• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS

ಡಿಕೆಶಿ ಮನೆಯಲ್ಲಿ ಸಿಕ್ಕಿದ್ದೇನು? ಸಿಬಿಐ ಹೇಳಿದ್ದೇನು? ಕೆಪಿಸಿಸಿ ಸಾರಥಿ ದೂರಿದ್ದೇನು? ಬೈ ಎಲೆಕ್ಷನ್ ವೇಳೆ ಇದೆಲ್ಲ ಏನು?

cknewsnow desk by cknewsnow desk
October 5, 2020
in NEWS & VIEWS, STATE
Reading Time: 2 mins read
0
ಡಿಕೆಶಿ ಮನೆಯಲ್ಲಿ ಸಿಕ್ಕಿದ್ದೇನು? ಸಿಬಿಐ ಹೇಳಿದ್ದೇನು? ಕೆಪಿಸಿಸಿ ಸಾರಥಿ ದೂರಿದ್ದೇನು? ಬೈ ಎಲೆಕ್ಷನ್ ವೇಳೆ ಇದೆಲ್ಲ ಏನು?
913
VIEWS
FacebookTwitterWhatsuplinkedinEmail

ಕೆಲ ರಾಜ್ಯಗಳು ಕೋವಿಡ್ ಜತೆ ಗುದ್ದಾಡುತ್ತಲೇ ಅಭಿವೃದ್ಧಿಯತ್ತ ಗಮನ ಹರಿಸಿದ್ದರೆ, ಕರ್ನಾಟಕದಲ್ಲಿ ರಾಜಕೀಯ ಕೆಸರೆಚಾಟದಲ್ಲಿಯೇ ಕಾಲಹರಣ ಆಗುತ್ತಿದೆ. ಡಿಕೆಶಿ ಮೇಲೆ ಸಿಬಿಐ ದಾಳಿ ನಡೆದ ಮೇಲೆ ಅದು ಮತ್ತಷ್ಟು ತೀವ್ರವಾಗಿದೆ. ಉಪ ಚುನಾವಣೆ ಅಖಾಡದಲ್ಲಿ ಅರಚಿಕೊಳ್ಳುವುದು ಹೆಚ್ಚಲಿದೆ. ನಮ್ಮಲ್ಲಿ ಪ್ರಗತಿಗಿಂತ ಚುನಾವಣೆಗಳು, ಆರೋಪ-ಪ್ರತ್ಯಾರೋಪಗಳೇ ಹುಚ್ಚೆದ್ದು ಕುಣಿಯುತ್ತಿವೆ.

***

photos: bnmk photographs

ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣೆ ಕಾವು ಏರುತ್ತಿರುವಂತೆಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸಹೋದರ ಡಿ.ಕೆ.ಸುರೇಶ್ ಮೇಲೆ ನಡೆದ ಸಿಬಿಐ ದಾಳಿಗೆ ರಾಜಕೀಯ ತಿರುವು ಸಿಕ್ಕಿರುವುದು ಒಂದೆಡೆಯಾದರೆ, ಒಟ್ಟು 74.93 ಕೋಟಿ ರೂ. ಮೊತ್ತದ, ಆದಾಯಕ್ಕೂ ಮೀರಿದ ಅಕ್ರಮ ಆಸ್ತಿ ಗಳಿಸಿದ ಕಾರಣಕ್ಕೆ ಡಿಕೆಶಿ ಮತ್ತವರ ಕುಟುಂಬದ ವಿರುದ್ಧಎಫ್ಐಆರ್ ದಾಖಲಿಸಿದೆ.

ಸೋಮವಾರ ಬೆಳಗ್ಗೆಯಿಂದಲೇ ಶುರುವಾದ ದಾಳಿ ಅಂತ್ಯವಾದ ಮೇಲೆ ಡಿಕೆಶಿ ಮಾಧ್ಯಮದ ಜತೆಯೂ ಮಾತನಾಡಿದರಲ್ಲದೆ, ಕಾಂಗ್ರೆಸ್ ಪಕ್ಕಕ್ಕೆ ಹಾಗೂ ಕಾರ್ಯಕರ್ತರಿಗೆ ಕಪ್ಪುಚುಕ್ಕೆ ಆಗುವಂಥ ಯಾವುದೇ ಕೃತ್ಯವನ್ನು ಮಾಡಿಲ್ಲ. ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದ ವಿರುದ್ಧ ಕಾನೂನಾತ್ಮಕವಾಗಿ, ರಾಜಕೀಯವಾಗಿ ಉತ್ತರ ನೀಡುತ್ತೇನೆ ಎಂದು ಹೇಳಿದರು.

ಈ ನಡುವೆ ಸಿಬಿಐ, ಡಿಕೆಶಿ ಮತ್ತವರ ಕುಟುಂಬದ ವಿರುದ್ಧ ಪ್ರಕರಣ ದಾಖಲಿಸಿದೆಯಲ್ಲದೆ ಅವರಿಗೆ ಸಂಬಂಧಿಸಿದ 14 ಸ್ಥಳಗಳಲ್ಲಿ ದಾಳಿ ನಡೆಸಿ ವ್ಯಾಪಕ ಶೋಧ ನಡೆಸಿದೆ. ಇದೇ ವೇಳೆ 57 ಲಕ್ಷ ರೂ.ಗಳಷ್ಟು ಹಣ, ಕೆಲ ಆಸ್ತಿಪತ್ರಗಳು, ವಿವಿಧ ಬ್ಯಾಂಕ್ ಖಾತೆಗಳ ವಿವರಗಳು, ಕಂಪ್ಯೂಟರ್ ಹಾರ್ಡ್’ಡಿಸ್ಕ್ ಅನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಸಂಜೆ ಹೊತ್ತಿಗೆ, ಅಂದರೆ ಡಿಕೆಶಿ ಪತ್ರಿಕಾಗೋಷ್ಟಿ ನಡೆಸುವ ಹೊತ್ತಿಗೆ ಸಿಬಿಐ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಸಿಬಿಐ ಹೊರಡಿಸಿರುವ ಪ್ರಕಟಣೆಯಲ್ಲಿ ಮತ್ತಷ್ಟು ಮಾಹಿತಿ ಇದೆ;
74.93 ಕೋಟಿ ರೂ. ಮೌಲ್ಯದ ಅಸಮರ್ಪಕ ಆಸ್ತಿಗಳನ್ನು ಡಿ.ಕೆ.ಶಿವಕುಮಾರ್ ಮತ್ತವರ ಕುಟುಂಬ ಸದಸ್ಯರು ಹೊಂದಿದ್ದಾರೆ ಎಂಬ ಆರೋಪದ ಮೇಲೆ ಮಾರ್ಚ್ 2020ರಲ್ಲಿಯೇ ಕರ್ನಾಟಕ ಸರಕಾರವು ದೆಹಲಿ ವಿಶೇಷ ಪೊಲೀಸ್ ಎಸ್ಟಾಬ್ಲಿಷ್’ಮೆಂಟ್ ಕಾಯ್ದೆ 6ರ ಅಡಿಯಲ್ಲಿ ಅಧಿಸೂಚನೆಯನ್ನು ಹೊರಡಿಸಿದೆ. ಅದರ ಭಾಗವಾಗಿಯೇ ಕೇಂದ್ರ ಸರಕಾರ ಡಿಎಸ್’ಪಿಇ ಕಾಯ್ದೆಯ ಅಧಿಸೂಚನೆ 5ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದೆ ಎಂದು ಸಿಬಿಐ ಹೇಳಿಕೊಂಡಿದೆ.

ಗೌರ್ನಮೆಂಟ್ ಹೇಳಿದೆ; ಸಿಬಿಐ ದಾಳಿ ಮಾಡಿದೆ..

ಕೇಂದ್ರದಲ್ಲಿರುವ ನರೇಂದ್ರ ಮೋದಿ ಸರಕಾರ ಹೇಳಿದಂತೆ ಸಿಬಿಐ ಕೇಳುತ್ತಿದೆ. ಈ ಉಪ ಚುನಾವಣೆ ಮುಗಿಯುವ ತನಕ ಈ ದಾಳಿ ಇದ್ದೇ ಇರುತ್ತದೆ ಡಿ.ಕೆ. ಶಿವಕುಮಾರ್ ಟೀಕಿಸಿದ್ದಾರೆ.

ಸಿಬಿಐ ದಾಳಿ ಮುಕ್ತಾಯವಾದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ನಾನು ಯಾವ ತಪ್ಪು ಮಾಡಿಲ್ಲ. ಪಕ್ಷಕ್ಕಾಗಲಿ ಅಥವಾ ಕಾರ್ಯಕರ್ತರಿಗೆ ಕಪ್ಪುಚುಕ್‌ಎಯಾಗುವಂಥ ಯಾವ ಕೆಲಸವನ್ನು ಮಾಡಿಲ್ಲ. ನನ್ನ ಪಾಳಿನ ದೈವವಾದ ನಿಮ್ಮೆಲ್ಲರ ಅಭಿಮಾನಕ್ಕೆ ಚಿರ ಋಣಿಯಾಗಿದ್ದೇನೆ, ನನ್ನ ಮೇಲೆ ನೀವು ಹೊಂದಿರುವ ಅಭಿಮಾನಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಭಾವುಕರಾಗಿ ಹೇಳಿದರು.

ನನ್ನ ಮೇಲೆ ದಾಳಿ ಇದೇ ಮೊದಲಲ್ಲ. 2017ರಲ್ಲಿ ಗುಜರಾತ್’ನಲ್ಲಿ ನಡೆದ ರಾಜ್ಯಸಭೆ ಚುನಾವಣೆ ವೇಳೆಯಲ್ಲೂ ಆದಾಯ ತೆರಿಗೆ ದಾಳಿ ನಡೆದಿತ್ತು. 2018ರಲ್ಲಿ ಇಡಿ ಪ್ರಕರಣ ಹಾಕಿ ಬಂಧನ ಮಾಡಿದರು. ಈಗ ಸಿಬಿಐ ತನಿಖೆಗೆ ಅಡ್ವೋಕೇಟ್ ಜನರಲ್ ಬೇಡ ಎಂದರೂ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ದಾಳಿ ನಡಿದಿದೆ. ಚುನಾವಣೆ ಮುಗಿಯುವವರೆಗೂ ಈ ದಾಳಿ ನಡೆಯುತ್ತೆ. ಪಕ್ಷಕ್ಕಾಗಿ ಕೆಲಸ ಮಾಡುತ್ತಿರುವ ನನ್ನ ಮೇಲೆ ಇಂಥ ಗುಮ್ಮಗಳನ್ನು ಬಿಟ್ಟು ಕಟ್ಟಿಹಾಕಲು ಸಾಧ್ಯವಿಲ್ಲ ಎಂದರು.

This raid is a continuation of BJP's vendetta politics against me

Congress was fighting on behalf of people ever since Corona & exposing the failures of BJP Govt

Such raids wont stop me from fighting against injustice

We will win against such tactics in the court of the people

— DK Shivakumar (@DKShivakumar) October 5, 2020

ನನ್ನ ಮನೆಯಲ್ಲಿ 50 ಲಕ್ಷ ಸಿಕ್ಕಿದೆ ಅಂತ ವರದಿಗಳು ಬರುತ್ತಿವೆ. ನಾನಂತು ಸ್ವಲ್ಪವೂ ತಲೆ ಕೆಡಿಸಿಕೊಳ್ಳಲು ಹೋಗೋದಿಲ್ಲ. ಮನೆಯ ಮೇಲೆ ದಾಳಿ ಮಾಡಿದ ಸಿಬಿಐ ಅಧಿಕಾರಿಗಳು ಎಲ್ಲ ಮಾಹಿತಿ ತೆಗೆದುಕೊಂಡು ಹೋಗಿದ್ದಾರೆ. ಕಪಾಟಿನಲ್ಲಿದ್ದ ಪ್ಯಾಂಟ್’ಗಳು, ಪಂಚೆಗಳು, ಸೀರೆಗಳೆಲ್ಲವುಗಳ ಲೆಕ್ಕವನ್ನು ಹಾಕಿ ಬರೆದುಕೊಂಡಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ ಹಾಗೂ ನನ್ನ ವಿರುದ್ಧ ನಡೆಯುತ್ತಿರುವ ಷಡ್ಯಂತ್ರಕ್ಕೆ ಮಣಿಯಲ್ಲ. ಹೆದರುವ ಮಗ ನಾನಲ್ಲ ಎಂದು ಅವರು ಕಿಡಿ ಕಾರಿದರು.

ಹೆದರಲ್ಲ, ಓಡಿ ಹೋಗಲ್ಲ..

ನನ್ನ ಮೇಲೆ, ನನ್ನ ಸಹೋದರ ಡಿ.ಕೆ. ಶಿವಕುಮಾರ್ ಮೇಲೆ ನಡೆದಿರುವ ಸಿಬಿಐ ದಾಳಿಯನ್ನು ಕಾನೂನಾತ್ಮಕವಾಗಿಯೇ ಎದುರಿಸುತ್ತೇವೆ. ನಾವು ಹೆದರುವುದಾಗಲಿ, ಓಡಿ ಹೋಗುವುದಾಗಲಿ ಇಲ್ಲ. ಎಲ್ಲವನ್ನೂ ಧೈರ್ಯದಿಂದ ಎದುರಿಸುತ್ತೇವೆ. ಹೀಗೆಂದವರು ಸಂಸದ ಡಿ.ಕೆ. ಸುರೇಶ್.

ದಾಳಿಯ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ದಾಳಿ ನಂತರ ಮಾಧ್ಯಮಗಳ ಜತೆಯೂ ಮತನಾಡಿದರು, ಬಿಜೆಪಿಯ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಿಲ್ಲ. ಕುಗ್ಗುವುದೂ ಇಲ್ಲ ಎಂದರು.

ಇಂದು ಮುಂಜಾನೆಯಿಂದ ನಡೆದ ಸಿಬಿಐ ವಿಚಾರಣೆ ಈಗಷ್ಟೆ ಮುಕ್ತಾಯವಾಗಿದೆ. ಹಿಂದೆ IT ಮತ್ತು ED ಅಧಿಕಾರಿಗಳು ನಡೆಸಿದ ವಿಚಾರಣೆಯ ದಾಖಲೆ ಪ್ರತಿಗಳ ನಕಲನ್ನು ಸಿಬಿಐ ಅಧಿಕಾರಿಗಳು ತಗೆದುಕೊಂಡಿರುತ್ತಾರೆ. ನನ್ನ ದೆಹಲಿ ನಿವಾಸದಲ್ಲಿ ಇನ್ನೂ ಪರಿಶೀಲನೆ ನಡೆಯುತ್ತಿದೆ. ಕಾನೂನಿನ ಚೌಕಟ್ಟಿನಲ್ಲಿ ಅಧಿಕಾರಿಗಳಿಗೆ ಎಲ್ಲಾ ರೀತಿಯಲ್ಲೂ ಸ್ಪಂದಿಸಿದ್ದೇವೆ.

— DK Suresh (@DKSureshINC) October 5, 2020

ಬಿಜೆಪಿ ನಾಯಕರ ಜಾಣ ಹೇಳಿಕೆಗಳು

ಇದೆಲ್ಲ ಒಂದೆಡೆ ಸಾಗಿದ್ದರೆ, ಪ್ರತಿಪಕ್ಷ, ಮುಖ್ಯವಾಗಿ ಕಾಂಗ್ರೆಸ್ ನಾಯಕರು ಸಿಬಿಐ ದಾಳಿ ಹಿನ್ನೆಲೆಯಲ್ಲಿ ಬಿಜೆಪಿ ಕಡೆಗೇ ಬೊಟ್ಟುಮಾಡಿ ತೋರಿಸುತ್ತಿದ್ದರು. ಆದಾಯ ತೆರಿಗೆ ದಾಳಿ ನಡೆದ ದಿನವನ್ನೇ ಗಣನೆಗೆ ತೆಗೆದುಕೊಂಡರೆ ಸಿಬಿಐ ದಾಳಿ ಬಗ್ಗೆಯೂ ಕಾಂಗ್ರೆಸ್ ನಾಯಕರ ಆರೋಪಗಳು ಸಹಜವಾಗಿಯೇ ಇದ್ದವು. ಗುಜರಾತ್ ಶಾಸಕರು ಬೆಂಗಳೂರಿನಲ್ಲೇ ಇದ್ದಾಗ ಐಟಿ ದಾಳಿ ನಡೆದಿತ್ತು. ಆಗ ಗುಜರಾತ್ ಅಸೆಂಬ್ಲಿಯಿಂದ ಅಹಮದ್ ಪಟೇಲ್ ಸ್ಪರ್ಧಿಸಿದ್ದರು. ಅವರನ್ನು ಸೋಲಿಸುವುದೇ ಬಿಜೆಪಿ ಅಂದಿನ ಅಧ್ಯಕ್ಷ ಅಮಿತ್ ಶಾ ಉದ್ದೇಶವಾಗಿತ್ತು ಎಂಬುದರಲ್ಲಿ ಯಾವುದೇ ಹುರುಳಿಲ್ಲ. ಈಗ ಬೈ ಎಲೆಕ್ಷನ್ ನಡುವೆ ಸಿಬಿಐ ಬಂದಿದೆ.

ಬಿಜೆಪಿ ನಾಯಕರ ಪೈಕಿ ಮೊದಲು ಪ್ರತಿಕ್ರಿಯಿಸಿದ್ದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ; ಅವರ ಹೇಳಿಕೆ ಹೀಗಿದೆ.

“ಈಗಾಗಲೇ ಡಿ.ಕೆ.ಶಿವಕುಮಾರ್‌ ಅವರ ಮೇಲೆ ಆದಾಯ ತೆರಿಗೆ ಹಾಗೂ ಇಡಿ ದಾಳಿ ನಡೆದಿತ್ತು. ಅದರ ಮುಂದುವರಿದ ಭಾಗವಾಗಿ ಸಿಬಿಐ ದಾಳಿ ನಡೆದಿರಬಹುದು. ಹೀಗಾಗಿ ಇದಕ್ಕೆ ರಾಜಕೀಯ ಬಣ್ಣ ಬಳಿಯುವುದು ಬೇಡ. ಸಮಾಜದಲ್ಲಿ ವ್ಯಕ್ತಿಗಿಂತ ವ್ಯವಸ್ಥೆಯೇ ದೊಡ್ಡದು. ಇದರಲ್ಲಿ ನಂಬಿಕೆ ಹೆಚ್ಚುವ ರೀತಿಯಲ್ಲಿ ಸಿಬಿಐ ತನಿಖೆ ನಡೆಯುತ್ತಿದೆ. ಸತ್ಯ ಏನೆಂದು ಹೊರಬರಲಿ. ಇನ್ನು ತನಿಖೆಗೆ ಸಹಕಾರ ನೀಡುವುದಾಗಿ ಸ್ವತಃ ಡಿಕೆಶಿ ಹೇಳಿದ್ದಾರೆ. ಅದರಂತೆ ಅವರು ಸಹಕಾರ ನೀಡಲಿ. ತಮ್ಮ ಪ್ರಾಮಾಣಿಕತೆಯನ್ನು ಸಾಬೀತು ಮಾಡಲು ಇದೊಂದು ಅವಕಾಶ. ಸಿಕ್ಕಿದ ಅವಕಾಶವನ್ನು ಅವರು ಸದ್ಬಳಕೆ ಮಾಡಿಕೊಳ್ಳಲಿ” ಎಂದರು.

ಅದಾದ ಮೇಲೆ ಮಾತನಾಡಿದವರು ಸಚಿವ ಕೆ.ಎಸ್. ಈಶ್ವರಪ್ಪ. “ನಮ್ಮ ನಾಯಕ ಯಡಿಯೂರಪ್ಪ ಜೈಲಿಗೆ ಹೋದಾಗ ಇದೇ ಕಾಂಗ್ರೆಸ್ ನಾಯಕರು ಮಾತನಾಡಿದ್ದೇನು? ಒಮ್ಮೆ ನೆನಪು ಮಾಡಿಕೊಳ್ಳಲಿ. ಡಿಕೆಶಿ ಅವರು ಸೀತೆಯಂತೆ ಪವಿತ್ರರಾಗಿ ಆರೋಪಮುಕ್ತರಾಗಲಿ” ಎಂದು ಲೇವಡಿ ಮಾಡಿದರು.

ಇನ್ನು ಡಾ.ಸುಧಾಕರ್ ವರಸೆಯೇ ಬೇರೆ ಆಗಿತ್ತು. “ಸಿದ್ದರಾಮಯ್ಯ ಅವರು ಐದು ವರ್ಷ ಸಿಎಂ ಆಗಿದ್ದರು. ಅವರ ಮೇಲೆ ಯಾಕೆ ದಾಳಿ ಆಗಲಿಲ್ಲ. ಡಿಕೆಶಿ ಮೇಲೆಯೇ ಯಾಕೆ ಆಯಿತು. ಅವರ ಮೇಲೆ ಹಿಂದೆ ಐಟಿ, ಇಡಿ ದಾಳಿ ಆಗಿತ್ತು. ಅದು ಮುಂದುವರಿದ ಭಾಗವಾಗಿಯೇ ಇದೂ ಆಗಿರಬಹುದು” ಎಂದರು ಅವರು.

Tags: by electionCBIcbi raidDK Shivakumardk sureshkarnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಕಲಿಯುಗ ಪ್ರತ್ಯಕ್ಷ ದೈವ ಶ್ರೀ ವೆಂಕಟೇಶ್ವರ ಸ್ವಾಮಿ ನೆಲೆಸಿರುವ ಆಂಧ್ರಪ್ರದೇಶ ಆಗುತ್ತಿದೆಯಾ ಕ್ರೈಸ್ತಪ್ರದೇಶ !?

ಕಲಿಯುಗ ಪ್ರತ್ಯಕ್ಷ ದೈವ ಶ್ರೀ ವೆಂಕಟೇಶ್ವರ ಸ್ವಾಮಿ ನೆಲೆಸಿರುವ ಆಂಧ್ರಪ್ರದೇಶ ಆಗುತ್ತಿದೆಯಾ ಕ್ರೈಸ್ತಪ್ರದೇಶ !?

Leave a Reply Cancel reply

Your email address will not be published. Required fields are marked *

Recommended

ಒಬ್ಬರಿದ್ದರು! ಸಿದ್ದಾಂತಕ್ಕಿಂತ ಸುದ್ದಿ ದೊಡ್ಡದು ಎಂದಿದ್ದ ಸಂಪಾದಕರು!!

ಒಬ್ಬರಿದ್ದರು! ಸಿದ್ದಾಂತಕ್ಕಿಂತ ಸುದ್ದಿ ದೊಡ್ಡದು ಎಂದಿದ್ದ ಸಂಪಾದಕರು!!

5 years ago
ಅಳಿಯಾ ಮನೆ ತೊಳಿಯಾ!! ಮೈಸೂರಿನಲ್ಲಿದ್ದ ಹೆಂಡತಿ ಮನೆಗೆ ಬರುತ್ತಾ ಶ್ರೀಗಂಧದ ಮರಗಳನ್ನು ಕಡಿದು ಸಾಗಿಸುತ್ತಿದ್ದ ಖದೀಮ; ಅಂತಾರಾಜ್ಯ ಸ್ಯಾಂಡಲ್‌ ಸ್ಮಗ್ಲರ್‌ಗಳನ್ನು ಸೆರೆ ಹಿಡಿದ ಪೊಲೀಸರು

ಅಳಿಯಾ ಮನೆ ತೊಳಿಯಾ!! ಮೈಸೂರಿನಲ್ಲಿದ್ದ ಹೆಂಡತಿ ಮನೆಗೆ ಬರುತ್ತಾ ಶ್ರೀಗಂಧದ ಮರಗಳನ್ನು ಕಡಿದು ಸಾಗಿಸುತ್ತಿದ್ದ ಖದೀಮ; ಅಂತಾರಾಜ್ಯ ಸ್ಯಾಂಡಲ್‌ ಸ್ಮಗ್ಲರ್‌ಗಳನ್ನು ಸೆರೆ ಹಿಡಿದ ಪೊಲೀಸರು

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ