• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಕೆಮಿಸ್ಟ್ರಿಯಲ್ಲಿ ನಾರಿಯರಿಬ್ಬರು ಗೆದ್ದರು ನೊಬೆಲ್

cknewsnow desk by cknewsnow desk
October 8, 2020
in STATE, WORLD
Reading Time: 1 min read
0
ಕೆಮಿಸ್ಟ್ರಿಯಲ್ಲಿ ನಾರಿಯರಿಬ್ಬರು ಗೆದ್ದರು ನೊಬೆಲ್
911
VIEWS
FacebookTwitterWhatsuplinkedinEmail

ಸ್ಟಾಕ್ಹೋಮ್‌: ಅತ್ಯಾಚಾರ, ಹೆಣ್ಮಕ್ಕಳ ಮೇಲೆ ದೌರ್ಜನ್ಯದಂಥ ಸುದ್ದಿಗಳೇ ಅಪ್ಪಳಿಸುತ್ತಿದ್ದ ವೇಳೆಯಲ್ಲಿ ಇಡೀ ಜಗತ್ತು ಸಂಭ್ರಮಿಸುವಂಥ ಸುದ್ದಿ ಸ್ವೀಡನ್‌ ದೇಶದ ಸ್ಟಾಕ್ಹೋಮ್‌ನಿಂದ ಬಂದಿದೆ. ಇಬ್ಬರು ಮಹಿಳಾ ವಿಜ್ಞಾನಿಗಳು 2020ನೇ ಸಾಲಿನ ಪ್ರತಿಷ್ಠಿತ ನೊಬೆಲ್‌ ಪುರಸ್ಕಾರಕ್ಕೆ ಪಾತ್ರರಾಗಿದ್ದಾರೆ. ಜೀನೋಮ್‌ ಎಡಿಟಿಂಗ್‌ ವಿಧಾನವನ್ನುಅಭಿವೃದ್ಧಿ ಮಾಡಿದ ಸಾಧನೆಗಾಗಿ ಜರ್ಮನಿಯ ಎಮ್ಯಾನುಯೆಲ್ ಚಾರ್ಪೆಂಟಿಯರ್ ಮತ್ತು ಅಮೆರಿಕದ ಜೆನಿಫರ್‌ ಎ.ಡೌಡ್ನಾ ಅವರನ್ನು ರಸಾಯನಶಾಸ್ತ್ರ ನೊಬೆಲ್ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.

ಈ ವರ್ಷ ಇಬ್ಬರು ಮಹಿಳೆಯರು ರಸಾಯನಶಾಸ್ತ್ರದ ನೊಬೆಲ್‌ ಹಂಚಿಕೊಂಡಿರುವುದಕ್ಕೆ ಸಹಜವಾಗಿಯೇ ಜಾಗತಿಕವಾಗಿ ಇದೊಂದು ದೊಡ್ಡ ಸುದ್ದಿಯಾಗಿದೆ. ಈ ಇಬ್ಬರ ಪೈಕಿ, ಎಮಾನ್ಯುಯೆಲ್‌ ಅವರು ಜರ್ಮನಿಯ ಬರ್ಲಿನ್‌ನಲ್ಲಿರುವ ಮ್ಯಾಕ್ಸ್‌ ಬ್ಲ್ಯಾಂಕ್‌ ಯೂನಿಟ್‌ ಫಾರ್‌ ದಿ ಸೈನ್ಸ್‌ ಆಫ್‌ ಪ್ಯಾಥೊಜೆನ್ಸ್‌ನ ವಿಭಾಗದ ನಿರ್ದೇಶಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜೆನಿಫರ್‌ ಎ.ಡೌಡ್ನಾ ಅವರು ಅಮೆರಿಕದ ಬರ್ಕ್ಲಿಯಲ್ಲಿರುವ  ಯೂನಿವರ್ಸಿಟಿ ಆಫ್‌ ಕ್ಯಾಲಿಫೋರ್ನಿಯಾದಲ್ಲಿ ಪ್ರೊಫೆಸರ್‌ ಆಗಿ ಕೆಲಸ ಮಾಡುತ್ತಿದ್ದಾರೆ.

BREAKING NEWS:
The 2020 #NobelPrize in Chemistry has been awarded to Emmanuelle Charpentier and Jennifer A. Doudna “for the development of a method for genome editing.” pic.twitter.com/CrsnEuSwGD

— The Nobel Prize (@NobelPrize) October 7, 2020

ತಳಿಗುಣ (ಜೀನ್‌) ತಂತ್ರಜ್ಞಾನದಲ್ಲಿ ಅತ್ಯಂತ ತೀಕ್ಷ್ಣವಾದ ತಂತ್ರಗಳ (ಟೂಲ್ಸ್‌) ಅನ್ವೇಷಣೆಯನ್ನು ಎಮಾನ್ಯುಯೆಲ್‌ ಮತ್ತು ಜೆನಿಫರ್‌ ಮಾಡಿದ್ದು, ತಳಿಗುಣ ಬದಲಾವಣೆಗೆ ಉಪಯೋಗಿಸಲಾಗುವ ಅತಿಸೂಕ್ಷ್ಮ ಕ್ರಿಸ್‌ಪರ್‌ (CRISPR/Cas9) ಕತ್ತರಿಗಳನ್ನು (ಜೆನೆಟಿಕ್‌ ಸಿಸರ್ಸ್) ಇವರು ಅಭಿವೃದ್ಧಿಗೊಳಿಸಿದ್ದಾರೆ.

ಈ ನಡುವೆ ಇವರಿಬ್ಬರ ಸಂಶೋಧನೆ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಜಗತ್ತಿನ ಮೇಲೆ ಇವರ ಸಂಶೋಧನೆ ಬೀರಬಹುದಾದ ಪರಿಣಾಮಗಳ ಬಗ್ಗೆಯೂ ಸಂವಾದ ನಡೆಯುತ್ತಿದೆ. ಇವರು ಸಂಶೋಧಿಸಿದ ತಂತ್ರಜ್ಞಾನವನ್ನು ಬಳಸಿಕೊಂಡು ಸಂಶೋಧಕರು ಸೂಕ್ಷ್ಮ ಜೀವಿಗಳು, ಸಸ್ಯಗಳು ಹಾಗೂ ಪ್ರಾಣಿಗಳ ಡಿಎನ್‌ಎಯನ್ನು ನಿಖರವಾಗಿ ಬದಲಿಸಬಹುದು. ಜತೆಗೆ, ಸಸ್ಯತಳಿಗಳ ಅಭಿವೃದ್ಧಿ ಮಾಡುವುದೂ ಸೇರಿ ಅತ್ಯಂತ ಪರಿಣಾಮಕಾರಿಯಾಗಿ ಮಾರಕ ಕ್ಯಾನ್ಸರ್‌ ಕಾಯಿಲೆಯನ್ನು ಗುಣಪಡಿಸಬಹುದಾಗಿದೆ. ಹಾಗೆಯೇ, ಅನುವಂಶಿಕ ರೋಗಗಳನ್ನೂ ಗುಣಪಡಿಸಲು ಈ ತಂತ್ರಜ್ಞಾನ ಹೆಚ್ಚು ಪರಿಣಾಮಕಾರಿಯಾಗಿ ನೆರವಾಗುತ್ತದೆ ಎಂದು ಹೇಳಲಾಗಿದೆ.

ಏತನ್ಮಧ್ಯೆ, ನೊಬೆಲ್‌ ಪುರಸ್ಕಾರ ಸಂದ ಬಗ್ಗೆ ಈ ಇಬ್ಬರು ಸಾಧಕಿಯರು ಅತೀವ ಸಂತಸ ವ್ಯಕ್ತಪಡಿಸಿದ್ದಾರೆ.

Just in: 2020 Chemistry Laureate Emmanuelle Charpentier sent us this photo right after she found out the news of this year's #NobelPrize.

Our exclusive phone interview with her is on the way! pic.twitter.com/oiGKv4OBMf

— The Nobel Prize (@NobelPrize) October 7, 2020

This year’s Chemistry Laureate Jennifer A. Doudna was born in 1964 in Washington, D.C, USA.

She is a Professor at @UCBerkeley, USA and Investigator at @HHMINEWS.https://t.co/GMyJGnBMlThttps://t.co/CtXW7pRzop#NobelPrize pic.twitter.com/FK2tMfunW1

— The Nobel Prize (@NobelPrize) October 7, 2020

2009ರಲ್ಲಿ ನಮ್ಮ ದೇಶದವರೇ ಆದ ತಮಿಳುನಾಡು ಮೂಲದವರು, ಅಮೆರಿಕದಲ್ಲಿ ನೆಲೆಸಿರುವ ಡಾ. ವೆಂಕಟರಾಮನ್‌ ರಾಮಕೃಷ್ಣನ್‌ ಅವರು ರಸಾಯನಶಾಸ್ತ್ರದಲ್ಲಿ ನೊಬೆಲ್‌ ಪ್ರಶಸ್ತಿಯನ್ನು ಅಮೆರಿಕದ ಥಾಮಸ್‌ ಎ. ಸ್ಟೀಟ್ಜ್ ಹಾಗೂ ಇಸ್ರೇಲ್‌ನ ಆಡ ಯೊನಾತ್‌ ಅವರೊಂದಿಗೆ ಹಂಚಿಕೊಂಡಿದ್ದರು. ಡಿಎನ್‌ಎ ಒಳನೋಟದ ರಹಸ್ಯವನ್ನು ಹೊರತೆಗೆಯುವ ʼರೈಬೊಸೋಮ್‌ʼನ ಸಂಶೋಧನೆಗಾಗಿ ಅವರಿಗೆ ನೊಬೆಲ್‌ ಸಂದಿತ್ತು.

Tags: chemistrychemistry nobel prize 2020Emmanuelle charpentierJennifer A. Doudnanobel prize 2020
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ವಾಟ್ಸಾಪ್‌;‌ ಹುಷಾರಾಗಿದ್ದರೆ ಉತ್ತಮ,ಬ್ಯಾಕಪ್‌ ಮಾಡದಿದ್ದರೆ ಇನ್ನೂ ಕ್ಷೇಮ

ವಾಟ್ಸಾಪ್‌;‌ ಹುಷಾರಾಗಿದ್ದರೆ ಉತ್ತಮ,ಬ್ಯಾಕಪ್‌ ಮಾಡದಿದ್ದರೆ ಇನ್ನೂ ಕ್ಷೇಮ

Leave a Reply Cancel reply

Your email address will not be published. Required fields are marked *

Recommended

ಬೇಟಿ ಬಚಾವೋ ಬೇಟಿ ಪಡಾವೋ ಬದಲಿಗೆ ಈಗ ಬೇಟಿ ಹಠಾವೋ!

ಬೇಟಿ ಬಚಾವೋ ಬೇಟಿ ಪಡಾವೋ ಬದಲಿಗೆ ಈಗ ಬೇಟಿ ಹಠಾವೋ!

3 years ago
ಬಾಗೇಪಲ್ಲಿ ನಂತರ ಗುಡಿಬಂಡೆಯಲ್ಲಿ ನಾಳೆ ಶಾಸಕರಿಂದ 35,000 ಫುಡ್‌ ಕಿಟ್‌ ವಿತರಣೆ

ಸೇವೆಯನ್ನು ದೈವ ಎಂದು ನಂಬಿದ್ದೇನೆ: ಶಾಸಕ ಎಸ್.ಎನ್.‌ಸುಬ್ಬಾರೆಡ್ಡಿ

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ