• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home KOLAR

ಕೋಲಾರದ ವಿಸ್ಟ್ರಾನ್‌ ಕಂಪನಿ ಗಲಾಟೆ; 7,000 ಕಾರ್ಮಿಕರ ಮೇಲೆ ಕೇಸ್‌, ಆದರೆ ಎಫ್‌ಐಆರ್‌ನಲ್ಲಿ ಒಬ್ಬರ ಹೆಸರೂ ಇಲ್ಲ

cknewsnow desk by cknewsnow desk
December 18, 2020
in KOLAR, STATE
Reading Time: 1 min read
0
ಕೋಲಾರದ ವಿಸ್ಟ್ರಾನ್‌ ಕಂಪನಿ ಗಲಾಟೆ; 7,000 ಕಾರ್ಮಿಕರ ಮೇಲೆ ಕೇಸ್‌, ಆದರೆ ಎಫ್‌ಐಆರ್‌ನಲ್ಲಿ ಒಬ್ಬರ ಹೆಸರೂ ಇಲ್ಲ
920
VIEWS
FacebookTwitterWhatsuplinkedinEmail

ಇಡೀ ಘಟನೆಗೆ ಕಂಪನಿಯ ಆಡಳಿತ ಮಂಡಳಿ, ಕಾರ್ಮಿಕ ಇಲಾಖೆಯೇ ಹೊಣೆ: ಜಿ.ವಿ.ಶ್ರೀರಾಮರೆಡ್ಡಿ ಆರೋಪ

ಕೋಲಾರ: ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ತೈವಾನ್‌ ಮೂಲದ ವಿಸ್ಟ್ರಾನ್‌ ಕಂಪನಿಯಲ್ಲಿ ಕಾರ್ಮಿಕರು ಸಿಡಿದೇಳಲು ಕಂಪನಿ ಮತ್ತು ಕಾರ್ಮಿಕ ಇಲಾಖೆಯೇ ನೇರ ಹೊಣೆ ಎಂದು ಮಾಜಿ ಶಾಸಕ ಹಾಗೂ ಪ್ರಜಾ ಸಂಘರ್ಷ ಸಮಿತಿ ಸಂಚಾಲಕ ಜಿ.ವಿ.ಶ್ರೀರಾಮರೆಡ್ಡಿ ಆರೋಪ ಮಾಡಿದ್ದಾರೆ.

ಕೋಲಾರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು; ಕಂಪನಿಯವರು ಹೆಚ್ಚುವರಿ ಕೆಲಸ ಮಾಡಿಸಿಕೊಂಡು ಓಟಿ ಕೊಡುತ್ತಿಲ್ಲ. ಸರಿಯಾಗಿ ವೇತನ ಪಾವತಿ ಮಾಡುತ್ತಿಲ್ಲ. ಕಾರ್ಮಿಕರನ್ನು ದಿನಕ್ಕೆ ಹದಿನಾಲ್ಕು ಗಂಟೆ ಕೆಲಸ ಮಾಡಿಸಿಕೊಂಡು ಹಾಗೂ ಮಹಿಳೆಯರನ್ನು ರಾತ್ರಿ ಪಾಳಿಯಲ್ಲೂ ದುಡಿಸಿಕೊಂಡು ಅನ್ಯಾಯ ಎಸಗಲಾಗಿದೆ. ಕಂಪನಿಯ ಮಾನವ ಸಂಪನ್ಮೂಲ ವಿಭಾಗವು ಕಾನೂನಿನ ಎಲ್ಲ ಅಂಶಗಳನ್ನು ಗಾಳಿಗೆ ತೂರಿದೆ. ಕಾರ್ಮಿಕ ಇಲಾಖೆಯ ವೈಫಲ್ಯವಂತೂ ಎದ್ದು ಕಾಣಿಸುತ್ತಿದೆ ಎಂದು ದೂರಿದರು.

ಇಡೀ ಘಟನೆಯ ಬಗ್ಗೆ ಶ್ರೀರಾಮರೆಡ್ಡಿ ಅವರು ಮಾಡಿದ ಆರೋಪಗಳಿವು;

  • ಕಾರ್ಮಿಕರು ತಮ್ಮ ವಿರುದ್ಧ ನಿರಂತರವಾಗಿ ನಡೆಯುತ್ತಿದ್ದ ದಬ್ಬಾಳಿಕೆ ಹಾಗೂ ಶೋಷಣೆಯನ್ನು ಸಹಿಸಿಕೊಳ್ಳಲಾಗದೇ ಸಿಡಿದೆದ್ದಾರೆ. ಇದಕ್ಕೆ ನೇರ ಹೊಣೆ ಹಾಗೂ ಮೂಲ ಕಾರಣ ಆಡಳಿತ ಮಂಡಳಿಯೇ. ಹಾಗೆಯೇ ಕಾರ್ಮಿಕ ಇಲಾಖೆ ವಿಫಲತೆಯೂ ಕಣ್ಣಿಗೆ ಕಟ್ಟಿದಂತೆ ಕಾಣುತ್ತಿದೆ. ಆದ್ದರಿಂದ ಕಾರ್ಮಿಕರನ್ನು ಬಲಿಪಶುಗಳನ್ನಾಗಿ ಮಾಡುವುದು ಸರಿಯಲ್ಲ. ಇದನ್ನು ಒಪ್ಪಲು ಸಾಧ್ಯವಿಲ್ಲ.
  • 7,000 ಕಾರ್ಮಿಕರ ಮೇಲೆ ಎಫ್‌ಐಆರ್‌ ಹಾಕಲಾಗಿದೆ. ಕೂಡಲೇ ಇದನ್ನು ವಾಪಸ್‌ ಪಡೆಯಬೇಕು. ಈ ಘಟನೆಯ ಒಳಗೆ ನಿಜವಾದ ತಪ್ಪಿತಸ್ಥರು ಯಾರಿದ್ದಾರೆ ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಆರೋಪ ಪಟ್ಟಿಯಲ್ಲಿ 7,000 ಜನ ಅಂತ ಹೇಳಿದ್ದಾರೆ. ಆದರೆ ಅದರಲ್ಲಿ ಒಬ್ಬನ ಹೆಸರೂ ಇಲ್ಲ. ಎ1 ಅಂತ ಇದೆ, ಅಲ್ಲಿಯೂ ಯಾರ ಹೆಸರೂ ಇಲ್ಲ. ಬೀದಿಯಲ್ಲಿ ಯಾರು ಸಿಕ್ಕಿದರೆ ಅವರನ್ನೆಲ್ಲ ಎಳೆದುಕೊಂಡು ಬಂದು ಬಂಧನದಲ್ಲಿ ಇಟ್ಟುಕೊಳ್ಳಲಾಗಿದೆ. ಇದು ಅನ್ಯಾಯದ ಪರಮಾವಧಿ. ತಕ್ಷಣ ಅವರನ್ನೆಲ್ಲ ಬಿಡುಗಡೆ ಮಾಡಬೇಕು.
  • ಕಾರ್ಮಿಕರಿಗೆ ಬಾಕಿ ಇರುವ ವೇತನ, ಓಟಿ ಮೊತ್ತ, ಮತ್ತೆ ಏನೇನು ಬಾಕಿ ಇದೆಯೋ ಅದೆಲ್ಲವನ್ನೂ ಕೂಡಲೇ ಪಾವತಿ ಮಾಡಬೇಕು. ಅವರ ಕುಟುಂಬಗಳ ರಕ್ಷಣೆಗೆ ಕೂಡಲೇ ಕಾರ್ಮಿಕ ಇಲಾಖೆ ಧಾವಿಸಬೇಕು.
  • ಕಂಪನಿ 437 ಕೋಟಿ ರೂ. ನಷ್ಟ ಆಗಿದೆ ಎಂದು ಹೇಳುತ್ತಿದೆಯಲ್ಲ? ಎಂಬ ಪ್ರಶ್ನೆಗೆ, ಹೌದು. ಕಂಪನಿಯವರು ಹೇಳಿದರೆ ಎಲ್ಲರೂ ಒಪ್ಪುತ್ತಾರೆ. ಆದರೆ ಬೇರೆಯವರು ಹೇಳಿದರೆ ಒಪ್ಪುವುದಿಲ್ಲ. ಎಫ್‌ಐಆರ್‌ನಲ್ಲಿಯೇ ಹೇಳಲಾಗಿದೆ, ಎಚ್‌ಆರ್‌ ವಿಭಾಗದ ಮೇಲೆ ಮೊದಲು ದಾಳಿ ನಡೆಯಿತು ಎಂದು. ಆ ವಿಭಾಗದಲ್ಲಿ ಏನೇನು ನಷ್ಟ ಆಗಿರುತ್ತೆ? ಅಲ್ಲೇನು ದೊಡ್ಡ ದೊಡ್ಡ ಯಂತ್ರಗಳು ಇರುತ್ತವಾ? ಅಲ್ಲಿ ನೂರಾರು ಕೋಟಿ ಬೆಲೆ ಬಾಳುವ ಆಸ್ತಿ ಏನಿರುತ್ತದೆ?
  • ವಿಸ್ಟ್ರಾನ್‌ ಕಂಪನಿಯಲ್ಲಿ ಕಾರ್ಮಿಕರು ಸಿಡಿದೇಳಲು ಕೇಂದ್ರ ಮತ್ತು ರಾಜ್ಯ ಸರಕಾರಗಳು ಅನುಸರಿಸುತ್ತಿರುವ ಕಾರ್ಮಿಕ ವಿರೋಧಿ ನೀತಿಗಳೇ ಕಾರಣ. ಇವೆರಡೂ ಸರಕಾರಗಳು ಕಾರ್ಮಿಕರಿಗೆ ರಕ್ಷಣೆ ಕೊಡುವಂಥ ಒಂದೇಒಂದು ಕಾನೂನನ್ನೂ ಮಾಡಿಲ್ಲ. ನರೇಂದ್ರ ಮೋದಿ ಹೊಸ ಕಾರ್ಮಿಕ ಕಾನೂನುಗಳನ್ನು ತರುವ ನೆಪದಲ್ಲಿ ಕಾರ್ಮಿಕರು ದನಿ ಎತ್ತುವ ಹಕ್ಕನ್ನೇ ಕಸಿದುಕೊಂಡಿದ್ದಾರೆ.
  • ಪ್ರಧಾನಿಗೆ ಎಲ್ಲೋ ನರಸಾಪುರದಲ್ಲಿರುವ ವಿಸ್ಟ್ರಾನ್‌ ಕಂಪನಿಯ ಬಗ್ಗೆ ಕಾಳಜಿ ವ್ಯಕ್ತಪಡಿಸಲು ಸಾಧ್ಯವಾಗುತ್ತದೆ. ಆದರೆ, ದಿಲ್ಲಿಯ ಅಕ್ಕಪಕ್ಕದಲ್ಲಿಯೇ ಕಳೆದ ಇಪ್ಪತ್ತು ದಿನಗಳಿಂದ ಮೈಕೊರೆಯುವ ಚಳಿಯಲ್ಲಿ ಪ್ರತಿಭಟನೆ ಮಾಡುತ್ತಿರುವ ರೈತರ ಬಗ್ಗೆ ಕಾಳಜಿ ಇಲ್ಲ. ಈ ಮೂಲಕ ಮೋದಿ ಕಾರ್ಪೊರೇಟ್‌ಗಳ ಪರ ಎಂಬುದು ಜಗಜ್ಜಾಹೀರಾಗಿದೆ. ಅದು ಇಲ್ಲಿ ಕಾರ್ಮಿಕರ ಪರ ಅವರ ಕಾಳಜಿ ಇಲ್ಲ. ಅದೇನಿದ್ದರೂ ಕಂಪನಿಯ ಪರ ಮಾತ್ರ.
  • ಪ್ರಧಾನಿ ಯಾರ ಪರ ಇದ್ದಾರೆ ಎಂಬುದಕ್ಕೆ ಮುಚ್ಚುಮರೆ ಏನಿಲ್ಲ. ಕಂಪನಿಗಳಿಗೆ ರಕ್ಷಣೆ ಕೊಡಬೇಕು ಎಂದು ಅವರು ನೇರವಾಗಿಯೇ ಹೇಳುತ್ತಿದ್ದಾರೆ. ಅಂದರೆ ಅರ್ಥ ಏನು? ಕಾರ್ಮಿಕರಿಗೆ ರಕ್ಷಣೆ ಅಲ್ಲ, ಕಂಪನಿಗಳಿಗೆ ರಕ್ಷಣೆ ಕೊಡಬೇಕು. ದುಡಿದು ಸಂಪತ್ತನ್ನು ಸೃಷ್ಟಿ ಮಾಡುವವರಿಗೆ ರಕ್ಷಣೆ ಇಲ್ಲ. ಮಾಲೀಕರು ಮಾತ್ರ ಚೆನ್ನಾಗಿರಬೇಕು. ಇದು ಅವರ ಆಡಳಿತ.
  • ಶ್ರೀರಾಮರೆಡ್ಡಿ ಅವರ ಪತ್ರಿಕಾಗೋಷ್ಠಿಯನ್ನು ಪೂರ್ಣವಾಗಿ ಕೇಳಬೇಕಾದರೆ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ…
https://www.youtube.com/watch?v=nFGb2U_2e60&t=18s
  • ಈ ಸುದ್ದಿಯನ್ನು ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
ಆಪಲ್‌ ಐಫೋನ್-‌12 ತಯಾರಿಸುತ್ತಿದ್ದ ಕೋಲಾರದ ವಿಸ್ಟ್ರಾನ್‌ ಕಂಪನಿಯಲ್ಲಿ ದಂಗೆ ಎದ್ದ 8,000 ಕಾರ್ಮಿಕರು; ವಾಹನಗಳಿಗೆ ಬೆಂಕಿ, ಕಾರ್ಖಾನೆ ಧ್ವಂಸ
  • ಈ ಸುದ್ದಿಯನ್ನು ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
ಕೋಲಾರದ ವಿಸ್ಟ್ರಾನ್‌ ಐಫೋನ್‌ ಘಟಕದ ಮೇಲೆ ದಾಳಿ; ಪ್ರಧಾನಮಂತ್ರಿ ನರೇಂದ್ರ ಮೋದಿ ಕಳವಳಕ್ಕೆ ಕಾರಣವೇನು?
Tags: G.V.Sreeramareddykarnatakakolarwistron
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಜನವರಿ 1ರಿಂದ ಎಸ್ಸೆಸೆಲ್ಸಿ, ದ್ವಿತೀಯ ಪಿಯುಸಿ ತರಗತಿಗಳು ಆರಂಭ; ಒಂದು ಕೊಠಡಿಯಲ್ಲಿ 15 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಎಂದ ಮುಖ್ಯಮಂತ್ರಿ

ಜನವರಿ 1ರಿಂದ ಎಸ್ಸೆಸೆಲ್ಸಿ, ದ್ವಿತೀಯ ಪಿಯುಸಿ ತರಗತಿಗಳು ಆರಂಭ; ಒಂದು ಕೊಠಡಿಯಲ್ಲಿ 15 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಎಂದ ಮುಖ್ಯಮಂತ್ರಿ

Leave a Reply Cancel reply

Your email address will not be published. Required fields are marked *

Recommended

ಪದ್ಮಭೂಷಣ ಎಚ್‌ಎನ್‌ ಸ್ಮಾರಕ ಉದ್ಯಾನವನವೂ ಸೇರಿ ಬಾಗೇಪಲ್ಲಿ ಪಟ್ಟಣದ ನಾಲ್ಕೂ  ಪಾರ್ಕ್‌ಗಳಿಗೆ ಕಾಯಕಲ್ಪ; ವಿರೂಪವಾಗಿರುವ ಪುತ್ಥಳಿಯೂ ಬದಲು

ಪದ್ಮಭೂಷಣ ಎಚ್‌ಎನ್‌ ಸ್ಮಾರಕ ಉದ್ಯಾನವನವೂ ಸೇರಿ ಬಾಗೇಪಲ್ಲಿ ಪಟ್ಟಣದ ನಾಲ್ಕೂ ಪಾರ್ಕ್‌ಗಳಿಗೆ ಕಾಯಕಲ್ಪ; ವಿರೂಪವಾಗಿರುವ ಪುತ್ಥಳಿಯೂ ಬದಲು

4 years ago
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ಯುವಕ ತೇಜಸ್ ರೆಡ್ಡಿ ಬಿಎಸ್ಸಿ ಅನಸ್ತೇಶಿಯಾದಲ್ಲಿ ರಾಜ್ಯಕ್ಕೆ ಪ್ರಥಮ; ಚಿನ್ನದ ಪದಕ ಪ್ರದಾನ ಮಾಡಿದ ರಾಜ್ಯಪಾಲ ವಜೂಭಾಯಿ ವಾಲ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ಯುವಕ ತೇಜಸ್ ರೆಡ್ಡಿ ಬಿಎಸ್ಸಿ ಅನಸ್ತೇಶಿಯಾದಲ್ಲಿ ರಾಜ್ಯಕ್ಕೆ ಪ್ರಥಮ; ಚಿನ್ನದ ಪದಕ ಪ್ರದಾನ ಮಾಡಿದ ರಾಜ್ಯಪಾಲ ವಜೂಭಾಯಿ ವಾಲ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ