• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಒಂದು ಮಹಾನ್‌ ಉದ್ದೇಶ; 1,20,000 ಕಿ.ಮೀ ದೂರ ಬೆಂಗಳೂರು ದೇಶಪ್ರೇಮಿಯ ಭಾರತ ಯಾತ್ರೆ

cknewsnow desk by cknewsnow desk
November 4, 2020
in NATION, STATE
Reading Time: 1 min read
0
ಒಂದು ಮಹಾನ್‌ ಉದ್ದೇಶ; 1,20,000 ಕಿ.ಮೀ ದೂರ ಬೆಂಗಳೂರು ದೇಶಪ್ರೇಮಿಯ ಭಾರತ ಯಾತ್ರೆ
973
VIEWS
FacebookTwitterWhatsuplinkedinEmail
lead photo courtesy: Umesh Gopinath Jadhav@UmeshGopinathJ1

ಬೆಂಗಳೂರು: ಕಾರ್ಗಿಲ್ ಯುದ್ಧ, ಪುಲ್ವಾಮಾ ದಾಳಿ ಸೇರಿ ವಿವಿಧ ಯುದ್ಧಗಳು ಹಾಗೂ ಭಯೋತ್ಪಾದಕರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಸಲ್ಲಿಸಲು ʼದೇಶಪ್ರೇಮ ಭಾರತಯಾತ್ರೆʼ ಕೈಗೊಂಡಿರುವ ಬೆಂಗಳೂರು ಮೂಲದ ಉಮೇಶ್ ಗೋಪಿನಾಥ್ ಜಾಧವ್ ಅವರು ಎರಡನೇ ಹಂತದ ಯಾತ್ರೆಯನ್ನು ಆರಂಭಿಸಿದ್ದಾರೆ.

ಮಂಗಳವಾರ ಸಂಜೆ ದ್ವಿತೀಯ ಹಂತದ ಯಾತ್ರೆಗೆ ಹೊರಟ ಜಾಧವ್ ಪ್ರಯಾಣಕ್ಕೆ ಡಿಸಿಎಂ ಡಾ.ಅಶ್ವತ್ಥನಾರಾಯಣ ಹಸಿರು ನಿಶಾನೆ ತೋರಿದ್ದಾರೆ. ಯಾವುದೇ ರಾಜಕೀಯ ಉದ್ದೇಶ ಇಲ್ಲದ, ಯಾರ ಪ್ರಾಯೋಜಕತ್ವವೂ ಇಲ್ಲದ, ದೇಶಪ್ರೇಮವನ್ನಷ್ಟೇ ಇಟ್ಟುಕೊಂಡು ಹುತಾತ್ಮ ಯೋಧರ ಗೌರವಾರ್ಥ ಜಾಧವ್ ಕೈಗೊಂಡಿರುವ ದೇಶಪ್ರೇಮ ಭಾರತಯಾತ್ರೆಯನ್ನು ಡಿಸಿಎಂ ಮನಸಾರೆ ಶ್ಲಾಘಿಸಿದರಲ್ಲದೆ, ನಿಮ್ಮ ಮುಂದಿನ ಯಾತ್ರೆ ಸುಖಕರವಾಗಿರಲಿ ಎಂದು ಶುಭ ಹಾರೈಸಿ ಬೀಳ್ಕೊಟ್ಟರು.

couresy: Umesh Jadhav fcebook

ಯಾರು ಈ ಜಾಧವ್?

ಮೂಲತಃ ಸಂಗೀತ ಕಲಾವಿದರಾದ ಉಮೇಶ ಗೋಪಿನಾಥ್ ಯಾದವ್ ಮೂಲತಃ ಬೆಂಗಳೂರಿನ ಸರ್ಜಾಪುರದ ನಿವಾಸಿ. ನಾಡು-ನುಡಿ ಆರಾಧಕರೂ, ಅಪರಿಮಿತ ದೇಶಭಕ್ತರಾಗಿರುವ ಅವರು, ಇದುವರೆಗೂ ದೇಶದ ಮೇಲೆ ನಡೆದ ಭಯೋತ್ಪಾದಕ ದಾಳಿಗಳು-ಯುದ್ಧಗಳಲ್ಲಿ ಹುತಾತ್ಮರಾದ ಯೋಧರ ಸ್ಮರಣಾರ್ಥ ಈ ಯಾತ್ರೆ ಕೈಗೊಂಡಿದ್ದಾರೆ.

ಹೇಗಿರುತ್ತದೆ ಭಾರತಯಾತ್ರೆ?

ಬೆಂಗಳೂರಿನಿಂದಲೇ 2019 ಏಪ್ರಿಲ್ 9ರಿಂದ 2020 ಏಪ್ರಿಲ್ 9ರವೆರಗೆ ಮೊದಲ ಸುತ್ತಿನ ಯಾತ್ರೆ ಪೂರೈಸಿರುವ ಜಾಧವ್, ಈಗಾಗಲೇ ಮೊದಲ ಸುತ್ತಿನ ಯಾತ್ರೆ ವೇಳೆ 98 ಹುತಾತ್ಮ ಯೋಧರ ಮನೆಗಳಿಗೆ ಭೇಟಿ ನೀಡಿ ಅವರ ಸಮಾಧಿಯ ಮಣ್ಣು ಸಂಗ್ರಹ ಮಾಡಿದ್ದರಲ್ಲದೆ ಅವರ ಪೋಷಕರ ಜತೆ ಮಾತನಾಡಿದ್ದಾರೆ. ಗುಜರಾತಿನ ಕಛ್ ಸೇರಿ ಅನೇಕ ಕಡೆಗಳಿಗೆ ಭೇಟಿ ನೀಡಿ ಹುತಾತ್ಮ ಯೋಧರ ಕುಟುಂಬಗಳು, ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾಗಿರುವ ಯೋಧರು, ಸೇನಾಧಿಕಾರಿಗಳು ಹಾಗೂ ಹಾಲಿ ಸೇನಾಧಿಕಾರಿಗಳನ್ನು ಭೇಟಿಯಾಗಿದ್ದಾರೆ. ದೇಶದ 28 ರಾಜ್ಯಗಳು, 9 ಕೇಂದ್ರಾಡಳಿತ ಪ್ರದೇಶಗಳಲ್ಲಿ ಅವರು ಯಾತ್ರೆ ನಡೆಸುತ್ತಿದ್ದಾರೆ.

ಆ ಮಣ್ಣಿನಿಂದ ಭಾರತ ಭೂಪಟ

ದೇಶದ ಉದ್ದಗಲಕ್ಕೂ ಹುತಾತ್ಮ ಯೋಧರ ಸಮಾಧಿಗಳಿಂದ ಸಂಗ್ರಹ ಮಾಡುತ್ತಿರುವ ಪವಿತ್ರ ಮಣ್ಣನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ನಿರ್ಮಾಣವಾಗಲಿರುವ ಸೇನಾ ಸ್ಮಾರಕದಲ್ಲಿ ಭಾರತದ ಭೂಪಟವನ್ನು ನಿರ್ಮಿಸುವುದು ಜಾಧವ್ ಅವರ ಉದ್ದೇಶ. ಈ ಉದ್ದೇಶದೊಂದಿಗೆ ಅವರು ದೇಶಪ್ರೇಮ ಭಾರತಯಾತ್ರೆಯನ್ನು ಕೈಗೊಂಡಿದ್ದಾರೆ.

65,000 ಕಿ.ಮೀ ಯಾತ್ರೆ ಪೂರ್ಣ

ಈಗಾಗಲೇ ಜಾಧವ್ ಅವರು ಭಾರತದ ಉದ್ದಗಲಕ್ಕೂ 65,000 ಕಿ.ಮೀ ಯಾತ್ರೆಯನ್ನು ಪೂರೈಸಿ ಅಷ್ಟೂ ಕಡೆಗಳಲ್ಲಿ ಹುತಾತ್ಮ ಯೋಧರ ಸಮಾಧಿ ಸ್ಥಳಗಳಿಗೆ ಭೇಟಿ ನಮನ ಸಲ್ಲಿಸಿದ್ದಾರೆ. ಮಣ್ಣು ಸಂಗ್ರಹಿಸಿದ್ದಾರೆ. ಕೋವಿಡ್-19 ಕಾರಣಕ್ಕೆ ಅವರು ಕಳೆದ ಮಾರ್ಚ್ʼನಲ್ಲಿ ಛತ್ತೀಸಗಢದ ಸುಕ್ಮಾದಲ್ಲಿ ಯಾತ್ರೆಯನ್ನು ಸ್ಥಗಿತಗೊಳಿಸಿದ್ದರು. ಇದೀಗ ಕೋವಿಡ್‌ ಅನ್ಲಾಕ್ ಆದಮೇಲೆ ಪುನಾ ಅವರು ಯಾತ್ರೆಯನ್ನು ಆರಂಭಿಸಿದ್ದಾರೆ. 2020ರ ಏಪ್ರಿಲ್ 21ಕ್ಕೆ ಪುನಾರಂಭ ಆಗಿರುವ ಯಾತ್ರೆಯು 2021 ಏಪ್ರಿಲ್ 21ರಂದು ಮುಕ್ತಾಯವಾಗಲಿದೆ. ಈ ಎರಡನೇ ಹಂತದಲ್ಲಿ ಒಟ್ಟು 50,000 ಕಿ.ಮೀ. ದೂರವನ್ನು ಜಾಧವ್ ಕ್ರಮಿಸಲಿದ್ದಾರೆ. 730 ದಿನಗಳ ಈ ಯಾತ್ರೆ ಒಟ್ಟು 1,20,000 ಕಿ.ಮೀ ದೂರ ಅವರು ಸಂಚರಿಸಲಿದ್ದಾರೆ.

ಜನ್ಮಭೂಮಿ ಕರ್ಮಭೂಮಿ

“ಹಗಲಿರುಳು ಗಡಿ ಕಾಯುತ್ತ ಭಾರತವನ್ನು ಸಂರಕ್ಷಿಸುತ್ತಿರುವ ನಮ್ಮ ಸೇನೆಯ ಬಗ್ಗೆ ಹೆಮ್ಮೆ ಮೂಡಿಸುವುದು ನನ್ನ ಯಾತ್ರೆಯ ಉದ್ದೇಶ. ಜನ್ಮಭೂಮಿ ಕರ್ಮಭೂಮಿ ಎಂಬ ಹೆಸರಿನಲ್ಲಿ ಈ ದೇಶಪ್ರೇಮ ಯಾತ್ರೆ ಕೈಗೊಂಡಿದ್ದೇನೆ. ಈ ಯಾತ್ರೆಗೆ ಯಾರೂ ಪ್ರಾಯೋಜಕತ್ವ ವಹಿಸಿಲ್ಲ. ಸಂಪೂರ್ಣ ರಾಜಕೀಯೇತರ ಯಾತ್ರೆ ಇದು. ಹುತಾತ್ಮ ಯೋಧರಿಗೆ ನಮನ ಸಲ್ಲಿಸುವ, ಅವರಿಗೆ ಸಮರ್ಪಿತವಾದ ಯಾತ್ರೆ ಇದಾಗಿದೆ” ಎಂದು ಜಾಧವ್ ಹೇಳುತ್ತಾರೆ.

ಮಾರುತಿ ಕಾರು, ಚಿಕ್ಕ ಟ್ರ್ಯಾಲಿ

ತಮ್ಮ ಯಾತ್ರೆಗೆ ಮಾರುತಿ-800 ಕಾರನ್ನು ಬಳಸಿಕೊಂಡಿದ್ದು, ಯಾತ್ರೆಗೆ ಅಗತ್ಯವಾಗಿ ಆ ಕಾರನ್ನು ರೂಪಾಂತರ ಮಾಡಿಕೊಂಡಿದ್ದಾರೆ. ಆ ಕಾರಿನ ಹಿಂದೆ ಹುತಾತ್ಮ ಯೋಧರ ಸಮಾಧಿ ಮಣ್ಣು ಸಂಗ್ರಹ ಮಾಡಿಟ್ಟುಕೊಳ್ಳಲು ಒಂದು ಟ್ರ್ಯಾಲಿಯನ್ನು ಜೋಡಿಸಿಕೊಂಡಿದ್ದಾರಲ್ಲದೆ, ಆ ಟ್ರ್ಯಾಲಿ ಹಿಂದೆ ಒಂದು ಬೈಕ್ ಮತ್ತು ಒಂದು ಸೈಕಲ್ ಅನ್ನು ಜೋಡಿಸಲಾಗಿದೆ. ಕಾರು ಸಂಚರಿಸಲು ಸಾಧ್ಯವಾಗದ ದಾರಿಯಲ್ಲಿ ಜಾಧವ್ ಈ ಸೈಕಲ್, ಬೈಕ್ ಬಳಸಲಿದ್ದಾರೆ.

“ನಿಮ್ಮ ದೇಶಪ್ರೇಮಕ್ಕೆ ನನ್ನ ಕೋಟಿ ವಂದನೆಗಳು. ಅನನ್ಯವಾದ ಈ ಯಾತ್ರೆ ದೇಶದ ಉದ್ದಗಲಕ್ಕೂ ನಿರ್ವಿಘ್ನವಾಗಿ ಸಾಗಲಿ. ನಿಮ್ಮ ಯಾತ್ರೆ ಅಖಂಡ ಭಾರತದಲ್ಲಿ ಹೊಸ ಅಲೆ ಎಬ್ಬಿಸಲಿ. ಮುಂದಿನ ತಲೆಮಾರಿಗೆ ನಿಮ್ಮ ದೇಶಪ್ರೇಮ ಯಾತ್ರೆ ಸ್ಫೂರ್ತಿಯಾಗಿ ನಿಲ್ಲಲಿ” ಎಂದು ಹಾರೈಸಿದ ಡಿಸಿಎಂ, ರಸ್ತೆಯ ಕೊನೆ ಅಂಚಿನವರೆಗೂ ಬಂದು ಜಾಧವ್ ಅವರನ್ನು ಬೀಳ್ಕೊಟ್ಟರು.

Shri Umesh Jadhav is going on a road trip to collect soil from all 28 states and 9 union territories in order to pay tribute to our fallen heroes in the Armed Forces & Paramilitary Services.

I wished him all the best for this unique effort on behalf of all Kannadigas. pic.twitter.com/pdg3Dukq6M

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) November 4, 2020
Tags: india firstJanmabhoomi karmabhoomiPatriotic travelumesh gopinath jadhav
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಡಿಸೆಂಬರ್ 14ರಿಂದ ಪಂಚಲಿಂಗ ದರ್ಶನ; ದಸರಾದಂತೆಯೇ ಸರಳ, ಎಲ್ಲವೂ ವರ್ಚುವಲ್

ಡಿಸೆಂಬರ್ 14ರಿಂದ ಪಂಚಲಿಂಗ ದರ್ಶನ; ದಸರಾದಂತೆಯೇ ಸರಳ, ಎಲ್ಲವೂ ವರ್ಚುವಲ್

Leave a Reply Cancel reply

Your email address will not be published. Required fields are marked *

Recommended

ಉನ್ನತ ಶಿಕ್ಷಣ ಮತ್ತು ಉದ್ಯೋಗಾವಕಾಶದಲ್ಲಿ ದ್ವಿಪಕ್ಷೀಯ ಸಹಕಾರ; ಕರ್ನಾಟಕ-ಬ್ರಿಟನ್‌ ನಡುವೆ ನಿರ್ಮಾಣವಾಗುತ್ತಿದೆ ಜ್ಞಾನಸೇತುವೆ

ಉನ್ನತ ಶಿಕ್ಷಣ ಮತ್ತು ಉದ್ಯೋಗಾವಕಾಶದಲ್ಲಿ ದ್ವಿಪಕ್ಷೀಯ ಸಹಕಾರ; ಕರ್ನಾಟಕ-ಬ್ರಿಟನ್‌ ನಡುವೆ ನಿರ್ಮಾಣವಾಗುತ್ತಿದೆ ಜ್ಞಾನಸೇತುವೆ

4 years ago
ಚಿಕ್ಕಬಳ್ಳಾಪುರದಲ್ಲಿ ಅತಿಥಿ ಉಪನ್ಯಾಸಕರ ಪ್ರತಿಭಟನೆ

ಚಿಕ್ಕಬಳ್ಳಾಪುರದಲ್ಲಿ ಅತಿಥಿ ಉಪನ್ಯಾಸಕರ ಪ್ರತಿಭಟನೆ

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ