• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಶಿರಾದಲ್ಲಿ ಪುತ್ರ ವಿಜಯೇಂದ್ರ ಮಾಡಿಟ್ಟಿದ್ದ ಬಿಜೆಪಿ ವೋಟ್‌ʼಬೇಸ್‌ ವಿಸ್ತರಣೆಗೆ ನೀರೆರೆದ ಯಡಿಯೂರಪ್ಪ

cknewsnow desk by cknewsnow desk
October 30, 2020
in STATE
Reading Time: 1 min read
0
ಶಿರಾದಲ್ಲಿ ಪುತ್ರ ವಿಜಯೇಂದ್ರ ಮಾಡಿಟ್ಟಿದ್ದ ಬಿಜೆಪಿ ವೋಟ್‌ʼಬೇಸ್‌ ವಿಸ್ತರಣೆಗೆ ನೀರೆರೆದ ಯಡಿಯೂರಪ್ಪ
911
VIEWS
FacebookTwitterWhatsuplinkedinEmail
photos: B.S. Yediyurappa@BSYBJ

ತುಮಕೂರು: ಮತದಾನಕ್ಕೆ ಇನ್ನು ನಾಲ್ಕೇ ದಿನ (ನವೆಂಬರ್‌ 3) ಇರುವಂತೆಯೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚುನಾವಣಾ ಪ್ರಚಾರಕ್ಕೆ ಇಳಿದಿದ್ದು, ಶಿರಾದಲ್ಲಿ ಶುಕ್ರವಾರ ಮತಯಾಚನೆ ಮಾಡಿದರು. ಪುತ್ರ ವಿಜಯೇಂದ್ರ ಮಾಡಿಟ್ಟಿದ್ದ ಬಿಜೆಪಿ ವೋಟ್‌ʼಬೇಸ್‌ ವಿಸ್ತರಣೆಗೆ ಮತ್ತಷ್ಟು ನೀರೆರೆದರು.

ಇದೇ ಮೊದಲಿಗೆ ಕ್ಷೇತ್ರದಲ್ಲಿ ಅಕೌಂಟ್‌ ತೆರೆಯುವ ಉಮೇದಿನಲ್ಲಿರುವ ಬಿಜೆಪಿಗೆ ಶಿರಾ ಪಾಲಿಟಿಕ್ಸ್‌ ಬಹುತೇಕ ಅರ್ಥವಾಗಿರುವ ಹಾಗಿದೆ. ಏಕೆಂದರೆ, ಪಕ್ಷದ ಅಭ್ಯರ್ಥಿ ರಾಜೇಶ್‌ಗೌಡ ನಾಮಪತ್ರ ಸಲ್ಲಿಸಿದಾಗಿನಿಂದ ಕ್ಷೇತ್ರದಲ್ಲಿಯೇ ಬೀಡುಬಿಟ್ಟಿರುವ ವಿಜಯೇಂದ್ರ ದೊಡ್ಡ ಪ್ರಮಾಣದ ಕಾರ್ಯಕರ್ತರ ಪಡೆ ಇಟ್ಟುಕೊಂಡು ಬಲವಾದ ನೆಲೆ ಕ್ರಿಯೇಟ್‌ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಮಂಡ್ಯದ ಕೆ.ಆರ್.ಪೇಟೆ ಉಪ ಚುನಾವಣೆಯಲ್ಲಿ ಅನುಸರಿಸಿದ ಕಾರ್ಯತಂತ್ರವನ್ನೇ ಫಾಲೋ ಮಾಡುತ್ತಿದ್ದು, ಬಿಜೆಪಿಗೆ ಭರ್ಜರಿ ಫಸಲು ಸಿಗುವ ನಿರೀಕ್ಷೆ ಇದೆ.

ಇದರ ಬೆನ್ನಲ್ಲೇ ಯಡಿಯೂರಪ್ಪ ಅವರು ಕ್ಷೇತ್ರದಲ್ಲಿ ಇಡೀ ದಿನ ಸಂಚಾರ ಮಾಡಿರುವುದು ಪಕ್ಷಕ್ಕೆ ಹೊಸ ಹರುಪು ಮೂಡಿಸಿತು. ಅವರು ಮಾಡಿದ ಪ್ರಚಾರ ಭಾಷಣ ಇದೀಗ ಕ್ಷೇತ್ರದಲ್ಲಿ ವ್ಯಾಪಕವಾಗಿ ಚರ್ಚೆಯಾಗುತ್ತಿದೆ ಎಂದು ವರದಿಯಾಗಿದೆ. ಅವರು ಹೇಳಿದ ಮಾತುಗಳು ಹೀಗಿವೆ;

ಈ ಯಡಿಯೂರಪ್ಪ ಆಡಿದ ಮಾತನ್ನು ತಪ್ಪುವವನಲ್ಲ. ಅಕ್ಷರಶಃ ನಡೆಸಿಕೊಡುವಂತವನು. ಮುಂದಿನ ಎರಡೂವರೆ ವರ್ಷಗಳಲ್ಲಿ ರಾಜ್ಯವನ್ನು ಮಾದರಿ ರಾಜ್ಯವನ್ನಾಗಿ ಮಾಡುತ್ತೇನೆ. ಎಲ್ಲ ವರ್ಗದ ಜನರಗೂ ಅನುಕೂಲ ಮಾಡಿಕೊಡುತ್ತೇನೆ.

ಅನಿರೀಕ್ಷಿತವಾಗಿ ಬಂದ ಕೋವಿಡ್ ಸೋಂಕಿನಿಂದ ಕೊಂಚಮಟ್ಟಿಗೆ ಆರ್ಥಿಕ ಪರಿಸ್ಥಿತಿ ಸರಿ ಇರಲಿಲ್ಲ. ಇದೀಗ ಎಲ್ಲವೂ ಸುಧಾರಣೆ ಆಗುತ್ತಿದೆ. ರಾಜ್ಯದ ಎಲ್ಲ ಭಾಗಗಳೂ ಶರವೇಗದಲ್ಲಿ ಅಭಿವೃದ್ಧಿ ಆಗುತ್ತಿವೆ. ಶಿರಾಗೆ ಈ ವಿಷಯದಲ್ಲಿ ಅನ್ಯಾಯವಾಗಲು ನಾನು ಬಿಡುವುದಿಲ್ಲ.

ಮಾದರಿ ತಾಲ್ಲೂಕು, ಮಾದರಿ ಜಿಲ್ಲೆ

ಶಿರಾವನ್ನು ಮಾದರಿ ತಾಲ್ಲೂಕು ಮಾಡುತ್ತೇನೆ. ತುಮಕೂರು ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ರೂಪಿಸುತ್ತೇನೆ. ನವೆಂಬರ್‌ 3 ಕಳೆದ ಮೇಲೆ ಈ ಕ್ಷೇತ್ರದಲ್ಲಿ ಆಗಬೇಕಿರುವ ಎಲ್ಲ ಕೆಲಸಗಳನ್ನೂ ಮಾಡಿಕೊಡುತ್ತೇನೆ. ದೇವಸ್ಥಾನಕ್ಕೆ ಅನುದಾನ ನೀಡಲಾಗುವುದು. ನನ್ನಲ್ಲಿ ಯಾವುದೇ ಜಾತಿ ಪ್ರಶ್ನೆ ಇರುವುದಿಲ್ಲ. ಎಲ್ಲ ಜಾತಿಗಳ ಜನರೂ ಉತ್ತಮವಾಗಿ ಬದುಕಬೇಕು. ಇದು ನನ್ನ ಅಭಿಲಾಶೆ.

ಬಿಜೆಪಿ ಅಭ್ಯರ್ಥಿಯನ್ನು ಮತದಾರರು ದೊಡ್ಡ ಅಂತರದಲ್ಲಿ ಗೆಲ್ಲಿಸಬೇಕು. ಅಂದರೆ; ಡಾ. ರಾಜೇಶ್‌ ಗೌಡ ಅವರನ್ನು 25-35 ಸಾವಿರ ಮತಗಳ ಅಂತರದಿಂದ ಗೆಲ್ಲಿಸಬೇಕು. ನೀವು ಆ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ಆಗ, ನಿಮಗೆ ಆಗಬೇಕಿರುವ ಕೆಲಸವನ್ನು ನಾನು ಮಾಡಿಕೊಡಲು ರಾಜ್ಯದ ಮುಖ್ಯಮಂತ್ರಿಯಾಗಿ ಜವಾಬ್ದಾರಿ ತೆಗೆದುಕೊಳ್ಳುತ್ತೇನೆ. ಇದರಲ್ಲಿ ಜನರಿಗೆ ಯಾವುದೇ ಸಂದೇಹ ಬೇಡ.

ಕೆರೆ ಪೂಜೆಗೆ ನಾನೇ ಬರುತ್ತೇನೆ

ಮದಲೂರು ಕೆರೆ ಮುಂಭಾಗ ಈ ಕಾರ್ಯಕ್ರಮ ನಡೆಯುತ್ತಿದೆ. ಈ ಕೆರೆ ತುಂಬಿಸಲಾಗುವುದು. ಕೆರೆ ತುಂಬಿಸಬೇಕು ಎಂಬುದು ಇಲ್ಲಿನ ಜನರ ಪ್ರಮುಖ ಬೇಡಿಕೆ. ಈ ಹಿಂದೆ ನಾನು ಅಧಿಕಾರದಲ್ಲಿದ್ದಾಗ ಇದೇ ಕೆರೆಗೆ ನೀರು ಬಿಡಲು ಕಾಲುವೆ ನಿರ್ಮಿಸಲು ಅನುದಾನ ಮಂಜೂರು ಮಾಡಿದ್ದೆ. ಆ ವಿಷಯ ಎಲ್ಲರಿಗೂ ಗೊತ್ತಿದೆ. ಮುಂದಿನ ಆರು ತಿಂಗಳ ಒಳಗಾಗಿ ಮದಲೂರು ಕೆರೆಗೆ ನೀರು ತುಂಬಿಸಲಾಗುವುದು. ನಾನೇ ಬಂದು ಕೆರೆಗೆ ಪೂಜೆ ಸಲ್ಲಿಸುತ್ತೇನೆ. ಇದು ನನ್ನ ಸ್ಪಷ್ಟ ಭರವಸೆ.

ಕೆ.ಆರ್.ಪೇಟೆಯಂತೆ ಇಲ್ಲೂ ಕೆಲಸ ಆಗುತ್ತದೆ

ಕೆ.ಆರ್.ಪೇಟೆ ಕ್ಷೇತ್ರ ಹಿಂದುಳಿದಿತ್ತು. ಅಲ್ಲೀಗ ಅಭಿವೃದ್ಧಿ ಕೆಲಸಗಳು ಚೆನ್ನಾಗಿ ಆಗುತ್ತಿವೆ. ಏನು ಮಾತು ಕೊಟ್ಟಿದ್ದೆವೋ ಅದರಂತೆ ಅಭಿವೃದ್ಧಿ ಮಾಡುತ್ತಿದ್ದೇವೆ. ಹೇಮಾವತಿ ನದಿಯಿಂದ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸುತ್ತೇವೆ. ಒಟ್ಟು 60 ಕೆರೆಗಳನ್ನು ತುಂಬಿಸುತ್ತೇವೆ. ಇದರಲ್ಲಿ ಯಾವುದೇ ಅನುಮಾನ ಬೇಡ.

ಪರಿಶಿಷ್ಟ ವರ್ಗಕ್ಕೆ ಕುಂಚಿಟಿಗರು

ಬಹುದಿನಗಳ ಬೇಡಿಕೆಯಾಗಿ ಉಳಿದಿರುವ ಕುಂಚಿಟಿಗ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ನಮ್ಮ ಸರಕಾರ ಕ್ರಮ ಕೈಗೊಳ್ಳುತ್ತದೆ. ಸಾಮಾಜಿಕ ನ್ಯಾಯ ಒದಗಿಸುವುದು ನನ್ನ ಹೊಣೆ. ಸರ್ವ ಸಮುದಾಯಗಳನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಹಂಬಲ ನನ್ನದು. ಅದೇ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇನೆ. ಕಾಡುಗೊಲ್ಲರ ಕಲ್ಯಾಣಕ್ಕಾಗಿ ಹಲವಾರು ಕಾರ್ಯಕ್ರಮ ರೂಪಿಸಿದ್ದೇನೆ.

5 ಲಕ್ಷದಲ್ಲಿ ಮನೆ

ಶಿರಾ ಕ್ಷೇತ್ರ ಒಂದೇ ಅಲ್ಲ, ಇಡೀ ರಾಜ್ಯಕ್ಕೆ ಒಳ್ಳೆಯದಾಗಬೇಕು. ಎಲ್ಲರಿಗೂ ನಿವೇಶನ ಸಿಗಬೇಕು. ಯಾರಿಗೆ ಮನೆ ಸಿಗಬೇಕೋ ಅವರ ಪಟ್ಟಿ ಕೊಡಿ. 5 ಲಕ್ಷ ರೂಪಾಯಿ ವೆಚ್ಚದಲ್ಲಿ ಮನೆ ಕಟ್ಟಿ ಕೊಡುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಹೇಳಿ ಸಿಎಂ ಮಾತು ಮುಗಿಸಿದರು.

ವೇದಿಕೆ ಮೇಲಿನ ಸಮಾರಂಭದಲ್ಲಿ ಸಿಎಂ ಜತೆ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಡಿಸಿಎಂ ಗೋವಿಂದ ಕಾರಜೋಳ, ವಿಧಾನಪರಿಷತ್‌ ಸದಸ್ಯ ರವಿಕುಮಾರ್‌, ಬಿ.ವೈ.ವಿಜಯೇಂದ್ರ ಮುಂತಾದವರು ಉಪಸ್ಥಿತರಿದ್ದರು.

Tags: bjpbs yediyurappaby election 2020sira
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಸಿಎಂಗೆ ಕೌಂಟರ್‌; ಶಿರಾ ಕೆರೆಗಳಿಗೆ ನೀರು ತುಂಬಿಸದಿದ್ದರೆ ವಿಧಾನಸೌಧವರೆಗೂ ಪಾದಯಾತ್ರೆ ಮಾಡುವೆ ಎಂದ ಎಚ್‌ಡಿಕೆ

ಸಿಎಂಗೆ ಕೌಂಟರ್‌; ಶಿರಾ ಕೆರೆಗಳಿಗೆ ನೀರು ತುಂಬಿಸದಿದ್ದರೆ ವಿಧಾನಸೌಧವರೆಗೂ ಪಾದಯಾತ್ರೆ ಮಾಡುವೆ ಎಂದ ಎಚ್‌ಡಿಕೆ

Leave a Reply Cancel reply

Your email address will not be published. Required fields are marked *

Recommended

ಚಿನ್ನ ಖಾಲಿಯಾದರೂ ಪರವಾಗಿಲ್ಲ!; ಕೆಜಿಎಫ್‌ ಎಂದರೆ ಎಲ್ಲರಿಗೂ ಇಷ್ಟ!! ಏಕೆಂದರೆ…?

ಚಿನ್ನ ಖಾಲಿಯಾದರೂ ಪರವಾಗಿಲ್ಲ!; ಕೆಜಿಎಫ್‌ ಎಂದರೆ ಎಲ್ಲರಿಗೂ ಇಷ್ಟ!! ಏಕೆಂದರೆ…?

5 years ago
ಕೋವಿಡ್‌ ಸುಳಿಯಲ್ಲಿ ಸ್ಯಾಂಡಲ್‌ವುಡ್‌; ನೆರವಿಗೆ ಮುಂದಾದ ಸರಕಾರ

ಕೋವಿಡ್‌ ಸುಳಿಯಲ್ಲಿ ಸ್ಯಾಂಡಲ್‌ವುಡ್‌; ನೆರವಿಗೆ ಮುಂದಾದ ಸರಕಾರ

5 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ