• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಮತ್ತೊಂದು ಐತಿಹಾಸಿಕ ತೀರ್ಪು; ಆಡ್ವಾಣಿ, ಜೋಶಿ, ಉಮಾ ಭಾರತಿ ಸೇರಿ ಎಲ್ಲರಿಗೂ ಕೋರ್ಟ್‌ ಕ್ಲೀನ್‌ಚಿಟ್‌, ಬಿಜೆಪಿ ಭೀಷ್ಮನ ಮೊಗದಲ್ಲಿ ಮಂದಹಾಸ

cknewsnow desk by cknewsnow desk
September 30, 2020
in NATION, STATE
Reading Time: 2 mins read
3
ಮತ್ತೊಂದು ಐತಿಹಾಸಿಕ ತೀರ್ಪು; ಆಡ್ವಾಣಿ, ಜೋಶಿ, ಉಮಾ ಭಾರತಿ ಸೇರಿ ಎಲ್ಲರಿಗೂ ಕೋರ್ಟ್‌  ಕ್ಲೀನ್‌ಚಿಟ್‌, ಬಿಜೆಪಿ ಭೀಷ್ಮನ ಮೊಗದಲ್ಲಿ ಮಂದಹಾಸ

????????????????????????????????????

913
VIEWS
FacebookTwitterWhatsuplinkedinEmail

ಬಾಬರೀ ಮಸೀದಿ ನೆಲಸಮಕ್ಕೆ ಸಂಬಂಧಿಸಿದಂತೆ 28 ವರ್ಷಗಳ ನಂತರ ಐತಿಹಾಸಿಕ ತೀರ್ಪು ನೀಡಿರುವ ಸಿಬಿಐ ವಿಶೇಷ ನ್ಯಾಯಾಲಯ, ಪ್ರಕರಣದಲ್ಲಿ ಆರೋಪಿಗಳಾಗಿದ್ದ ಎಲ್.ಕೆ. ಆಡ್ವಾಣಿ, ಮುರಳಿ ಮನೋಹರ ಜೋಶಿ, ಉಮಾ ಭಾರತಿ, ಕಲ್ಯಾಣ್‌ ಸಿಂಗ್‌, ವಿನಯ್‌ ಕಟಿಯಾರ್‌, ಸಾಕ್ಷಿ ಮಹಾರಾಜ್‌ ಸೇರಿ ಎಲ್ಲ 32 ಆರೋಪಿಗಳಿಗೂ ಕ್ಲೀನ್‌ಚಿಟ್‌ ನೀಡಿ ಖುಲಾಸೆಗೊಳಿಸಿದೆ.

ಬೆಂಗಳೂರು: ಇಡೀ ಭಾರತ ಬುಧವಾರ ಮತ್ತೊಂದು ಐತಿಹಾಸಿಕ ತೀರ್ಪಿಗೆ ಸಾಕ್ಷಿಯಾಯಿತು. 28 ವರ್ಷಗಳ ಹಿಂದೆ ಬಾಬರೀ ಮಸೀದಿ ನೆಲಸಮಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ರಾಜಧಾನಿ ಲಖನೌದಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದ್ದು, ಪ್ರಕರಣದ ಅಷ್ಟೂ ಆರೋಪಿಗಳಿಗೆ ಕ್ಲೀನ್‌ಚಿಟ್‌ ನೀಡಿದೆ.

ಇದರೊಂದಿಗೆ ಬಾಬರಿ ಮಸೀದಿ ಪ್ರಕರಣದಲ್ಲಿ ಕ್ರಿಮಿನಲ್‌ ಕೇಸ್‌ ಎದುರಿಸುತ್ತಿದ್ದ ಎಲ್ಲ ಆರೋಪಿಗಳು ಖುಲಾಸೆಯಾಗಿ ನಿಟ್ಟುಸಿರು ಬಿಟ್ಟಿದ್ದಾರೆ. ಮಾಜಿ ಪ್ರಧಾನಿ ಎಲ್.ಕೆ. ಆಡ್ವಾಣಿ, ಕೇಂದ್ರದ ಮಾಜಿ ಸಚಿವರಾದ ಮುರಳಿ ಮನೋಹರ ಜೋಶಿ, ಉಮಾ ಭಾರತಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್‌ ಸಿಂಗ್‌ ಸೇರಿ ಎಲ್ಲ 32 ಆರೋಪಿಗಳು ಆರೋಪಮುಕ್ತರಾಗಿದ್ದಾರೆ.

ಸುಪ್ರೀಂ ಕೋರ್ಟ್‌ ಅಯೋಧ್ಯೆಯ ಜಾಗ ಯಾರಿಗೆ ಸೇರಿದ್ದು ಎಂಬ ಬಗ್ಗೆ ಮಹತ್ತ್ವದ ಆದೇಶದ ನೀಡಿದ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಮ ಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನೆರೆವೇರಿಸಿ ಒಂದು ತಿಂಗಳ ಐದು ದಿನಕ್ಕೆ (ಅಗಸ್ಟ್‌ 5, 2020) ಸರಿಯಾಗಿ ಈ ತೀರ್ಪು ಹೊರಬಿದ್ದಿದೆ. ಇದರೊಂದಿಗೆ ಸಿವಿಲ್‌ ಕೇಸ್‌ ಇತ್ಯರ್ಥದ ಬಳಿಕ ಕ್ರಿಮಿನಲ್‌ ಕೇಸ್‌ ಕೂಡ ಅಂತ್ಯ ಕಂಡಂತೆ ಆಗಿದೆ.

ಜತೆಗೆ, ಮಸೀದಿ ಧ್ವಂಸವು ಪೂರ್ವ ನಿಯೋಜಿತವಲ್ಲ, ಇದರ ಹಿಂದೆ ಯಾವ ಷಡ್ಯಂತ್ರವೂ ಇಲ್ಲವೆಂದು ನ್ಯಾಯಾಲಯ ಹೇಳಿದೆ.

ಬುಧವಾರ ಬೆಳಗ್ಗೆ 12 ಗಂಟೆ 30 ನಿಮಿಷದ ಹೊತ್ತಿಗೆ ಸರಿಯಾಗಿ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಎಸ್.ಕೆ.ಯಾದವ್‌ ಅವರು ತಮ್ಮ ವೃತ್ತಿಜೀವನದ ಕೊನೆಯ ಹಾಗೂ ಇಡೀ ದೇಶವನ್ನು ತುದಿಗಾಲ ಮೇಲೆ ನಿಲ್ಲಿಸಿದ್ದ ಐತಿಹಾಸಿಕ ತೀರ್ಪನ್ನು ಓದಿದರು. ಸುಮಾರು ಎರಡು ಸಾವಿರ ಪುಟಗಳ ಪೈಕಿ ತೀರ್ಪಿನ ಸಾರಾಂಶವನ್ನಷ್ಟೇ ಅವರು ಕೋರ್ಟ್‌ ಹಾಲ್‌ನಲ್ಲಿ ಓದಿ ಹೇಳಿದರು.

ಪ್ರಕರಣದ ಒಟ್ಟು ಆರೋಪಿಗಳ ಪೈಕಿ ಸಾಕ್ಷಿ ಮಹಾರಾಜ್‌, ವಿನಯ್‌ ಕಟಿಯಾರ್‌ ಸೇರಿ 26 ಮಂದಿ ನ್ಯಾಯಾಲಯಕ್ಕೆ ಹಾಜರಗಿದ್ದರು. ಮಾಜಿ ಉಪ ಪ್ರಧಾನಿ ಹಾಗೂ ರಥಯಾತ್ರೆಯ ನೇತೃತ್ವ ವಹಿಸಿದ್ದ ಎಲ್.ಕೆ. ಆಡ್ವಾಣಿ, ಮುರಳಿ ಮನೋಹರ ಜೋಶಿ, ಉಮಾ ಭಾರತಿ ವಿಡಿಯೋ ಕಾನ್ಫ್‌ರೆನ್ಸ್‌ ಮೂಲಕ ನ್ಯಾಯಾಲಯದ ಮುಂದೆ ಹಾಜರಾಗಿದ್ದರು.

1992 ಡಿಸೆಂಬರ್‌ 6ರಂದು ಅಯೋಧ್ಯೆಯನ್ನು ಸೇರಿಕೊಂಡಿದ್ದ ಅಸಂಖ್ಯಾತ ಕರಸೇವಕರು ಮಂದಿರವಿದ್ದ ಜಾಗದಲ್ಲಿದೆ ಎಂದು ಹೇಳಿ ಬಾಬರೀ ಮಸೀದಿಯನ್ನು ನೆಲಸಮ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ಸುದೀರ್ಘ ವಿಚಾರಣೆ ನಡೆಸಲಾಗಿತ್ತಲ್ಲದೆ, ಅಂತಿಮ ತೀರ್ಪು ನೀಡುವ ದಿನ ಎಲ್ಲ 32 ಆರೋಪಿಗಳು ಖುದ್ದು ನ್ಯಾಯಾಲಯದಲ್ಲಿ ಹಾಜರಿ ಇರಬೇಕು ಎಂದು ನ್ಯಾಯಮೂರ್ತಿ ಯಾದವ್‌ ಅವರು ಇದೇ ಸೆಪ್ಟೆಂಬರ್‌ 16ರಂದು ಆದೇಶ ನೀಡಿದ್ದರು.

ಮಸೀದಿ ನೆಲಸಮಗೊಂಡ ವೇಳೆ ಉತ್ತರ ಪ್ರದೇಶದಲ್ಲಿ ಕಲ್ಯಾಣ್‌ ಸಿಂಗ್‌ ಮುಖ್ಯಮಂತ್ರಿಯಾಗಿದ್ದರು. ಸುಮಾರು ವರ್ಷ ಸುದೀರ್ಘ ತನಿಖೆ ನಡೆಸಿರುವ ಸಿಬಿಐ 351 ಸಾಕ್ಷಿಗಳನ್ನು, 600 ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತಲ್ಲದೆ, 48 ಮಂದಿ ವಿರುದ್ಧ ಆರೋಪ ಪಟ್ಟಿಯನ್ನು ಸಲ್ಲಿಸಿತ್ತು. ವಿಚಾರಣೆ ವೇಳೆಯಲ್ಲೇ 17 ಆರೋಪಿಗಳು ಮೃತಪಟ್ಟಿದ್ದರು.

ಆಡ್ವಾಣಿ ಸಂತಸ

LK Advani Ji's First Reaction After Verdict. #BabriDemolitionCase pic.twitter.com/aLcqi6cPuh

— Narendra Modi Fan (Modi Ka Parivar) (@narendramodi177) September 30, 2020

ವಿಶೇಷ ನ್ಯಾಯಾಲಯದ ತೀರ್ಪುನಿಂದ ನನಗೆ ತುಂಬಾ ಸಂತಸವಾಗಿದೆ. ಇವತ್ತು ನಮ್ಮೆಲ್ಲರಿಗೂ ಅತ್ಯಂತ ಮಹತ್ತ್ವದ ದಿನವಾಗಿದೆ ಎಂದು ಆಡ್ವಾಣಿಯವರು ಪ್ರತಿಕ್ರಿಯಿಸಿದ್ದಾರೆ. ದೆಹಲಿಯ ಅವರ ನಿವಾಸದ ಬಳಿ, ಬಿಜೆಪಿ ಕಚೇರಿಯಲ್ಲಿ ಸಿಹಿ ಹಂಚಿ ಸಂಭ್ರಮಿಸಲಾಯಿತು. ಇದೇ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತೀರ್ಪನ್ನು ಸ್ವಾಗತಿಸಿದ್ದಾರೆ.

ಧರ್ಮೋ ರಕ್ಷತಿ ರಕ್ಷಿತಃ https://t.co/wTyaZ9J16h

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) September 30, 2020

***

ತಮ್ಮ ರಥಯಾತ್ರೆಯ ಬಗ್ಗೆ ಸ್ವತಃ ಎಲ್‌.ಕೆ.ಆಡ್ವಾಣಿ ಅವರೇ ಬರೆದ, ಬಿ.ಎಸ್.‌ ಜಯಪ್ರಕಾಶ ನಾರಾಯಣ ಕನ್ನಡಕ್ಕೆ ಅನುವಾದ ಮಾಡಿರುವ ವಿಶೇಷ ಲೇಖನವನ್ನೂ ಓದಿ.. ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ…

ಅಯೋಧ್ಯಾ ಆಂದೋಲನ: ಭಾರತದ ಅಂತರಾತ್ಮದ ಧ್ವನಿ
photos courtesy: wikipedia

Tags: ayodhyaAyodhya VerdictBabri masjid verdictCBIlk advaniMurali Manohar Joshi
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
30 ವರ್ಷಗಳ ಭಾರತ; ಆಡ್ವಾಣಿ ಮತ್ತು ಜೋಷಿ ಅವರ ನಂತರ ಝಗಮಗಿಸುತ್ತಿರುವ ಬಿಜೆಪಿ

30 ವರ್ಷಗಳ ಭಾರತ; ಆಡ್ವಾಣಿ ಮತ್ತು ಜೋಷಿ ಅವರ ನಂತರ ಝಗಮಗಿಸುತ್ತಿರುವ ಬಿಜೆಪಿ

Comments 3

  1. Pingback: 30 ವರ್ಷಗಳ ಭಾರತದ ರಾಜಕಾರಣ ಮತ್ತು ಝಗಮಗಿಸುತ್ತಿರುವ ಆಡ್ವಾಣಿ ಮತ್ತು ಜೋಷಿ ಅವರ ಬಿಜೆಪಿ - cknewsnow
  2. BS jayaprakash narayana says:
    5 years ago

    The judgement is in the expected lines. Advani is the iron man of our times. He is the pioneer of anti-Congress, anti-appeasement and anti-dynasty politics. He and Murali Manohar Joshi changed the equations of Indian polity through their historic Rathayathra and Ekatha Yathra. Through this they built the BJP and they are still representing some great values like integrity, commitment towards a great cause and sincerity. Vajpayee helped the BJP as a crowd puller. Today’s BJP must be grateful to these three personalities. Advani is the really a towering personality who introduced aggressive politics based on dialogues. After he came to the forefront in late 1980’s it was the beginning of the Congress’ downfall. Kudos to Advani and Joshi.

    Reply
  3. BS jayaprakash narayana says:
    5 years ago

    Historical day in the history of India. Adavani is the real hero who changed the political course of the nation and pioneer of anti-Congress, anti-appeasement and anti-dynasty politics. Good news coverage from You. Thanks for recalling my translation too.

    Reply

Leave a Reply Cancel reply

Your email address will not be published. Required fields are marked *

Recommended

ದೇವರಾಜ ಅರಸು ಆಶಯ ಉಲ್ಟಾ ಮಾಡಿದ ಬಿಜೆಪಿ!!

ಕಾಗೆ ಚರ್ಚೆಗಳಿಂದ ಜನರಿಗೆ ಏನು ಪ್ರಯೋಜನ: ಸಿಎಂ ನೇರ ಪ್ರಶ್ನೆ

2 years ago
ಚಿಕ್ಕಬಳ್ಳಾಪುರ ಜಿಲ್ಲೆಗೆ ದೇವೇಗೌಡರು

ಉನ್ನತ ಶಿಕ್ಷಣ ಸಚಿವರಿಗೆ ಹೆಚ್.ಡಿ.ದೇವೇಗೌಡರ ಪತ್ರ

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ