• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ಜ.15ರಿಂದ ಉನ್ನತ ಶಿಕ್ಷಣದ ಎಲ್ಲ ಆಫ್‌ಲೈನ್‌ ತರಗತಿ, ಹೊಸ SOP; ವಿದ್ಯಾರ್ಥಿಗಳ ಹಾಜರಿ ಕಡ್ಡಾಯ & ಸೋಂಕು ಇಲ್ಲದಿದ್ದರೆ ಪರೀಕ್ಷೆ ಬೇಡ

cknewsnow desk by cknewsnow desk
January 12, 2021
in NEWS IN USE, STATE
Reading Time: 1 min read
0
ಜ.15ರಿಂದ ಉನ್ನತ ಶಿಕ್ಷಣದ ಎಲ್ಲ ಆಫ್‌ಲೈನ್‌ ತರಗತಿ, ಹೊಸ SOP; ವಿದ್ಯಾರ್ಥಿಗಳ ಹಾಜರಿ ಕಡ್ಡಾಯ & ಸೋಂಕು ಇಲ್ಲದಿದ್ದರೆ ಪರೀಕ್ಷೆ ಬೇಡ
917
VIEWS
FacebookTwitterWhatsuplinkedinEmail

ಬೆಂಗಳೂರು: ಇದೇ ಜನವರಿ 15ರಿಂದ ಎಲ್ಲ ಪದವಿ, ಸ್ನಾತಕೋತ್ತರ, ಪಾಲಿಟೆಕ್ನಿಕ್‌ ಹಾಗೂ ಎಂಜಿನಿಯರಿಂಗ್‌ ಆಫ್‌ಲೈನ್‌ ತರಗತಿಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಹೊಸ ಎಸ್‌ಒಪಿ ಜಾರಿ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು; ಯಾವುದೇ ಕಾರಣಕ್ಕೂ ಈ ಮಾರ್ಗಸೂಚಿ ಮೀರುವಂತಿಲ್ಲ. ಶಿಕ್ಷಣ ಸಂಸ್ಥೆಗಳ ಜತೆಗೆ, ವಿದ್ಯಾರ್ಥಿಗಳು ಕೂಡ ಪಾಲಿಸಬೇಕು. ಇನ್ನು, ವಿದ್ಯಾರ್ಥಿಗಳು ನೇರ ತರಗತಿಗಳಿಗೂ ಹಾಜರಾಗಬಹುದು, ಆನ್‌ಲೈನ್‌ ತರಗತಿಗೂ ಹಾಜರಾಗಬಹದು. ಆ ಆಯ್ಕೆ ವಿದ್ಯಾರ್ಥಿಗಳಿಗೇ ಇರುತ್ತದೆ. ಎರಡರಲ್ಲಿ ಒಂದಕ್ಕೆ ಹಾಜರಾತಿ ಕಡ್ಡಾಯ ಎಂದು ಅವರು ಹೇಳಿದರು.

ಹೊಸ ಎಸ್‌ಒಪಿ ಹೀಗಿದೆ

  • ಆಫ್‌ಲೈನ್‌ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಪೋಷಕರಿಂದ ನಿಗದಿತ ನಮೂನೆಯಲ್ಲಿ ಕಡ್ಡಾಯವಾಗಿ ಒಪ್ಪಿಗೆ ಪತ್ರ ತರಬೇಕು. ಈ ಪತ್ರ ತರದಿದ್ದರೆ ನೇರ ತರಗತಿಗಳಿಗೆ ಪ್ರವೇಶ ಇರುವುದಿಲ್ಲ.
  • ಮಾರ್ಗಸೂಚಿಯಂತೆ ಆಫ್‌ಲೈನ್‌ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಕಾಲೇಜಿನಲ್ಲಿ ಲಭ್ಯವಿರುವ ಕೊಠಡಿಗಳ ಸಂಖ್ಯೆಗೆ ಅನುಗುಣವಾಗಿ ವಿದ್ಯಾರ್ಥಿಗಳಿಗೆ ಆಸನದ ವ್ಯವಸ್ಥೆ ಮಾಡಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ನಿಯಮಗಳನ್ನು ಮೀರುವಂತಿಲ್ಲ. ದೈಹಿಕ ಅಂತರ ಕಡ್ಡಾಯ. ತರಗತಿ ವೇಳಾಪಟ್ಟಿಯನ್ನು ಕಾಲೇಜಿನ ಹಂತದಲ್ಲಿಯೇ ಸಿದ್ಧ ಮಾಡಿಕೊಳ್ಳಬೇಕು.
  • ಬೋಧನಾ, ಪ್ರಾಕ್ಟಿಕಲ್‌, ಪ್ರಾಜೆಕ್ಟ್‌ ತರಗತಿಗಳನ್ನು ಅಗತ್ಯಬಿದ್ದರೆ ಪಾಳಿ ಆಧಾರದಲ್ಲಿ ಮಾಡಬಹುದು.
  • ನೇರ ತರಗತಿಗಳಿಗೆ ಹಾಜರಾಗಲು ಇಚ್ಛಿಸದ ವಿದ್ಯಾರ್ಥಿಗಳು ಆನ್‌ಲೈನ್‌ ತರಗತಿಗಳಿಗೆ ಹಾಜರಾಗಬಹುದು. ಇಂಥ ವಿದ್ಯಾರ್ಥಿಗಳಿಗೆ ಪಠ್ಯದ ಬಗ್ಗೆ ಇರುವ ಅನುಮಾನ, ಗೊಂದಲಗಳನ್ನು ನಿವಾರಿಸಲು ಪ್ರತಿದಿನ ಭೌತಿಕ ಸಂಪರ್ಕ ತರಗತಿಗಳನ್ನು (Contact Classes) ನಡೆಸಬಹುದು. ಇಂಥ ಸಂಪರ್ಕ ತರಗತಿಗಳನ್ನು ನಡೆಸುವಾಗಲೂ ಆರೋಗ್ಯ ಇಲಾಖೆಯ ಮಾರ್ಗಸೂಚಿಗಳನ್ನು ಪಾಲಿಸಲೇಬೇಕು. ಪ್ರತಿ ಹಂತದಲ್ಲೂ ದೈಹಿಕ ಅಂತರ ಬಹಳ ಮುಖ್ಯವಾಗಿರುತ್ತದೆ.
  • ಎಲ್ಲ ಅಧ್ಯಾಪಕರು ತಮ್ಮ ತರಗತಿಗಳ ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಕುರಿತು ಮುಂದಿನ ಕನಿಷ್ಠ ಇಂದು ತಿಂಗಳ ಕಾಲ ಪ್ರತಿ ತರಗತಿಗೆ ಸಂಬಂಧಿಸಿದ ಅಧ್ಯಯನ ಸಾಮಗ್ರಿಯನ್ನು ವಾಟ್ಸಾಪ್‌, ಇ ಮೇಲ್‌ ಅಥವಾ ಟೆಲಿಗ್ರಾಂ ಮೂಲಕ ಕಳಿಸಬೇಕು. ಇದು ಕಡ್ಡಾಯ. ಜತೆಗೆ, ವಿಡಿಯೋ ಪಾಠಗಳು, ಪವರ್‌ ಪಾಯಂಟ್‌ ಪ್ರೆಸೆಂಟೇಶನ್‌, ಇ-ಪುಸ್ತಕ, ಇ-ನೋಟ್ಸ್‌, ಆಡಿಯೋ ಪುಸ್ತಕ, ಅಭ್ಯಾಸ ಪ್ರಶ್ನೆಗಳನ್ನು ಇತ್ಯಾದಿ ಅಧ್ಯಯನ ಸಾಮಗ್ರಿಯನ್ನು ಕಡ್ಡಾಯವಾಗಿ ಕಾಲೇಜ್‌ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಬೇಕು.
  • ಇನ್ನು ಆನ್‌ಲೈನ್‌ ಅಥವಾ ಆಫ್‌ಲೈನ್‌ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಆನ್‌ ಕ್ಯಾಂಪಸ್‌ ಮತ್ತು ಆಫ್‌ ಕ್ಯಾಂಪಸ್‌ ಹಾಸ್ಟೆಲುಗಳಲ್ಲಿ ಉಳಿದುಕೊಳ್ಳಬಹುದು.

ಸಾಮಾನ್ಯ ಮಾರ್ಗಸೂಚಿ

  • ತರಗತಿಗಳ ಆರಂಭಕ್ಕೆ ಮುನ್ನ ಕಾಲೇಜಿನ ಕಟ್ಟಡ, ಮುಖ್ಯದ್ವಾರ, ಗ್ರಂಥಾಲಯ, ಶೌಚಾಲಯ, ಕೊಠಡಿ, ಪೀಠೋಪಕರಣ ಹಾಗೂ ಆಧ್ಯಯನ ಪುಸ್ತಕಗಳನ್ನು ಸ್ಯಾನಿಟೈಸ್‌ ಮಾಡಬೇಕು. ಜತೆಗೆ, ದ್ವಾರದಲ್ಲಿಯೇ ಎಲ್ಲರ ಥರ್ಮಲ್‌ ಸ್ಕೀನಿಂಗ್‌ ಹಾಗೂ ಸ್ಯಾನಿಟೈಸ್‌ ವ್ಯವಸ್ಥೆ ಕಡ್ಡಾಯ.
  • ಗಮನಾರ್ಹ ಅಂಶವೆಂದರೆ; ಎಲ್ಲ ವಿದ್ಯಾರ್ಥಿಗಳು, ಬೋಧಕರು, ಬೋಧಕೇತರ ಸಿಬ್ಬಂದಿ ಕೋವಿಡ್-‌೧೯ ಪರೀಕ್ಷೆಗೆ ಒಳಪಡುವ ಅಗತ್ಯವಿಲ್ಲ. ಆದರೆ, ಕೋವಿಡ್‌ ಲಕ್ಷಣಗಳು ಇರುವವರು ಕಡ್ಡಾಯವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಹತ್ತಿರದಲ್ಲೇ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳೊಂದಿಗೆ ಎಲ್ಲ ಕಾಲೇಜುಗಳು ಮ್ಯಾಪಿಂಗ್‌ ಮಾಡಿಕೊಳ್ಳಬೇಕು.
  • ವಿದ್ಯಾರ್ಥಿಗಳ ಹಾಜರಾತಿ ಪ್ರತಿ ಕೊಠಡಿಗೆ ಶೇ.೫೦ ಮೀರುವಂತಿಲ್ಲ. ಒಂದು ಹಾಜರಾತಿ ಹೆಚ್ಚಿದರೆ ಹೆಚ್ಚುವರಿ ಕೊಠಡಿ ವ್ಯವಸ್ಥೆ ಮಾಡಿಕೊಳ್ಳಬೇಕು. ನೇರ ತರಗತಿಗೆ ಹಾಜರಾಗುವ ವಿದ್ಯಾರ್ಥಿ ಕಡ್ಡಾಯವಾಗಿ ಮನೆಯಿಂದಲೇ ಊಟ, ಕುಡಿಯುವ ನೀರು ತಂದುಕೊಳ್ಳಬೇಕು. ಮಾಸ್ಕ್‌, ಸ್ಯಾನಿಟೈಸರ್‌ ಕೂಡ ಕಡ್ಡಾಯ. ಬೋಧಕರಿಗೂ, ಇತರೆ ಎಲ್ಲ ಸಿಬ್ಬಂದಿಗೂ ಇದು ಅನ್ವಯವಾಗುತ್ತದೆ.
  • ಲೈಬ್ರರಿ, ಕ್ಯಾಂಟೀನ್‌ ಆರಂಭಕ್ಕೆ ಅಡ್ಡಿ ಇಲ್ಲ. ಆದರೆ ಮಾರ್ಗಸೂಚಿ ಮೀರುವಂತಿಲ್ಲ. ಜತೆಗೆ, ಎನ್‌ಎಸ್‌ಎಸ್‌ ಹಾಗೂ ಎನ್‌ಸಿಸಿ ಚಟುವಟಿಕೆಗಳನ್ನು ಕೋವಿಡ್‌ ಮಾರ್ಗಸೂಚಿಯಂತೆ ಆರಂಭಿಸಬಹುದು.

ನೂತನ ಮಾರ್ಗಸೂಚಿಯ ವಿವರವಾದ ಕರಡನ್ನು ಎಲ್ಲ ಶಿಕ್ಷಣ ಸಂಸ್ಥೆ, ಕಾಲೇಜುಗಳಿಗೆ ಕಳಿಸಲಾಗಿದ್ದು, ಆಯಾ ಸಂಸ್ಥೆಗಳ ಆಡಳತ ಮಂಡಳಿ, ಪ್ರಾಂಶುಪಾಲರು ಕೂಲಂಕಷವಾಗಿ ಗಮನಿಸಿ ಜಾರಿ ಮಾಡಬೇಕು ಎಂದು ಉಪ ಮುಖ್ಯಮಂತ್ರಿಗಳು ಕೋರಿದ್ದಾರೆ.

Lead reference image by bnmk photographs

Tags: college reopeningCovid-19karnataka education
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ರಾಜ್ಯವನ್ನು ತಲುಪಿದ 6.48 ಲಕ್ಷ ಡೋಸ್ ಲಸಿಕೆ; ಬೆಳಗಾವಿಗೆ 1.40 ಲಕ್ಷ ಡೋಸ್; ಆನಂದರಾವ್ ವೃತ್ತದ ಸಂಗ್ರಹ ಕೇಂದ್ರದಲ್ಲಿ 24×7 ಹೈ ಅಲರ್ಟ್

ರಾಜ್ಯವನ್ನು ತಲುಪಿದ 6.48 ಲಕ್ಷ ಡೋಸ್ ಲಸಿಕೆ; ಬೆಳಗಾವಿಗೆ 1.40 ಲಕ್ಷ ಡೋಸ್; ಆನಂದರಾವ್ ವೃತ್ತದ ಸಂಗ್ರಹ ಕೇಂದ್ರದಲ್ಲಿ 24x7 ಹೈ ಅಲರ್ಟ್

Leave a Reply Cancel reply

Your email address will not be published. Required fields are marked *

Recommended

ಸರ್ವಾಧಿಕಾರಿಗಳಿಗೇ ಚರಮಗೀತೆ ಹಾಡಿದ ಸೋಶಿಯಲ್ ಮೀಡಿಯಾ

ಸರ್ವಾಧಿಕಾರಿಗಳಿಗೇ ಚರಮಗೀತೆ ಹಾಡಿದ ಸೋಶಿಯಲ್ ಮೀಡಿಯಾ

5 years ago
ಆಪದ್ಭಾಂದವನಂತೆ ಬಂದ ದರ್ಶನ್; ರಾಜರಾಜೇಶ್ವರಿ ನಗರದಲ್ಲಿ ಬದಲಾಗುತ್ತಾ ಲೆಕ್ಕಾಚಾರ

ಆಪದ್ಭಾಂದವನಂತೆ ಬಂದ ದರ್ಶನ್; ರಾಜರಾಜೇಶ್ವರಿ ನಗರದಲ್ಲಿ ಬದಲಾಗುತ್ತಾ ಲೆಕ್ಕಾಚಾರ

5 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ