• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಡ್ರಗ್ಸ್‌ ತಂದಿಟ್ಟ ಫಜೀತಿ; ಸಿನಿಮಾ ತಾರೆಯರನ್ನು ಎಲೆಕ್ಷನ್‌ ಪ್ರಚಾರದಿಂದ ದೂರವಿಟ್ಟವಾ ಪಕ್ಷಗಳು

P K Channakrishna by P K Channakrishna
October 8, 2020
in POLITICS, STATE
Reading Time: 1 min read
0
ಡ್ರಗ್ಸ್‌ ತಂದಿಟ್ಟ ಫಜೀತಿ; ಸಿನಿಮಾ ತಾರೆಯರನ್ನು ಎಲೆಕ್ಷನ್‌ ಪ್ರಚಾರದಿಂದ ದೂರವಿಟ್ಟವಾ ಪಕ್ಷಗಳು
922
VIEWS
FacebookTwitterWhatsuplinkedinEmail
lead photo @ckphotography9

ಬೆಂಗಳೂರು: ಕಳೆದ ಉಪ ಚುನಾವಣೆ ಸೇರಿ ಹಿಂದೆ ನಡೆದಿದ್ದ ಎಲ್ಲ ಚುನಾವಣೆಗಳಲ್ಲಿ ಕನ್ನಡ ಸಿನಿಮಾ ನಟ-ನಟಿಯರಿಗೆ ರತ್ನಗಂಬಳಿ ಹಾಸಿ ಪ್ರಚಾರ ಮಾಡಿಸಿಕೊಂಡಿದ್ದ ರಾಜ್ಯ ಎಲ್ಲ ರಾಜಕೀಯ ಪಕ್ಷಗಳು ಈ ಉಪ ಚುನಾವಣೆಯಲ್ಲಿ ವರಸೆ ಬದಲಿಸಿವೆ.

ಸಿನಿಮಾ ತಾರೆಯರು ಮತ್ತು ರಾಜಕೀಯ ನಾಯಕರ ಸಂಬಂಧ ಗುಟ್ಟಿನ ವಿಷಯವೇನಲ್ಲ. ಆದರೆ, ಅದು ಚುನಾವಣಾ ಅಖಾಡದಲ್ಲೂ ಇದೀಗ ಸದ್ದು ಮಾಡುತ್ತಿದೆ. ಈಗಾಗಲೇ ಎಲ್ಲ ಪಕ್ಷಗಳಿಗೆ ಪ್ರತಿಷ್ಠೆಯಾಗಿರುವ ಶಿರಾ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಲ್ಲಿ ಡ್ರಗ್ಸ್‌ ಪ್ರಕರಣದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ಹಾಗೂ ತೀವ್ರ ವಿಚಾರಣೆಗೆ ಒಳಪಡುತ್ತಿರುವ ತಾರೆಯರ ರಾಜಕೀಯ ನಂಟಿನ ಬಗ್ಗೆ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ಡ್ರಗ್ಸ್‌ ಕೇಸ್‌ ಎಲೆಕ್ಷನ್‌ ಮೇಲೆ ಪರಿಣಾಮ ಬೀರುತ್ತಾ? ಇಲ್ಲವಾ? ಎಂಬುದನ್ನು ಕಾದು ನೋಡಬೇಕಿದೆ.

ಫಲಿತಾಂಶದ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಆತಂಕದಲ್ಲಿರುವ ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳು ಈ ಚುನಾವಣೆಯಲ್ಲಿ ಸಿನಿಮಾ ತಾರೆಯರಿಂದ ಸಂಪೂರ್ಣ ದೂರ ಇರಲು ನಿರ್ಧರಿಸಿವೆ ಎಂದು ಗೊತ್ತಾಗಿದೆ. ಕಳೆದ ಉಪ ಚುನಾವಣೆಯಲ್ಲಿ ಸಾಕಷ್ಟು ತಾರೆಯರನ್ನು ಕರೆಸಿ ಭರ್ಜರಿ ಪ್ರಚಾರ ಮಾಡಿಸಿದ್ದ ಬಿಜೆಪಿಯಂತೂ ನಟ-ನಟಿಯರ ಗೊಡವೆಯೇ ಬೇಡ ಎನ್ನುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕಳೆದ ಉಪ ಚುನಾವಣೆಯಲ್ಲಿ ಬಿಜೆಪಿ ಪರ ನಟಿಯರಾದ ರಾಗಿಣಿ, ಸಂಜನಾ, ದಿಗಂತ್‌, ಐಂದ್ರಿತಾ ರೈ, ಪ್ರಜ್ವಲ್‌ ದೇವರಾಜ್, ಹರಿಪ್ರಿಯಾ ಮುಂತಾದವರು ಪ್ರಚಾರ ನಡೆಸಿದ್ದರು. ಮುಖ್ಯವಾಗಿ ಚಿಕ್ಕಬಳ್ಳಾಪುರ, ಹೊಸಕೋಟೆ ಮತ್ತಿತರ ಕಡೆ, ಅಂದರೆ ಅಭ್ಯರ್ಥಿಗಳು ಆಹ್ವಾನಿಸಿದ ಕಡೆಗೆಲ್ಲ ಇವರು ಹೋಗಿಬಂದಿದ್ದರು. ‌ಬಹುಶಃ ಡ್ರಗ್ಸ್‌ ಕೇಸ್‌ ಇಲ್ಲದಿದ್ದರೆ ಇವರೆಲ್ಲರೂ ಈ ಉಪ ಚುನಾವಣೆಯಲ್ಲಿ ಆಡಳಿತ ಪಕ್ಷದ ಪರವಾಗಿ ಪ್ರಚಾರ ಮಾಡುತ್ತಿದ್ದರು. ಆದರೆ, ಪ್ರಕರಣ ಧುತ್ತೆಂದು ಮೇಲೆದ್ದು ಕೂತ ಕಾರಣಕ್ಕೆ ಪಕ್ಷವೇ ಇವರನ್ನು ದೂರ ಇಟ್ಟಿದೆ ಎಂದು ಆ ಮೂಲಗಳು ಹೇಳುವ ಮಾತು.

ಇನ್ನೊಂದೆಡೆ ಕೋವಿಡ್‌ ವಿಜೃಂಭಿಸುತ್ತಿರುವ ಹೊತ್ತಿನಲ್ಲಿ ತಾರಾ ಪ್ರಚಾರಕರನ್ನು ಕಡಿಮೆ ಮಾಡುವಂತೆ ಎಲ್ಲ ಪಕ್ಷಗಳಿಗೆ ಚುನಾವಣಾ ಆಯೋಗ ಸೂಚಿಸಿದೆ. ಅದರಂತೆ ಪಕ್ಷದ ನಾಯಕರಷ್ಟೇ ಪ್ರಚಾರ ಮಾಡಲಿದ್ದಾರೆ ಎಂದು ಜೆಡಿಎಸ್‌ ನಾಯಕ ಮತ್ತು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳುತ್ತಾರೆ.

  • ಎಚ್.ಡಿ. ಕುಮಾರಸ್ವಾಮಿ

“ನಮ್ಮ ಪಕ್ಷಕ್ಕೆ ಸಿಲೆಬ್ರಿಟಿಗಳು ಬೇಕಾಗಿಲ್ಲ. ನಮ್ಮ ಕಾರ್ಯಕರ್ತರೇ ನಮ್ಮ ಸಿಲೆಬ್ರಿಟಿಗಳು. ಅವರೇ ಪಕ್ಷವನ್ನು ಗೆಲ್ಲಿಸುತ್ತಾರೆ, ಮುನ್ನಡೆಸುತ್ತಾರೆ ಕೂಡ. ಸ್ಟಾರ್‌ಗಳಿಗೆ ಹಣ ಕೊಟ್ಟು ಕರೆತಂದು ಪ್ರಚಾರ ಮಾಡಿಸಿಕೊಳ್ಳುವ ಶಕ್ತಿ ನಮ್ಮ ಪಕ್ಷಕ್ಕಿಲ್ಲ” ಎನ್ನುತ್ತಾರೆ ಎಚ್‌ಡಿಕೆ. ಅವರು ಸಿಕೆನ್ಯೂಸ್‌ ನೌ ಜತೆ ಮಾತನಾಡಿದರು.

ಸ್ಟಾರ್‌ಗಳ ಪ್ರಭಾವ ಇರುತ್ತಾ?

ಇರುತ್ತದೆ ಎನ್ನುತ್ತಾರೆ ಚಿಕ್ಕಬಳ್ಳಾಪುರದ ಹಿರಿಯ ಪತ್ರಕರ್ತ ಎಂ. ಕೃಷ್ಣಪ್ಪ. ಅವರು ಹೇಳಿದ್ದಿಷ್ಟು; “ಕಳೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಈಗಿನ ವೈದ್ಯಕೀಯ ಸಚಿವ ಡಾ. ಸುಧಾಕರ್‌ ಪರವಾಗಿ ಅನೇಕ ನಟ-ನಟಿಯರು ಬಂದು ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದರು. ಅವರು ಬಂದು ಹೋಗಿದ್ದರಿಂದ ಸಿನಿಮಾ ಒಲವು ಇರುವ ಯುವಜನರ ಮೇಲೆ ಕೊಂಚ ಪ್ರಭಾವ ಬೀರಿದ್ದು ಹೌದು. ಅದರಲ್ಲೂ ತೆಲುಗಿನ ಹಾಸ್ಯನಟ ಬ್ರಹ್ಮಾನಂದಂ ಪ್ರಚಾರ ಮಾಡಿದ್ದು ಅವರಿಗೆ ಪ್ಲಸ್‌ ಆಯಿತು” ಎನ್ನುವುದು ಅವರ ಮಾತು.

ಸ್ಟಾರ್‌ಗಳು ಯಾಕೆ ಪ್ರಚಾರಕ್ಕೆ ಬರ್ತಾರೆ?

“ಕೆಲ ನಟ-ನಟಿಯರಿಗೆ ರಾಜಕೀಯ ಪಕ್ಷಗಳ ಮೇಲೆ ಒಲವಿರುತ್ತದೆ. ಆ ಕಾರಣಕ್ಕಾಗಿ ಉಚಿತವಾಗಿಯೇ ಬಂದು ಪ್ರಚಾರ ಮಾಡುತ್ತಾರೆ. ಇನ್ನು ಕೆಲವರು ಅಭ್ಯರ್ಥಿಯಿಂದ ಹಣ ಪಡೆದು ಪ್ರಚಾರಕ್ಕೆ ಬರುತ್ತಾರೆ, ಇನ್ನು ಕೆಲವರು ಏನಾದರೂ ಫೇವರ್‌ ಮಾಡಿಸಿಕೊಳ್ಳುವ ಉದ್ದೇಶದಿಂದ ಮುಂದಾಲೋಚನೆ ಇಟ್ಟುಕೊಂಡು ಬಂದು ಕ್ಯಾಂಪೇನ್‌ ಮಾಡುತ್ತಾರೆ. ಆದರೆ ಎಲ್ಲರೂ ಹಣ ಪಡೆದುಕೊಂಡೇ ಪ್ರಚಾರಕ್ಕೆ ಬರುತ್ತಾರೆ ಎಂದು ಹೇಳಲಾಗದು. ಈ ಬಾರಿ ಶಿರಾಕ್ಕಿಂತ ರಾಜರಾಜೇಶ್ವರಿ ನಗರದಲ್ಲಿ ತಾರೆಯರು ಪ್ರಚಾರ ಮಾಡುವ ನಿರೀಕ್ಷೆ ಇತ್ತು. ಕಾಂಗ್ರೆಸ್‌ ಇರಬಹುದು ಅಥವಾ ಬಿಜೆಪಿ ಇರಬಹುದು ಎರಡೂ ಪಕ್ಷಗಳಿಗೆ ಗೆಲ್ಲಲೇಬೇಕಾದ ಕ್ಷೇತ್ರಗಳಿವು. ಮೇಲಾಗಿ ಶಿರಾವನ್ನು ಉಳಿಸಿಕೊಳ್ಳಲೇಬೇಕಾದ ಒತ್ತಡದಲ್ಲಿ ಜೆಡಿಎಸ್‌ ಇದೆ. ಹೀಗಾಗಿ ಕೊನೆಕ್ಷಣದಲ್ಲಾದರೂ ಕೆಲ ಸ್ಟಾರ್‌ಗಳು ಪ್ರಚಾರಕ್ಕೆ ಬರಬಹುದು. ಡ್ರಗ್‌ ಕೇಸಿನಲ್ಲಿ ಸಿಲುಕಿಕೊಂಡಿರುವ ತಾರೆಯರು ಬಿಟ್ಟು ಪಕ್ಷಗಳ ಜತೆ ಗುರುತಿಸಿಕೊಂಡಿರುವ ತಾರೆಯರು ಪ್ರಚಾರ ಮಾಡಲಿದ್ದಾರೆ” ಎನ್ನುತ್ತಾರೆ ಬಿಜೆಪಿ ನಾಯಕರೊಬ್ಬರು.

“ಈಗಾಗಲೇ ಪಕ್ಷದ ಜತೆ ಗುರುತಿಸಿಕೊಂಡಿರುವ ಕೆಲ ತಾರೆಯರು ನಾಯಕರಾಗಿ ಬೆಳೆದಿದ್ದಾರೆ. ಉದಾಹರಣೆಗೆ, ತಾರಾ ಅವರು ಮೇಲ್ಮನೆ ಸದಸ್ಯರಾಗಿದ್ದರು. ಅವರು ಎರಡೂ ಕ್ಷೇತ್ರಗಳಲ್ಲಿ ಪ್ರಚಾರ ಮಾಡಲಿದ್ದಾರೆ. ಇನ್ನು ಶ್ರುತಿ ಅವರೂ ಇದ್ದಾರೆ. ಉಳಿದಂತೆ ಮಾಳವಿಕಾ ಅವಿನಾಶ್‌ ಕೂಡ ಪ್ರಚಾರಕ್ಕೆ ಬರಲಿದ್ದಾರೆ. ಮೂಲತಃ ತುಮಕೂರು ಜಿಲ್ಲೆಯವರೇ ಆದ ಹಿರಿಯ ನಟ ಜಗ್ಗೇಶ್‌ ಅವರು ಶಿರಾ ಜತೆಗೆ ರಾಜರಾಜೇಶ್ವರಿ ನಗರದಲ್ಲೂ ಪ್ರಚಾರ ಮಾಡಲಿದ್ದಾರೆ. ಕೊನೆಗೆ, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಹಾಗೂ ಬಿಜೆಪಿ ನಾಯಕ ಸುನೀಲ್‌ ಪುರಾಣಿಕ್‌ ಕೂಡ ಒಂದಿಷ್ಟು ಕಿರುತೆರೆ ಕಲಾವಿದರಿಂದ ಪ್ರಚಾರ ಮಾಡಿಸಬಹುದು. ಒಂದು ವೇಳೆ ರಾಜರಾಜೇಶ್ವರಿ ನಗರದಲ್ಲಿ ಮುನಿರತ್ನ ಅವರಿಗೇ ಟಿಕೆಟ್‌ ಕೊಟ್ಟರೆ ದೊಡ್ಡ ಪ್ರಮಾಣದಲ್ಲಿ ತಾರಾ ದಂಡನ್ನೇ ಪ್ರಚಾರಕ್ಕೆ ಇಳಿಸಲಿದ್ದಾರೆ. ಅವರು ಮೂಲತಃ ಚಿತ್ರ ನಿರ್ಮಾಪಕರು. ಮುಖ್ಯವಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್‌ ಕೂಡ ಒಂದು ಕಾಲದ ಹೀರೋ. ಅವರು ಕೂಡ ಪ್ರಚಾರಕ್ಕೆ ಬರಲಿದ್ದಾರೆ” ಎಂದು ಅವರು ಹೇಳುತ್ತಾರೆ.

Tags: bjpCongresshd kumaraswamyjdskannada film-stars election campaignkarnataka by election 2020
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಕುಟುಂಬದ ಹಿನ್ನೆಲೆಯಲ್ಲಿ ದೇಶವನ್ನು ನೋಡಿದ ಅಮೆರಿಕ ಕವಯತ್ರಿ ಲೂಯೀಸ್‌ ಗ್ಲುಕ್ಸ್ ಅವರಿಗೆ ಸಾಹಿತ್ಯ ನೊಬೆಲ್

ಕುಟುಂಬದ ಹಿನ್ನೆಲೆಯಲ್ಲಿ ದೇಶವನ್ನು ನೋಡಿದ ಅಮೆರಿಕ ಕವಯತ್ರಿ ಲೂಯೀಸ್‌ ಗ್ಲುಕ್ಸ್ ಅವರಿಗೆ ಸಾಹಿತ್ಯ ನೊಬೆಲ್

Leave a Reply Cancel reply

Your email address will not be published. Required fields are marked *

Recommended

ನವರಾತ್ರಿಗೆ ಕತ್ತಲೆಭಾಗ್ಯ ಖಾತರಿ; ಹೊಸ ವರ್ಷಕ್ಕೆ ಕಗ್ಗತ್ತಲೆಭಾಗ್ಯ!!

ಆಕ್ರೋಶಕ್ಕೆ ಮಣಿದ ಸರಕಾರ; ರೈತರಿಗೆ 5 ತಾಸು ನಿರಂತರ ವಿದ್ಯುತ್‌

2 years ago
ತೇಲುತ್ತಿದೆ ಕೆ.ಆರ್.ಪುರ!!

ತೇಲುತ್ತಿದೆ ಕೆ.ಆರ್.ಪುರ!!

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ