ಅಳಿದುಳಿದ ಚಿನ್ನಕ್ಕಾಗಿ ಡ್ರಿಲ್ಲಿಂಗ್; ಕೆಜಿಎಫ್ ನಿರೀಕ್ಷೆಗೆ ಮತ್ತೆ ನೀರು, ಮಾಜಿ ಮಿನಿ ಇಂಗ್ಲೆಂಡ್‌ ಮುಖದಲ್ಲಿ ಮಂದಹಾಸ

ಗಣಿಗಳು ಮುಚ್ಚಿಕೊಂಡ ಮೇಲೆ ಬದುಕಿಗಾಗಿ ಬೆಂಗಳೂರನ್ನೇ ನೆಚ್ಚಿಕೊಂಡಿದ್ದ ಈ ಪಟ್ಟಣಕ್ಕೆ ಪುನಾ ಗತವೈಭವ ಮರಳುವ ಕಾಲ ಸನ್ನಿಹಿತವಾಗಿದೆ. ಆದರೆ; ಇದರಲ್ಲಿ ಎರಡು ಆಯ್ಕೆಗಳನ್ನು ಮಾಡಿಕೊಂಡಿರುವ ಕೇಂದ್ರ-ರಾಜ್ಯ ಸರಕಾರಗಳು ಜನರಲ್ಲಿ ಸಣ್ಣಗೆ, ನಿಧಾನಗತಿಯಲ್ಲಿ ನಿರೀಕ್ಷೆಗಳನ್ನು ಹುಟ್ಟುಹಾಕುತ್ತಿವೆ.