• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ದಸರಾ ಉದ್ಘಾಟನೆಗೆ ಮುನ್ನ ಚಾಮುಂಡೇಶ್ವರಿ ಅಮ್ಮನವರಲ್ಲಿ ಮೂರು ಬೇಡಿಕೆ ಇಟ್ಟ ಡಾ.ಸಿ.ಎನ್.ಮಂಜುನಾಥ್

cknewsnow desk by cknewsnow desk
October 17, 2020
in STATE
Reading Time: 2 mins read
0
ದಸರಾ ಉದ್ಘಾಟನೆಗೆ ಮುನ್ನ ಚಾಮುಂಡೇಶ್ವರಿ ಅಮ್ಮನವರಲ್ಲಿ ಮೂರು ಬೇಡಿಕೆ ಇಟ್ಟ ಡಾ.ಸಿ.ಎನ್.ಮಂಜುನಾಥ್
915
VIEWS
FacebookTwitterWhatsuplinkedinEmail

ಮೈಸೂರು: ಈ ವರ್ಷದ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ ನಮ್ಮ ನಾಡಿನ ಖ್ಯಾತ ಹೃದ್ರೋಗ ತಜ್ಞ ಹಾಗೂ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ಅವರು, ಉತ್ಸವಕ್ಕೆ ಚಾಲನೆ ನೀಡುವುದಕ್ಕೆ ಮೊದಲು ಚಾಮುಂಡೇಶ್ವರಿ ಅಮ್ಮನವರಿಗೆ ಮೂರು ಬೇಡಿಕೆ ಇಟ್ಟಿದ್ದಾರೆ.

ಇಲ್ಲಿನ ಚಾಮುಂಡಿ ಬೆಟ್ಟದಲ್ಲಿ ಶನಿವಾರ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಮೂಲಕ ದಸರಾ ಹಬ್ಬಕ್ಕೆ ವಿದ್ಯುಕ್ತ ಚಾಲನೆ ನೀಡಿದ ನಂತರ ಮಾತನಾಡಿದ ಅವರು, “ನಾನು ದೇವರಲ್ಲಿ ನನಗಾಗಿ ಆಗಲಿ ಅಥವಾ ನನ್ನ ಕುಟಂಬಕ್ಕಾಗಿ ಆಗಲಿ ಏನನ್ನೂ ಕೇಳಲಿಲ್ಲ. ನಾನು ಅಮ್ಮನವರ ಬಳಿ ಮೂರು ಬೇಡಿಕೆಗಳನ್ನು ಇಟ್ಟಿದ್ದೇನೆ. ಒಂದು; ಜನ, ರಾಜ್ಯ, ದೇಶ ಹಾಗೂ ಇಡೀ ಜಗತ್ತು ಕೋವಿಡ್‌ ಮುಕ್ತವಾಗಲಿ. ಎರಡನೆಯದು; ಕೋವಿಡ್‌ಗೆ ಆದಷ್ಟು ಬೇಗ ಲಸಿಕೆ ಸಿಗಲಿ. ಮೂರನೆಯದು; ರಾಜ್ಯ ಎದುರಿಸುತ್ತಿರುವ ಪ್ರವಾಹದಿಂದ ಮುಕ್ತಿ ಸಿಗಲಿ” ಎಂದು ಹೇಳಿದರು.

ಕೋವಿಡ್‌ ಬಂದು ಎಲ್ಲವನ್ನೂ ಬದಲಾಯಿಸಿಬಿಟ್ಟಿದೆ. ಭವಿಷ್ಯವನ್ನು ಮಸಕುಗೊಳಿಸಿದೆ. ಎಲ್ಲರನ್ನೂ ಕಟ್ಟಿಹಾಕುವ ಮೂಲಕ ಮನುಕುಲಕ್ಕೆ ಸವಾಲು ಹಾಕಿದೆ. ಜತೆಗೆ, ಸಂಬಂಧಗಳಿಗೆ ಧಕ್ಕೆ ತರುವ ಕೆಲಸ ಮಾಡುತ್ತಿದೆ ಎಂದ ಅವರು, ಇಡೀ ಸಮಾಜವನ್ನು ಜಾಲಾಡುತ್ತಿರುವ ಸಾಮಾಜಿಕ ಜಾಲತಾಣಗಳು ಸಮಾಜದ ಆರೋಗ್ಯವನ್ನು ಹಾಳು ಮಾಡುತ್ತಿವೆ. ಜನರ ದಿಕ್ಕು ತಪ್ಪಿಸುತ್ತಿವೆ. ಕೊರೋನಾ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ತಪ್ಪು ಮಾಹಿತಿಗಳು ಹಂಚಿಕೆಯಾಗುತ್ತಿವೆ. ಇಂಥದ್ದೆಲ್ಲ ನಿಲ್ಲಬೇಕಿದೆ ಎಂದರು ಅವರು.

ಧನ್ಯವಾದ ಅರ್ಪಿಸಿದ ಡಾ.ಮಂಜುನಾಥ್‌

ಇತಿಹಾಸದಲ್ಲಿ ಇದೇ ಮೊದಲಿಗೆ ನಾಡಹಬ್ಬ ದಸರಾ ಮಹೋತ್ಸವದ ಉದ್ಘಾಟನೆ ಮಾಡಲು ವೈದ್ಯರೊಬ್ಬರಿಗೆ ಅವಕಾಶ ಮಾಡಿಕೊಟ್ಟ ಕಾರಣಕ್ಕೆ ನಾನು ಧನ್ಯನಾಗಿದ್ದೇನೆ. ಇದಕ್ಕಾಗಿ  ಸರಕಾರಕ್ಕೆ ಹಾಗೂ ಮುಖ್ಯಮಂತ್ರಿಗಳಿಗೆ ಧನ್ಯವಾದ ಅರ್ಪಿಸುವೆ ಎಂದು ಡಾ. ಮಂಜುನಾಥ್‌ ಹೇಳಿದರು.

ದಸರಾ ಮಹೋತ್ಸವವು ನಾಡಿನ ಭಾಷೆ, ಸಂಸ್ಕೃತಿ, ಸಂಪ್ರದಾಯ ಹಾಗೂ ದೇಶೀಯತೆಯನ್ನು ಸಾರುತ್ತದೆ ಎಂದು ಅವರು ನುಡಿದರಲ್ಲದೆ, ಪರಿಸರವನ್ನು ನಾವು ಉಳಿಸಿ ಬೆಳೆಸಬೇಕು. ಅದನ್ನು ಹಾಳು ಮಾಡಿದರೆ ಹೇಗೆ ಸಂಕಷ್ಟ ಎದುರಾಗುತ್ತದೆ ಎಂಬುದನ್ನು ಇಂದು ಪ್ರಕೃತಿ ತೋರಿಸುತ್ತಿದೆ. ಜತೆಗೆ, ನಾವು ಶುಚಿತ್ವವನ್ನು ಕಾಪಾಡಿಕೊಳ್ಳಬೇಕು. ತಪ್ಪದೇ  ಸ್ಯಾನಿಟೈಸೇಷನ್‌ ಮಾಡಿಕೊಳ್ಳಬೇಕು. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಲೇಬೇಕು. ಮಾಸ್ಕ್ ಧರಿಸುವುದನ್ನು ತಪ್ಪಿಸಲೇಬಾರದು. ನಾವು ಸೋಂಕಿತರಿಂದ ದೈಹಿಕವಾಗಿ ಮಾತ್ರ ದೂರವಿರಬೇಕೆ ವಿನಾ ಮಾನಸಿಕವಾಗಲ್ಲ ಎಂದರು.

ಇಂದು ವೈದ್ಯರಿಗೆ ಅಭದ್ರತೆ ಕಾಡುತ್ತಿದೆ. ಅವರು ವೃತ್ತಿಯ ಒತ್ತಡ, ಮಾನಸಿಕ ಒತ್ತಡ ಹಾಗೂ ದೈಹಿಕ ಒತ್ತಡಗಳನ್ನು ಎದುರಿಸುತ್ತಿದ್ದಾರೆ. ಹಲ್ಲೆ ಭೀತಿಯಿಂದ ಗ್ರಾಮೀಣ ಭಾಗಗಳಿಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಅವರಿಗೆ ಸೌಹಾರ್ದಯುತ ವಾತಾವರಣ ಹಾಗೂ ಭದ್ರತೆಯನ್ನು ಸರಕಾರ ಕಲ್ಪಿಸಬೇಕು ಎಂದು ಡಾ. ಮಂಜುನಾಥ್ ಮನವಿ ಮಾಡಿದರು.

ಯಾರು ಎಷ್ಟೇ ವಿದ್ಯೆ ಗಳಿಸಿದರೂ ಅದಕ್ಕಿಂತ ನಮ್ಮ ಸಂಸ್ಕಾರ ಬಹಳ ಮುಖ್ಯವಾಗುತ್ತದೆ. ನಾವು ಸಹ ಜನರ ಜೀವ ಮೊದಲು ಆಮೇಲೆ ಶುಲ್ಕ ಎಂಬ ನಿಟ್ಟಿನಲ್ಲಿ ಕಾರ್ಯನಿರ್ವಹಣೆ ಮಾಡಬೇಕು ಎಂದು ಅವರು ವೈದ್ಯಲೋಕಕ್ಕೆ ಕಿವಿಮಾತು ಹೇಳಿದರು.

ಎಲ್ಲವೂ ಸರಳ ಮತ್ತು ಸಾಂಪ್ರದಾಯಿಕ

ಕೋವಿಡ್‌ ಹಿನ್ನೆಲೆಯಲ್ಲಿ ಸರಳ, ಸಾಂಪ್ರದಾಯಿಕವಾಗಿ ನಾಡಹಬ್ಬ ಆಚರಿಸಲಾಗುತ್ತಿದೆ. ಆ ದಿಕ್ಕಿನಲ್ಲಿ ಜಗತ್ಪ್ರಸಿದ್ಧ ದಸರಾ ಚಾಲನೆ ಪಡೆದಿದೆ. ಚಾಮುಂಡಿಬೆಟ್ಟದಲ್ಲಿ ಮೈಸೂರು ದಸರಾ ಮಹೋತ್ಸವಕ್ಕೆ ಡಾ.ಸಿ.ಎನ್. ಮಂಜುನಾಥ್ ಅವರು ಶನಿವಾರ ಬೆಳಗ್ಗೆ 7.45ರಿಂದ 8.15ರ ಶುಭ ಮುಹೂರ್ತದಲ್ಲಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಅಮ್ಮನವರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ದಸರಾಕ್ಕೆ ಚಾಲನೆ ನೀಡಿದರು.

ಸರಳ ದಸರಾಗೆ ಡಾ. ಮಂಜುನಾಥ್ ಅವರು ಚಾಲನೆ ನೀಡಿದ ನಂತರ ಕೊರೊನಾ ಸೋಂಕಿನ ಸಂದರ್ಭದಲ್ಲಿ ಸೇವೆ ಸಲ್ಲಿಸಿದ ವೈದ್ಯಾಧಿಕಾರಿ ಡಾ. ಟಿ.ಆರ್. ನವೀನ್, ಹಿರಿಯ ನರ್ಸ್ ರುಕ್ಮಿಣಿ, ಪೊಲೀಸ್ ಪೇದೆ ಪಿ.ಕುಮಾರ್‌, ಅನಾಥ ಶವಗಳ ಮುಕ್ತಿದಾತ ಅಯೂಬ್ ಅಹಮದ್, ಪೌರ ಕಾರ್ಮಿಕ ಮಹಿಳೆ ಮರಗಮ್ಮ ಮತ್ತು ಆಶಾ ಕಾರ್ಯಕರ್ತೆ ನೂರ್ ಜಾನ್ ಅವರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು. ಸನ್ಮಾನಿತರ ಪೈಕಿ ಪೊಲೀಸ್ ಪೇದೆ ಪಿ.ಕುಮಾರ್ ಅವರ ಬದಲಾಗಿ ಅವರ ಪತ್ನಿ ಸನ್ಮಾನ ಸ್ವೀಕರಿಸಿದರು.‌

ನವರಾತ್ರಿಯ ಮೊದಲ ದಿನವಾದ ಇಂದು ಮುಂಜಾನೆ 4.30ರಿಂದಲೇ ಚಾಮುಂಡಿ ಅಮ್ಮನವರಿಗೆ ರುದ್ರಾಭಿಷೇಕ, ಪಂಚಾಮೃತಾಭಿಷೇಕ ಸೇರಿ ವಿವಿಧ ಪೂಜಾ ಕೈಂಕರ್ಯಗಳು ನಡೆದವು. ನಂತರ ಮೂಲ ಚಾಮುಂಡೇಶ್ವರಿ ಅಮ್ಮನವರಿಗೆ ಹಂಸವಾಹಿನಿ ಅಲಂಕಾರ ಮಾಡಿ ಮಹಾ ಮಂಗಳಾರತಿ ನೆರವೇರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ, ಸಚಿವರಾದ ಎಸ್.ಟಿ. ಸೋಮಶೇಖರ್, ಬಿ. ಸಿ. ಪಾಟೀಲ್, ಸಂಸದ ಪ್ರತಾಪ್ ಸಿಂಹ, ಶಾಸಕರುಗಳಾದ ರಾಮದಾಸ್, ನಾಗೇಂದ್ರ, ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್, ಮೇಯರ್ ತಸ್ಲೀಂ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ಹಲವರು ಗಣ್ಯರು ಭಾಗಿಯಾಗಿದ್ದರು. ಇಂದಿನ ಕಾರ್ಯಕ್ರಮದಲ್ಲಿ 200 ಮಂದಿಗೆ ಮಾತ್ರ ಭಾಗವಹಿಸಲು ಅವಕಾಶ ಕಲ್ಪಿಸಲಾಗಿತ್ತು.

ವರದಿ: Gnews5

Tags: Dasaradr cn manjunathmysoremysore dasaranadahabba
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಸ್ಯಾಂಡಲ್‌ವುಡ್‌ಗೆ ಗೋಧ್ರಾ ಶಾಕ್ !;‌ ನೀನಾಸಂ ಸತೀಶ್‌ ಚಿತ್ರದ ಮೇಲೆ  ಸೆನ್ಸಾರ್‌ ಕರಿನೆರಳು

ಸ್ಯಾಂಡಲ್‌ವುಡ್‌ಗೆ ಗೋಧ್ರಾ ಶಾಕ್ !;‌ ನೀನಾಸಂ ಸತೀಶ್‌ ಚಿತ್ರದ ಮೇಲೆ ಸೆನ್ಸಾರ್‌ ಕರಿನೆರಳು

Leave a Reply Cancel reply

Your email address will not be published. Required fields are marked *

Recommended

ಶಿರಾ ಗೆದ್ದು ರಾಜ್ಯವನ್ನು ಗೆಲ್ಲುತ್ತೇವೆ; ಆದರೆ, ಉಪ ಚುನಾವಣೆಯಿಂದ ಸರಕಾರ ಬೀಳಲ್ಲ ಎಂದ ಡಿಕೆಶಿ

ನಾಡೋಜ ಹಂಪನಾ ವಿರುದ್ಧ ಪೊಲೀಸ್ ಕ್ರಮ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ, ರಾಜ್ಯ ಸರಕಾರದ್ದು ಕೀಚಕ ನಡೆಯ ಪ್ರತೀಕ ಎಂದು ಟೀಕಿಸಿದ ಡಿ.ಕೆ. ಶಿವಕುಮಾರ್

4 years ago
ಪತ್ರಕರ್ತರ ನಿವೇಶನಗಳಿಗೆ ಮೀಸಲಿಟ್ಟ ಭೂಮಿಯೇ ಗುಳುಂ!

ಪತ್ರಕರ್ತರ ನಿವೇಶನಗಳಿಗೆ ಮೀಸಲಿಟ್ಟ ಭೂಮಿಯೇ ಗುಳುಂ!

2 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ