• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಸರಕಾರ ಕೊಟ್ಟ 10 ಕೋಟಿಯಲ್ಲೇ ದಸರಾ ಉತ್ಸವ ಮುಗಿಸಿದ ಸಚಿವ ಸೋಮಶೇಖರ್;‌ ನ.1ರಂದು ಲೆಕ್ಕಪತ್ರ ಬಿಡುಗಡೆ

cknewsnow desk by cknewsnow desk
October 27, 2020
in STATE
Reading Time: 1 min read
0
ಸರಕಾರ ಕೊಟ್ಟ 10 ಕೋಟಿಯಲ್ಲೇ ದಸರಾ ಉತ್ಸವ ಮುಗಿಸಿದ ಸಚಿವ ಸೋಮಶೇಖರ್;‌ ನ.1ರಂದು ಲೆಕ್ಕಪತ್ರ ಬಿಡುಗಡೆ
922
VIEWS
FacebookTwitterWhatsuplinkedinEmail
photos: nandan mysore

ಮೈಸೂರು: ಈ ಬಾರಿಯ ದಸರಾ ಉತ್ಸವಕ್ಕೆ ಮಾಡಿರುವ ಖರ್ಚು-ವೆಚ್ಚಗಳ ಲೆಕ್ಕವನ್ನು ನವೆಂಬರ್ 1ರಂದು ಜನರಿಗೆ ಕೊಡುತ್ತೇವೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಘೋಷಿಸಿದ್ದಾರೆ.

ಮೈಸೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ದಸರಾ ಆಯೋಜಿಸಲು ಸರಕಾರದಿಂದ 10 ಕೋಟಿ ರೂ. ಹಾಗೂ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ದಿಂದ 5 ಕೋಟಿ ರೂ. ಅನುದಾನ ಒದಗಿಸುವುದು ಎಂದು ಮೊದಲೇ ನಿರ್ಧಾರವಾಗಿತ್ತು. ಆದರೆ, ದಸರಾವನ್ನು ಸರಕಾರ ನೀಡಿದ 10 ಕೋಟಿ ರೂ. ಅನುದಾನದಲ್ಲೇ ಪೂರ್ಣಗೊಳಿಸಲಾಗಿದ್ದು, ಮುಡಾ ಘೋಷಿಸಿದ್ದ 5 ಕೋಟಿ ರೂ. ಅನುದಾನವನ್ನು ಪಡೆದಿಲ್ಲ ಎಂದು ಮಾಹಿತಿ ನೀಡಿದರು.

ಸರಳ ದಸರಾ ಉತ್ಸವ ಮಾಡಲಾಗಿದೆ. ಯಾವ ಬಾಬ್ತಿಗೆ ಎಷ್ಟು ಖರ್ಚಾಗಿದೆ ಎಂಬುದನ್ನು ನವೆಂಬರ್ 1ರಂದೇ ತಿಳಿಸಲಾಗುವುದು. ಎಲ್ಲ ಲೆಕ್ಕಪತ್ರಗಳನ್ನು ಜನರಿಗೆ ನೀಡಲಾಗುವುದು ಎಂದವರು ಹೇಳಿದರು.

ಇದುವರೆಗೂ ದಸರಾ ಉತ್ಸವಕ್ಕೆ ಮಾಡಲಾಗುತ್ತಿದ್ದ ವೆಚ್ಚದ ಬಗ್ಗೆ ಮಾಹಿತಿ ನೀಡುವ ಪರಿಪಾಠ ಇರಲಿಲ್ಲ. ಸರಕಾರದಿಂದ ಅನುದಾನ ಬರುತ್ತದೆ ಎನ್ನುವ ಮಾಹಿತಿ ಬಿಟ್ಟರೆ ಯಾವುದಕ್ಕೆ ಎಷ್ಟು ಖರ್ಚಾಯಿತು ಎಂಬ ಲೆಕ್ಕಪತ್ರ ಇರುತ್ತಿರಲಿಲ್ಲ. ಎಸ್.ಟಿ.ಸೋಮಶೇಖರ್‌ ಇದಕ್ಕೆ ಈ ವರ್ಷದಿಂದ ನಾಂದಿ ಹಾಡಿದ್ದಾರೆ.

ಸರಳ, ಸಾಂಪ್ರದಾಯಿಕವಾದ 9 ದಿನಗಳ ದಸರಾ ಕಾರ್ಯಕ್ರಮ ಯಶಸ್ವಿಯಾಗಿದೆ. ಟೆಕ್ನಿಕಲ್ ಕಮಿಟಿ ಸೂಚನೆಯಂತ ಇಡೀ ಉತ್ಸವವನ್ನು ಆಚರಿಸಿದ್ದೇವೆ. 7 ಲಕ್ಷಕ್ಕೂ ಅಧಿಕ ಜನ ದಸರಾ ವೀಕ್ಷಿಸಿದ್ದಾರೆ. ನಗರದಲ್ಲಿ ಮಾಡಲಾಗಿರುವ ವಿದ್ಯುತ್ ದೀಪಾಲಂಕಾರವನ್ನು ಬುಧವಾರದಿಂದ ತೆರವುಗೊಳಿಸಲಾಗುತ್ತದೆ. ಆಯ್ದ ಸ್ಥಳಗಳಲ್ಲಿ ಮಾತ್ರ ಕನ್ನಡ ರಾಜೋತ್ಸವದವರೆಗೂ ದೀಪಾಲಂಕಾರ ಮುಂದುವರಿಯಲಿದೆ ಎಂದು ಸಚಿವರು ತಿಳಿಸಿದರು.

ಸರಳವಾಗಿ, ಸಾಂಪ್ರದಾಯಿಕವಾಗಿ, ವರ್ಚುವಲ್ ಆಗಿ ಈ ಬಾರಿ ದಸರಾ ಆಚರಿಸಲಾಗಿದ್ದು, ಐತಿಹಾಸಿಕವಾಗಿ ನೆನಪು ಉಳಿಯುವಂತಹ ಕಾರ್ಯಕ್ರಮ ಆಗಿತ್ತು. ಇತ್ತೀಚೆಗೆ ನಮ್ಮನ್ನು ಅಗಲಿದ ಖ್ಯಾತ ಗಾಯಕ ಡಾ.ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ನೆನಪಿನಲ್ಲಿ ಒಂದು ದಿನದ ಕಾರ್ಯಕ್ರಮ ನಡೆಯಿತು. ಇದು ಸಹ ದಸರಾ ಮಹೋತ್ಸವದಲ್ಲಿ ಅಗಲಿದ ಗಣ್ಯರೊಬ್ಬರ ಹೆಸರಿನಲ್ಲಿ ನುಡಿನಮನ ಕಾರ್ಯಕ್ರಮ ಆಯೋಜಿರುವುದು ಇದೇ ಮೊದಲು ಎಂದು ಅವರು ಹೇಳಿದರು.

ದಸರಾ ಸಂದರ್ಭದಲ್ಲಿ ಕೊರೊನಾ ಪರೀಕ್ಷೆಯನ್ನು ಹೆಚ್ಚಿಸಲಾಯಿತು. ಪರೀಕ್ಷೆ ಪ್ರಮಾಣ ಹೆಚ್ಚಾದರೂ ಸೋಂಕಿತರ ಸಂಖ್ಯೆಗೆ ಸೆಪ್ಟೆಂಬರ್‌ ತಿಂಗಳಿಗೆ ಹೋಲಿಸಿದರೆ ಕಡಿಮೆ ಬರುತ್ತಿರುವುದು ಸಮಾಧಾನಕರ ಸಂಗತಿ ಎಂದು ಅವರು ಹೇಳಿದರು.

ಮಾವುತರು ಹಾಗೂ ಕಾವಾಡಿಗರಿಗೆ ಗೌರವಧನ

ಇದೇ ವೇಳೆ ಜಂಬೂ ಸವಾರಿಯನ್ನು ಯಶಸ್ವಿಗೊಳಿಸಿದ ಗಜಪಡೆಯ ಮಾವುತರು ಹಾಗೂ ಕಾವಾಡಿಗರಿಗೆ ಎಸ್.ಟಿ.ಸೋಮಶೇಖರ್ ಗೌರವ ಧನ ವಿತರಿಸಿದರು. ಶ್ರೀ ಕೋಡಿ ಸೋಮೇಶ್ವರ ದೇವಾಲಯದ ಮುಂಭಾಗ ಅಭಿಮನ್ಯು ನೇತೃತ್ವದ ವಿಕ್ರಮ, ಗೋಪಿ, ವಿಜಯ, ಕಾವೇರಿ ಆನೆಗಳಿಗೆ ಪೂಜಾ ಕಾರ್ಯ ನೆರವೇರಿಸಿ, ಕಬ್ಬು, ಹಣ್ಣುಬೆಲ್ಲ ನೀಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಬಾರಿಗೆ ಅಭಿಮನ್ಯು ಆನೆಯು ಚಿನ್ನದ ಅಂಬಾರಿ ಹೊತ್ತು ಸಾಗಿ ಯಶಸ್ವಿಗೊಳಿಸಿದೆ. ಸಾಂಪ್ರದಾಯದಂತೆ ದಸರಾ ಮಹೋತ್ಸವದ ಜಂಬೂ ಸವಾರಿಯಲ್ಲಿ ಭಾಗವಹಿಸಿದ ಗಜಪಡೆಗೆ ಪೂಜೆ ಸಲ್ಲಿಸಿ, ಮಾವುತರು ಹಾಗೂ ಕಾವಾಡಿಗರಿಗೆ ಗೌರವ ಧನ ವಿತರಿಸಲಾಯಿತು ಎಂದರು.

ಮಾವುತರು ಹಾಗೂ ಕಾವಾಡಿಗರಿಗೆ ಗೌರವ ಧನವಾಗಿ 10 ಸಾವಿರ ರೂ. ನೀಡಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲ ರೀತಿಯ ಸೌಲಭ್ಯ ನೀಡಲಾಗುವುದು ಎಂದರು ಸಚಿವರು.

Tags: mysore dasaranadahabbast somashekar
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಕೆ.ಅಮರನಾರಾಯಣ, ಮುನಿ ವೆಂಕಟಪ್ಪ, ಕೆ.ವಿ. ರಾಜುಗೆ ರಾಜ್ಯೋತ್ಸವ ಗರಿ

ಕೆ.ಅಮರನಾರಾಯಣ, ಮುನಿ ವೆಂಕಟಪ್ಪ, ಕೆ.ವಿ. ರಾಜುಗೆ ರಾಜ್ಯೋತ್ಸವ ಗರಿ

Leave a Reply Cancel reply

Your email address will not be published. Required fields are marked *

Recommended

ಹೊಸ ವರ್ಷಕ್ಕೆ ಮುನ್ನಾ 9 ಗಂಟೆವರೆಗೂ ಕೂತು 40 ಕಡತ ವಿಲೇವಾರಿ ಮಾಡಿದ ಡಿಸಿಎಂ; ಇಂದಿನಿಂದಲೇ ವಿವಿಗಳಲ್ಲೂ ಇ-ಆಫೀಸ್ ಅಸ್ತಿತ್ವಕ್ಕೆ

ಸಂಕ್ರಾಂತಿ ಹಬ್ಬದ ನಂತರ ಮೊದಲ, ದ್ವಿತೀಯ ವರ್ಷದ ಪದವಿ, ಸ್ನಾತಕೋತ್ತರ, ಪಾಲಿಟೆಕ್ನಿಕ್, ಎಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಆಫ್‌ಲೈನ್‌ ತರಗತಿ ಆರಂಭ

4 years ago
ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಉಚಿತ ವಿದ್ಯುತ್

ಕನ್ನಡಿಗರು ಕೊಟ್ಟ ಪೆನ್ ತಮಿಳರಿಗೆ ಒತ್ತೆ ಇಟ್ಟ ಕಾಂಗ್ರೆಸ್ ಸರಕಾರ!

2 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ