• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ಬಂಗಾಳಕೊಲ್ಲಿಯಲ್ಲಿ ಎದ್ದ ನಿವಾರ್‌ ಚಂಡಮಾರುತ; ಚಿಕ್ಕಬಳ್ಳಾಪುರ, ಕೋಲಾರ ರೈತರ ಆತಂಕ

cknewsnow desk by cknewsnow desk
November 24, 2020
in NEWS IN USE, STATE
Reading Time: 2 mins read
0
ಬಂಗಾಳಕೊಲ್ಲಿಯಲ್ಲಿ ಎದ್ದ ನಿವಾರ್‌ ಚಂಡಮಾರುತ; ಚಿಕ್ಕಬಳ್ಳಾಪುರ, ಕೋಲಾರ ರೈತರ ಆತಂಕ
928
VIEWS
FacebookTwitterWhatsuplinkedinEmail

Lead photo courtesy: Jason Nicholls@jnmet

ಚಿಕ್ಕಬಳ್ಳಾಪುರ/ಕೋಲಾರ: ಈಗಷ್ಟೇ ಬೆಳೆಗಳನ್ನು ಒಪ್ಪ ಮಾಡಿಕೊಂಡು ಕಟಾವು ಮಾಡಿಕೊಂಡು ಜೋಪಾನ ಮಾಡಿಕೊಳ್ಳಬೇಕೆಂದು ಧಾವಂತದಲ್ಲಿರುವ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ರೈತರಿಗೊಂದು ಆತಂಕದ ಸುದ್ದಿ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಚಂಡಮಾರುತ ಎದ್ದಿದ್ದು, ಅದಕ್ಕೆ ʼನಿವಾರ್ʼ ಸೈಕ್ಲೋನ್ ಎಂದು ಹೆಸರಿಡಲಾಗಿದೆ. ಈಗಾಗಲೇ ತಮಿಳುನಾಡಿಗೆ ಅಪ್ಪಳಿಸಿ ಆಂಧ್ರ ಪ್ರದೇಶವನ್ನೂ ಮುಟ್ಟಿದ್ದು, ಇನ್ನು ಕೆಲ ಗಂಟೆಗಳಲ್ಲಿ ಕರ್ನಾಟಕವನ್ನು ತಲುಪಲಿದೆ.

ತಮಿಳುನಾಡಿನ ಬಹುತೇಕ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮುಖ್ಯವಾಗಿ ಚೆನ್ನೈನಲ್ಲೂ ಹೆಚ್ಚಾಗಿದೆ. ಹೀಗಾಗಿ ಆ ರಾಜ್ಯದಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಸಮುದ್ರ ತೀರದ ಪಕ್ಕದಲ್ಲಿ ವಾಸಿಸುವ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ.

ಇನ್ನು ಕರ್ನಾಟಕದಲ್ಲಿ ʼನಿವಾರ್‌ʼ ಮಾರುತದ ಪ್ರಭಾವ ಹೆಚ್ಚಾಗಿರುತ್ತದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸಾಮಾನ್ಯವಾಗಿ ತಮಿಳುನಾಡಿನ ಕಡಲ ತೀರದಲ್ಲಿ ಉಂಟಾಗುವ ಯಾವುದೇ ಮಾರುತವು ಮೊದಲು ಕೋಲಾರ ಜಿಲ್ಲೆಯ ಮುಳಬಾಗಿಲು, ಕೆಜಿಎಫ್‌, ಬಂಗಾರಪೇಟೆ ಪಟ್ಟಣಗಳನ್ನು ಮೊದಲು ಟಚ್‌ ಮಾಡುತ್ತದೆ. ಆಮೇಲೆ ಇಡೀ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ವ್ಯಾಪಿಸಿಕೊಳ್ಳುತ್ತದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಕೊನೆಯ ತಾಲ್ಲೂಕು ಗೌರಿಬಿದನೂರಿಗೂ ಇದರ ತೀತ್ರತೆ ತಪ್ಪುವಂತಿಲ್ಲ.

ಈಗಾಗಲೇ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ದಟ್ಟವಾಗಿ ಮೋಡ ಕವಿದಿದೆ. ಮೊದಲೇ ಚಳಿ ಬಿದ್ದಿದ್ದ ವಾತಾವರಣದಲ್ಲಿ ಸೈಕ್ಲೋನ್‌ ಶೀತವೂ ಸೇರಿ ಜನರು ನಡುಗುವಂತಾಗಿದೆ. ಕೆಲ ದಿನಗಳ ಹಿಂದೆಯಷ್ಟೇ ಮಳೆಯಿಂದ ಕಂಗೆಟ್ಟಿದ್ದ ಬೆಂಗಳೂರಿನಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ. ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸುರಿಯುವ ನಿರೀಕ್ಷೆ ಇದೆ. ಜತೆಗೆ; ಮಂಡ್ಯ, ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲೂ ಮಳೆಯಾಗಲಿದ್ದು, ಈಗಾಗಲೇ ರಾಜ್ಯದ ಈ ಜಿಲ್ಲೆಗಳಲ್ಲಿ ಯೆಲ್ಲೋ ಆಲರ್ಟ್​ ಘೋಷಿಸಲಾಗಿದೆ.

ಎರಡು ಜಿಲ್ಲೆಗಳಲ್ಲಿ ಆತಂಕ

ದೀಪಾವಳಿ ಹೊತ್ತಿನಲ್ಲೇ ಮಳೆ ಅಥವಾ ಯಾವುದಾದರೊಂದು ಸೈಕ್ಲೋನ್‌ ಬರುವುದು ರೂಢಿ. ಆದರೆ, ರೈತರಿಗೆ ಬೆಳೆಗಳನ್ನು ಕಟಾವು ಮಾಡಿಕೊಳ್ಳಲು ಇನ್ನೂ ಆಗಿಲ್ಲ. ಈ ವರ್ಷ ಭಿತ್ತನೆ ಕೆಲಸವೇ ತಡವಾದ ಹಿನ್ನೆಲೆಯಲ್ಲಿ ಕಟಾವು ಕೂಡ ತಡವಾಗಿದೆ. ವಾರದ ಹಿಂದೆ ಸುರಿದ ಮಳೆಯಿಂದ ಈ ಜಿಲ್ಲೆಗಳಲ್ಲಿ ಬೆಳೆದು ನಿಂತಿರುವ ರಾಗಿ, ಭತ್ತ ಸೇರಿದಂತೆ ಟೊಮ್ಯಾಟೋ, ಮತ್ತಿತರೆ ತರಕಾರಿ ಬೆಳೆಗಳಿಗೆ ಹಾನಿಯಾಗಿತ್ತು. ಅನೇಕ ಕಡೆ ರಾಗಿ, ಭತ್ತ ಬಾಗಿ ತೆನೆಗಳು ನೆಲದ ಮೇಲೆ ಮಲಗಿದ್ದವು. ಇನ್ನು, ಮತ್ತೆ ಮೂರು-ನಾಲ್ಕು ದಿನಗಳ ಚಂಡಮಾರುತದ ಮಳೆ ಅಪ್ಪಳಿಸಿದರೆ ಬೆಳೆನಷ್ಟ ಮಾತ್ರವಲ್ಲದೆ, ಮನೆಗೆ ಅರ್ಧ ಬೆಳೆ ಬರುವುದು ಕೂಡ ಕಷ್ಟ ಎನ್ನುವುದು ರೈತರ ಆತಂಕ.

Cyclonic Storm #NIVAR over southwest Bay of Bengal remained practically stationary about 410 km eastsoutheast of #Puducherry and 450 km southeast of Chennai. It is very likely to intensify further into a severe cyclonic storm during next 24 hours. #AIRVideo:A C Mohan pic.twitter.com/2kifrdW9eu

— All India Radio News (@airnewsalerts) November 24, 2020
ಎಲ್ಲಿ ವಾಯುಭಾರ ಕುಸಿತ?

ಬಂಗಾಳ ಕೊಲ್ಲಿಯ ನೈರುತ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರ ತೀವ್ರ ಪ್ರಭಾವ ಶ್ರೀಲಂಕಾಕ್ಕೆ ತಟ್ಟಿದ್ದು, ಅಲ್ಲಿ ವಿಪರೀತ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಅದೇ ರೀತಿ ತಮಿಳುನಾಡಿನಲ್ಲೂ ನಿವಾರ್‌ ಅಬ್ಬರ ಹೆಚ್ಚಾಗಿದ್ದು, ಮೀನುಗಾರಿಕೆ, ಕೃಷಿ ಚಟುವಟಿಕೆ ಬಂದ್‌ ಆಗಿದೆ. ಬಸ್‌, ರೈಲು, ವಿಮಾನ ಸಂಚಾರದಲ್ಲಿ ಏರುಪೇರಾಗಿದೆ. ಆಂಧ್ರ ಪ್ರದೇಶದಲ್ಲಿ ಮಳೆ ಶುರುವಾಗಿದ್ದು, ಜಗತ್ಪ್ರಸಿದ್ಧ ಯಾತ್ರಾಸ್ಥಳಗಳಾದ ತಿರುಮಲ, ಶ್ರೀಕಾಳಹಸ್ತಿಯಲ್ಲಿ ಮಳೆ ಆರಂಭವಾಗಿದೆ. ಮುಖ್ಯವಾಗಿ ತಮಿಳುನಾಡಿಗೆ ಹೊಂದಿಕೊಂಡಿರುವ ಚಿತ್ತೂರು ಮತ್ತಿತರೆ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮುಂದಿನ ೧೫ರಿಂದ ೨೦ ಗಂಟೆಗಳಲ್ಲಿ ವರ್ಷಧಾರೆ ವಿಸ್ತೃತವಾಗಿ ವ್ಯಾಪಿಸುವ ಸಾಧ್ಯತೆ ಇದೆ.

courtesy: Infant Jacop@Agnelijacop

#Trailer_of_Nivar

Its just a trailer. Main picture release tomorrow.#Nivar #CycloneNivar pic.twitter.com/82Yn5AleEr

— Infant Jacop (@Agnelijacop) November 24, 2020

D over SW and adjoining SE BOB moved WNWwards lay centred over the same region at 1130 hrs IST of today.Very likely to intensify into a CS during next 24 hours and cross Tamil Nadu and Puducherry coasts between Karaikal and Mamallapuram around 25th November 2020 afternoon as SCS pic.twitter.com/t5PHCauCYj

— India Meteorological Department (@Indiametdept) November 23, 2020
ರಾಜ್ಯದಲ್ಲಿ ಏಲ್ಲೆಲ್ಲಿ ಮಳೆ?

ಈ ಚಂಡಮಾರುತದ ಪ್ರಭಾವ ರಾಜ್ಯದ ಮೇಲೆ ತಪ್ಪದೇ ಇರುತ್ತದೆ. ಈಗಾಗಲೇ ವಾತಾವರಣದಲ್ಲಿ ಮತ್ತಷ್ಟು ತಂಪು ಉಂಟಾಗಿದೆ. ಇನ್ನೆರಡು ದಿನಗಳ ಕಾಲ ಮಳೆಯಾಗಲಿದೆ. ಮುಖ್ಯವಾಗಿ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಯೆಲ್ಲೋ ಆಲರ್ಟ್​ ಘೋಷಣೆ ಮಾಡಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ಅವರು ಮಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಮಾರುತದ ವೇಗವು ಮಂಗಳವಾರ ಬೆಂಗ್ಗೆ ಪ್ರತಿ ಗಂಟೆಗೆ ಸುಮಾರು 65 ಕಿ.ಮೀ ವೇಗದಲ್ಲಿತ್ತು. ಅದರ ವೇಗ 75 ಕಿ.ಮೀ.ಗೆ ಹೆಚ್ಚಬಹುದು. ಬುಧವಾರದ ಹೊತ್ತಿಗೆ ತಮಿಳುನಾಡಿನ ಉತ್ತರ ಭಾಗ ಹಾಗೂ ಪುದುಚೇರಿಯ ವ್ಯಾಪ್ತಿಯಲ್ಲಿ ಈ ವೇಗ ಪ್ರತಿ ಗಂಟೆಗೆ 100ರಿಂದ 120 ಕಿ.ಮೀ.ವರೆಗೂ ಇರಬಹುದು ಎಂದು ಚೆನ್ನೈ ಹವಾಮಾನ ಇಲಾಕೆಯ ಮೂಲಗಳನ್ನು ಪ್ರಸ್ತಾಪಿಸಿ ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.

ತರಕಾರಿ, ಹೂವಿಗೆ ನಷ್ಟ

ನಿವಾರ್‌ ಚಂಡಮಾರುತದಿಂದ ಕೋಲಾರ, ಚಿಕ್ಕಬಳ್ಳಾಪುರದಿಂದ ತಮಿಳುನಾಡು ಕಡೆ ಹೋಗುತ್ತಿದ್ದ ತರಕಾರಿ ಮತ್ತಿತರೆ ಪದಾರ್ಥಗಂ ಸಾಗಣೆಯಲ್ಲಿ ವ್ಯತ್ಯಯ ಉಂಟಾಗಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಬೆಳೆಯಲಾಗುತ್ತಿರುವ ಹೂವು, ಟೊಮ್ಯಾಟೋ, ಹುರುಳಿಕಾಯಿ, ಹೀರೇಕಾಯಿ ಮತ್ತಿತರೆ ತರಕಾರಿಗಳ ಬೆಲೆ ಕಡಿಮೆಯಾಗಿದೆ. ಈ ಚಂಡಮಾರುತದ ಪ್ರಭಾವ ಒಂದು ವಾರವಾದರೂ ಮಾರುಕಟ್ಟೆಗಳ ಮೇಲೆ ಇರಲಿದ್ದು, ರೈತರು ಕಂಗಾಲಾಗಿದ್ದಾರೆ.

Tags: chikkaballapurcyclone nivarkolarnivartamilnadu
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಗುಡಿಬಂಡೆ ಅಮಾನಿಭೈರ ಸಾಗರ ತಪೋವನದಲ್ಲಿ ಮತ್ತೆ ನೆಲೆನಿಂತ ಶ್ರೀ ವೈದ್ಯನಾಥೇಶ್ವರ

ಗುಡಿಬಂಡೆ ಅಮಾನಿಭೈರ ಸಾಗರ ತಪೋವನದಲ್ಲಿ ಮತ್ತೆ ನೆಲೆನಿಂತ ಶ್ರೀ ವೈದ್ಯನಾಥೇಶ್ವರ

Leave a Reply Cancel reply

Your email address will not be published. Required fields are marked *

Recommended

ಸರಕಾರ ಕೊಟ್ಟ 10 ಕೋಟಿಯಲ್ಲೇ ದಸರಾ ಉತ್ಸವ ಮುಗಿಸಿದ ಸಚಿವ ಸೋಮಶೇಖರ್;‌ ನ.1ರಂದು ಲೆಕ್ಕಪತ್ರ ಬಿಡುಗಡೆ

ಏಪ್ರಿಲ್‌ 10 ರಿಂದ 20ರವೆರೆಗೆ ಮೈಸೂರು ಪ್ರವಾಸಿ ತಾಣಗಳ ಭೇಟಿಗೆ ಕೊರೊನಾ ನೆಗೆಟಿವ್ ವರದಿ ಕಡ್ಡಾಯ; ಬೆಂಗಳೂರಿನಿಂದ ಬಂದರೂ ಅಷ್ಟೇ ಎಂದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

4 years ago
ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಹೈಕೋರ್ಟ್ ಛೀಮಾರಿ

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಹೈಕೋರ್ಟ್ ಛೀಮಾರಿ

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ