1991ರಲ್ಲಿ ದಿವಾಳಿಯ ಅಂಚಿನಲ್ಲಿದ್ದ ಭಾರತವನ್ನು ಆ ಸಂಕಷ್ಟದಿಂದ ಪಾರು ಮಾಡಿದ ಸಾಹಸಿಯೆಂದರೆ, ಪಿ.ವಿ.ನರಸಿಂಹರಾವ್. ನೆಹರು-ಗಾಂಧಿ ಕುಟುಂಬದ ಕುಡಿಯಲ್ಲದ ಪಿವಿಎನ್, ಐದು ವರ್ಷಗಳ ಕಾಲ ಭಾರತದ ಚುಕ್ಕಾಣಿ ಹಿಡಿದು, ದೇಶವನ್ನು ಹೊಸ ಮನ್ವಂತರಕ್ಕೆ ಕೊಂಡೊಯ್ದ ಚಾಣಾಕ್ಷ. ಆದರೆ, ಸಮಕಾಲೀನ ಚರಿತ್ರೆಯಲ್ಲಿ ಅವರಿಗೆ ಸಿಗಬೇಕಾಗಿದ್ದ ಸ್ಥಾನ ಸಿಕ್ಕಿಲ್ಲ. ಇದು ಅವರ ಜನ್ಮಶತಾಬ್ದಿಯ ವರ್ಷ. ಈ ಸಂದರ್ಭದಲ್ಲಿ ಅವರನ್ನು ಕುರಿತ ʼಪಿವಿಎನ್: ಪರ್ವಕಾಲದ ಪುರುಷೋತ್ತಮʼ ಎನ್ನುವ ಅನುವಾದಿತ ಕೃತಿ ಈಚೆಗಷ್ಟೇ ಲೋಕಾರ್ಪಣೆಗೊಂಡಿದೆ. ಸಂಜಯ ಬರೂ ಅವರ ಮೂಲ ಇಂಗ್ಲಿಷ್ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿರುವವರು ಖ್ಯಾತ ಅನುವಾದಕ ಬಿ.ಎಸ್.ಜಯಪ್ರಕಾಶ ನಾರಾಯಣ. ಈ ಗಮನಾರ್ಹ ಕೃತಿಯ ಒಂದು ಅಧ್ಯಾಯದ ಆಯ್ದ ಭಾಗವು ಸಿಕೆನ್ಯೂಸ್ ನೌ ಓದುಗರಿಗಾಗಿ ಇಲ್ಲಿದೆ. ಅಧ್ಯಾಯವು ದೀರ್ಘವಾಗಿರುವುದರಿಂದ ಅದನ್ನು ಕೆಲ ಭಾಗಗಳನ್ನಾಗಿ ವಿಭಜಿಸಿ ಪ್ರಕಟಿಸಲಾಗುತ್ತಿದೆ. ಇದು ಮೊದಲ ಭಾಗ..
Copy and paste this URL into your WordPress site to embed
Copy and paste this code into your site to embed