• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಚಿಕ್ಕಬಳ್ಳಾಪುರದ ಜಾನಪದಕ್ಕೆ ಜಗತ್ಮನ್ನಣೆ ತಂದುಕೊಟ್ಟ ಕೀಲುಕುದುರೆ ಖ್ಯಾತಿಯ ಗೊಂಬೆ ನಾರಾಯಣಪ್ಪಅವರಿಗೆ ಜಾನಪದ ಅಕಾಡೆಮಿ ಗರಿ

P K Channakrishna by P K Channakrishna
January 4, 2021
in CHIKKABALLAPUR, STATE
Reading Time: 1 min read
0
ಚಿಕ್ಕಬಳ್ಳಾಪುರದ ಜಾನಪದಕ್ಕೆ ಜಗತ್ಮನ್ನಣೆ ತಂದುಕೊಟ್ಟ ಕೀಲುಕುದುರೆ ಖ್ಯಾತಿಯ ಗೊಂಬೆ ನಾರಾಯಣಪ್ಪಅವರಿಗೆ ಜಾನಪದ ಅಕಾಡೆಮಿ ಗರಿ
971
VIEWS
FacebookTwitterWhatsuplinkedinEmail

ಚಿಕ್ಕಬಳ್ಳಾಪುರ: ಜಿಲ್ಲೆಯ ದೇಸಿ ಪ್ರತಿಭೆ, ಮಹತ್ತ್ವದ ಕಲೆಯಾದ ಕೀಲು ಕುದುರೆಯಂಥ ಜಾನಪದ ಕಲಾ ಪ್ರಕಾರಕ್ಕೆ ಎಣೆ ಇಲ್ಲದ ಸೇವೆ ಮಾಡಿದ ಕೀಲುಕುದುರೆ ನಾರಾಯಣಪ್ಪ ಅವರಿಗೆ 2020ನೇ ಸಾಲಿನ ಜಾನಪದ ಅಕಾಡೆಮಿ ಪ್ರಶಸ್ತಿ ಅರಸಿ ಬಂದಿದೆ. ಈ ಪ್ರಶಸ್ತಿ ಜಿಲ್ಲೆಗೆ ಹೊಸ ವರ್ಷದಲ್ಲೊಂದು ಗರಿಯನ್ನು ಮೂಡಿಸಿದೆ.

ಚಿಕ್ಕಬಳ್ಳಾಪುರ ತಾಲ್ಲೂಕಿನ ಕಸಬಾ ಹೋಬಳಿ ಎಸ್.ಗೊಲ್ಲಹಳ್ಳಿ ಗ್ರಾಮದ ನಾಗಪ್ಪ ಅವರ ಪುತ್ರ ನಾರಾಯಣಪ್ಪ. ಅವರ ದ್ವಿತೀಯ ಪುತ್ರ. 4ನೇ ತರಗತಿವರೆಗೆ ಮಾತ್ರ ವಿದ್ಯಾಭ್ಯಾಸ ಮಾಡಿಕೊಂಡು ಆಮೇಲೆ ವ್ಯವಸಾಯದಲ್ಲಿ ತೊಡಗಿಕೊಂಡಿದ್ದವರು. 15ನೇ ವಯಸ್ಸಿನಿಂದ ಕೃಷಿ ಜತೆಗೆ ಗ್ರಾಮೀಣ ಕಲೆಯಾದ ಕೀಲು ಕುದುರೆ ಕಲೆಯನ್ನು ತಂದೆಯಿಂದ ಕಲಿತುಕೊಂಡರು.

  • ನಾರಾಯಣಪ್ಪ ಅವರ ಕೀಲುಕುದುರೆ ಕಲಾ ತಂಡ.

ಅಂದಿನಿಂದ ರಾಜ್ಯದ ವಿವಿಧ ಜಿಲ್ಲೆ, ವಿವಿಧ ರಾಜ್ಯಗಳಲ್ಲಿ ಜಾತ್ರೆ, ದೇವರ ಉತ್ಸವ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಮೆರವಣಿಗೆ, ಕರಗ ಮಹೋತ್ಸವಗಳು ಸೇರಿದಂತೆ ಅನೇಕ ಸಂಭ್ರಮಗಳಲ್ಲಿ ಭಾಗಿಯಾಗುತ್ತಿದ್ದರು. ನಂತರದ ದಿನಗಳಲ್ಲಿ ಕೀಲುಕುದುರೆ ಜತೆಗೆ ಗಾರುಡಿ ಗೊಂಬೆ, ಚಿಲಿಪಿಲಿ ಗೊಂಬೆ, ನವಿಲು ನೃತ್ಯ, ಕರಗ ನೃತ್ಯ, ಕರಡಿ ವೇಷ, ಹುಲಿವೇಷ, ಮರಗಾಲು ಕುಣಿತ, ಹಸುವಿನ ನೃತ್ಯದ ಕಲೆಯನ್ನು ಕಲಿತರು.

ಇದೇ ವೇಳೆ ತಮ್ಮ ಹಳ್ಳಿಯಲ್ಲೇ ಒಂದು ತಂಡವನ್ನು ರಚಿಸಿಕೊಂಡರಲ್ಲದೆ, ಹಳ್ಳಿ ಮತ್ತು ಪಟ್ಟಣ, ನಗರ ಪ್ರದೇಶಗಳ ಜನರಿಗೂ ಈ ಅಪರೂಪದ ಕಲೆಯನ್ನು ಪರಿಚಯಿಸುತ್ತಾ ತಂಡವನ್ನು ಮತ್ತಷ್ಟು ಬಲಪಡಿಸಿದರು. ಈ ತಂಡದ ಜತೆ ದೇಶಾದ್ಯಂತ ಸುತ್ತಿದ ನಾರಾಯಣಪ್ಪ, ವಿವಿಧ ರಾಜ್ಯಗಳಲ್ಲಿ ತಮ್ಮ ಕಲೆಗಳನ್ನು ಪ್ರದರ್ಶನ ಮಾಡಿದ್ದಾರೆ.

ಜತೆಗೆ, ರಾಜ್ಯದ ಬೆಳಗಾವಿ, ವಿಜಯಪುರ, ಕೋಲಾರ, ತುಮಕೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಹಾಗೂ ಗೋವಾ, ಆಂಧ್ರ ಪ್ರದೇಶ, ತಮಿಳುನಾಡು ಮುಂತಾದ ರಾಜ್ಯಗಳಲ್ಲಿ ಅವರು ಕೀಲು ಕುದುರೆ ಕಲೆಯ ಪ್ರದರ್ಶನ ನೀಡಿದ್ದಾರೆ.

ಈಗಾಗಲೇ ನಾರಾಯಣಪ್ಪ ಅವರಿಗೆ ಅನೇಕ ಪ್ರಶಸ್ತಿಗಳು ಅರಸಿ ಬಂದಿವೆ. ಜಿಲ್ಲಾ ಮಟ್ಟದ 2018ರಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದಿದ್ದಾರೆ. ವಿವಿಧ ಸಂಘ ಸಂಸ್ಥೆಗಳವರು ಸಹ ಪ್ರಶಸ್ತಿಗಳನ್ನು ನೀಡಿ ಗೌರವಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು, ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಸಮ್ಮೇಳನಗಳಲ್ಲಿಯೂ ಭಾಗವಹಿಸಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೀಲು ಕುದುರೆ ಪ್ರದರ್ಶನ ನೀಡಿದ್ದಾರೆ.

ವಿದ್ಯೆ ಅಲ್ಪ, ಅನುಭವ ಅಗಾಧ

ನಾರಾಯಣಪ್ಪ ಅವರು ಓದಿದ್ದು ನಾಲ್ಕನೇ ಕ್ಲಾಸು ಮಾತ್ರ, ಆದರೆ ಜಾನಪದ ಕ್ಷೇತ್ರದಲ್ಲಿ ಅವರ ಅನುಭವ-ಸಾಧನೆ ಸಾಗರದಷ್ಟು. ಕಿರಿಯ ಕಲಾವಿದರಿಗೆ, ಆಸಕ್ತರಿಗೆ ತರಬೇತಿ ನೀಡುತ್ತಿದ್ದಾರೆ. ನಮ್ಮ ಗ್ರಾಮೀಣ ಕಲೆ ಸಂಸ್ಕೃತಿಯನ್ನು ಉಳಿಸಬೇಕು ಎನ್ನುವ ದೃಷ್ಷಿಯಿಂದ ಶ್ರೀ ಬಂಡೆಮ್ಮ ಜಾನಪದ ಮತ್ತು ಸಾಂಸ್ಕೃತಿಕ ಕಲಾ ಸಂಘವನ್ನು ರಚಿಸಿ, ಆ ಮೂಲಕ ಯುವಕ, ಯುವತಿಯರ ತಂಡಗಳನ್ನು ರಚಿಸಿ ಅವರೆಲ್ಲರಿಗೂ ತರಬೇತಿ ನೀಡಿ ಗ್ರಾಮೀಣ ಕೀಲು ಕುದುರೆ ಕಲೆಯನ್ನು ಬೆಳೆಸಲು ಪ್ರಯತ್ನಿಸುತ್ತಿದ್ದಾರೆ. ವಿಶೇಷವೆಂದರೆ ಜಾನಪದ ಕಲೆಗಳಿಗೆ ಬಳಸುವ ಎಲ್ಲಾ ಪರಿಕರಗಳನ್ನು ಸ್ವಯಂ ನಾರಾಯಣಪ್ಪ ಅವರೇ ತಯಾರಿಸಿಕೊಳ್ಳುತ್ತಾರೆ. ಇದೆಲ್ಲವನ್ನು ಆಸಕ್ತ ಯುವಜನರಿಗೂ ಕಲಿಸುತ್ತಿದ್ದಾರೆ. ಹೀಗಾಗಿ ಎಲ್ಲರಿಗೂ ಇವರು ಪ್ರೀತಿಪಾತ್ರ ಗೊಂಬೆ ನಾರಾಯಣಪ್ಪ.

  • ಈ ಸುದ್ದಿಯನ್ನು ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
ಚಿಕ್ಕಬಳ್ಳಾಪುರದ ಕೀಲು ಕುದುರೆ ನಾರಾಯಣಪ್ಪ, ಕೋಲಾರದ ತತ್ತ್ವಪದದ ದನಿ ಕೆ.ಎನ್.ಚಂಗಪ್ಪ ಅವರಿಗೆ 2020ನೇ ಸಾಲಿನ ಜಾನಪದ ಅಕಾಡೆಮಿ ಪ್ರಶಸ್ತಿ

Tags: chikkaballapurfolk artkarnatakakeelu kudaurenarayanappa
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಕೆಜಿಎಫ್ ಚಾಪ್ಟರ್ 2: ಖಡಕ್‌ ಲುಕ್‌ನಲ್ಲಿ  ರಾಖಿಭಾಯ್‌! ಕೆಜಿಎಫ್‌ ಟೈಮ್ಸ್‌ನಲ್ಲಿ ಬ್ರೇಕ್‌ ಆಯಿತು ನ್ಯೂಸ್!! ಟೀಸರ್‌ ನಿರೀಕ್ಷೆಯಲ್ಲಿ ಅಭಿಮಾನಿಗಳು

ಕೆಜಿಎಫ್ ಚಾಪ್ಟರ್ 2: ಖಡಕ್‌ ಲುಕ್‌ನಲ್ಲಿ ರಾಖಿಭಾಯ್‌! ಕೆಜಿಎಫ್‌ ಟೈಮ್ಸ್‌ನಲ್ಲಿ ಬ್ರೇಕ್‌ ಆಯಿತು ನ್ಯೂಸ್!! ಟೀಸರ್‌ ನಿರೀಕ್ಷೆಯಲ್ಲಿ ಅಭಿಮಾನಿಗಳು

Leave a Reply Cancel reply

Your email address will not be published. Required fields are marked *

Recommended

ನಾನು ಸುಳ್ಳು ಹೇಳುತ್ತಿಲ್ಲ ಎಂದ ಡಿಕೆಶಿ

ನಾನು ಸುಳ್ಳು ಹೇಳುತ್ತಿಲ್ಲ ಎಂದ ಡಿಕೆಶಿ

4 years ago
ಎಸ್ಸೆಮ್ಮೆಸ್‌ ಮಾಡಿದರೂ ಸಾಕು, ಸಮಸ್ಯೆ ಪರಿಹಾರ; ಗುಣಾತ್ಮಕ ಶಿಕ್ಷಣಕ್ಕೆ ಒತ್ತು ನೀಡಿ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಶ್ರಮಿಸುವೆ ಎಂದ ನೂತನ ಡಿಡಿಪಿಐ ಕೆ.ಎಂ.ಜಯರಾಮ‌ ರೆಡ್ಡಿ

ಎಸ್ಸೆಮ್ಮೆಸ್‌ ಮಾಡಿದರೂ ಸಾಕು, ಸಮಸ್ಯೆ ಪರಿಹಾರ; ಗುಣಾತ್ಮಕ ಶಿಕ್ಷಣಕ್ಕೆ ಒತ್ತು ನೀಡಿ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಶ್ರಮಿಸುವೆ ಎಂದ ನೂತನ ಡಿಡಿಪಿಐ ಕೆ.ಎಂ.ಜಯರಾಮ‌ ರೆಡ್ಡಿ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ