• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ನೂತನ ವರ್ಷ ಸಂಭ್ರಮಾಚರಣೆಗೆ ಅಂಕುಶ, ಕೋವಿಡ್ ಸುರಕ್ಷತಾ ಕ್ರಮ ಕಡ್ಡಾಯ; ಹೊಸ ಕೋವಿಡ್ ವೈರಸ್‌ ಬಗ್ಗೆ ಆತಂಕ ಬೇಡ ಎಂದ ಡಾಕ್ಟರ್‌ ಸುಧಾಕರ್

cknewsnow desk by cknewsnow desk
December 21, 2020
in COVID-19, STATE
Reading Time: 1 min read
0
ಚಿಕ್ಕಬಳ್ಳಾಪುರದಲ್ಲಿ ಚಿದಾನಂದಗೌಡ ಪರ ಡಾ.ಸುಧಾಕರ್‌ ಮತಬೇಟೆ
914
VIEWS
FacebookTwitterWhatsuplinkedinEmail

ಬೆಂಗಳೂರು: ಇಂಗ್ಲೆಂಡ್‌ನಲ್ಲಿ ಹೊಸ ಬಗೆಯ ಕೊರೊನಾ ವೈರಾಣು ಕಂಡುಬಂದಿದೆ. ಇದು ವೇಗವಾಗಿ ಹರಡುವ ಲಕ್ಷಣ ಹೊಂದಿದ್ದರೂ, ರೋಗದ ತೀವ್ರತೆ ಹೆಚ್ಚಿಸುವುದಿಲ್ಲ. ಆದರೂ ಅತ್ಯಂತ ಎಚ್ಚರಿಕೆ ವಹಿಸಬೇಕಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಸಭೆ ನಡೆಸಿ ಬಳಿಕ ಸಚಿವರು ಸುದ್ದಿಗಾರರರೊಂದಿಗೆ ಮಾತನಾಡಿದರು.

ಇಂಗ್ಲೆಂಡ್ ನಲ್ಲಿ ಕೊರೊನಾ ವೈರಸ್ ನ ಹೊಸ ಪ್ರಬೇಧ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಲಾಯಿತು. ರೂಪಾಂತರಗೊಂಡಿರುವ ವೈರಾಣುವಿನ ತೀವ್ರತೆಯಲ್ಲಿ ವ್ಯತ್ಯಾಸ ಇಲ್ಲದಿದ್ದರೂ ಹೊಸ ಪ್ರಬೇಧ ಹೆಚ್ಚು ಸಾಂಕ್ರಾಮಿಕ ಎಂದು ಪ್ರಾಥಮಿಕ ಅಧ್ಯಯನದಲ್ಲಿ ಹೇಳಲಾಗುತ್ತಿದೆ. (1/3) pic.twitter.com/KBJzp9AjOP

— Dr Sudhakar K (Modi ka Parivar) (@DrSudhakar_) December 21, 2020

ಯು.ಕೆ. ಡೆನ್ಮಾರ್ಕ್, ನೆದರ್ ಲ್ಯಾಂಡ್ ಮೊದಲಾದ ಐರೋಪ್ಯ ರಾಷ್ಟ್ರಗಳಲ್ಲಿ ಹೊಸ ಬಗೆಯ ವೈರಾಣು ಕಾಣಿಸಿಕೊಂಡಿದೆ. ಈ ಬಗ್ಗೆ ಕೇಂದ್ರ ಸರ್ಕಾರದಿಂದ ಪತ್ರ ಬಂದಿದ್ದು, ನಾಳೆ ರಾತ್ರಿಯಿಂದ ಯು.ಕೆ.ಯಿಂದ ಬರುವ ವಿಮಾನಗಳ ಆಗಮನ ನಿರ್ಬಂಧಿಸಲಾಗುತ್ತದೆ. ನಿನ್ನೆ ರಾಜ್ಯಕ್ಕೆ 291 ಜನರು ಬ್ರಿಟಿಷ್ ಏ ವೇಸ್ ನಿಂದ ಬಂದಿದ್ದರು. 246 ಜನರು ಏರ್ ಇಂಡಿಯಾದಿಂದ ಬಂದಿದ್ದರು. 138 ಜನರು ನೆಗೆಟಿವ್ ವರದಿ ತಂದಿಲ್ಲ. ಇಂತಹವರನ್ನು ಒಂದು ವಾರ ಕಾಲ ಮನೆಯಲ್ಲೇ ನಿಗಾ ಇರಿಸಲಾಗುತ್ತದೆ. ನಾಳೆಯಿಂದ ವಿಮಾನ ನಿಲ್ದಾಣಗಳಲ್ಲಿ ಕಿಯೋಸ್ಕ್ ಇಟ್ಟು, ಅಲ್ಲಿ ತಪಾಸಣೆ ಮಾಡಲಾಗುವುದು ಎಂದು ಹೇಳಿದರು.

ಈ ವೈರಾಣು ಹರಡುವ ವೇಗ ಹೆಚ್ಚಿದೆ. ಆದರೆ ರೋಗ ತೀವ್ರವಾಗಿರುವುದಿಲ್ಲ. ಆದ್ದರಿಂದ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕಿದೆ. ಹೊಸ ವರ್ಷದ ಅದ್ದೂರಿ ಆಚರಣೆಗಳನ್ನು ಕೈ ಬಿಡಬೇಕಿದೆ. ಕೆಲ ಹೋಟೆಲ್ ಗಳಲ್ಲಿ ಬುಕಿಂಗ್ ಮಾಡಿ ಆಚರಣೆ ಮಾಡಲು ಸಿದ್ಧತೆ ನಡೆಸಿರುವುದು ಕಂಡುಬಂದಿದೆ. ಹೀಗೆ ಮಾಡಿದರೆ ಕ್ರಮ ಕೈಗೊಳ್ಳಬೇಕಾಗುತ್ತದೆ. ಸರ್ಕಾರಕ್ಕೆ ಜನರ ಆರೋಗ್ಯ ಮುಖ್ಯವಾಗಿದ್ದು, ಹೊಸ ಬಗೆಯ ವೈರಾಣು ಬರುವ ಸಂದರ್ಭದಲ್ಲಿ ಇನ್ನಷ್ಟು ಎಚ್ಚರಿಕೆಯಿಂದ ಇರಬೇಕು ಎಂದರು.

ಕಳೆದ 14 ದಿನಗಳಲ್ಲಿ ಬೇರೆ ದೇಶಗಳಿಂದ ರಾಜ್ಯಕ್ಕೆ ಬಂದವರು ಆರ್ ಟಿಪಿಸಿಆರ್ ಪರೀಕ್ಷೆ ಮಾಡಿಸಬೇಕು. ಯುನೈಟೆಡ್ ಕಿಂಗ್ ಡಮ್ ನಿಂದ ಬಂದವರು ಹಾಗೂ ಬೇರೆ ದೇಶಗಳಿಂದ ಬಂದವರಿಗೂ 7 ದಿನಗಳ ಕ್ವಾರಂಟೈನ್ ಗೆ ಒಳಪಡಿಸಬೇಕು ಎಂದು ನಿರ್ಧರಿಸಲಾಗಿದೆ. ಯು.ಕೆ.ಯಿಂದ ಬಂದವರನ್ನು 7 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡಿಸಬೇಕೆಂದು ಕೇಂದ್ರ ಆರೋಗ್ಯ ಸಚಿವಾಲಯ ಸೂಚಿಸಿದೆ ಎಂದು ತಿಳಿಸಿದರು.

ಶೈಕ್ಷಣಿಕ ಚಟುವಟಿಕೆಗೆ ಸಂಬಂಧಿಸಿದಂತೆ ವಹಿಸಬೇಕಾದ ಎಚ್ಚರಿಕೆ ಕುರಿತು ಮತ್ತೊಮ್ಮೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ವಿವರಿಸಿದರು.

ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರ ನಾಳೆ ಮಧ್ಯರಾತ್ರಿಯಿಂದ ಡಿಸೆಂಬರ್ 31ರವರೆಗೆ ಇಂಗ್ಲೆಂಡ್ ನಿಂದ ಬರುವ ವಿಮಾನಗಳನ್ನು ನಿಷೇಧಿಸಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಯು.ಕೆ., ಡೆನ್ಮಾರ್ಕ್ ಮತ್ತು ನೆದರ್ ಲೆಂಡ್ ದೇಶಗಳಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ 7 ದಿನಗಳ ಹೋಮ್ ಕ್ವಾರಂಟೈನ್ ಕಡ್ಡಾಯ ಮಾಡಲಾಗಿದೆ. (2/3)

— Dr Sudhakar K (Modi ka Parivar) (@DrSudhakar_) December 21, 2020
ಜೀವ ಸಾರ್ಥಕತೆಯನ್ನು ಕರ್ನಾಟಕದ ಸೊಟ್ಟೊ ಆಗಿ ಗುರುತಿಸಲು ನಿರ್ಧಾರ

ಅಂಗಾಂಗ ದಾನವನ್ನು ಉತ್ತೇಜಿಸಲು ಜೀವಸಾರ್ಥಕತೆ ಕಾರ್ಯಕ್ರಮವನ್ನು ಕರ್ನಾಟಕದ ಸೊಟ್ಟೊ (SOTTO-STATE ORGAN TISSUE TRANSPLANT ORGANISATION) ಎಂದು ಗುರುತಿಸಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಅಂಗಾಂಗ ಕಸಿ ಕಾರ್ಯಕ್ರಮದ ಪ್ರಚಾರಕ್ಕೆ ಸಂಬಂಧಿಸಿದಂತೆ ಜೀವಸಾರ್ಥಕತೆಯ ಪ್ರಮುಖರೊಂದಿಗೆ ಸಭೆ ನಡೆಯಿತು. ಕೋವಿಡ್ ಪ್ರಕರಣಗಳ ಇಳಿಕೆಯೊಂದಿಗೆ ದಾನಿಗಳ ಸಂಖ್ಯೆ ಹೆಚ್ಚುತ್ತಿದೆ. 2019 ರಲ್ಲಿ 105 ಅಂಗಾಂಗ ದಾನಿಗಳಿದ್ದರು. 2020ರಲ್ಲಿ ಪೂರ್ವ ಕೋವಿಡ್ ಸಮಯದಲ್ಲಿ ಅಂದರೆ ಜನವರಿಯಿಂದ ಮಾರ್ಚ್ʼವರೆಗೆ 25 ಹಾಗೂ ಕಳೆದ ಎರಡು ತಿಂಗಳಲ್ಲಿ 9 ಅಂಗಾಂಗ ಕಸಿ ನಡೆದಿದೆ ಎಂದು ಅವರು ತಿಳಿಸಿದರು.

ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ವಿಶ್ವವಿದ್ಯಾಲಯವು ಜೀವಸಾರ್ಥಕತೆಯ ಬಗ್ಗೆ ವರದಿ ನೀಡಿ, ಕರ್ನಾಟಕದ ಸೊಟ್ಟೊ ಎಂದು ಗುರುತಿಸಬೇಕೆಂದು ಶಿಫಾರಸು ಮಾಡಿದ್ದು, ಇದನ್ನು ಜಾರಿ ಮಾಡಲು ನಿರ್ಧರಿಸಲಾಯಿತು. ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆ, ವೈದ್ಯಕೀಯ ಕಾಲೇಜುಗಳಿಗೆ ಅಂಗಾಂಗ ಮರುಪಡೆಯುವಿಕೆಗೆ ಪರವಾನಗಿ ನೀಡಲಾಗುವುದು. ಇದಕ್ಕೆ ಮಾರ್ಗದರ್ಶನ ನೀಡಲು ಉನ್ನತ ಮಟ್ಟದ ಸಲಹಾ ಸಮಿತಿ ರಚಿಸಲಾಗುತ್ತದೆ. ಹಾಗೂ ಹೊಸದಾಗಿ ಉಪ ನಿರ್ದೇಶಕರು, ಕಚೇರಿ ಪೋಷಕ ಸಿಬ್ಬಂದಿ ಮತ್ತು 20 ಅಂಗಾಂಗ ಕಸಿ ಸಂಯೋಜಕರನ್ನು ನೇಮಿಸಲಾಗುವುದು. ಇದಕ್ಕಾಗಿ ಸಿಬ್ಬಂದಿಗೆ ತರಬೇತಿ ನೀಡಲಾಗುವುದು. ಕಸಿ ಕುರಿತು ಜಾಗೃತಿಗೆ ರಾಜ್ಯಾದ್ಯಂತ ಅಭಿಯಾನ ನಡೆಸಲಾಗುವುದು ಎಂದು ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ಅವರು ಹೇಳಿದರು.

Tags: covid19dr sudhakarnew covid strain
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಕೋವಿಡ್‌ ವಾರಿಯರ್ಸ್‌ ಬೇಡಿಕೆಗೆ ಸ್ಪಂದಿಸಿದ ಸರಕಾರ; ತಜ್ಞ ವೈದ್ಯರು, ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯಾಧಿಕಾರಿಗಳ ಭತ್ಯೆಗಳ ಪರಿಷ್ಕರಣೆ

ಕೋವಿಡ್‌ ವಾರಿಯರ್ಸ್‌ ಬೇಡಿಕೆಗೆ ಸ್ಪಂದಿಸಿದ ಸರಕಾರ; ತಜ್ಞ ವೈದ್ಯರು, ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯಾಧಿಕಾರಿಗಳ ಭತ್ಯೆಗಳ ಪರಿಷ್ಕರಣೆ

Leave a Reply Cancel reply

Your email address will not be published. Required fields are marked *

Recommended

ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪನೆ: ಸರಕಾರದಿಂದ ಆದೇಶ

ಕರ್ನಾಟಕದ ವಿಶ್ವ ವಿಖ್ಯಾತ ವಿತ್ತತಜ್ಞ ಯಾರು?

2 years ago
ಆರೋಗ್ಯ ಮೂಲಸೌಕರ್ಯ ಅಭಿವೃದ್ದಿಗೆ ಕೇಂದ್ರದಿಂದ 800 ಕೋಟಿ ನೆರವು: ಸಿಎಂ ಬೊಮ್ಮಾಯಿ

ಆರೋಗ್ಯ ಮೂಲಸೌಕರ್ಯ ಅಭಿವೃದ್ದಿಗೆ ಕೇಂದ್ರದಿಂದ 800 ಕೋಟಿ ನೆರವು: ಸಿಎಂ ಬೊಮ್ಮಾಯಿ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ