• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

150 ಐಟಿಐ ಉನ್ನತೀಕರಣ; ಟಾಟಾ ಟೆಕ್ನಾಲಜೀಸ್ ಸೇರಿ ಖಾಸಗಿ ಉದ್ಯಮಗಳ ಸಹಭಾಗಿತ್ವದಲ್ಲಿ ಅಭಿವೃದ್ಧಿ

cknewsnow desk by cknewsnow desk
November 6, 2020
in NEWS IN USE, STATE
Reading Time: 1 min read
0
150 ಐಟಿಐ ಉನ್ನತೀಕರಣ; ಟಾಟಾ ಟೆಕ್ನಾಲಜೀಸ್ ಸೇರಿ ಖಾಸಗಿ ಉದ್ಯಮಗಳ ಸಹಭಾಗಿತ್ವದಲ್ಲಿ ಅಭಿವೃದ್ಧಿ
914
VIEWS
FacebookTwitterWhatsuplinkedinEmail
Lead photo: pixabay from pexels

ಬೆಂಗಳೂರು: ರಾಜ್ಯದ ಕೈಗಾರಿಕಾ ತರಬೇತಿ ಸಂಸ್ಥೆಗಳ ಗುಣಮಟ್ಟ ಹೆಚ್ಚಿಸುವ ಹಾಗೂ ಆ ಮೂಲಕ ರಾಜ್ಯದ ಯುವಕರಿಗೆ ಉದ್ಯೋಗಾವಕಾಶ ಹೆಚ್ಚಿಸುವ ನಿಟ್ಟಿನಲ್ಲಿ ಕರ್ನಾಟಕ ಸರಕಾರವು ಪುಣೆಯ ಟಾಟಾ ಟೆಕ್ನಾಲಜೀಸ್ ಜತೆ ಮಹತ್ವಪೂರ್ಣ ಒಪ್ಪಂದ ಮಾಡಿಕೊಂಡಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಶುಕ್ರವಾರ ಈ ಒಪ್ಪಂದಕ್ಕೆ ಸಹಿ ಮಾಡಲಾಯಿತು. ಟಾಟಾ ಟೆಕ್ನಾಲಜೀಸ್ ಅಧ್ಯಕ್ಷ ಆನಂದ್ ಭಡೆ ಹಾಗೂ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್ ಒಪ್ಪಂದ ಸಹಿ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಯಡಿಯೂರಪ್ಪ ಅವರು ದೇಶದಲ್ಲಿಯೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರ ಹಾಗೂ ಉದ್ಯಮಗಳು ಕೈಜೋಡಿಸಿ, ಇಂತಹ ವಿನೂತನ ಪ್ರಯತ್ನ ಮಾಡುತ್ತಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಇದರಿಂದ ರಾಜ್ಯದ ಯುವಜನತೆಗೆ ಉತ್ಕೃಷ್ಟ ಹಾಗೂ ಇಂದಿನ ಬೇಡಿಕೆಗೆ ತಕ್ಕಂತೆ ಕೌಶಲ್ಯ ಅಭಿವೃದ್ಧಿ ತರಬೇತಿ ದೊರೆಯುವುದಲ್ಲದೆ, ಕೈಗಾರಿಕೆಗಳಿಗೆ ಕೌಶಲ್ಯ ಹೊಂದಿದ ಮಾನವ ಸಂಪನ್ಮೂಲ ದೊರೆಯಲಿದೆ. ಆ ಮೂಲಕ ರಾಜ್ಯಕ್ಕೆ ಹಾಗೂ ಕೈಗಾರಿಕೆಗಳಿಗೆ ಪರಸ್ಪರ ಅನುಕೂಲವಾಗಲಿದೆ. ಈ ಉಪಕ್ರಮದಿಂದ ರಾಜ್ಯದಲ್ಲಿ ಹೂಡಿಕೆಗೆ ಪೂರಕ ವಾತಾವರಣ ಸೃಷ್ಟಿಯಾಗಲಿದೆ ಎಂದು ಪ್ರತಿಪಾದಿಸಿದರು.

ಬಿ.ಎಸ್. ಯಡಿಯೂರಪ್ಪ, ಡಾ. ಸಿ.ಎನ್. ಅಶ್ವತ್ಥನಾರಾಯಣ, ಟಾಟಾ ಟೆಕ್ನಾಲಜೀಸ್ ವ್ಯವಸ್ಥಾಪಕ ನಿರ್ದೇಶಕ ವಾರನ್ ಹ್ಯಾರಿಸ್, ಮತ್ತು ಹಿರಿಯ ಅಧಿಕಾರಿಗಳು.

ಖಾಸಗಿ ಕಂಪನಿಗಳು ನಾಲ್ಕು ಸಾವಿರ ಕೋಟಿಗೂ ಹೆಚ್ಚು ನೆರವನ್ನು ಸಿಎಸ್ಆರ್ ಅಡಿ ನೀಡುತ್ತಿರುವುದು ಇದೇ ಮೊದಲು ಎಂದು ಮುಖ್ಯಮಂತ್ರಿಗಳು ಹರ್ಷ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಮಾತನಾಡಿ, ಈ ಕಾರ್ಯಕ್ರಮದಿಂದ ಪ್ರತಿ ವರ್ಷ ಕನಿಷ್ಠ 1 ಲಕ್ಷಕ್ಕೂ ಹೆಚ್ಚು ಯುವಕರಿಗೆ ಉತ್ತಮ ಉದ್ಯೋಗಾವಕಾಶ ದೊರೆಯುವ ನಿರೀಕ್ಷೆ ಇದೆ. ಅಲ್ಲದೆ, ಕೈಗಾರಿಕೆಗಳ ಬೇಡಿಕೆಗಳನ್ನು ಆಧರಿಸಿ, 10 ಹೊಸ ಕೋರ್ಸುಗಳನ್ನು ಪ್ರಾರಂಭಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಐಟಿಐಗಳಲ್ಲಿ ಕೈಗಾರಿಕೆಗಳಿಗೆ ಅಗತ್ಯವಿರುವ ಕೌಶಲ್ಯಗಳ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಟಾಟಾ ಟೆಕ್ನಾಲಜೀಸ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿ.ಇ.ಒ ವಾರನ್ ಹ್ಯಾರಿಸ್, ವಿದ್ಯಾರ್ಥಿಗಳು ಕೈಗಾರಿಕಾ ವಲಯದಲ್ಲಿ ಆಗುತ್ತಿರುವ ಕ್ಷಿಪ್ರ ಬದಲಾವಣೆಗಳಿಗೆ ಅನುಗುಣವಾಗಿ ಅತ್ಯಾಧುನಿಕ ತರಬೇತಿ ಪಡೆಯಲು ಈ ಉಪಕ್ರಮ ನೆರವಾಗಲಿದೆ.   ಅತ್ಯಾಧುನಿಕ ಯಂತ್ರೋಪಕರಣ, ತಂತ್ರಾಂಶ, ಹಾರ್ಡ್‍ವೇರ್, ಸಾಫ್ಟ್‍ವೇರ್, ಕೋರ್ಸ್ ವೇರ್ ಮತ್ತು ತರಬೇತಿಗಳಿಗೆ ಆದ್ಯತೆ ನೀಡಲಾಗುವುದು. ಆ ಮೂಲಕ   ಉತ್ತಮ ಜಗತ್ತಿನ ಸೃಷ್ಟಿಸುವ ಟಾಟಾ ಸಂಸ್ಥೆಯ ದೃಷ್ಟಿಯನ್ನು ಸಾಕಾರಗೊಳಿಸಲಿದೆ ಎಂದರು. ಕೈಗಾರಿಕಾ ಬೆಳವಣಿಗೆಯನ್ನು ವೃದ್ಧಿಸುವ ಜೊತೆಗೆ  ಸ್ವಯಂ ಉದ್ಯೋಗ ಕೈಗೊಳ್ಳಲು ಹೊಸ ಅವಕಾಶಗಳನ್ನು ತೆರೆಯಲಿದೆ ಎಂದರು.

ಈ ಒಪ್ಪಂದದ ಅನ್ವಯ ಟಾಟಾ ಟೆಕ್ನಾಲಜೀಸ್ ಸಹಭಾಗಿತ್ವದಲ್ಲಿ  ಕೈಗಾರಿಕೆಗಳ ಬೇಡಿಕೆಗೆ ತಕ್ಕ ತರಬೇತಿ ನೀಡಲು ಅಗತ್ಯ ಸೌಲಭ್ಯ ಒದಗಿಸುವ ಮೂಲಕ ರಾಜ್ಯದ 150 ಸರ್ಕಾರಿ ಐಟಿಐ ಗಳನ್ನು ಒಟ್ಟು 4636.50  ಕೋಟಿ ರೂ. ವೆಚ್ಚದಲ್ಲಿ ಉನ್ನತೀಕರಿಸಲಾಗುವುದು. ಹಾಗೂ ಈ ಐಟಿಐಗಳಲ್ಲಿ ಕೈಗಾರಿಕೆಗಳಿಗೆ ವಾಸ್ತವವಾಗಿ ಅಗತ್ಯವಿರುವ ಕೌಶಲ್ಯ ತರಬೇತಿ ನೀಡಲಾಗುವುದು.

ಇದರಲ್ಲಿ ಟಾಟಾ ಟೆಕ್ನಾಲಜೀಸ್ ಜೊತೆಗೆ ಸುಮಾರು 20 ಕಂಪೆನಿಗಳು ತಮ್ಮ ಸಿ. ಎಸ್. ಆರ್. ನಿಧಿಯಿಂದ 4080 ಕೋಟಿ ರೂ. ಗಳನ್ನು ಭರಿಸಲಿವೆ. ಉಳಿದ 657 ಕೋಟಿ ರೂ. ಗಳನ್ನು ರಾಜ್ಯ ಸರ್ಕಾರದ ವತಿಯಿಂದ ಭರಿಸಲಾಗುವುದು. ಈ 150 ಐಟಿಐಗಳನ್ನು ತಲಾ 30 ಕೋಟಿ ರೂ. ವೆಚ್ಚದಲ್ಲಿ ಉನ್ನತೀಕರಿಸಲಾಗುತ್ತಿದೆ.

ಈ ಯೋಜನೆಯಡಿ ನಾಲ್ಕನೇ ಕೈಗಾರಿಕಾ ಕ್ರಾಂತಿಯ ಮೂಲಕ ಕೈಗಾರಿಕಾ ವಲಯದಲ್ಲಿ ಆಗುತ್ತಿರುವ ಬದಲಾವಣೆಗಳು, ಅಗತ್ಯವಿರುವ ಕೌಶಲ್ಯಗಳನ್ನು ಗಮನದಲ್ಲಿಟ್ಟುಕೊಂಡು ಐಟಿಐ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಉದ್ಯೋಗಾವಕಾಶ ಸೃಷ್ಟಿಸುವ ಗುರಿ ಹೊಂದಲಾಗಿದೆ. ವಿವಿಧ ವಲಯಗಳಲ್ಲಿ ಕೌಶಲ್ಯ ಹೊಂದಿರುವ ಮಾನವ ಸಂಪನ್ಮೂಲದೊಂದಿಗೆ ರಾಜ್ಯಕ್ಕೆ ಹೆಚ್ಚಿನ ಬಂಡವಾಳ ಆಕರ್ಷಿಸುವ ದೂರದೃಷ್ಟಿಯನ್ನೂ ಈ ಯೋಜನೆ ಹೊಂದಿದೆ.

ರಾಜ್ಯದಲ್ಲಿ 270 ಸರ್ಕಾರಿ, 196 ಅನುದಾನಿತ ಹಾಗೂ 1247 ಖಾಸಗಿ ಐಟಿಐ ಸೇರಿ ಒಟ್ಟು 1713 ಐಟಿಐಗಳಲ್ಲಿ ಪ್ರತಿ ವರ್ಷ 1.8 ಲಕ್ಷ ಅಭ್ಯರ್ಥಿಗಳು ತರಬೇತಿ ಪಡೆಯುತ್ತಾರೆ. ರಾಜ್ಯದ 150 ಐಟಿಐಗಳನ್ನು ಉನ್ನತೀಕರಿಸುವ ಮೂಲಕ ಈ ಸಂಸ್ಥೆಗಳನ್ನು ಪ್ರಮುಖ ತರಬೇತಿ ಕೇಂದ್ರಗಳನ್ನಾಗಿ ರೂಪಿಸಲಾಗುವುದು. ಇಲ್ಲಿ ನೀಡಲಾಗುವ ವಿಶೇಷ ತರಬೇತಿಗಳ ಅನುಕೂಲವನ್ನು ಇತರ ಐಟಿಐ, ಪಾಲಿಟೆಕ್ನಿಕ್ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳೂ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗುತ್ತಿದೆ.

ಸರ್ಕಾರ ಹಾಗೂ ಕೈಗಾರಿಕೆಗಳ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿರುವ ಮಹತ್ವಾಕಾಂಕ್ಷೆಯ ಕಾರ್ಯಕ್ರಮ ಇದಾಗಿದ್ದು, ದೇಶದಲ್ಲಿಯೇ ಮೊದಲ ಬಾರಿಗೆ ಇಂತಹ ಉಪಕ್ರಮ ಕೈಗೊಳ್ಳಲಾಗಿದೆ.

ಒಪ್ಪಂದದ ಮುಖ್ಯಾಂಶ

*ಇದು 10 ವರ್ಷ 9 ತಿಂಗಳ ಒಪ್ಪಂದವಾಗಿದ್ದು, ಈ ಅವಧಿಯಲ್ಲಿ ಟಾಟಾ ಟೆಕ್ನಾಲಜೀಸ್ ಸಂಸ್ಥೆಯು ಈ ಐಟಿಐಗಳಲ್ಲಿ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಒದಗಿಸುವ ನಿಟ್ಟಿನಲ್ಲಿ, ಪ್ರಸ್ತುತ ಕೈಗಾರಿಕೆಯಲ್ಲಿ ಬೇಡಿಕೆಯಲ್ಲಿರುವ ಕೌಶಲ್ಯಗಳ ತರಬೇತಿ ನೀಡಲಿದೆ.

*ಕರ್ನಾಟಕದ ಐಟಿಐ ಗಳು ಜಾಗತಿಕ ಮಟ್ಟದ ಕೌಶಲ್ಯ ತರಬೇತಿ ಕೇಂದ್ರಗಳಾಗಿ ಅಭಿವೃದ್ಧಿ ಹೊಂದಲು ಈ ಯೋಜನೆ ಸಹಕಾರಿಯಾಗಲಿದೆ.

*ಟಾಟಾ ಟೆಕ್ನಾಲಜೀಸ್ ಕಂಪೆನಿಯು ತರಬೇತಿ, ಮಾರ್ಗದರ್ಶನ ಹಾಗೂ ಹೆಚ್ಚಿನ ಉದ್ಯೋಗಾವಕಾಶ ಸೃಷ್ಟಿಸಲು ಟಿಸಿಪಿಸಿ (ಟ್ರೇನಿಂಗ್, ಕೌನ್ಸೆಲಿಂಗ್ ಅಂಡ್ ಪ್ಲೇಸ್ ಮೆಂಟ್ ಸೆಲ್)ಗಳನ್ನು ಬಲಪಡಿಸುವುದು, ಐಟಿಐಗಳಲ್ಲಿ ಹೊಸ ಯಂತ್ರೋಪಕರಣಗಳು ಮತ್ತು ತಂತ್ರಜ್ಞಾನಗಳ ಅಳವಡಿಕೆಯ ಮೂಲಕ ಪ್ರಯೋಗಾಲಯಗಳನ್ನು ಉನ್ನತೀಕರಿಸುವುದು ಹಾಗೂ ಕೈಗಾರಿಕೆಯ ಸ್ಥಿತ್ಯಂತರಗಳಿಗೆ ತಕ್ಕಂತೆ ಅಧ್ಯಯನ ವಿಷಯಗಳನ್ನು ರೂಪಿಸಲು ಕ್ರಮ ವಹಿಸಲಿದೆ.

*ಈ ಕಾರ್ಯಕ್ರಮದಡಿ ವಿದ್ಯುತ್ ಚಾಲಿತ ವಾಹನಗಳು, ಕೃಷಿ ಯಂತ್ರೋಪಕರಣಗಳು, ಏರೋಸ್ಪೇಸ್ ಮತ್ತು ರಕ್ಷಣಾ ಉಪಕರಣಗಳು, ತೋಟಗಾರಿಕೆ ಮತ್ತು ಸ್ಮಾರ್ಟ್ ಸಿಟಿ ಹಾಗೂ ಇತರ ವಲಯಗಳಲ್ಲಿ ತರಬೇತಿಗೆ ಆದ್ಯತೆ ನೀಡಲಾಗುವುದು.

*ಟಾಟಾ ಸಂಸ್ಥೆ ಹಾಗೂ ಇತರ ಸಹಭಾಗೀ ಕೈಗಾರಿಕೆಗಳಲ್ಲಿ ನಿರ್ವಹಿಸುತ್ತಿರುವ 300 ತರಬೇತಿದಾರರು ಈ 150 ಐಟಿಐಗಳಲ್ಲಿ ತರಬೇತಿ ನೀಡಲಿದ್ದಾರೆ. ಅಲ್ಲದೆ ರಾಜ್ಯದ ಎಲ್ಲ ಸರ್ಕಾರಿ ಹಾಗೂ ಸರ್ಕಾರದಿಂದ ಮಾನ್ಯತೆ ಪಡೆದ ಐಟಿಐಗಳಲ್ಲಿ ಆನ್ ಲೈನ್ ತರಬೇತಿ ನೀಡಲಾಗುವುದು.

*ಮೊದಲ ಹಂತದಲ್ಲಿ ಪೀಣ್ಯ, ಹೊಸೂರು ರಸ್ತೆ, ಬಳ್ಳಾರಿ, ಮೈಸೂರು, ದಾಸ್ತಿಕೊಪ್ಪ ಹಾಗೂ ಶಿಕಾರಿಪುರದ ಸರ್ಕಾರಿ ಐಟಿಐಗಳ ಉನ್ನತೀಕರಣ ಕೈಗೊಳ್ಳಲಾಗುವುದು.

ಸಮಾರಂಭದಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ, ಟಾಟಾ ಟೆಕ್ನಾಲಜೀಸ್  ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಓ ವಾರನ್ ಹ್ಯಾರಿಸ್,  ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತ ಡಾ. ಕೆ.ವಿ. ತ್ರಿಲೋಕ್ ಚಂದ್ರ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Tags: itijobskarnatakatata technologies
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ನವೆಂಬರ್ 16ರಿಂದ ಶಬರಿಮಲೆ ಮಂಡಲೋತ್ಸವ; ಕೋವಿಡ್ ನೆಗೆಟೀವ್ ಪತ್ರ ಇದ್ದರೆ ಮಾತ್ರ ಅಯ್ಯಪ್ಪ ದರ್ಶನ

ಅಯ್ಯಪ್ಪ ಭಕ್ತರಿಗೆ ಸಿಹಿಸುದ್ದಿ; ಸ್ವಾಮಿ ಪ್ರಸಾದವನ್ನು ಅಂಚೆ ಮೂಲಕವೂ ತರಿಸಿಕೊಳ್ಳಬಹುದು

Leave a Reply Cancel reply

Your email address will not be published. Required fields are marked *

Recommended

ಕನ್ನಡ ಪತ್ರಿಕಾ ದಿನಾಚರಣೆ ಬಂದಿದ್ದು ಹೇಗೆ ಗೊತ್ತ?

ಕನ್ನಡ ಪತ್ರಿಕಾ ದಿನಾಚರಣೆ ಬಂದಿದ್ದು ಹೇಗೆ ಗೊತ್ತ?

5 years ago
ತಮಿಳುನಾಡಿನ ಕಾವೇರಿ- ವಗೈ- ಗುಂಡಾರ್ ಯೋಜನೆಗೆ ಕೇಂದ್ರದ ಒಪ್ಪಿಗೆ ಬೇಡ ಎಂದ ಸಿಎಂ

ತಮಿಳುನಾಡಿನ ಕಾವೇರಿ- ವಗೈ- ಗುಂಡಾರ್ ಯೋಜನೆಗೆ ಕೇಂದ್ರದ ಒಪ್ಪಿಗೆ ಬೇಡ ಎಂದ ಸಿಎಂ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ