• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಶಿರಾ ಗೆದ್ದು ರಾಜ್ಯವನ್ನು ಗೆಲ್ಲುತ್ತೇವೆ; ಆದರೆ, ಉಪ ಚುನಾವಣೆಯಿಂದ ಸರಕಾರ ಬೀಳಲ್ಲ ಎಂದ ಡಿಕೆಶಿ

cknewsnow desk by cknewsnow desk
October 20, 2020
in POLITICS, STATE
Reading Time: 1 min read
0
ಶಿರಾ ಗೆದ್ದು ರಾಜ್ಯವನ್ನು ಗೆಲ್ಲುತ್ತೇವೆ; ಆದರೆ, ಉಪ ಚುನಾವಣೆಯಿಂದ ಸರಕಾರ ಬೀಳಲ್ಲ ಎಂದ ಡಿಕೆಶಿ
913
VIEWS
FacebookTwitterWhatsuplinkedinEmail

ತುಮಕೂರು: ಈ ಉಪ ಚುನಾವಣೆಯಿಂದ ರಾಜ್ಯ ಸರಕಾರವಾಗಲಿ, ಕೇಂದ್ರ ಸರಕಾರವಾಗಲಿ ಬೀಳುವುದಿಲ್ಲ. ಆದರೆ, ಶಿರಾ ಕ್ಷೇತ್ರದ ಜನ ಭವಿಷ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ಸಂದೇಶವನ್ನು ರವಾನಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭವಿಷ್ಯ ನುಡಿದಿದ್ದಾರೆ.

ಶಿರಾ ಉಪ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಮಂಗಳವಾರ ಭೇಟಿ ನೀಡಿ ಪ್ರಚಾರ ನಡೆಸಿದ ಡಿಕೆಶಿ ಒಟ್ಟಾರೆ ಹೇಳಿದ್ದಿಷ್ಟು;

“ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ತಾವು ತೋರಿದ ಪ್ರೀತಿ, ವಿಶ್ವಾಸ, ಅಭಿಮಾನದಿಂದ ಇಡೀ ರಾಜ್ಯಕ್ಕೆ ಈಗಾಗಲೇ ಬಹುದೊಡ್ಡ ಸಂದೇಶ ಹೋಗಿದೆ. ನಾನು ಕೆಪಿಸಿಸಿ ಅಧ್ಯಕ್ಷನಾಗಿ ಇಲ್ಲಿಗೆ ಬಂದಿಲ್ಲ. ನಿಮ್ಮನ್ನು ಅಭಿನಂದಿಸಲು ಹಾಗೂ ನಿಮ್ಮ ಕಷ್ಟ ಸುಖದ ಜತೆಗೆ ನಿಲ್ಲುತ್ತೇವೆ, ನಿಮ್ಮಲ್ಲಿ ನಾನು ಒಬ್ಬನಾಗಿದ್ದೇನೆ ಎಂದು ಹೇಳಲು ಬಂದಿದ್ದೇನೆ.”

“ಹಳ್ಳಿಜನರ ಆಶೀರ್ವಾದ ಬಹಳ ಮುಖ್ಯ. ಕಾಂಗ್ರೆಸ್ ಸರಕಾರ ಇದ್ದಾಗ ಟಿ.ಬಿ ಜಯಚಂದ್ರ ಹಾಗೂ ಕಾಂಗ್ರೆಸ್ ಸರಕಾರ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇವೆ. ನಿಮಗೆ ಕೊರೋನಾ ಸಮಯದಲ್ಲಿ ಹಿಂದೆ ಸಿದ್ದರಾಮಯ್ಯನವರು ಕೊಟ್ಟ ಅನ್ನಭಾಗ್ಯದ ಅಕ್ಕಿ ಬಿಟ್ಟರೆ ಬೇರೇನಾದರೂ ಬಂತಾ? ನಿಮಗೆ ಪರಿಹಾರ ಮೊತ್ತ ಬಂತಾ? ಸವಿತಾ ಸಮಾಜ, ಚಾಲಕರು, ರೈತರಿಗೆ ಸಹಾಯ ಆಯ್ತಾ? ವಿದ್ಯಾರ್ಥಿಗಳು, ಅವರ ಪೋಷಕರ ಗೋಳನ್ನು ಯಾರಾದರೂ ಕೇಳಿದ್ದಾರಾ? ಯಾವುದೂ ಇಲ್ಲ ಎಂದ ಮೇಲೆ ಈ ಸರಕಾರ ಯಾಕಿರಬೇಕು? ವಿಜಯೇಂದ್ರ ಅವರು, ಎಚ್.ಡಿ.ಕುಮಾರಸ್ವಾಮಿ ಅವರು ಇಲ್ಲಿ ಬಂದು ಯಾಕೆ ಮತ ಕೇಳುತ್ತಿದ್ದಾರೆ? ಪಕ್ಷದ ಗುರುತಿನ ಹಸ್ತ ನಮ್ಮದಷ್ಟೇ ಅಲ್ಲ, ಅದು ನಿಮ್ಮದು ಕೂಡ.”

“ಜಯಚಂದ್ರ ಅವರನ್ನು ಹಾರೈಸಿ ಶಿರಾ ಕ್ಷೇತ್ರದ ಜನರು ರಾಜ್ಯಕ್ಕೆ ಒಂದು ದೊಡ್ಡ ಸಂದೇಶ ರವಾನಿಸಬೇಕು. ಮುಂದಿನ ದಿನಗಳಲ್ಲಿ ನಿಮ್ಮ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ನಿಮ್ಮ ಅಪಾರ ಸೇವೆ ಮಾಡಲಿದೆ.”

“ಈ ಚುನಾವಣೆಯಿಂದ ಯಡಿಯೂರಪ್ಪನವರೂ ಕೆಳಗೆ ಇಳಿಯುವುದಿಲ್ಲ, ಮೋದಿಯವರೂ ಇಳಿಯುವುದಿಲ್ಲ. ನಾವ್ಯಾರು ಸತ್ಯನಾರಾಯಣ ಅವರಿಗೆ ಕೆಟ್ಟದ್ದು ಬಯಸಿರಲಿಲ್ಲ. ಅವರ ಧರ್ಮಪತ್ನಿಯವರ ಮೇಲೆ ನಮಗೆ ಯಾವುದೇ ದ್ವೇಷ ಇಲ್ಲ. ಅವರನ್ನು ನಾವು ಗೌರವಿಸುತ್ತೇವೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಅಭ್ಯರ್ಥಿಗಳಿಗೆ ನಿಮ್ಮ ಪರ ಮಾತನಾಡಲು ಶಕ್ತಿ ಇಲ್ಲ. ಆ ಶಕ್ತಿ ಇರೋದು ಜಯಚಂದ್ರ ಅವರಿಗೆ ಮಾತ್ರ. ಶಿರಾ ಕ್ಷೇತ್ರದ ಜನರ ಧ್ವನಿಯಾಗಿ ಜಯಚಂದ್ರ ಅವರು ವಿಧಾನಸೌಧದಲ್ಲಿ ಕೆಲಸ ಮಾಡಿದ್ದಾರೆ. ನಮ್ಮ ಪಕ್ಷದ ಎಲ್ಲ ನಾಯಕರು ನಿಮ್ಮ ಜತೆ ಹಾಗೂ ಜಯಚಂದ್ರ ಅವರ ಜತೆ ಇದ್ದೇವೆ.”

“ಶ್ರೀರಾಮಚಂದ್ರನ ತಂದೆ ದಶರಥನ ದೇಗುಲ ಎಲ್ಲೂ ಇಲ್ಲ. ಆದರೆ ರಾಮನ ಭಂಟ, ನಿಷ್ಠಾವಂತ ಭಕ್ತ ಆಂಜನೇಯನ ದೇವಸ್ಥಾನ ಎಲ್ಲ ಕಡೆ ಇವೆ. ಈ ಜಯಚಂದ್ರ ಕೂಡ ಆಂಜನೇಯನ ಹಾಗೆ ನಿಮ್ಮ ನಿಷ್ಠಾವಂತ ಭಕ್ತ. ನಿಮ್ಮ ಸೇವೆಗೆ ಸದಾ ಬದ್ಧ. ನೀವು ಇಂಥವರ ಕೈ ಹಿಡಿಯುವ ವಿಶ್ವಾಸ ನನಗಿದೆ.”

“ನಿಮ್ಮ ಕೈ ಬಲಪಡಿಸಲು ನಮ್ಮ ಪಕ್ಷದ ಇಷ್ಟೂ ನಾಯಕರು ಇಲ್ಲಿಗೆ ಬಂದಿದ್ದೇವೆ. ಜಯಚಂದ್ರ ಅವರನ್ನು ಸೋಲಿಸಿ, ಬೇರೆಯವರನ್ನು ಗೆಲ್ಲಿಸಿದಕ್ಕೆ ನಿಮಗೆ ಏನಾದರೂ ಲಾಭ ಆಯ್ತಾ? ಒಂದು ವರ್ಷ ಬಿಜೆಪಿ ಸರಕಾರದಿಂದ ಒಂದು ಚೂರಾದರೂ ಒಳ್ಳೆಯದಾಗಿದೆಯಾ?”

“ಜಯಚಂದ್ರ ಅವರು ಆಯ್ಕೆಯಾಗಿದ್ದಾಗ ನೂರಾರು ಕೆರೆಗಳಿಗೆ ನೀರು ತುಂಬಿಸಿದ್ದಾರೆ. ಕಟ್ಟಡ, ಆಸ್ಪತ್ರೆ, ಮಿನಿ ವಿಧಾನಸೌಧ ಕಟ್ಟಿಸಿದ್ದಾರೆ, ರಸ್ತೆ ಮಾಡಿಸಿದ್ದಾರೆ. ಸಾವಿರಾರೂ ಕೋಟಿ ರುಪಾಯಿಯ ಅನೇಕ ಅಭಿವೃದ್ಧಿ ಯೋಜನೆಗಳನ್ನು ತಂದಿದ್ದಾರೆ. ನಾವು ಮಾಡಿರುವ ಕೆಲಸಕ್ಕೆ ಮತವನ್ನು ಕೂಲಿಯಾಗಿ ಕೊಡಿ ಎಂದು ಕೇಳಲು ಇಲ್ಲಿಗೆ ಬಂದಿದ್ದೇವೆ.”

“ನೀವು ನೂರಾರು ರಾಜೇಶನನ್ನು ಸೃಷ್ಟಿಸಬಹುದು. ಆದರೆ ಮತ್ತೊಬ್ಬ ಜಯಚಂದ್ರರನ್ನು ತಯಾರು ಮಾಡಲು ಸಾಧ್ಯವಿಲ್ಲ. 40 ವರ್ಷದ ರಾಜಕೀಯ ಸೇವೆಯಲ್ಲಿ ಹಳ್ಳಿ ಹಳ್ಳಿಗೂ ತಿರುಗಿ ಕೆಲಸ ಮಾಡಿದ್ದಾರೆ. ನಮ್ಮಿಂದ ಸಣ್ಣ ತಪ್ಪಾಗಿದ್ದರೆ ನಾವು ತಿದ್ದಿಕೊಳ್ಳುತ್ತೇವೆ. ನೀವೆಲ್ಲಾ ಪಕ್ಷಬೇಧ ಮರೆತು, ಜಾತಿ-ಬೇಧ ಮರೆತು ಒಗ್ಗಟ್ಟಿನಿಂದ ಚುನಾವಣೆ ಮಾಡಿ ಜಯಚಂದ್ರ ಅವರನ್ನು ಗೆಲ್ಲಿಸಬೇಕು, ಆಶೀರ್ವದಿಸಬೇಕು.”

ಸರಕಾರ ಜನರಿಗೇನೂ ಮಾಡಿಲ್ಲ

ಶಿರಾ ಕ್ಷೇತ್ರದಲ್ಲಿ ಯುವ ಸಮುದಾಯದಿಂದ ಹಿಡಿದು ಎಲ್ಲ ವರ್ಗದವರು ನಮಗೆ ತೋರಿಸುತ್ತಿರುವ ಪ್ರೀತಿ ಅಭಿಮಾನ, ದೇಶ ಮತ್ತು ರಾಜ್ಯಕ್ಕೆ ಉತ್ತಮ ಸಂದೇಶ ಕೊಡುತ್ತಿದೆ. ಕಳೆದ 15 ತಿಂಗಳಿಂದ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದರೂ ರೈತರಿಗಾಗಲಿ, ಕಾರ್ಮಿಕರಿಗಾಗಲಿ, ವರ್ತಕರಿಗಾಗಲಿ, ಶ್ರಮಿಕರಿಗಾಗಲಿ ಶೇ.5ರಷ್ಟು ಸಹಾಯವಾಗಿಲ್ಲ. ಎಲ್ಲ ವರ್ಗದವರನ್ನು ಕೇಳಿದ್ದೇನೆ. ಎಲ್ಲರೂ ತಮಗೆ ಪರಿಹಾರ ಸಿಕ್ಕಿಲ್ಲ ಅಂತಿದ್ದಾರೆ ಎಂದು ಹೇಳಿದರು ಡಿಕೆಶಿ..

ನಾವು ಬೇರೆ ಪಕ್ಷದ ಅಭ್ಯರ್ಥಿಗಳ ಬಗ್ಗೆ ಮಾತನಾಡುವುದಿಲ್ಲ. ವಿಧಾನಸೌಧದಲ್ಲಿ ಶಿರಾ ಕ್ಷೇತ್ರದ ಪ್ರತಿನಿಧಿ ಸ್ಥಾನದಲ್ಲಿ ಯಾರು ಕೂತು ಜನರ ಧ್ವನಿಯಾಗಿ ಕೆಲಸ ಮಾಡುತ್ತಾರೆ ಎಂಬುದನ್ನು ಗಮನಿಸಿ ಆಯ್ಕೆ ಮಾಡುತ್ತಾರೆ. ಬಿಜೆಪಿ ಸರ್ಕಾರದ ಆಡಳಿತ ಸರಿಯಿಲ್ಲ ಎಂಬ ಸಂದೇಶವನ್ನು ಕ್ಷೇತ್ರದ ಮಹಾಜನತೆ ನೀಡಲಿದ್ದಾರೆ. ಜಯಚಂದ್ರ ಅವರು ಕ್ಷೇತ್ರಕ್ಕೆ ಮಾಡಿರುವ ಅಭಿವೃದ್ಧಿ ಕಾರ್ಯಗಳಿಗಾಗಿ ಜನರು ಅವರಿಗೆ ಮತ ನೀಡಲಿದ್ದಾರೆ. ಬಿಜೆಪಿ ನಾಯಕರ ಬಗ್ಗೆ ಅವರದೇ ಪಕ್ಷದ ನಾಯಕರು ಯಾವ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂಬುದನ್ನು ನೋಡಿಕೊಂಡು ಅದನ್ನು ಸರಿಪಡಿಸಿಕೊಳ್ಳಲಿ. ಸಿ.ಟಿ ರವಿ ಅವರ ಹೇಳಿಕೆಗೆ ಉತ್ತರ ಕೊಡುವುದೇನಿಲ್ಲ ಎಂದು ಅವರು ತಿಳಿಸಿದರು

Tags: by electionDK Shivakumarkarnatakasira
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ರಾಜರಾಜೇಶ್ವರಿ ನಗರದಲ್ಲಿ ಹೆಚ್ಚಿದ ರಗಳೆ; ಕಾಂಗ್ರೆಸ್‌ ಮತದಾರರ ಚೀಟಿ ಸಂಗ್ರಹಿಸುತ್ತಿದೆ ಎಂದು ನೇರ ಆರೋಪ ಮಾಡಿದ ಬಿಜೆಪಿ

ರಾಜರಾಜೇಶ್ವರಿ ನಗರದಲ್ಲಿ ಹೆಚ್ಚಿದ ರಗಳೆ; ಕಾಂಗ್ರೆಸ್‌ ಮತದಾರರ ಚೀಟಿ ಸಂಗ್ರಹಿಸುತ್ತಿದೆ ಎಂದು ನೇರ ಆರೋಪ ಮಾಡಿದ ಬಿಜೆಪಿ

Leave a Reply Cancel reply

Your email address will not be published. Required fields are marked *

Recommended

ಲೆಕ್ಕ ಕೇಳಿದ್ದೇ ತಪ್ಪಾ ಎಂದ ರೋಹಿಣಿ

ರೋಹಿಣಿ ಸಿಂಧೂರಿ ವರ್ಗಕ್ಕೆ ಕಾರಣ ಯಾರು? ಸಂಸದ ಪ್ರತಾಪ ಸಿಂಹ, ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಮಾಡಿದ್ದೇನು?

4 years ago
ನೆರೆಗೆ ಕಾರಣ ಹೇಳಿದ ನ್ಯಾ.ಸಂತೋಷ್ ಹೆಗ್ಡೆ

ನೆರೆಗೆ ಕಾರಣ ಹೇಳಿದ ನ್ಯಾ.ಸಂತೋಷ್ ಹೆಗ್ಡೆ

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ