• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಸಿಎಂಗೆ ಕೌಂಟರ್‌; ಶಿರಾ ಕೆರೆಗಳಿಗೆ ನೀರು ತುಂಬಿಸದಿದ್ದರೆ ವಿಧಾನಸೌಧವರೆಗೂ ಪಾದಯಾತ್ರೆ ಮಾಡುವೆ ಎಂದ ಎಚ್‌ಡಿಕೆ

cknewsnow desk by cknewsnow desk
October 30, 2020
in STATE
Reading Time: 1 min read
0
ಸಿಎಂಗೆ ಕೌಂಟರ್‌; ಶಿರಾ ಕೆರೆಗಳಿಗೆ ನೀರು ತುಂಬಿಸದಿದ್ದರೆ ವಿಧಾನಸೌಧವರೆಗೂ ಪಾದಯಾತ್ರೆ ಮಾಡುವೆ ಎಂದ ಎಚ್‌ಡಿಕೆ
913
VIEWS
FacebookTwitterWhatsuplinkedinEmail

ಶಿರಾ: ಉಪ ಚುನಾವಣೆ ಮುಗಿದ ಬಳಿಕ ಶಿರಾ ತಾಲ್ಲೂಕಿನಲ್ಲಿರುವ 65 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡದಿದ್ದರೆ, ಶಿರಾ ಪಟ್ಟಣದಿಂದ ಬೆಂಗಳೂರಿನ ವಿಧಾನಸೌಧದವರೆಗೆ ಪಾದಯಾತ್ರೆ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಉಪ ಚುನಾವಣೆ ಹಿನ್ನೆಲೆ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಪರವಾಗಿ ಶಿರಾ ಪಟ್ಟಣದಲ್ಲಿ ಶುಕ್ರವಾರ ಪ್ರಚಾರ ನಡೆಸಿದ ಅವರು, ತಾಲ್ಲೂಕಿನ ಜನತೆಗೆ ನೀಡಿರುವ ಭರವಸೆಯನ್ನು ಈಡೇರಿಸಲು ತಾವು ಯಾವುದೇ ಹೋರಾಟಕ್ಕೂ ಸಿದ್ದ ಎಂದು ಘೋಷಿಸಿದರು.

2006ರಲ್ಲಿ ನಾನು ಮುಖ್ಯಮಂತ್ರಿಯಾದ ವೇಳೆ ಶಿರಾದಲ್ಲಿ ಕುಡಿಯುವ ನೀರಿನ ತೊಂದರೆ ನೀಗಿಸಲು ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಕೈಗೆತ್ತಿಕೊಂಡಿದ್ದೆ. ಹಲವು ವರ್ಷಗಳಾದರೂ ಈ ಯೋಜನೆ ಅನುಷ್ಠಾನವಾಗದಿರುವುದು ಅತ್ಯಂತ ನೋವಿನ ಸಂಗತಿ. ಚುನಾವಣೆ ಮುಗಿದ ತಕ್ಷಣ ಸರಕಾರ ಯೋಜನೆ ಅನುಷ್ಠಾನ ಮಾಡದಿದ್ದರೆ ತಾಲ್ಲೂಕಿನ ಜನತೆ ಪರವಾಗಿ ಬೆಂಗಳೂರಿನ ವಿಧಾನಸೌಧದವರೆಗೂ ಪಾದಯಾತ್ರೆ ನಡೆಸುತ್ತೇನೆ ಎಂದು ಪ್ರಕಟಿಸಿದರು.

ನಾನು ಮುಖ್ಯಮಂತ್ರಿಯಾದ ವೇಳೆ ತಾಲ್ಲೂಕಿನ ಹೊನ್ನಗಾನಹಳ್ಳಿ ಗ್ರಾಮದಲ್ಲಿ ಗ್ರಾಮವಾಸ್ತವ್ಯ ಮಾಡಿದ್ದೆ. ಅಂದು ಮದಲೂರು ಕೆರೆ ವೀಕ್ಷಣೆ ನಡೆಸಿದ ವೇಳೆ ನೀರಿನ ಸಮಸ್ಯೆ ಇರುವುದು ಅರಿವಾಯಿತು. ಅಂದೇ ನಾನು ಕೆರೆಗಳಿಗೆ ನೀರು ತುಂಬಿಸಬೇಕೆಂಬ ತೀರ್ಮಾನ ಮಾಡಿದ್ದೆ ಎಂದು ಎಚ್‌ಡಿಕೆ ನೆನಪಿಸಿಕೊಂಡರು.

ಬೆಂಗಳೂರಿಗೆ ಹಿಂತಿರುಗಿದ ನಂತರ ಸಭೆ ನಡೆಸಿ ಶಿರಾದಲ್ಲಿರುವ ಎಲ್ಲಾ ಕೆರೆಗಳಿಗೆ ನೀರು ತುಂಬಿಸಲು ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೆ. ಸುಮಾರು 850 ಕೋಟಿ ರೂ. ವೆಚ್ಚದಲ್ಲಿ ತಾಲ್ಲೂಕಿನಲ್ಲಿ ಕೆರೆಗಳಿಗೆ ನೀರು ತುಂಬಿಸಲು ʼಸಿಕಾನ್ʼ ಎಂಬ ಖಾಸಗಿ ಕಂಪನಿಗೆ ನೀಡಲಾಗಿತ್ತು. ಆದರೆ ಆ ವೇಳೆಗೆ ನನ್ನ ಅಧಿಕಾರಾವಧಿ ಮುಗಿದ ಕಾರಣ ಯೋಜನೆ ನೆನೆಗುದಿಗೆ ಬಿದ್ದಿದೆ ಎಂದು ವಿಷಾದಿಸಿದರು.

ಹೇಮಾವತಿ ನದಿಯಿಂದ ನೀರು ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಾಗುವುದಿಲ್ಲ ಎಂಬ ಕಾರಣಕ್ಕಾಗಿ ಭದ್ರ ಮೇಲ್ದಂಡೆ ಯೋಜನೆಯಿಂದ ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ 19 ಟಿಎಂಸಿ ನೀರು ಬಳಸಿಕೊಂಡು ಯೋಜನೆಯನ್ನು ಜಾರಿ ಮಾಡಲು ನಮ್ಮ ಸರಕಾರ ನಿರ್ಧರಿಸಿತ್ತು ಎಂದ ಅವರು, ಚಿತ್ರದುರ್ಗದಲ್ಲಿ ಹಲವು ವರ್ಷಗಳಿಂದ ಕುಡಿಯುವ ನೀರಿಗಾಗಿ ಹೋರಾಟ ನಡೆಸುತ್ತಿದ್ದರು. ಹೀಗಾಗಿ ಸುಮಾರು ಒಂದೂವರೆಲಕ್ಷ ಹೆಕ್ಟೇರ್ ನೀರಾವರಿ ಪ್ರದೇಶಕ್ಕೆ ಭದ್ರ ಮೇಲ್ದಂಡೆ ಯೋಜನೆಯಿಂದ 4,500 ಕೋಟಿ ವೆಚ್ಚದಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸಲು ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿತ್ತು ಎಂದರು.

ಐದು ವರ್ಷ ಆಡಳಿತ ನಡೆಸಿದ ಬಿಜೆಪಿಯವರು ಹಾಗೂ ಕಾಂಗ್ರೆಸಿಗರು ತಾಲ್ಲೂಕಿನ ಅಭಿವೃದ್ಧಿ ಬಗ್ಗೆ ಗಮನಕೊಡಲಿಲ್ಲ. ಈಗ ಉಪಚುನಾವಣೆ ಬಂದಿದೆ ಎಂಬ ಒಂದೇ ಕಾರಣಕ್ಕಾಗಿ ಕೆರೆಗಳಿಗೆ ನೀರು ತುಂಬಿಸುವ ಬಗ್ಗೆ ಮಾತನಾಡುತ್ತಿದ್ದಾರೆ. ನೀವು ಅಧಿಕಾರದಲ್ಲಿದ್ದಾಗ ಈ ಕೆಲಸವನ್ನು ಏಕೆ ಮಾಡಲಿಲ್ಲ.

ಶಿರಾ ಕ್ಷೇತ್ರದ ಹುಣಸೇಹಳ್ಳಿಯಲ್ಲಿ ಕುಮಾರಸ್ವಾಮಿ ಪ್ರಚಾರ.

ಹಿಂದಿನ ಕಾಂಗ್ರೆಸ್ ಅವಯಲ್ಲಿ ಸ್ವತಃ ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಟಿ.ಬಿ.ಜಯಚಂದ್ರ ಅವರು ತಾಲ್ಲೂಕಿನಲ್ಲಿರುವ ಎಷ್ಟು ಕೆರೆಗಳಿಗೆ ನೀರು ತುಂಬಿಸಿದರು. ಅಂದು ನೀವು ತಾಲ್ಲೂಕಿನ ಅಭಿವೃದ್ಧಿಗೆ ಗಮನಹರಿಸಿದ್ದಿದ್ದರೆ ಇಂದು ಜನತೆ ಕುಡಿಯುವ ನೀರಿಗೆ ಪರಿತಪಿಸುವ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತೇ ಎಂದು ಹರಿಹಾಯ್ದರು. ಹಲವಾರು ವರ್ಷಗಳಿಂದ ಶಿರಾವನ್ನು ಎಲ್ಲ ರಾಜಕೀಯ ಪಕ್ಷಗಳು ಕಡೆಗಣನೆ ಮಾಡಿವೆ. ಇದಕ್ಕೆ ಶಾಶ್ವತ ಪರಿಹಾರ ನೀಡಬೇಕೆಂದು ನಿಶ್ಚಯಿಸಿದ್ದೇನೆ. ತಾಲೂಕಿನ ಸಮಸ್ಯೆಗೆ ಇತಿಶ್ರೀ ಹಾಡುತ್ತೇನೆ ಎಂದು ವಾಗ್ದಾನ ಮಾಡಿದರು.

ನವೆಂಬರ್ 3ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಕ್ಷೇತ್ರದ ಜನತೆ ಯಾವುದೇ ಆಸೆ ಆಮಿಷಗಳು, ಸುಳ್ಳು ಆಶ್ವಾಸನೆಗಳು, ಪೊಳ್ಳು ಭರವಸೆಗಳಿಗೆ ಬಲಿಯಾಗಬೇಡಿ. ನಮ್ಮ ಪಕ್ಷದ ಅಭ್ಯರ್ಥಿಯಾಗಿರುವ ಅಮ್ಮಾಜಮ್ಮ ಅವರಿಗೆ ನಿಮ್ಮ ಅಮೂಲ್ಯವಾದ ಮತ ನೀಡಿ ಹೆಚ್ಚಿನ ಮತಗಳಿಂದ ಆಯ್ಕೆ ಮಾಡಿ ಎಂದು ಕರೆ ನೀಡಿದರಲ್ಲದೆ, ನಾನು ಈಗ ಏನು ವಾಗ್ದಾನ ಮಾಡಿದ್ದೇನೋ ಅದನ್ನು ಖಂಡಿತ ಈಡೇರಿಸಿಕೊಡುತ್ತೇನೆ. ಜೆಡಿಎಸ್‍ನ ಮೇಲೆ ಭರವಸೆಯಿಟ್ಟು ನಮ್ಮನ್ನು ಕೈಹಿಡಿಯಿರಿ ಎಂದು ಕುಮಾರಸ್ವಾಮಿ ಜನತೆಗೆ ಭಾವುಕರಾಗಿ ಮನವಿ ಮಾಡಿದರು.

Tags: hd kumaraswamyjdssiraSira by election
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಭಾರತದ ಐಕ್ಯತಾಮೂರ್ತಿಯ ನೆನಪು; ಏಕತೆಯೊಂದಿಗೆ ದೇಶದ ಭವಿಷ್ಯಕ್ಕೆ ದಿಕ್ಕು ತೋರಿದ ಸರ್ದಾರ್‌ ಪಟೇಲರು

ಭಾರತದ ಐಕ್ಯತಾಮೂರ್ತಿಯ ನೆನಪು; ಏಕತೆಯೊಂದಿಗೆ ದೇಶದ ಭವಿಷ್ಯಕ್ಕೆ ದಿಕ್ಕು ತೋರಿದ ಸರ್ದಾರ್‌ ಪಟೇಲರು

Leave a Reply Cancel reply

Your email address will not be published. Required fields are marked *

Recommended

ಇನ್ನೊಂದು ತಬರನ ಕಥೆ!; ಮುಖ್ಯಮಂತ್ರಿ ಕೊಟ್ಟ ಗ್ಯಾರಂಟಿ ನಂಬಿಕೊಂಡು ಊರು ಬಿಟ್ಟು ಸಂಕಷ್ಟಕ್ಕೆ ಸಿಲುಕಿದ ವಿಕಲಚೇತನ ಯುವತಿ

ಇನ್ನೊಂದು ತಬರನ ಕಥೆ!; ಮುಖ್ಯಮಂತ್ರಿ ಕೊಟ್ಟ ಗ್ಯಾರಂಟಿ ನಂಬಿಕೊಂಡು ಊರು ಬಿಟ್ಟು ಸಂಕಷ್ಟಕ್ಕೆ ಸಿಲುಕಿದ ವಿಕಲಚೇತನ ಯುವತಿ

1 year ago
ಸಿದ್ದರಾಮಯ್ಯ ʼಗೊಬೆಲಪ್ಪʼ, ʼಬ್ರೋಕರಪ್ಪʼ ಎಂದ ಮಾಜಿ ಸಿಎಂ

ದೇವೇಗೌಡರ ಮೇಲೆ ಆಣೆ ಮಾಡು ಎನ್ನಲಿಕ್ಕೆ ನೀನು ಯಾವೂರು ದಾಸಯ್ಯ?

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ