• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಇರವು ಸಂಪತ್ತಲ್ಲ, ಇರವಿನ ಅರಿವೇ ಸಂಪತ್ತು ಎಂಬ ಸತ್ಯದ ಅರಿವು ಬಿಟ್ಟು ಹೋದರು ಮಹಾನ್‌ ಚಿಂತಕ ಡಾ.ಡಾ. ಬನ್ನಂಜೆ ಗೋವಿಂದಾಚಾರ್ಯರು

P K Channakrishna by P K Channakrishna
December 13, 2020
in STATE
Reading Time: 1 min read
0
ಇರವು ಸಂಪತ್ತಲ್ಲ, ಇರವಿನ ಅರಿವೇ ಸಂಪತ್ತು ಎಂಬ ಸತ್ಯದ ಅರಿವು ಬಿಟ್ಟು ಹೋದರು ಮಹಾನ್‌ ಚಿಂತಕ ಡಾ.ಡಾ. ಬನ್ನಂಜೆ ಗೋವಿಂದಾಚಾರ್ಯರು
1k
VIEWS
FacebookTwitterWhatsuplinkedinEmail

ಬೆಂಗಳೂರು: ನಾಡಿಗೆ, ಜಗತ್ತಿಗೆ ತಮ್ಮ ಸತ್ಸಂಗ ಮತ್ತು ಪ್ರವಚನಗಳ ಮೂಲಕವೇ ಬೆಳಕನ್ನು ತೋರುತ್ತಿದ್ದ ಡಾ. ಬನ್ನಂಜೆ ಗೋವಿಂದಾಚಾರ್ಯರು ಇನ್ನಿಲ್ಲ.

ವಿದ್ವಾಂಸ, ವಾಗ್ಮಿಯೂ ಆಗಿದ್ದ ಆಚಾರ್ಯರು ಇನ್ನಿಲ್ಲ ಎಂಬ ಸುದ್ದಿ ಅವರ ಅನುಯಾಯಿಗಳು, ಶಿಷ್ಯಕೋಟಿಯಲ್ಲಿ ಅಗಾಧ ಶೋಕವನ್ನು ಉಂಟು ಮಾಡಿದೆ. ಪದ್ಮಶ್ರೀ ಗೌರವಕ್ಕೆ ಪಾತ್ರರಾಗಿದ್ದ ಅವರು ಅಧ್ಯಾತ್ಮ ಚಿಂತನೆಗಳ ಪ್ರಖರ ವಾಗ್ಮಿ ಆಗಿದ್ದರಲ್ಲದೆ, ತಮ್ಮ ಸತ್ಸಂಗಗಳ ಮೂಲಕ ಲಕ್ಷಾಂತರ ಜನರನ್ನು ಸನ್ಮಾರ್ಗದತ್ತ ಹೊರಳಿಸುವಲ್ಲಿ ಯಶಸ್ವಿಯಾಗಿದ್ದವರು.

ಬನ್ನಂಜೆ ಅವರು ಭಾನುವಾರ ಬೆಳಗ್ಗೆ 11 ಗಂಟೆ ಹೊತ್ತಿಗೆ ಉಡುಪಿ ಜಿಲ್ಲೆಯ ಅಂಬಲಪಾಡಿಯಲ್ಲಿರುವ ತಮ್ಮ ಮನೆಯಲ್ಲಿಯೇ ನಿಧನರಾಗಿದ್ದಾರೆ. ಅವರಿಗೆ 84 ವರ್ಷವಾಗಿತ್ತು. ನಾಲ್ವರು ಪುತ್ರಿಯರನ್ನು, ಅಪಾರ ಶಿಷ್ಯಕೋಟಿಯನ್ನು ಅವರು ಅಗಲಿದ್ದಾರೆ.

ʼಇರವು ಸಂಪತ್ತಲ್ಲ, ಇರವಿನ ಅರಿವು ಸಂಪತ್ತುʼ ಎಂದು ಜನತೆಗೆ ಬೋಧಿಸಿದ್ದ ಬನ್ನಂಜೆ ಅವರು, ತಾನು ಯಾರು? ಯಾತಕ್ಕಾಗಿ ಈ ಭೂಮಿಗೆ ಬಂದದ್ದು ಎಂಬ ಅರಿವು ಸದಾ ಇರಬೇಕು. ಅಂಥ ಅರಿವಿನ ಲೋಕದಲ್ಲಿ ನಾವೆಲ್ಲರೂ ಇರುವಂತಾಗಬೇಕು ಎಂದು ಎಂದು ಸದಾ ಹೇಳುತ್ತಿದ್ದರು.

ಮಾಧ್ವ ತತ್ತ್ವವನ್ನು ಅತ್ಯಂತ ಸರಳವಾಗಿ ಜನಸಾಮಾನ್ಯರಿಗೂ ದಾಟಿಸುತ್ತಿದ್ದ ಬನ್ನಂಜೆ, ಕ್ಲಿಷ್ಟ ಜಿಜ್ಞಾಸೆಗಳನ್ನು ನಿರಾಯಾಸವಾಗಿ ಬಿಡಿಸಿ ಹೇಳುತ್ತಿದ್ದರು. ದೈವ, ನಂಬಿಕೆ, ಆಚರಣೆ, ನಂಬಿಕೆ ಇತ್ಯಾದಿಗಳ ಬಗ್ಗೆ ಜನರಲ್ಲಿ ಮೂಡುತ್ತಿದ್ದ ನೂರಾರು ಬಗ್ಗೆ ಪ್ರಶ್ನಾವಳಿಗಳನ್ನು ಅವರು ಬಿಡಿಸಿ ಹೇಳಿ ಸುಲಭವಾಗಿ ಅರ್ಥ ಮಾಡಿಸುತ್ತಿದ್ದರು.

ಉಡುಪಿಯವರು, ಜಗತ್ತಿಗೆ ಸಂದವರು

ಉಡುಪಿ ಜಿಲ್ಲೆಯ ಅಂಬಲಪಾಡಿಯಲ್ಲಿ 1936ರಲ್ಲಿ ಜನಿಸಿದ್ದ ಬನ್ನಂಜೆ ಅವರು, ಮಾಧ್ವ ತತ್ತ್ವಸಾರದ ಅಪರೂಪದ ಮಾಣಿಕ್ಯ. ಅಪಾರ ಪಾಂಡಿತ್ಯ ಅವರದ್ದಾಗಿತ್ತು. ಕನ್ನಡ, ಸಂಸ್ಕೃತ ಸೇರಿ ಹಲವು ಭಾಷೆಗಳಲ್ಲಿ ಅವರಿಗೆ ಸಾಗರದಷ್ಟು ಜ್ಞಾನವಿತ್ತು ಎಂದು ಹೇಳುತ್ತಾರೆ ಅವರನ್ನು ನಿಕಟವಾಗಿ ಬಲ್ಲವರು. ವೇದ, ಉಪನಿಷತ್, ಶಟ ರುದ್ರಿಯಾ, ಬ್ರಹ್ಮಸೂತ್ರ ಭಾಷ್ಯ, ಗೀತಭಾಷ್ಯ ಮುಂತಾದವುಗಳನ್ನು ಆಳವಾಗಿ ಅಧ್ಯಯನ ಮಾಡಿಕೊಂಡಿದ್ದರು. ಹೀಗಾಗಿಯೇ ಅವರ ಸತ್ಸಂಗಗಳೆಂದರೆ ಜನರಿಗೆ ಬಹಳಷ್ಟು ಇಷ್ಟವಾಗುತ್ತಿದ್ದವು. ತಮಗೆ ಗೊತ್ತಿಲ್ಲದ ಅದೆಷ್ಟೋ ವಿಷಯಗಳು ಆಚಾರ್ಯರಿಂದ ತಿಳಿಯುತ್ತವೆ ಎಂದು ನಂಬಿದ್ದರು. ಜನರ ಈ ನಂಬಿಕೆ ಎಂದೂ ಹುಸಿಯಾಗಿರಲಿಲ್ಲ. ರಾಜ್ಜ, ದೇಶ ಮತ್ತು ಜಗನಾದ್ಯಂತ ಅವರ ಮಾತುಗಳು ಬೆಳಕು ಚೆಲ್ಲಿದ್ದವು.

ಜ್ಞಾನದ ಶಿಖರ, ವಿಚಾರ ಪ್ರಖರ

ಅಧ್ಯಯನ, ಬರವಣಿಗೆ ಹಾಗೂ ವಿಚಾರ ಮಂಡನೆ, ಬನ್ನಂಜೆ ಅವರ ಸಾಧನೆಗಳು. ಅವರ ವಿಚಾರಗಳು ಅದೆಷ್ಟು ಪ್ರಖರವೋ ಅವರ ಬರವಣಿಗೆಗಳು ಕೂಡ ಅಷ್ಟೇ ಮೌಲಿಯುತವಾಗಿವೆ. ರಾಮಾಯಣ ಮತ್ತು ಮಹಾಭಾರತದ ಪ್ರತಿ ಮಜಲಿನ ಬಗ್ಗೆಯೂ ಅವರು ಸರಿಗಟ್ಟಲಾಗದ ಜ್ಞಾನಕೋಶವಾಗಿದ್ದರು. ಜತೆಗೆ; ವೇದ ಭಾಷ್ಯ, ಉಪನಿಷತ್ ಭಾಷ್ಯ, ಮಹಾಭಾರತ, ಪುರಾಣ ಇತ್ಯಾದಿಗಳ ಕುರಿತಂತೆ ಅಪಾರ ಅಧ್ಯಯನ ಮಾಡಿದ್ದರು. ʼಸಂಸ್ಕೃತ ವ್ಯಾಖ್ಯಾಯನʼವು ಬನ್ನಂಜೆ ಅವರು ಸೃಷ್ಟಿಸಿದ ನಾಲ್ಕು ಸಾವಿರ ಪುಟಗಳಿಗೂ ಮಿಕ್ಕ ಪರಮಶ್ರೇಷ್ಠ ಬರಹ, ಹಾಗೆಯೇ, 150ಕ್ಕೂ ಕೃತಿಗಳನ್ನು ಅವರು ರಚನೆ ಮಾಡಿದ್ದಾರೆ.

ಅನೇಕ ಸಂಸ್ಕೃತ ಕೃತಿಗಳನ್ನು ಕನ್ನಡಕ್ಕೆ ಅನುವಾದ ಮಾಡಿದ್ದಾರೆ. ಈ ಪೈಕಿ, ಬಾಣಭಟ್ಟನ ಕಾದಂಬರಿ,
ಕಾಳೀದಾಸನ ಶಾಕುಂತಲಾ, ಶೂದ್ರಕನ ʼಮೃಚ್ಛಕಟಿಕʼ ಮುಖ್ಯವಾದವು.

Tags: Bannanje Govindacharyakarnataka
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಸಾರಿಗೆ ನೌಕರರನ್ನು ಸರಕಾರಿ ನೌಕರರನ್ನಾಗಿ ಮಾಡಲು ಸಾಧ್ಯವೇ ಇಲ್ಲ, ಸದ್ಯಕ್ಕೆ ಎಸ್ಮಾ ಜಾರಿಯೂ ಮಾಡಲ್ಲ ಎಂದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ಸಾರಿಗೆ ನೌಕರರನ್ನು ಸರಕಾರಿ ನೌಕರರನ್ನಾಗಿ ಮಾಡಲು ಸಾಧ್ಯವೇ ಇಲ್ಲ, ಸದ್ಯಕ್ಕೆ ಎಸ್ಮಾ ಜಾರಿಯೂ ಮಾಡಲ್ಲ ಎಂದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

Leave a Reply Cancel reply

Your email address will not be published. Required fields are marked *

Recommended

ನಂದಿ ಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ, 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ, ರೋಪ್ ವೇ ಕನಸು ನನಸಾಗಲಿದೆ ಎಂದ ಸಚಿವ ಡಾ.ಕೆ.ಸುಧಾಕರ್

ನಂದಿ ಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ, 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ, ರೋಪ್ ವೇ ಕನಸು ನನಸಾಗಲಿದೆ ಎಂದ ಸಚಿವ ಡಾ.ಕೆ.ಸುಧಾಕರ್

5 years ago
ಮೋದಿ ಸಂಪುಟದ ಸಂಭಾವ್ಯ ಸಚಿವರ ಪಟ್ಟಿ

ಪರೀಕ್ಷಾ ಪೇ ಚರ್ಚಾದ 5ನೇ ಆವೃತ್ತಿಯಲ್ಲಿ ಮೋದಿ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ