಲಾಗಿದೆ. ಇವೆರಡೂ ಘಟಕಗಳನ್ನು ಖುದ್ದು ಬುಧವಾರ ಪರಿಶೀಲಿಸಿದ ಡಿಸಿಎಂ ಡಾ. ಸಿ.ಎನ್.‌ಅಶ್ವತ್ಥನಾರಾಯಣ, ಪ್ರಗತಿಯನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು. 11 ಮಂದಿ ದಾನಿಗಳ ನೆರವಿನಿಂದ ಇಷ್ಟೆಲ್ಲ ವ್ಯವಸ್ಥೆ ಮಾಡಲಾಗಿದೆ. ಕೋವಿಡ್ ಸಂಕಷ್ಟ ಕಾಲದಲ್ಲಿ ಜನರ ನೆರವಿಗೆ ಬಂದ ದಾನಿಗಳಿಗೆ ಸರಕಾರ ಋಣಿಯಾಗಿದೆ ಎಂದು ತಿಳಿಸಿದರು.

ಈ ಮೊದಲು ಈ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುವುದು ಕಷ್ಟವಾಗುತ್ತಿತ್ತು. ಐಸಿಯುಗಳು ಸೇರಿ ಸಾಮಾನ್ಯ ಹಾಸಿಗೆಗಳ ಕೊರತೆ ಇತ್ತು. ಈ ಹಿನ್ನೆಲೆಯಲ್ಲಿ ಐಪಿಪಿ ಕಚೇರಿಯನ್ನು ಬೇರೆಡೆಗೆ ಸ್ಥಳಾಂತರಿಸಿ ಆ ಕಟ್ಟಡದಲ್ಲಿ 50 ಅತ್ಯಾಧುನಿಕ ವೆಂಟಿಲೇಟರುಗಳನ್ನು ಆಳವಡಿಸಿ ಅದನ್ನು ಆಧುನಿಕವಾದ ತೀವ್ರನಿಗಾ ಘಟಕವನ್ನಾಗಿ ರೂಪಿಸಲಾಗಿದೆ. ಎಲ್ಲ ವೆಂಟಿಲೇಟರುಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ದ್ರವರೂಪದ ಆಮ್ಲಜನಕ ಪೂರೈಸುವ ವ್ಯವಸ್ಥೆ ಮಾಡಲಾಗಿದೆ. ಇವುಗಳಿಗೆ ಆತ್ಯಾಧುನಿಕ ಮಾನಿಟರ್ ಗಳನ್ನು ಕೂಡ ಆಳವಡಿಸಲಾಗುತ್ತಿದ್ದು, ಅವುಗಳ ಖರೀದಿಗೆ ಈಗಾಗಲೇ ಸರಕಾರ ಅನುಮತಿ ನೀಡಿದೆ ಎಂದು ಉಪ ಮುಖ್ಯಮಂತ್ರಿ ಮಾಹಿತಿ ನೀಡಿದರು.

ಈ ಘಟಕಗಳಿಗೆ ಇನ್ನು ಅಗತ್ಯವಿರುವ ಇತರೆ ಅಗತ್ಯ ಉಪಕರಣಗಳನ್ನು ಶೀಘ್ರವೇ ಒದಗಿಲಾಗುವುದು. ಜತೆಗೆ ಸಿಬ್ಬಂದಿಯನ್ನೂ ನಿಯೋಜಿಸಲಾಗುವುದು. ಬೆಂಗಳೂರಿನ ಪ್ರಮುಖ ಆಸ್ಪತ್ರೆಗಳಲ್ಲಿ ಒಂದಾದ ಕೆಸಿ ಜನರಲ್ ಆಸ್ಪತ್ರೆಯೂ ಒಂದಾಗಿದ್ದು, ಇನ್ನು ಮುಂದೆ ಕೋವಿಡ್ ರೋಗಿಗಳಿಗೆ ಇಲ್ಲಿ ಉತ್ತಮ ಚಿಕಿತ್ಸೆ ಸಿಗಲಿದೆ.

-ಡಾ. ಸಿ.ಎನ್.‌ಅಶ್ವತ್ಥನಾರಾಯಣ

ಹೇಗಿರುತ್ತದೆ ಕೋವಿಡ್ ಮಾಡ್ಯೂಲರ್ ಐಸಿಯು?

ಮಾಡ್ಯೂಲರ್ ಐಸಿಯುಗಳ ಅನುಕೂಲವೆಂದರೆ, ಎಲ್ಲಿಗೆ ಬೇಕಾದರೂ ಇವುಗಳನ್ನು ಸುಲಭವಾಗಿ ಸಾಗಿಸಬಹುದು. ಸುಲಭವಾಗಿ ಇಡಬಹುದು. ನಿರ್ವಹಣೆಯೂ ಸುಲಭ. ಪ್ರಾಯೋಗಿಕವಾಗಿ ಇವುಗಳನ್ನು ಮೊದಲು ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಉಪ ಮುಖ್ಯಮಂತ್ರಿಗಳ ಪರಿಕಲ್ಪನೆಯಂತೆ ಬಳಸಲಾಗುತ್ತಿದೆ. ಅಲ್ಲಿ ಒಮ್ಮೆಲೆ ಇಂಥ 10 ಕಂಟೇನರ್ ಐಸಿಯುಗಳನ್ನು ಹಾಕಿದ್ದು, ಪ್ರತಿ ಐಸಿಯುನಲ್ಲಿ ಐದು ಸುಸಜ್ಜಿತ, ಅತ್ಯಾಧುನಿಕ ಹಾಸಿಗೆಗಳು ಇರುತ್ತವೆ.

ಈ ಐಸಿಯು ಒಂದರ ಗಾತ್ರ 12.135 X 3.3 X 2.62 ಮೀಟರ್. ಹಡಗುಗಳಲ್ಲಿ ಸರಕು ಸಾಗಾಣಿಕೆಗೆ ಬಳಸಲಾಗುವ ಬೃಹತ್ ಗಾತ್ರದ ಕಂಟೈನರುಗಳಲ್ಲಿ ಈ ಐಸಿಯುಗಳನ್ನು ಅಭಿವೃದ್ಧಿ ಮಾಡಲಾಗಿದೆ. ಇದನ್ನು ಸಾಗಿಸುವುದು ಸುಲಭ ಹಾಗೂ ಯಾವುದೇ ವಾತಾವರಣಕ್ಕೂ ಸರಿಹೊಂದುವ ತಾಂತ್ರಿಕ ಸೌಲಭ್ಯವನ್ನು ಇವು ಹೊಂದಿವೆ. ಆಮ್ಲಜನಕ ವ್ಯವಸ್ಥೆ ಜತೆಗೆ ಹವಾನಿಯಂತ್ರಿತ ವ್ಯವಸ್ಥೆ ಮಾಡಲಾಗಿದೆ. ಕಂಪ್ಲೀಟ್ ಏರ್ ಟೈಟ್ ಆಗಿರುತ್ತದೆ. ಕ್ಯಾಮೆರಾ ಕೂಡ ಇದ್ದು, ಆನ್ ಲೈನ್ ಚಿಕಿತ್ಸೆ ನೀಡಲು ಬೇಕಾದ ಎಲ್ಲ ಪರಿಕರಗಳನ್ನು ಅಳವಡಿಸಲಾಗಿದೆ. ಎಲ್ಲ ಕಂಟೈನರುಗಳಲ್ಲಿ ಶುದ್ಧ ಗಾಳಿಯನ್ನು ತುಂಬಿಸಲಾಗಿದ್ದು, ಪ್ರತ್ಯೇಕವಾದ ಸಿವಿಯೇಜ್ ಮತ್ತು ನೀರಿನ ಸಂಪರ್ಕವೂ ಇರುತ್ತದೆ. ಪ್ರತಿ ಕಂಟೈನರ್’ಗೆ 5 ಬೆಡ್ ಇದ್ದು, ಅದಕ್ಕೆ ಇನ್ನೊಂದು ಕಂಟೈನರ್ ಸೇರಿದರೆ 10 ಬೆಡ್’ಗಳಾಗುತ್ತವೆ. ಆಯಾ ಆಸ್ಪತ್ರೆಗಳ ವೈದ್ಯರೇ ಇವುಗಳಲ್ಲಿ ದಾಖಲಾಗಿರುವ ರೋಗಿಗಳಿಗೂ ಚಿಕಿತ್ಸೆ ನೀಡಬಹುದು.

ದೇಶದಲ್ಲೇ ಹೊಸ ಪ್ರಯೋಗ

ಸರಕು ಸಾಗಣೆ ಮಾಡುವ ಕಂಟೈನರುಗಳಲ್ಲಿ ಐಸಿಯು ಮಾಡಬಹುದು ಎಂಬ ಆಲೋಚನೆಯೇ ವಿನೂತನ. ದೇಶದಲ್ಲೇ ಮೊತ್ತಮೊದಲ ಬಾರಿಗೆ ಇಂಥ ತುರ್ತು ಚಿಕಿತ್ಸಾ ಘಟಕಗಳನ್ನು ನಮ್ಮ ರಾಜ್ಯದಲ್ಲಿ ಸಿದ್ಧಪಡಿಸಲಾಗಿದೆ. ನಮ್ಮ ಸಂಶೋಧಕರು, ತಜ್ಞರ ಸೃಜನಶೀಲತೆಗೆ ಇದೊಂದು ಉತ್ತಮ ಉದಾಹರಣೆ. ಪ್ರಸಕ್ತ ಕಾಲದ ಅಗತ್ಯಕ್ಕೆ ತಕ್ಕಂತೆ ಇವುಗಳನ್ನು ಅತ್ಯಾಧುನಿಕವಾಗಿ ರೂಪಿಸಲಾಗಿದೆ. ಗುಣಮಟ್ಟಕ್ಕೆ ಹೆಚ್ಚು ಒತ್ತು ನೀಡಲಾಗಿದೆ ಹಾಗೂ ಬಳಸಲಾಗಿರುವ ಎಲ್ಲ ಉಪಕರಣಗಳು ಉತ್ತಮವಾಗಿವೆ ಎಂದು ಡಾ. ಸಿ.ಎನ್. ಅಶ್ವತ್ಥನಾರಾಯಣ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರಾಯೋಗಿಕವಾಗಿ ಮೊದಲಿಗೆ ಮಲ್ಲೇಶ್ವರದ ಕೆ.ಸಿ. ಜನರಲ್ ಆಸ್ಪತ್ರೆಗೆ ಹತ್ತು ಕಂಟೈನರು ಗಳನ್ನು ಒದಗಿಸಲಾಗುತ್ತಿದೆ. ಅಲ್ಲಿನ ವೈದ್ಯರೇ ಇವುಗಳಲ್ಲಿ ದಾಖಲಾಗುವ ರೋಗಿಗಳಿಗೆ ಚಿಕಿತ್ಸೆ ನೀಡುವರು.  ತುರ್ತು ಸಂದರ್ಭಗಳು, ಅದರಲ್ಲೂ ನೈಸರ್ಗಿಕ ವಿಕೋಪದಂಥ ದುರಂತಗಳು ಎದುರಾದಾಗ ಇಂಥ ಐಸಿಯುಗಳು ಹೆಚ್ಚು ಪರಿಣಾಮಕಾರಿ.

ಶಸ್ತ್ರಚಿಕಿತ್ಸಾ ಘಟಕ ಹಾಗೂ ಕ್ಲೀನ್ ರೂಮುಗಳನ್ನು ಅಭಿವೃದ್ಧಿಪಡಿಸುವಲ್ಲಿ ಹೆಸರಾಗಿರುವ ಬೆಂಗಳೂರು ಮೂಲದ ’ರಿನ್ಯಾಕ್’ ಎಂಬ ಕಂಪನಿ ಇವುಗಳನ್ನು ಅಭಿವೃದ್ಧಿಪಡಿಸಿದೆ. ಇದನ್ನು ಸಾಗಿಸುವುದು ಅತ್ಯಂತ ಸುಲಭ. ಯಾವುದೇ ವಾತಾವರಣಕ್ಕೂ ಸರಿಹೊಂದುವ ತಾಂತ್ರಿಕ ಸೌಲಭ್ಯವನ್ನು ಹೊಂದಿರುತ್ತವೆ. ಇವುಗಳನ್ನು ಜಾಗತಿಕ ಗುಣಮಟ್ಟವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಸಿದ್ಧಪಡಿಸಲಾಗಿದೆ.

ಹಾಸಿಗೆಗಳ ಕೊರತೆ ಇಲ್ಲ

ಬೆಂಗಳೂರಿನಲ್ಲಿ ಕೋವಿಡ್ ಮತ್ತು ಕೋವಿಡ್ಯೇತರ ರೋಗಿಗಳಿಗೆ ಹಾಸಿಗೆಗಳ ಕೊರತೆ ಇಲ್ಲ. ಎಲ್ಲ ಆಸ್ಪತ್ರೆ ಗಳಲ್ಲೂ ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಕೆಲ ಆಸ್ಪತ್ರೆಗಳಲ್ಲಿ ಅತ್ಯಂತ ಕಡಿಮೆ ಹಾಸಿಗೆಗಳಿದ್ದವು. ಈಗ ಅಂತಹ ಆಸ್ಪತ್ರೆಗಳಲ್ಲಿ ನೂರಾರು ಹಾಸಿಗೆಗಳು ಇವೆ. ಕೆಲವೆಡೆಯಂತೂ 400, 600 ಹಾಸಿಗೆ ವ್ಯವಸ್ಥೆ ಮಾಡಲಾಗಿದೆ. ಜಯನಗರ, ಸಿವಿ ರಾಮನ್ ನಗರ ಆಸ್ಪತ್ರೆಗಳಲ್ಲಿ ಹೆಚ್ಚಿನ ಹಾಸಿಗೆಗಳನ್ನು ಹಾಕಲಾಗಿದೆ. ಹೀಗಾಗಿ ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಡಿಸಿಎಂ ಅವರು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

Tags: covid 19covid-19 karnatakadr cn ashwath narayanmobile ICUModular ICU
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಯುನಿವರ್ಸಿಟಿಗಳಿಗೆ ಸರ್ಜರಿ; ಉಪನ್ಯಾಸಕರ ವರ್ಗಾವಣೆಗೆ ಹೊಸ ಕಾಯ್ದೆ, ಇನ್ಮುಂದೆ ಎಲ್ಲವೂ ಸರಳ

ಯುನಿವರ್ಸಿಟಿಗಳಿಗೆ ಸರ್ಜರಿ; ಉಪನ್ಯಾಸಕರ ವರ್ಗಾವಣೆಗೆ ಹೊಸ ಕಾಯ್ದೆ, ಇನ್ಮುಂದೆ ಎಲ್ಲವೂ ಸರಳ

Leave a Reply Cancel reply

Your email address will not be published. Required fields are marked *

Recommended

ಗುಡಿಬಂಡೆ ಅರಣ್ಯದ 284 ಎಕರೆ ನುಂಗಿದ ಗೌರಿಬಿದನೂರು ಕಂದಾಯ ಇಲಾಖೆ

ಪೋಡಿ, ಭೂ ಪರಿವರ್ತನೆ ಸ್ಕೆಚ್, ಹದ್ದುಬಸ್ತ್ ನಕ್ಷೆಗಳಿಗೆ ಕಂದಾಯ ಕಚೇರಿಗೆ ಅಲೆಯಬೇಕಿಲ್ಲ

3 years ago
ಓಲೈಕೆ ಪಾಲಿಟಿಕ್ಸ್;‌ ಭಾರತೀಯ ಜನತಾ ಪಕ್ಷಕ್ಕೂ ಅಂಟಿಕೊಂಡ ಕಾಂಗ್ರೆಸ್‌ ಚಾಳಿ !!

ಕೋವಿಡ್ 2ನೇ ಅಲೆ ಲಾಕ್ಡೌನ್: ಪುನಾ 500 ಕೋಟಿ ರೂ. ಪ್ಯಾಕೇಜ್ ಘೋಷಣೆ ಮಾಡಿದ ಮುಖ್ಯಮಂತ್ರಿ, ಯಾರಿಗೆ ಎಷ್ಟೆಷ್ಟು ಪರಿಹಾರ? ಇಲ್ಲಿದೆ ವಿವರ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ