• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home ET CINEMA

ಥಿಯೇಟರುಗಳಿಗೆ ಮತ್ತೆ ಬಂದ ಟಗರು, ಕಮ್‌ಬ್ಯಾಕ್‌ ಆಯಿತು ಕೆಜಿಎಫ್-1; ಅಭಿಮಾನಿಗಳಲ್ಲಿ ಹೈಜೋಶ್

cknewsnow desk by cknewsnow desk
October 24, 2020
in ET CINEMA, STATE
Reading Time: 1 min read
0
ಥಿಯೇಟರುಗಳಿಗೆ ಮತ್ತೆ ಬಂದ ಟಗರು, ಕಮ್‌ಬ್ಯಾಕ್‌ ಆಯಿತು ಕೆಜಿಎಫ್-1; ಅಭಿಮಾನಿಗಳಲ್ಲಿ ಹೈಜೋಶ್
915
VIEWS
FacebookTwitterWhatsuplinkedinEmail

ಬೆಂಗಳೂರು: ಸದ್ಯಕ್ಕೆ ಚಿತ್ರಮಂದಿರಗಳಲ್ಲಿ ಹೊಸ ಚಿತ್ರಗಳು ಬಿಡುಗಡೆಯಾಗುವ ಸಾಧ್ಯತೆ ಇಲ್ಲ. ಕೋವಿಡ್‌ ಭಯದಿಂದ ಪ್ರೇಕ್ಷಕರು ಚಿತ್ರಮಂದಿರಗಳತ್ತ ಸುಳಿಯದ ಕಾರಣಕ್ಕೆ ಹಳೆಯ ಯಶಸ್ವಿ ಸಿನಿಮಾಗಳನ್ನೇ ಮತ್ತೆ ಬಿಡುಗಡೆ ಮಾಡಲಾಗುತ್ತಿದೆ.

ಇದರ ಭಾಗವಾಗಿ ಯಶ್‌ ಅಭಿನಯದ ʼಕೆಜಿಎಫ್-ಚಾಪ್ಟರ್‌ 1ʼ ಹಾಗೂ ಶಿವರಾಜ್‌ ಕುಮಾರ್‌ ಅಭಿನಯದ ʼಟಗರುʼ ಚಿತ್ರಗಳು ರೀ ರಿಲೀಸ್‌ ಆಗುತ್ತಿವೆ. ಕಳೆದ ವಾರ ಚಿರಂಜೀವಿ ಸರ್ಜಾ ನಟಿಸಿದ್ದ ʼಶಿವಾರ್ಜುನʼ ಸಿನಿಮಾವನ್ನು ರಿಲೀಸ್‌ ಮಾಡಲಾಗಿತ್ತು. ಪ್ರೇಕ್ಷಕರು ನೋಡದ ಕಾರಣಕ್ಕೆ ಹೊಸ ಚಿತ್ರಗಳನ್ನು ಬಿಡುಗಡೆ ಮಾಡುವುದು ಬೇಡ ಎಂಬ ನಿರ್ಧಾರಕ್ಕೆ ಸ್ಯಾಂಡಲ್‌ವುಡ್‌ ನಿರ್ಮಾಪಕರು ಬಂದಂತಿದೆ. ಈ ಕಾರಣಕ್ಕೆ ಈಗಾಗಲೇ ಬಾಗಿಲು ತೆರೆದಿರುವ ಚಿತ್ರಮಂದಿರಗಳಿಗೆ ಸಿನಿಮಾಗಳ ಕೊರತೆ ಆಗಬಾರದು ಎನ್ನುವ ಕಾರಣಕ್ಕೆ ಹಳೆಯ ಸಿನಿಮಾಗಳನ್ನೇ ಕೊಡಲಾಗುತ್ತದೆ ಎಂದು ನಿರ್ಮಾಪಕರೊಬ್ಬರು ತಿಳಿಸಿದ್ದಾರೆ.

“ಚಿತ್ರ ಮಂದಿರಗಳನ್ನು ತೆರೆಯಲು ಕೇಂದ್ರ ಸರ್ಕಾರ ಅವಕಾಶ ನೀಡಿದ ನಂತರ ಸಹಜವಾಗಿಯೇ ಸ್ಯಾಂಡಲ್‌ವುಡ್‌ ಖುಷಿಯಾಗಿತ್ತು. ಲಾಕ್ʼಡೌನ್ʼಗೂ ಮೊದಲು ರಿಲೀಸ್‌ ಆಗಿದ್ದ ಕೆಲ ಚಿತ್ರಗಳು ಈಗಾಗಲೇ ಪ್ರದರ್ಶನವಾಗುತ್ತಿವೆ. ಉದಾಹರಣೆಗೆ; ʼದಿಯಾʼ, ʼಲವ್ ಮಾಕ್ಟೇಲ್ʼ ಮುಂತಾದ ಚಿತ್ರಗಳು ಈಗ ಪ್ರದರ್ಶನವಾಗುತ್ತಿವೆ. ಕೆಲ ಸಿನಿಮಾಗಳನ್ನು ಪ್ರೇಕ್ಷಕರು ನೋಡುತ್ತಿದ್ದಾರೆ, ಮೆಚ್ಚುತ್ತಿದ್ದಾರೆ. ಇದು ನಿಜಕ್ಕೂ ಶುಭಸೂಚನೆ. ಜನ ಮತ್ತೆ ಥಿಯೇಟರುಗಳಿಗೆ ಬರುತ್ತಾರೆಂಬ ನಂಬಿಕೆ ನನಗಿದೆ” ಎನ್ನುತ್ತಾರೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್.‌

  • ಕೆಜಿಎಫ್-ಚಾಪ್ಟರ್‌ 1

ಸದ್ಯಕ್ಕೆ ಸಿಕೆನ್ಯೂಸ್‌ ನೌ ಸಂಗ್ರಹಿಸಿರುವ ಮಾಹಿತಿಯಂತೆ, ಕೆಜಿಎಫ್‌ ಮತ್ತು ಟಗರು ಚಿತ್ರಗಳಿಗೆ ಉತ್ತಮ ಓಪೆನಿಂಗ್‌ ಸಿಕ್ಕಿದೆ. ಅನ್‌ಲಾಕ್‌ ನಂತರ ಈ ಮಟ್ಟಿಗೆ ಪ್ರೇಕ್ಷಕರ ಪ್ರತಿಕ್ರಿಯೆಗೆ ಖುಷಿಯಾಗಿದೆ. ಮಲ್ಟಿಪ್ಲೆಕ್ಸ್‌ಗಳಲ್ಲಿಯೂ ರಿಲೀಸ್‌ ಆಗಿವೆ. ಜತೆಗೆ, ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಲ್ಲೂ ಈ ಚಿತ್ರಗಳು ತೆರೆ ಕಂಡಿವೆ.

ಟಗರು ರೀ ರಿಲೀಸ್ʼಗೆ ಸ್ವಾಗತ ಎಂದ ನಿರ್ಮಾಪಕ

ತಮ್ಮ ನಿರ್ಮಾಣದ ʼಟಗರುʼ ರೀ ರಿಲೀಸ್‌ ಆಗುತ್ತಿರುವ ಬಗ್ಗೆ ಸಂತಸದಲ್ಲಿರುವ ನಿರ್ಮಾಪಕ ಕೆ.ಪಿ.ಶ್ರೀಕಾಂತ್‌ ಹೀಗೆ ಪ್ರತಿಕ್ರಿಯಿಸಿದ್ದಾರೆ.
“ಕರೋನ ಅನ್ನುವ ಕಗ್ಗತ್ತಲಿನಿಂದ ಹೊರಬಂದು ಹೊಸ ಚೈತನ್ಯದ ಹೊಸ್ತಿಲಿಗೆ ಕನ್ನಡ ಚಿತ್ರರಂಗ ಕಾಲಿಡುತ್ತಿದೆ. ಸುಮಾರು ಆರೇಳು ತಿಂಗಳಿನಿಂದ ಚಿತ್ರ ಪ್ರದರ್ಶನವಿಲ್ಲದೆ ಬಣಗುಡುತ್ತಿದ್ದ ಚಿತ್ರಮಂದಿರಗಳು ನಿಧಾನವಾಗಿ ತುಂಬುತ್ತಿವೆ. ಚಿತ್ರರಂಗದ ಎಲ್ಲಾ ಚಟುವಟಿಕೆಗಳು ಚುರುಕುಗೊಂಡಿರುವುದು ಸಂತಸದ ವಿಷಯ. ರೀ ರಿಲೀಸ್ ಆಗಿರುವ ಚಿತ್ರಗಳನ್ನ ನೋಡಲು ಪ್ರೇಕ್ಷಕರು ಥಿಯೇಟರ್ʼನತ್ತ ಬರುತ್ತಿರುವುದು ಉದ್ಯಮಕ್ಕೆ ಹೊಸ ಭರವಸೆ ಮೂಡಿಸಿದೆ. ಈ ನಡುವೆ ನಮ್ಮ ಸಂಸ್ಥೆಯ ಹೆಮ್ಮೆಯ ಸಿನಿಮಾ ʼಟಗರುʼ ಸಿನಿಮಾ ಗೋಪಾಲನ್ ಸಿನಿಮಾಸ್ (ಸಿರ್ಸಿ ಸರ್ಕಲ್), ಗೋಪಾಲನ್ ಸಿನಿಮಾ ಅರ್ಕೇಡ್ ಮಾಸ್ʼಗಳಲ್ಲಿ ರೀ ರಿಲೀಸ್ ಆಗಿದೆ. ಅದರಂತೆ ಮೈಸೂರು ರಸ್ತೆಯ ಸಿರ್ಸಿ ಸರ್ಕಲ್ʼನಲ್ಲಿರುವ ಗೋಪಾಲ್ ಸಿನಿಮಾಸ್ʼನಲ್ಲಿ ಭಾನುವಾರ (ಅ.25) ಮಧ್ಯಾಹ್ನ 1.15ರ ಪ್ರದರ್ಶನವನ್ನ ಪ್ರೇಕ್ಷಕರೊಂದಿಗೆ ವೀಕ್ಷಿಸಲು ʼಸಲಗʼ ಚಿತ್ರದ ನಿರ್ದೇಶಕ ನಾಯಕ ದುನಿಯಾ ವಿಜಯ್, ʼಟಗರುʼ ನಿರ್ದೇಶಕ ಸೂರಿ, ಡಾಲಿ ಧನಂಜಯ, ವಸಿಷ್ಠ ಸಿಂಹ, ಮಾನ್ವಿತಾ ಕಾಮತ್ ಸೇರಿ ಇಡೀ ನಮ್ಮ ಚಿತ್ರತಂಡ ಭಾಗಿಯಾಗುತ್ತಿದೆ. ಚಿತ್ರ ಪ್ರದರ್ಶನದ ನಂತರ ಗೋಪಾಲನ್ ಸಿನಿಮಾಸ್ʼನಲ್ಲಿ ಮಧ್ಯಾಹ್ನ 3 ಗಂಟೆಗೆ ಟಗರು ರೀ ರಿಲೀಸ್ ಸಂಭ್ರಮಾಚರಣೆಯನ್ನು ಏರ್ಪಡಿಸಲಾಗಿದೆ.”

Fast Filling #Tagaru Movie Sunday 1Pm Show #Gopalan Cinemas (Sirsi circle) Book ur tickets soon., pic.twitter.com/w5fiab253V

— Sreekanth KP (@kp_sreekanth) October 23, 2020

ಒಟ್ಟಾರೆಯಾಗಿ ಪ್ರೇಕ್ಷರನ್ನು ಪುನಾ ಥಿಯೇಟರ್‌ಗಳಿಗೆ ಸೆಳೆಯುವ ಸಲುವಾಗಿ ನಿರ್ಮಾಪಕರು ಸಾಕಷ್ಟು ಶ್ರಮ ಹಾಕುತ್ತಿದ್ದು, ಅದಕ್ಕಾಗಿ ಸ್ಟಾರ್‌ಗಳನ್ನು ಕೂಡ ಥಿಯೇಟರುಗಳಿಗೆ ಕರೆ ತರುತ್ತಿದ್ದಾರೆ. ಇನ್ನೊಂದೆಡೆ ಗೋಪಾಲನ್‌ ಮಾಲ್‌ನಲ್ಲಿ ಭಾನುವಾರದ ಮಧ್ಯಾಹ್ನದ ಶೋಗೆ ಅಭಿಮಾನಿಗಳು ಈಗಾಗಲೇ ತಮ್ಮ ಟಿಕೆಟ್‌ಗಳನ್ನು ಕಾದಿರಿಸಿದ್ದು, ತಮ್ಮ ನೆಚ್ಚಿನ ಶಿವಣ್ಣಗೆ ಟಿಕೆಟ್‌ಹಾರ ಹಾಕಿ ಸಂಭ್ರಮಿಸಿದ್ದಾರೆ.

Tags: kannada cinemakgf chapter 2Shivaraj kumartagaruyash
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಕೋವಿಡ್‌ ತೊಲಗಿದರೆ ಮುಂದಿನ ವರ್ಷ ಅದ್ಧೂರಿ ದಸರಾ; ತಾಯಿ ಚಾಮುಂಡೇಶ್ವರಿಯನ್ನು ಪ್ರಾರ್ಥಿಸಿದ ಸಿಎಂ

ಕೋವಿಡ್‌ ತೊಲಗಿದರೆ ಮುಂದಿನ ವರ್ಷ ಅದ್ಧೂರಿ ದಸರಾ; ತಾಯಿ ಚಾಮುಂಡೇಶ್ವರಿಯನ್ನು ಪ್ರಾರ್ಥಿಸಿದ ಸಿಎಂ

Leave a Reply Cancel reply

Your email address will not be published. Required fields are marked *

Recommended

“ಒತ್ತೆ ಇಟ್ಟುಕೊಳ್ಳೋಕೆ ಕರ್ನಾಟಕವೇನು ಅವರಪ್ಪಂದಾ?” ಎಂದು ಕೋಲಾರದಲ್ಲಿ ಕಾಮ್ರೇಡ್‌ ಮೇಲೆ ಗುಡುಗಿದ್ದರು ಸಿಎಂ ಎಚ್.ಡಿ.ದೇವೇಗೌಡರು!!

ಖರ್ಗೆಗೆ ಮುಖ್ಯಮಂತ್ರಿ ಪಟ್ಟ ತಪ್ಪದ್ಹೇಗೆ?

4 years ago
ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ವಿಲನ್

ಶಾಮನೂರು ಶಿವಶಂಕರಪ್ಪ ಕಾರ್ಯಕ್ರಮಕ್ಕೆ ಸಿಎಂಗೇ ಆಹ್ವಾನ ಇಲ್ಲ! ಹೆಚ್.ಡಿ.ಕುಮಾರಸ್ವಾಮಿಗೆ ಆಹ್ವಾನ

1 year ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ