• About
  • Advertise
  • Careers
  • Contact
Saturday, May 17, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ರಾಮನಗರದಲ್ಲಿ ಕಮಲದ ಕಮಾಲ್; ಬಿರುಕು ಬಿಟ್ಟ ಕನಕಪುರ ಬಂಡೆ, ಚನ್ನಪಟ್ಟಣದಲ್ಲಿ ಮೂರನೇ ಸ್ಥಾನಕ್ಕೆ ಕುಸಿದ ಕಾಂಗ್ರೆಸ್

cknewsnow desk by cknewsnow desk
January 1, 2021
in POLITICS
Reading Time: 1 min read
0
ರಾಮನಗರದಲ್ಲಿ ಕಮಲದ ಕಮಾಲ್; ಬಿರುಕು ಬಿಟ್ಟ ಕನಕಪುರ ಬಂಡೆ, ಚನ್ನಪಟ್ಟಣದಲ್ಲಿ ಮೂರನೇ ಸ್ಥಾನಕ್ಕೆ ಕುಸಿದ ಕಾಂಗ್ರೆಸ್
914
VIEWS
FacebookTwitterWhatsuplinkedinEmail

ಶೂನ್ಯದಿಂದ ಮೂರಂಕಿ ದಾಟಿದ ಸಂಖ್ಯಾಬಲ, ಡಿಸಿಎಂ ಉಸ್ತುವಾರಿ, ಗ್ರಾಮಗಳಲ್ಲಿ ಬೇರುಬಿಟ್ಟ ಬಿಜೆಪಿ, ಜಿಲ್ಲೆಯಲ್ಲಿ 234ಕ್ಕೂ ಹೆಚ್ಚು ಕಡೆ ಹಾರಿದ ಕೇಸರಿ ಬಾವುಟ

ಬೆಂಗಳೂರು: ಇದೇ ಮೊದಲ ಬಾರಿಗೆ ರಾಮನಗರ ಜಿಲ್ಲೆಯಲ್ಲಿ ಬಿಜೆಪಿ ಹೊಸ ಇತಿಹಾಸ ಬರೆದಿದೆ. ಶೂನ್ಯಕ್ಕೆ ಸೀಮಿತವಾಗಿದ್ದ ಆ ಪಕ್ಷದ ಗ್ರಾಮ ಪಂಚಾಯಿತಿ ಸಂಖ್ಯಾಬಲ ಈಗ ಮೂರಂಕಿ ದಾಟಿದ್ದು, ಈವರೆಗೆ ಜಿಲ್ಲೆಯಲ್ಲಿ ಪಾರುಪತ್ಯ ಹೊಂದಿದ್ದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಬುಡವನ್ನು ಅಲ್ಲಾಡಿಸಿಬಿಟ್ಟಿದೆ.

ಬೆಂಗಳೂರು ನಗರಕ್ಕೆ ಅತಿ ಸನಿಹದಲ್ಲೇ ಇರುವ ಜಿಲ್ಲೆಯಲ್ಲಿ ಈವರೆಗೂ ಕಾಂಗ್ರೆಸ್‌ ಮತ್ತು ಜಾತ್ಯತೀತ ಜನತಾದಳದ್ದೇ ಅಧಿಪತ್ಯವಾಗಿತ್ತು. ಎರಡೂ ಪಕ್ಷಗಳಲ್ಲಿ ಬಲಾಢ್ಯ ನಾಯಕರಿದ್ದರೂ ಛಲದಿಂದ ಮುಂದಡಿ ಇಟ್ಟ ಬಿಜೆಪಿ, ಎಲ್ಲರ ನಿರೀಕ್ಷೆಗೂ ಮೀರಿ ಜಯಭೇರಿ ಬಾರಿಸಿದೆ ಹಾಗೂ ಜಿಲ್ಲೆಯ ನಾಲ್ಕೂ ತಾಲ್ಲೂಕುಗಳಲ್ಲಿ 234ಕ್ಕೂ ಹೆಚ್ಚು ಕಡೆ ಕಮಲ ಅರಳಿದೆ.

ಒಂದೆಡೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಸಂಸದ ಡಿ.ಕೆ.ಸುರೇಶ್‌ ನೇತೃತ್ವದ ಕಾಂಗ್ರೆಸ್‌ ಮತ್ತು ಇನ್ನೊಂದೆಡೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಾಯಕತ್ವದ ಜೆಡಿಎಸ್..‌ ಇವೆರಡೂ ಶಕ್ತಿಗಳನ್ನು ಪಕ್ಕಾ ಕಾರ್ಯತಂತ್ರದ ಮೂಲಕ ಹಿಮ್ಮೆಟ್ಟಿಸಿದವರು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ. ಕರಾರುವಕ್ಕಾದ ಪ್ಲ್ಯಾನ್‌, ನಿರಂತರವಾಗಿ ಕಾರ್ಯಕರ್ತರ ಸಂಪರ್ಕ, ಎಡೆಬಿಡದ ಸಂಚಾರ, ಮುಖಂಡರೊಂದಿಗೆ ನಾಲ್ಕೂ ತಾಲ್ಲೂಕುಗಳಲ್ಲೂ ಬಿರುಸಿನ ಪ್ರಚಾರ, ಇಷ್ಟರ ಜತೆಗೆ; ಸರಳತೆ- ಸಜ್ಜನಿಕೆಯಿಂದ ಹಳ್ಳಿಹಳ್ಳಿಗೂ ತೆರಳಿ, ಹೊಲ- ತೋಟವೆನ್ನದೆ ಓಡಾಟ ನಡೆಸಿದ ಡಿಸಿಎಂ ಪಕ್ಷಕ್ಕೆ ಭರ್ಜರಿ ಫಸಲು ತೆಗೆದುಕೊಟ್ಟಿದ್ದಾರೆ.

ಎಲ್ಲೆಲ್ಲಿ ಗೆಲುವು? ಎಷ್ಟು ಸ್ಥಾನ?

ಸದ್ಯಕ್ಕೆ ಸಿಕ್ಕಿರುವ ಮಾಹಿತಿಯ ಪ್ರಕಾರ ರಾಮನಗರ ಜಿಲ್ಲೆಯಲ್ಲಿ ಬಿಜೆಪಿ ಒಟ್ಟು 234 ಗ್ರಾಮ ಪಂಚಾಯಿತಿ ಕ್ಷೇತ್ರಗಳಲ್ಲಿ ಜಯಭೇರಿ ಭಾರಿಸಿದೆ. ಈ ಸಂಖ್ಯೆಯಲ್ಲಿ ಮತ್ತೂ ಹೆಚ್ಚಳವಾಗುವುದು ನಿಶ್ಚಿತವಾಗಿದೆ. ಡಿ.ಕೆ.ಶಿವಕುಮಾರ್‌ ಅವರ ಭದ್ರಕೋಟೆ ಕನಕಪುರದಲ್ಲಿಯೇ ಬಿಜೆಪಿ 52 ಗ್ರಾ.ಪಂ. ಸ್ಥಾನಗಳನ್ನು ತೆಕ್ಕೆಗೆ ಹಾಕಿಕೊಂಡಿದೆ. ಈ ಮೂಲಕ ಕನಕಪುರದ ಬಂಡೆ ಸ್ಪಷ್ಟವಾಗಿ ಬಿರುಕು ಬಿಟ್ಟಂತೆ ಆಗಿದೆ. ವಿಶೇಷವೆಂದರೆ ಆ ತಾಲ್ಲೂಕಿನ ಎಲ್ಲ ಪಂಚಾಯಿತಿಗಳ ಅನೇಕ ಗ್ರಾಮಗಳಲ್ಲಿ ಕೇಸರಿ ಬಾವುಟ ಹಾರಿದ್ದು ಜೆಡಿಎಸ್‌ಗಿಂತ (45) ಹೆಚ್ಚು ಸ್ಥಾನಗಳನ್ನು ಗೆದ್ದಿದೆ. ಬಹುಮುಖ್ಯವಾಗಿ ಕೆಪಿಸಿಸಿ ಅಧ್ಯಕ್ಷರಿಗೆ ಪರಮಾಪ್ತರಾಗಿದ್ದ ಅನೇಕ ಅಭ್ಯರ್ಥಿಗಳಿಗೆ ಕಮಲಪಾಳಯ ಸೋಲಿನ ರುಚಿ ತೋರಿಸಿದೆ. ಈ ಪೈಕಿ ಡಿಕೆಎಸ್‌ ಚಾರಿಟಬಲ್‌ ಟ್ರಸ್ಟ್‌ ಅಧ್ಯಕ್ಷ ವಿಶ್ವನಾಥ್ ಅವರು ತಮ್ಮ ಸ್ವಗ್ರಾಮ ಚಿಕ್ಕೊಂಡಳ್ಳಿಯಲ್ಲಿ ಮತ್ತು ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಶಂಕರ್‌ ಅವರೂ ತಮ್ಮ ಹುಟ್ಟೂರು ಕುರುಬಳ್ಳಿದೊಡ್ಡಿ ಗ್ರಾಮದಲ್ಲಿ ಹೀನಾಯವಾಗಿ ಸೋತಿದ್ದಾರೆ.

ಮಾಗಡಿ ತಾಲ್ಲೂಕಿನಲ್ಲಿ ಬಿಜೆಪಿ 40ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯ ದಾಖಲಿಸಿದೆ. ಈ ತಾಲ್ಲೂಕಿನಲ್ಲಿ ದಿನವಿಡೀ ಪ್ರಚಾರ ನಡೆಸಿದ್ದ ಉಪ ಮುಖ್ಯಮಂತ್ರಿ, ಮುಖಂಡರೆಲ್ಲರನ್ನೂ ಒಟ್ಟು ಮಾಡಿಕೊಂಡು ಗ್ರಾಮ ಗ್ರಾಮಕ್ಕೂ ಭೇಟಿ ನೀಡಿದ್ದರು. ಬಿಜೆಪಿಯ ಗೆಲುವು ಜೆಡಿಎಸ್-ಕಾಂಗ್ರೆಸ್‌ಗೆ ಅನೇಕ ತೀವ್ರ ಆಘಾತ ಉಂಟು ಮಾಡಿದ್ದರೆ, ಕಮಲ ಪಾಳಯದ ಕಾರ್ಯಕರ್ತರಲ್ಲಿ ಜೋಶ್‌ ಹೆಚ್ಚಿಸಿದೆ.

ರಾಮನಗರ ತಾಲ್ಲೂಕಿನಲ್ಲಿ 22 ಗ್ರಾಮ ಪಂಚಾಯಿತಿ ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ನೇರ ಹಣಾಹಣಿ ಏರ್ಪಟ್ಟಿದ್ದರೂ ತನ್ನ ಭದ್ರಕೋಟೆಯಾಗಿದ್ದ ಗ್ರಾಮಗಳಲ್ಲಿ ಕಾಂಗ್ರೆಸ್‌ ಸೋತು ಹೋಗಿದೆ. ಹಾಗೆಯೇ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅತ್ಯಂತ ಕಡಿಮೆ, ಅಂದರೆ; ಕೂದಲೆಳೆ ಅಂತರದಲ್ಲಿ ಹಿನ್ನಡೆ ಅನುಭವಿಸಿದ್ದಾರೆ. ನೆಲೆಯೇ ಇಲ್ಲದ ಗ್ರಾಮಗಳಲ್ಲಿ ಕೇಸರಿ ಭಾವುಟಗಳು ರಾರಾಜಿಸುತ್ತಿವೆ. ಕೈ ಶಕ್ತಿ ಕುಂದಿರುವುದು ಫಲಿತಾಂಶದಲ್ಲಿ ಸ್ಪಷ್ಟವಾಗಿ ಗೋಚರವಾಗಿದೆ.

ಉಳಿದಂತೆ ಚನ್ನಪಟ್ಟಣ ತಾಲ್ಲೂಕಿನಲ್ಲಿ ಬಿಜೆಪಿ ಧೂಳೆಬ್ಬಿಸಿದೆ. ಅಲ್ಲಿ ಕಮಲದ ಅಬ್ಬರಕ್ಕೆ ಕಾಂಗ್ರೆಸ್‌ ಚಿತ್‌ ಆಗಿದೆ. 142ಕ್ಕೂ ಹೆಚ್ಚು ಪಂಚಾಯಿತಿ ಸ್ಥಾನಗಳಲ್ಲಿ ಬಿಜೆಪಿ ಭರ್ಜರಿ ಜಯ ದಾಖಲಿಸಿದ್ದರೆ, ಕಾಂಗ್ರೆಸ್‌ 82 ಕಡೆ ಮಾತ್ರ ಗೆದ್ದು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ ಈ ತಾಲ್ಲೂಕಿನಲ್ಲಿ ಬಿಜೆಪಿ ಸಂಖ್ಯಾಬಲ ಇನ್ನಷ್ಟು ಹೆಚ್ಚುವ ನಿರೀಕ್ಷೆ ಇದೆ. ಜಿಜೆಪಿಯ ಅಚ್ಚರಿಯ ಓಟಕ್ಕೆ ಜೆಡಿಎಸ್‌ ಪಾಳಯದಲ್ಲಿ ಕಂಪನ ಉಂಟಾಗಿದೆ.‌

ಪಕ್ಷವೂ ಹಿಂದೆಂದಿಗಿಂತಲೂ ಶಕ್ತಿಶಾಲಿಯಾಗಿ ಹೊರಹೊಮ್ಮಿದೆ. ಗ್ರಾಮ ಗ್ರಾಮದಲ್ಲೂ ಕೇಸರಿ ಬಾವುಟ ಹಾರಿರುವುದರಿಂದ ಮುಂದಿನ ಚುನಾವಣೆಗಳಿಗೆ ಈ ಫಲಿತಾಂಶ ಮುನ್ನುಡಿ ಬರೆಯಲಿದೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳು ತಮ್ಮ ನೆಲೆಯನ್ನು ಕಳೆದುಕೊಳ್ಳುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸದೃಢ, ಜನಪರ ಆಡಳಿತ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸುಧಾರಣಾ ಕಾರ್ಯಕ್ರಮಗಳಿಂದ ಈ ಫಲಿತಾಂಶ ಸಾಧ್ಯವಾಗಿದೆ.

ಡಾ.ಅಶ್ವತ್ಥನಾರಾಯಣ

ಬಿಜೆಪಿಗೆ ಪ್ಲಸ್‌ ಆಗಿದ್ದೇಕೆ?

ರಾಜ್ಯದ ಆಡಳಿತಾರೂಢ ಪಕ್ಷ ಬಿಜೆಪಿ ಅನೇಕ ರೀತಿಯಲ್ಲಿ ಗೆಲುವಿಗೆ ಅರ್ಹ ಎಂದು ಹೇಳಬಹುದು. ಪಕ್ಷದ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ನೇತೃತ್ವದಲ್ಲಿ ನಡೆದ ಗ್ರಾಮ ಸ್ವರಾಜ್ಯ ಸಮಾವೇಶಗಳು ಪರಿಣಾಮ ಉತ್ತಮ ಬೀರಿವೆ. ಮುಖ್ಯವಾಗಿ ಜಿಲ್ಲಾ ಉಸ್ತುವಾರಿಯೂ ಆಗಿರುವ ಅಶ್ವತ್ಥನಾರಾಯಣ ಅವರು ಗ್ರಾ.ಪಂ ಚುನಾವಣೆ ದಿನಾಂಕ ಪ್ರಕಟವಾದ ದಿನದಿಂದ ಬೆಂಗಳೂರಿಗಿಂತ ರಾಮನಗರದಲ್ಲಿ ಇದ್ದಿದ್ದೇ ಹೆಚ್ಚು. ನಾಲ್ಕೂ ತಾಲ್ಲೂಕುಗಳಲ್ಲಿ ಸಂಚಾರ ಮಾಡಿದ ಅವರು ಬಹುತೇಕ ಎಲ್ಲ ಕಾರ್ಯಕರ್ತರ ಸಂಪರ್ಕಕ್ಕೂ ಸಿಕ್ಕಿದ್ದರು. ಹೀಗಾಗಿ ತಳಮಟ್ಟದಲ್ಲಿ ಕಮಲ ಬೇರೂರಲು ಕಾರಣವಾಯಿತು. ಜತೆಗೆ, ಜಿಲ್ಲೆಯ ಬಿಜೆಪಿ ಮುಖಂಡರೆಲ್ಲರೂ ಡಿಸಿಎಂ ಹಾದಿಯಲ್ಲಿ ಹಗಳಿರುಳು ಹೆಜ್ಜೆ ಹಾಕಿದರು. ಪರಿಣಾಮವಾಗಿ ಗ್ರಾಮಗಳಲ್ಲಿ ಕಮಲ ಅರಳಿದೆ.

ಎಲ್ಲಕ್ಕಿಂತ ಮುಖ್ಯವಾಗಿ ಬಿಜೆಪಿ ಶೂನ್ಯದಿಂದ ಮೂರಂಕಿ ದಾಟುವಷ್ಟು ಸಾಧನೆ ಮಾಡಿರುವುದು ಹಳೆಯ ದೋಸ್ತಿಗಳಾದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಾಯಕರ ನಿದ್ದೆಗೆಡಿಸಿದೆ. ಕೆಲವೆಡೆ ಜೆಡಿಎಸ್‌ ನೆಲೆಯನ್ನು ಬಿಜೆಪಿ ತೆಕ್ಕೆಗೆ ಬಂದಿದ್ದರೆ, ಕನಕಪುರದಂಥ ತಾಲ್ಲೂಕಿನಲ್ಲಿ ಕಮಲ ಕಮಾಲ್‌ ಮಾಡಿದೆ. ಈ ಕಾರಣಕ್ಕೆ ಜಿಲ್ಲೆಯ ಅನಭಿಷಕ್ತ ದೊರೆಗಳಂತೆ ಇದ್ದ ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರು ಚಿಂತೆಗೀಡಾಗಿದ್ದಾರೆಂದು ಗೊತ್ತಾಗಿದೆ.

ಸತ್ಯಮಾರ್ಗದಲ್ಲಿ ನಡೆದು ಜನಸೇವೆ ಮಾಡುವವರಿಗೆ ಮಾತ್ರ ಅವಕಾಶ ಕೊಡುತ್ತೇವೆ ಎಂದು ಮತದಾರ ಪ್ರಭುಗಳು ಸ್ಪಷ್ಟ ತೀರ್ಪು ನೀಡಿದ್ದಾರೆ.

ಬೆಂಗಳೂರು ನಗರಕ್ಕೆ ಅತಿ ಸನಿಹದಲ್ಲೇ ಇರುವ ಈ ಜಿಲ್ಲೆಯಲ್ಲಿ ಇತರ ಎರಡೂ ಪಕ್ಷಗಳ ನಾಯಕರಿದ್ದರೂ ಭರ್ಜರಿ ಜಯಭೇರಿ ಬಾರಿಸಿರುವ ಬಿಜೆಪಿಯು ಕುಟುಂಬ ರಾಜಕಾರಣ, ದುರಾಡಳಿತವನ್ನು ಸೋಲಿಸಿದೆ.

5/6

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) December 31, 2020

Tags: grama panchayat election 2020 resultkarnatakaramanagara
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

ನೀಲಂ ಸಂಜೀವ ರೆಡ್ಡಿ ಅವರನ್ನು ಸೋಲಿಸಿ ವಿ.ವಿ.ಗಿರಿ ಅವರನ್ನು ಗೆಲ್ಲಿಸಿದ ಆತ್ಮಸಾಕ್ಷಿ ಮತ

ಜನರ ತೆರಿಗೆ ದುಡ್ಡಿನಲ್ಲಿ ಬೆಳಗಾವಿಯಲ್ಲಿ ನಕಲಿ ಗಾಂಧಿಗಳ ವಿಜೃಂಭಣೆ

by cknewsnow desk
December 26, 2024
0

ಇದು ಗಾಂಧಿ ಕಾಂಗ್ರೆಸ್ ಅಲ್ಲ, ಅಲಿಬಾಬಾ ನಲವತ್ತು ಕಳ್ಳರ ಕಾಂಗ್ರೆಸ್!!; ಬೆಳಗಾವಿ ಸಮಾವೇಶದಲ್ಲಿ ಮಹಾತ್ಮ ಗಾಂಧಿ ನಿರ್ಲಕ್ಷ್ಯ

ಹೆಚ್.ಡಿ.ಕುಮಾರಸ್ವಾಮಿ ಬೀಸಿದ ಚಾಟಿಯಿಂದ ಎಚ್ಚೆತ್ತ ಸರಕಾರ

ಮೂಡಾದಲ್ಲಿ ಕುಮಾರಸ್ವಾಮಿಯದ್ದೂ ಸೈಟಿದೆ ಎಂದ ಸಿಎಂ ಸಿದ್ದರಾಮಯ್ಯಗೆ ತಿರುಗೇಟು ಕೊಟ್ಟ HDK

by cknewsnow desk
July 26, 2024
0

ಹಣ ಕಟ್ಟಿ 40 ವರ್ಷ ಆಗಿದೆ, ನನಗಿನ್ನೂ ನಿವೇಶನವನ್ನೇ ಕೊಟ್ಟಿಲ್ಲ ಎಂದ ಕೇಂದ್ರ ಸಚಿವರು

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

ರಾಮನಗರದಿಂದ ರಾಮನ ಹೆಸರು ಬೇರ್ಪಡಿಸಿದವರು ಸರ್ವನಾಶ ಆಗಲಿದ್ದಾರೆ!

by cknewsnow desk
July 26, 2024
0

ಹೆಸರು ಬದಲಿಸಿದರೆ ಭೂಮಿ ಬೆಲೆ ಹೆಚ್ಚಾಗುವುದಿಲ್ಲ; ಹೆಚ್.ಡಿ.ಕುಮಾರಸ್ವಾಮಿ ಕಿಡಿ

Next Post
ರಾಜ್ಯದ ನರ್ಸುಗಳಿಗೆ ಬ್ರಿಟನ್ʼನಲ್ಲಿ ಬಂಪರ್; ವರ್ಷಕ್ಕೆ 20 ಲಕ್ಷ ರೂ. ಪ್ಯಾಕೇಜ್‌‌, 1,000 ಶುಶ್ರೂಶಕಿಯರಿಗೆ ಡಿಮಾಂಡ್, ಕೋವಿಡ್-‌19 ಬಿಕ್ಕಟ್ಟಿನ ನಡುವೆಯೂ ಒಳ್ಳೇ ಸುದ್ದಿ ಕೊಟ್ಟ ಡಿಸಿಎಂ

ರಾಜ್ಯದ ನರ್ಸುಗಳಿಗೆ ಬ್ರಿಟನ್ʼನಲ್ಲಿ ಬಂಪರ್; ವರ್ಷಕ್ಕೆ 20 ಲಕ್ಷ ರೂ. ಪ್ಯಾಕೇಜ್‌‌, 1,000 ಶುಶ್ರೂಶಕಿಯರಿಗೆ ಡಿಮಾಂಡ್, ಕೋವಿಡ್-‌19 ಬಿಕ್ಕಟ್ಟಿನ ನಡುವೆಯೂ ಒಳ್ಳೇ ಸುದ್ದಿ ಕೊಟ್ಟ ಡಿಸಿಎಂ

Leave a Reply Cancel reply

Your email address will not be published. Required fields are marked *

Recommended

ಗಡಿನಾಡಿನಲ್ಲಿ ಸುರಿದ ವರ್ಷಧಾರೆ:  ಬಾಗೇಪಲ್ಲಿ ತಾಲೂಕಿನ ಬರಡುಬೆಟ್ಟದಲ್ಲಿ ಸೃಷ್ಟಿಯಾದ ಕೊಡಗಿನ ʼಅಬ್ಬಿʼಯಂಥ ಭವ್ಯ ಜಲಪಾತ

ಗಡಿನಾಡಿನಲ್ಲಿ ಸುರಿದ ವರ್ಷಧಾರೆ: ಬಾಗೇಪಲ್ಲಿ ತಾಲೂಕಿನ ಬರಡುಬೆಟ್ಟದಲ್ಲಿ ಸೃಷ್ಟಿಯಾದ ಕೊಡಗಿನ ʼಅಬ್ಬಿʼಯಂಥ ಭವ್ಯ ಜಲಪಾತ

4 years ago
ಬ್ಲ್ಯಾಕ್‌ ಫಂಗಸ್‌ ಪೀಡಿತರಿಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ವಿಶೇಷ ವಾರ್ಡ್

ಮೂರನೇ ಅಲೆ ತಡೆಗೆ ಬಿರುಸಿನ ತಯಾರಿ, ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಮಕ್ಕಳ ಚಿಕಿತ್ಸಾ ವಿಭಾಗ ಅಭಿವೃದ್ಧಿ ಮಾಡಲಿದೆ ಸರಕಾರ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ