• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ನವೆಂಬರ್ 16ರಿಂದ ಶಬರಿಮಲೆ ಮಂಡಲೋತ್ಸವ; ಕೋವಿಡ್ ನೆಗೆಟೀವ್ ಪತ್ರ ಇದ್ದರೆ ಮಾತ್ರ ಅಯ್ಯಪ್ಪ ದರ್ಶನ

P K Channakrishna by P K Channakrishna
October 6, 2020
in NEWS IN USE
Reading Time: 1 min read
0
ನವೆಂಬರ್ 16ರಿಂದ ಶಬರಿಮಲೆ ಮಂಡಲೋತ್ಸವ; ಕೋವಿಡ್ ನೆಗೆಟೀವ್ ಪತ್ರ ಇದ್ದರೆ ಮಾತ್ರ ಅಯ್ಯಪ್ಪ ದರ್ಶನ
914
VIEWS
FacebookTwitterWhatsuplinkedinEmail

ದಿನಕ್ಕೆ 1000 ಭಕ್ತರಿಗೆ ಮಾತ್ರ ಪ್ರವೇಶ; ತಜ್ಞರ ಸಮಿತಿ ಶಿಫಾರಸು

ರಾಜ್ಯದಿಂದ ಪ್ರತಿವರ್ಷ ತಪ್ಪದೇ ಸ್ವಾಮಿ ಅಯ್ಯಪ್ಪ ಯಾತ್ರೆ ಕೈಗೊಳ್ಳುವ ಭಕ್ತರು ಮಿಸ್ ಮಾಡದೇ ಓದಲೇಬೇಕಾದ ಸುದ್ದಿ ಇದು. ಮುಂಬರುವ ನವೆಂಬರ್ 16ರಿಂದ ಶುರುವಾಗಲಿರುವ ಮಕರವಿಳಕ್ಕು ಹಾಗೂ ಮಂಡಲೋತ್ಸವಕ್ಕೆ ಸಿದ್ಧತೆ ನಡೆಯುತ್ತಿದ್ದು, ಈ ವರ್ಷ ಕೋವಿಡ್-19 ಕಾರಣಕ್ಕೆ ಹಲವಾರು ನಿರ್ಬಂಧಗಳನ್ನು ವಿಧಿಸಲಾಗುತ್ತಿದೆ.

ಶಬರಿಮಲೆ ಸನ್ನಿಧಾನದ ಹಿಂದಿನ ವರ್ಷದ ಚಿತ್ರಗಳು.

ಬೆಂಗಳೂರು/ತಿರುವನಂತಪುರ: ಎರಡು ತಿಂಗಳ ಕಾಲ ನಡೆಯಲಿರುವ ವಾರ್ಷಿಕ ಮಂಡಲಪೂಜೆ ಹಾಗೂ ಮಕರವಿಳಕ್ಕು ಉತ್ಸವವನ್ನು ನಿರ್ವಿಘ್ನವಾಗಿ ಸಂಪನ್ನಗೊಳಿಸಲು ಟ್ರಾವಂಕೂರ್ ದೇವಾಸ್ವಂ ಮಂಡಳಿ ನಿರ್ಧರಿಸಿದ್ದು,ಕೋವಿಡ್ ಹಿನ್ನೆಲೆಯಲ್ಲಿ ಭಕ್ತರಿಗೆ ವಿಧಿಸಬಹುದಾದ ನಿರ್ಬಂಧಗಳ ಬಗ್ಗೆ ತಜ್ಞರಿಂದ ಕೆಲ ಸಲಹೆಗಳನ್ನು ಸ್ವೀಕರಿಸಿದೆ.

ತಜ್ಞರ ಸಮಿತಿಯು ಬುಧವಾರ ತಿರುವನಂತಪುರದಲ್ಲಿ ಕೇರಳದ ಮುಜರಾಯಿ (ದೇವಾಸ್ವಂ) ಸಚಿವ ಕೆ.ಸುರೇಂದ್ರನ್ ಅವರಿಗೆ ತನ್ನ ವರದಿಯನ್ನು ಸಲ್ಲಿಸಿದ್ದು, ಶಬರಿಮಲೆ ಅಯ್ಯಪ್ಪ ಸ್ವಾಮಿಯವರ ದರ್ಶನಕ್ಕೆ ಬರುವ ಪ್ರತಿಯೊಬ್ಬ ಭಕ್ತರು ಕಡ್ಡಾಯವಾಗಿ ಕೋವಿಡ್-19 ನೆಗಟಿವ್ ಪ್ರಮಾಣ ಪತ್ರ ಹೊಂದಿರಬೇಕು ಎಂದು ಶಿಫಾರಸು ಮಾಡಿದೆ.

ಕೋವಿಡ್’ನಿಂದ ರಾಜ್ಯವು ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಆದರೆ ಮಂಡಲೋತ್ಸವದ ಕಾಲದಲ್ಲಿ ಲಕ್ಷಾಂತರ ಭಕ್ತರು ಸನ್ನಿಧಾನಕ್ಕೆ ಬರಲಿದ್ದಾರೆ. ಹೀಗಾಗಿ ಎರಡು ತಿಂಗಳ ಕಾಲ ಕೈಗೊಳ್ಳಬೇಕಾದ ಎಲ್ಲ ಮುನ್ನೆಚ್ಚರಿಕೆಗಳ ಬಗ್ಗೆ ಸಮಿತಿ ಮಹತ್ತ್ವದ ಶಿಫಾರಸುಗಳನ್ನು ಸಮಿತಿ ಮಾಡಿದೆ.

ಸನ್ನಿಧಾನದಲ್ಲೂ ಪರೀಕ್ಷೆ

ಕೋವಿಡ್-19 ನೆಗಟಿವ್ ಪ್ರಮಾಣಪತ್ರದೊಂದಿಗೆ ಸನ್ನಿಧಾನಕ್ಕೆ ಬರುವ ಭಕ್ತರಿಗೆ ಇಲ್ಲಿಯೂ ಹೊಸದಾಗಿ ಪರೀಕ್ಷೆ ಮಾಡಿಸಿಕೊಳ್ಳುವ ಅವಕಾಶ ಇರಬೇಕು. ಅದಕ್ಕಾಗಿ ಸಾಕಷ್ಟು ಪ್ರಮಾಣದಲ್ಲಿ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಬೇಕು. ಶಬರಿಮಲೆಯ ಬೇಸ್ ಕ್ಯಾಂಪ್ ನಿಲಕ್ಕಲ್’ನಲ್ಲಿಯೂ ಭಕ್ತರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು. ಹಿರಿಯ ನಾಗರೀಕರು, ಅಂದರೆ 60 ವರ್ಷಕ್ಕಿಂತ ಮೇಲ್ಪಟ್ಟವರು ತಮಗೆ ಯಾವುದೇ ರೀತಿಯ ಗಂಭೀರ ಕಾಯಿಲೆಗಳಿಲ್ಲ ಎಂದು ವೈದ್ಯಕೀಯ ಪ್ರಮಾಣ ಪತ್ರವನ್ನು ಕೂಡ ನೀಡಬೇಕು. ನವೆಂಬರ್ 16ರಿಂದ ದಿನಕ್ಕೆ ಒಂದು ಸಾವಿರ ಭಕ್ತರಿಗೆ ಮಾತ್ರ ಅಯ್ಯಪ್ಪ ದರ್ಶನಕ್ಕೆ ಅವಕಾಶ ಕಲ್ಪಿಸಬೇಕು. ಎಂದು ಸಮಿತಿ ಶಿಫಾರಸು ಮಾಡಿದೆ.

ಸರಕಾರ ಹೇಳಿದ್ದೇನು?

ವರದಿಯನ್ನು ಪರಿಶೀಲಿಸಿ ಜಾರಿ ಮಾಡಲಾಗುವುದು. ಸನ್ನಿಧಾನದಲ್ಲಿ ದರ್ಶನ ಮಾಡಲು ಬಯಸುವ ಯಾತ್ರಿಕರು ಮೊದಲು ಕೋವಿಡ್-19 ಜಾಗ್ರತಾ ಪೋರ್ಟಲ್‌ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಪ್ರವೇಶ ಕೇಂದ್ರಗಳಲ್ಲಿ ಪ್ರವೇಶ ಶುಲ್ಕವನ್ನು ಪಾವತಿಸಿದ ನಂತರ ಯಾತ್ರಾರ್ಥಿಗಳನ್ನು ಪರೀಕ್ಷಿಸಬಹುದು. ಜತೆಗೆ, ಪಂಪಾ ನದಿಯಲ್ಲಿ ಸ್ನಾನ ಮಾಡುವುದನ್ನು ನಿಷೇಧಿಸಲಾಗಿದೆ. ಭಕ್ತರು ಸನ್ನಿಧಾನದಲ್ಲಿ ಮತ್ತು ಪಕ್ಕದ ಗಣಪತಿ ದೇವಸ್ಥಾನದ ಬಳಿ ನಿಲ್ಲುವುದನ್ನು ಸಹ ನಿಷೇಧಿಸಲಾಗಿದೆ ಮತ್ತು ಎಲ್ಲಾ ವಸತಿಗೃಹಗಳನ್ನುಮುಚ್ಚಲಾಗಿದೆ. ಭಕ್ತರು ದರ್ಶನ ಮಾಡಿಕೊಂಡು ತಮ್ಮ ಸ್ವಸ್ಥಳಗಳಿಗೆ ವಾಪಸ್ ತೆರಳಬೇಕು” ಎಂದು ಸಚಿವ ಸುರೇಂದ್ರನ್ ಹೇಳಿದ್ದಾರೆ.

ಸಮಿತಿಯ ಶಿಫಾರಸುಗಳನ್ನು ಸರ್ಕಾರ ಜಾರಿ ಮಾಡಲಿದೆ ಎಂದು ದೇವಸ್ವಂ ಸಚಿವ ಕಡಕಂಪಲ್ಲಿ ಸುರೇಂದ್ರನ್ ಅವರು ಹೇಳಿದ್ದಾರೆ. ಬುಧವಾರ ಸಚಿವ ಸಂಪುಟ ಸಭೆ ಇದ್ದು, ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಜತೆಗೆ ಕೆಲ ಪ್ರಮುಖ ಸಂಗತಿಗಳನ್ನು ಅವರು ಸ್ಫಷ್ಟಪಡಿಸಿದರು

*10 ರಿಂದ 60 ವರ್ಷದೊಳಗಿನ ಯಾತ್ರಾರ್ಥಿಗಳನ್ನು ಮಾತ್ರ ದೇವಾಲಯಕ್ಕೆ ಸೇರಿಸಬೇಕು ಎಂದು ವರದಿಯಲ್ಲಿ ಶಿಫಾರಸು ಮಾಡಲಾಗಿದೆ. 60 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ದೈಹಿಕವಾಗಿ ದುರ್ಬಲರಾಗಿರುವ ಕಾರಣ ಅವರೆಲ್ಲರೂ ಕೇರಳದ ಕೋವಿಡ್ ನಿಯಮಗಳ ಪ್ರಕಾರ ಜನಸಂದಣಿಯಿಂದ ದೂರವಿರಬೇಕು.

*ಶಬರಿಮಲೆಯಲ್ಲಿ ವಾರ್ಷಿಕ ಉತ್ಸವವು ನವೆಂಬರ್’ನಲ್ಲಿ ಮಧ್ಯದಲ್ಲಿ ನಡೆಯಲಿದ್ದು, ನಂತರ ದೇವಾಲಯವು ಭಕ್ತರಿಗೆ ತೆರೆಯುತ್ತದೆ. ಕೇರಳ ಪೊಲೀಸರು ಮಾಡಿರುವ ಶಬರಿಮಲೆ ವರ್ಚುವಲ್ ಕ್ಯೂ ವ್ಯವಸ್ಥೆಯಿಂದ ಯಾತ್ರಾರ್ಥಿಗಳ ದಟ್ಟಣಿಯನ್ನು ನಿಯಂತ್ರಿಸಲಾಗುವುದು. ಈ ವ್ಯವಸ್ಥೆಯನ್ನು 2011-2012ರ ತೀರ್ಥಯಾತ್ರೆಯಲ್ಲಿ ಪ್ರಾರಂಭಿಸಲಾಯಿತು ಮತ್ತು ಭಕ್ತರಿಗೆ ದರ್ಶನಕ್ಕಾಗಿ ಸ್ಲಾಟ್‌ಗಳನ್ನು ಕಾಯ್ದಿರಿಸಲು ಕೂಡ ಅವಕಾಶ ಮಾಡಿಕೊಡುತ್ತದೆ.

ಭಕ್ತರು ಮುನ್ನೆಚ್ಚರಿಕೆ ವಹಿಸುವುದು ಉತ್ತಮ

ಈ ವರ್ಷ ಶಬರಿಮಲೆ ಯಾತ್ರೆ ಕೈಗೊಳ್ಳಲೇಬೇಕೆಂದಿರುವ ಭಕ್ತರು ಸಮಿತಿ ಮಾಡಿರುವ ಶಿಫಾರಸುಗಳಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು. ಕೋವಿಡ್ ವಿಷಯದಲ್ಲಿ ಸಾಕಷ್ಟು ಎಚ್ಚರಿಕೆ ವಹಿಸುವುದು ಉತ್ತಮ. ಹಿರಿಯ ನಾಗರೀಕರು ಈ ವರ್ಷ ಯಾತ್ರೆ ಮಾಡದಿದ್ದರೆ ಉತ್ತಮ ಎಂದು ಕೆಲ ತಜ್ಞರು ಹೇಳಿದ್ದಾರೆ.

Tags: makaravilakku 2020sabarimalaSabarimala Swami Ayyappa Templeswamy ayyappa
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

ಮಾರ್ಚ್‌ 1ರಿಂದ ದ್ವಿತೀಯ ಪಿಯು, 20ರಿಂದ sslc ಪರೀಕ್ಷೆ

by cknewsnow desk
December 3, 2024
0

ಎಲ್ಲ ಪರೀಕ್ಷೆಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ

ಪೋಡಿ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

ಪೋಡಿ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

by cknewsnow desk
August 12, 2024
0

1,000 ಗ್ರಾಮ ಲೆಕ್ಕಿಗರು, 750 ಸರ್ವೇಯರ‍್ಸ್, 36 ಎಡಿಎಲ್‌ಆರ್‌ಗಳ ನೇಮಕ

kptclನಲ್ಲಿ 902 ಹುದ್ದೆಗೆ ನೇಮಕ

kptclನಲ್ಲಿ 902 ಹುದ್ದೆಗೆ ನೇಮಕ

by cknewsnow desk
May 24, 2024
0

ನೇಮಕಾತಿ ಆದೇಶ ನೀಡಿದ ಸರಕಾರ

ಕೆಸಿಇಟಿ-24 ಪರೀಕ್ಷೆ: ಜನವರಿ 10ರಿಂದ online ಅರ್ಜಿ ಸಲ್ಲಿಕೆಗೆ ಅವಕಾಶ

CET EXAM; ಔಟ್ ಆಫ್ ಸಿಲೆಬಸ್ ಪ್ರಶ್ನೆ ಕೈಬಿಟ್ಟು ಮೌಲ್ಯಮಾಪನ; ವಿದ್ಯಾರ್ಥಿಗಳಿಗೆ ನಿರಾಳ

by cknewsnow desk
April 28, 2024
0

ತಜ್ಞರ ಶಿಫಾರಸು ಒಪ್ಪಿಕೊಂಡ ರಾಜ್ಯ ಸರಕಾರ

ದ್ವಿತೀಯ ಪಿಯುಸಿ ಫಲಿತಾಂಶ: ಧೂಳೆಬ್ಬಿಸಿದ ಬಾಲಕಿಯರು

ದ್ವಿತೀಯ ಪಿಯುಸಿ ಫಲಿತಾಂಶ: ಧೂಳೆಬ್ಬಿಸಿದ ಬಾಲಕಿಯರು

by cknewsnow desk
April 11, 2024
0

ವಿಜ್ಞಾನದಲ್ಲಿ ವಿದ್ಯಾಲಕ್ಷ್ಮಿ ಪ್ರಥಮ

ಬೆಳಗ್ಗೆ 10.15 ಗಂಟೆಗೆ ದ್ವಿತೀಯ PUC ಪರೀಕ್ಷೆ; ಶುಭವಾಗಲಿ ವಿದ್ಯಾರ್ಥಿಗಳೇ

ನಾಳೆ ಬೆಳಗ್ಗೆ 10 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ

by cknewsnow desk
April 9, 2024
0

11 ಗಂಟೆ ನಂತರ ಅಂತರ್ಜಾಲದಲ್ಲಿ ಫಲಿತಾಂಶ ನೋಡಬಹುದು

Next Post
ಸತ್ಯ ಸಾಯುವುದಿಲ್ಲ, ಆದರೆ, ಅದನ್ನು ಕೊಲ್ಲಲು ಯತ್ನಿಸಲಾಗಿತ್ತು!

ಸತ್ಯ ಸಾಯುವುದಿಲ್ಲ, ಆದರೆ, ಅದನ್ನು ಕೊಲ್ಲಲು ಯತ್ನಿಸಲಾಗಿತ್ತು!

Leave a Reply Cancel reply

Your email address will not be published. Required fields are marked *

Recommended

ಡಿಜಿಟ್‌ನೊಂದಿಗೆ  ಸಿಎಂ ಪುತ್ರ ವಿಜಯೇಂದ್ರ ಡೀಲ್ ಬಗ್ಗೆ ಹೇಳಿದ  ಬಸನಗೌಡ ಪಾಟೀಲ್‌ ಯತ್ನಾಳ್‌

ಕುಟುಂಬದವರೇ ಜನಪ್ರತಿನಿಧಿಗಳಾಗುವ ಸಂಪ್ರದಾಯ ತೊಲಗಲಿ

3 years ago
ಗ್ಯಾಂಗ್ ರೇಪ್ ಗ್ಯಾಂಗ್ʼನಲ್ಲಿ ವಿಕೃತಕಾಮಿ

ಗ್ಯಾಂಗ್ ರೇಪ್ ಗ್ಯಾಂಗ್ʼನಲ್ಲಿ ವಿಕೃತಕಾಮಿ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ