• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ರಾಜ್ಯದಲ್ಲಿ ಸಿಇಟಿ ಕೌನ್ಸೆಲಿಂಗ್; ಜನವರಿ 15ರವರೆಗೆ ಕಾಲಾವಕಾಶಕ್ಕೆ ಅನುಮತಿ ನೀಡಿದ ಎಐಸಿಟಿಇ

cknewsnow desk by cknewsnow desk
December 31, 2020
in NEWS IN USE
Reading Time: 1 min read
0
ರಾಜ್ಯದಲ್ಲಿ ಸಿಇಟಿ ಕೌನ್ಸೆಲಿಂಗ್; ಜನವರಿ 15ರವರೆಗೆ ಕಾಲಾವಕಾಶಕ್ಕೆ ಅನುಮತಿ ನೀಡಿದ ಎಐಸಿಟಿಇ
911
VIEWS
FacebookTwitterWhatsuplinkedinEmail

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಎಂಜಿನಿಯರಿಂಗ್ ಕೋರ್ಸ್ ಗಳ ಖಾಲಿ ಇರುವ ಸೀಟುಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಜನವರಿ ಜ.15ರವರೆಗೆ ಕಾಲಾವಕಾಶ ವಿಸ್ತರಿಸಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಲಿ (ಎಐಸಿಟಿಇ) ಅನುಮತಿ ನೀಡಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಗುರುವಾರ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ, ಮತ್ತೊಂದು ಸುತ್ತಿನ ಕೌನ್ಸೆಲಿಂಗ್ ನಡೆಸಲಾಗುವುದು. ಕೌನ್ಸೆಲಿಂಗ್ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಶೀಘ್ರವೇ ಪ್ರಕಟಿಸಲಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಇದರಿಂದ ಈಗಾಗಲೇ ಎಂಜಿನಿಯರಿಂಗ್ ಸೀಟು ಪಡೆದಿರುವವರಿಗೆ ಕೋರ್ಸ್ ಇಷ್ಟವಿಲ್ಲದಿದ್ದರೆ ಸೀಟುಗಳನ್ನು ವಾಪಸ್ಸು ಮಾಡಲು ಕೊನೆಯ ಬಾರಿಗೆ ಅವಕಾಶ ನೀಡಲಾಗುತ್ತದೆ. ಆದರೆ ಮುಂದೆ ನಡೆಯಲಿರುವ ಮಾಪ್-ಅಪ್ ಸುತ್ತಿನಲ್ಲಿ ಸೀಟು ಪಡೆದವರಿಗೆ ಅದನ್ನು ಹಿಂದಿರುಗಿಸಲು ಖಂಡಿತಾ ಅವಕಾಶ ಇರುವುದಿಲ್ಲ. ಅವರು ನಿಗದಿತ ಶುಲ್ಕ ಪಾವತಿಸಿ ಪ್ರವೇಶ ಪಡೆಯಲೇಬೇಕಾಗುತ್ತದೆ. ಇಲ್ಲದಿದ್ದರೆ ನಿಗದಿತ ಶುಲ್ಕದ ಐದು ಪಟ್ಟು ಮೊತ್ತವನ್ನು ದಂಡವಾಗಿ ಪಾವತಿಸಬೇಕಾಗುತ್ತದೆ ಎಂದು ಅಶ್ವಥ್ಥ ನಾರಾಯಣ ಅವರು ಸ್ಪಷ್ಟಪಡಿಸದಿದ್ದಾರೆ.

ವೃತ್ತಿಪರ ಕೋರ್ಸ್ ಗಳ ಖಾಲಿ ಇರುವ ಸೀಟುಗಳಿಗೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್ ಮಾಡುವ ಅಗತ್ಯ ಇದ್ದು, ಜನವರಿ 15ರವರೆಗೆ ಅವಕಾಶ ನೀಡಬೇಕು ಎಂದು ಕೋರಿ ಉನ್ನತ ಶಿಕ್ಷಣ ಇಲಾಖೆಯು ಎಐಸಿಟಿಇ ಅಧ್ಯಕ್ಷರಿಗೆ ಪತ್ರ ಬರೆದಿತ್ತು. ಅದಕ್ಕೆ ಸ್ಪಂದಿಸಿರುವ ಎಐಸಿಟಿಇ ರಾಜ್ಯದ ವಿದ್ಯಾರ್ಥಿಗಳಿಗೆ ಮಾತ್ರ ಕಾಲಾವಕಾಶ ವಿಸ್ತರಿಸಿ ಅನುಮತಿ ನೀಡಿದೆ.

ಉಳಿದಿರುವ ವೃತ್ತಿಪರ ಕೋರ್ಸ್ ಗಳ ಸೀಟ್ ಗಳನ್ನು ಆಯ್ಕೆ ಮಾಡಿಕೊಳ್ಳಲು ಮತ್ತೊಂದು ಸಲ, ಕೊನೆಯದಾಗಿ ಅವಕಾಶ ನೀಡಬೇಕೆಂದು ವಿದ್ಯಾರ್ಥಿಗಳು ಮನವಿ ಮಾಡಿದ್ದರು. ಇದರ ಜೊತೆಗೆ, ಕರ್ನಾಟಕ ಅನುದಾನರಹಿತ ಖಾಸಗಿ ಶೈಕ್ಷಣಿಕ ಕಾಲೇಜುಗಳ ಸಂಸ್ಥೆ (ಕೆಯುಪಿಇಸಿಎ) ಕೂಡ ಎಂಜಿನಿಯರಿಂಗ್ ಮತ್ತು ಆರ್ಕಿಟೆಕ್ಚರ್ ಕೋರ್ಸ್ ಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಜನವರಿ 15ರವರೆಗೆ ಕಾಲಾವಕಾಶ ವಿಸ್ತರಿಸಲು ಕೋರಿತ್ತು. ಈ ಅಂಶಗಳನ್ನು ಗಮನದಲ್ಲಿರಿಸಿಕೊಂಡು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜ್ಯ ಉನ್ನತ ಶಿಕ್ಷಣ ಇಲಾಖೆಯು ಪತ್ರ ಬರೆದಿತ್ತು.

ಈ ಮುಂಚೆ ನೀಡಿದ್ದ ಅನುಮತಿ ಪ್ರಕಾರ ರಾಜ್ಯದಲ್ಲಿ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ 31-12-2020 ಕೊನೆಯ ದಿನವಾಗಿತ್ತು.

lead photo: bnmk photographs

Tags: cetcet counsellingdr cn ashwath narayankarnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

ಮಾರ್ಚ್‌ 1ರಿಂದ ದ್ವಿತೀಯ ಪಿಯು, 20ರಿಂದ sslc ಪರೀಕ್ಷೆ

by cknewsnow desk
December 3, 2024
0

ಎಲ್ಲ ಪರೀಕ್ಷೆಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ

ಪೋಡಿ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

ಪೋಡಿ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

by cknewsnow desk
August 12, 2024
0

1,000 ಗ್ರಾಮ ಲೆಕ್ಕಿಗರು, 750 ಸರ್ವೇಯರ‍್ಸ್, 36 ಎಡಿಎಲ್‌ಆರ್‌ಗಳ ನೇಮಕ

kptclನಲ್ಲಿ 902 ಹುದ್ದೆಗೆ ನೇಮಕ

kptclನಲ್ಲಿ 902 ಹುದ್ದೆಗೆ ನೇಮಕ

by cknewsnow desk
May 24, 2024
0

ನೇಮಕಾತಿ ಆದೇಶ ನೀಡಿದ ಸರಕಾರ

ಕೆಸಿಇಟಿ-24 ಪರೀಕ್ಷೆ: ಜನವರಿ 10ರಿಂದ online ಅರ್ಜಿ ಸಲ್ಲಿಕೆಗೆ ಅವಕಾಶ

CET EXAM; ಔಟ್ ಆಫ್ ಸಿಲೆಬಸ್ ಪ್ರಶ್ನೆ ಕೈಬಿಟ್ಟು ಮೌಲ್ಯಮಾಪನ; ವಿದ್ಯಾರ್ಥಿಗಳಿಗೆ ನಿರಾಳ

by cknewsnow desk
April 28, 2024
0

ತಜ್ಞರ ಶಿಫಾರಸು ಒಪ್ಪಿಕೊಂಡ ರಾಜ್ಯ ಸರಕಾರ

ದ್ವಿತೀಯ ಪಿಯುಸಿ ಫಲಿತಾಂಶ: ಧೂಳೆಬ್ಬಿಸಿದ ಬಾಲಕಿಯರು

ದ್ವಿತೀಯ ಪಿಯುಸಿ ಫಲಿತಾಂಶ: ಧೂಳೆಬ್ಬಿಸಿದ ಬಾಲಕಿಯರು

by cknewsnow desk
April 11, 2024
0

ವಿಜ್ಞಾನದಲ್ಲಿ ವಿದ್ಯಾಲಕ್ಷ್ಮಿ ಪ್ರಥಮ

ಬೆಳಗ್ಗೆ 10.15 ಗಂಟೆಗೆ ದ್ವಿತೀಯ PUC ಪರೀಕ್ಷೆ; ಶುಭವಾಗಲಿ ವಿದ್ಯಾರ್ಥಿಗಳೇ

ನಾಳೆ ಬೆಳಗ್ಗೆ 10 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ

by cknewsnow desk
April 9, 2024
0

11 ಗಂಟೆ ನಂತರ ಅಂತರ್ಜಾಲದಲ್ಲಿ ಫಲಿತಾಂಶ ನೋಡಬಹುದು

Next Post
ಹೊಸ ವರ್ಷಕ್ಕೆ ಮುನ್ನಾ 9 ಗಂಟೆವರೆಗೂ ಕೂತು 40 ಕಡತ ವಿಲೇವಾರಿ ಮಾಡಿದ ಡಿಸಿಎಂ; ಇಂದಿನಿಂದಲೇ ವಿವಿಗಳಲ್ಲೂ ಇ-ಆಫೀಸ್ ಅಸ್ತಿತ್ವಕ್ಕೆ

ಹೊಸ ವರ್ಷಕ್ಕೆ ಮುನ್ನಾ 9 ಗಂಟೆವರೆಗೂ ಕೂತು 40 ಕಡತ ವಿಲೇವಾರಿ ಮಾಡಿದ ಡಿಸಿಎಂ; ಇಂದಿನಿಂದಲೇ ವಿವಿಗಳಲ್ಲೂ ಇ-ಆಫೀಸ್ ಅಸ್ತಿತ್ವಕ್ಕೆ

Leave a Reply Cancel reply

Your email address will not be published. Required fields are marked *

Recommended

ಬೈ ಎಲೆಕ್ಷನ್‌ನಲ್ಲಿ ಬಿಜೆಪಿ ಭರಾಟೆ; ಮುನಿರತ್ನ ಹ್ಯಾಟ್ರಿಕ್‌, 70 ವರ್ಷಕ್ಕೆ ಶಿರಾದಲ್ಲಿ ಅರಳಿದ ಕಮಲ

ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ವಿರುದ್ಧ 40% ಕಮೀಷನ್‌ ಕಲೆಕ್ಷನ್‌ ಆರೋಪ

3 years ago
11 ಸಲ ಕಾಲ್‌ ಮಾಡಿದ  ಮಾಜಿ ಸಿಎಂ! ಜೆಡಿಎಸ್‌ ಶಾಸಕರ ಬ್ರೈನ್‌ವಾಶ್!!

ವಿದ್ಯಾರ್ಥಿಗಳಿಗೆ ಹೆಚ್ಚುತ್ತಿರುವ ಕೋವಿಡ್ ಸೋಂಕು

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ