• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಜನಸೇವಕ ಸಮಾವೇಶದಲ್ಲಿ ಹೊಸದಾಗಿ ಗೆದ್ದ ಗ್ರಾಮ ಪಂಚಾಯಿತಿ ಸದಸ್ಯರಿಗೆ ಕರ್ತವ್ಯದ ಪಾಠ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸುಧಾಕರ್‌

cknewsnow desk by cknewsnow desk
January 13, 2021
in CHIKKABALLAPUR
Reading Time: 1 min read
0
ಜನಸೇವಕ ಸಮಾವೇಶದಲ್ಲಿ ಹೊಸದಾಗಿ ಗೆದ್ದ ಗ್ರಾಮ ಪಂಚಾಯಿತಿ ಸದಸ್ಯರಿಗೆ ಕರ್ತವ್ಯದ ಪಾಠ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸುಧಾಕರ್‌
912
VIEWS
FacebookTwitterWhatsuplinkedinEmail

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರ ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ಬಿಜೆಪಿಯ ಸಂಘಟನೆಯನ್ನು ಗಟ್ಟಿಗೊಳಿಸಲು ಎಲ್ಲರೂ ಶಕ್ತಿಮೀರಿ ಪ್ರಯತ್ನ ಮಾಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕರೆ ನೀಡಿದರು.

ಚಿಕ್ಕಬಳ್ಳಾಪುರದಲ್ಲಿ ಬುಧವಾರ ನಡೆದ ಜನಸೇವಕ ಸಮಾವೇಶದಲ್ಲಿ ಮಾತನಾಡಿದ ಅವರು, ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಈ ಭಾಗದಲ್ಲಿ ಬಿಜೆಪಿಯ ಸಂಘಟನೆ ಗಟ್ಟಿಯಾಗಬೇಕು. ಇದಕ್ಕಾಗಿ ಎಲ್ಲರೂ ಶಕ್ತಿಮೀರಿ ಕೆಲಸ ಮಾಡಬೇಕು ಎಂದರು.

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅಭ್ಯರ್ಥಿಗಳು ವೈಯಕ್ತಿಕ ವರ್ಚಸ್ಸಿನ ಮೇಲೆ ಗೆದ್ದಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಪ್ರಧಾನಿಯಾದಾಗ ನಾನು ಕೂಡ ಪ್ರಧಾನ ಸೇವಕ ಎಂದಿದ್ದರು. ಲಾಲ್‌ಬಹಾದ್ದೂರ್ ಶಾಸ್ತ್ರಿ ಅವರು ಕೂಡ ಇದನ್ನೇ ಹೇಳಿದ್ದರು. ನಾವು ಇದೇ ರೀತಿ ಕೆಲಸ ಮಾಡಬೇಕು. ಚುನಾಯಿತ ಪ್ರತಿನಿಧಿಗೆ ಕುರ್ಚಿ ಇದೆ ಎಂಬ ಆಲೋಚನೆ ಬರಬಾರದು. ಸೇವಾ ಮನೋಭಾವ ಇರಬೇಕು. ಎರಡೇ ಸ್ಥಾನಗಳಿಂದ ಆರಂಭವಾಗಿ 300ಕ್ಕೂ ಹೆಚ್ಚು ಸ್ಥಾನ ಗಳಿಸಿದೆ, ಸ್ವಂತ ಬಲದ ಮೇಲೆ ಬಿಜೆಪಿ ಸರಕಾರ ರಚನೆಯಾಗಿದೆ ಎಂದರೆ, ಅದಕ್ಕೆ ತತ್ವ ಸಿದ್ದಾಂತದಲ್ಲಿ ನಂಬಿಕೆ ಇಟ್ಟಿರುವ ಕಾರ್ಯಕರ್ತರು ಕಾರಣ ಎಂದರು ಸಚಿವರು.

ಬಾಗೇಪಲ್ಲಿ, ಚಿಂತಾಮಣಿಯಲ್ಲಿ ನಾಯಕತ್ವಕ್ಕೆ ಒತ್ತು

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ 29 ಗ್ರಾಮ ಪಂಚಾಯಿತಿಗಳು ಕೂಡ ಬಿಜೆಪಿಗೆ ದಕ್ಕಿವೆ. ಗೌರಿಬಿದನೂರು, ಶಿಡ್ಲಘಟ್ಟದಲ್ಲೂ ಗಣನೀಯ ಸಾಧನೆಯಾಗಿದೆ. ಬಾಗೇಪಲ್ಲಿ, ಗುಡಿಬಂಡೆಯಲ್ಲೂ ಉತ್ತಮ ಸಾಧನೆಯ ನಿರೀಕ್ಷೆ ಇತ್ತು. ಚಿಂತಾಮಣಿಯಲ್ಲಿ ಬಿಜೆಪಿಗೆ ಕೆಲ ಸ್ಥಾನಗಳು ಸಿಕ್ಕಿವೆ. ಬಾಗೇಪಲ್ಲಿ, ಚಿಂತಾಮಣಿ ಕ್ಷೇತ್ರಗಳಲ್ಲಿ ಸ್ಥಳೀಯ ನಾಯಕತ್ವಕ್ಕೆ ಒತ್ತು ನೀಡಲಾಗುವುದು ಎಂದರು.

ಪತ್ನಿ ಗೆದ್ದ ಕಡೆ ಪತಿ ಕಾರುಬಾರು ಬೇಡ

ಊರಿನ ಸಮಸ್ಯೆ ಬಗ್ಗೆ ಎಲ್ಲರಿಗೂ ಗೊತ್ತಿರುತ್ತದೆ. ಆದರೆ ಅದನ್ನು ಸರಿಯಾಗಿ ಗಮನಿಸಿರುವುದಿಲ್ಲ. ವಸತಿ, ಬೀದಿ ದೀಪ ಮೊದಲಾದ ಸೌಲಭ್ಯಗಳ ಕೊರತೆ, ಕುಟುಂಬಗಳ ಸಮಸ್ಯೆಗಳನ್ನು ಪಟ್ಟಿ ಮಾಡಿ ಕಷ್ಟ, ಸುಖಗಳಿಗೆ ಸ್ಪಂದಿಸಬೇಕು. ಹೀಗೆ ಸ್ಪಂದಿಸಿದರೆ ಐದಾರು ಬಾರಿ ಅಭ್ಯರ್ಥಿಗಳು ಗೆಲ್ಲುತ್ತಾರೆ.
ಮಹಿಳೆಯರಿಗೆ ಮೀಸಲು ನೀಡಿ ಚುನಾವಣೆಯಲ್ಲಿ ಮುಖ್ಯವಾಹಿನಿಗೆ ತರಲಾಗಿದೆ. ಗ್ರಾಮ ಪಂಚಾಯಿತಿಯಲ್ಲಿ ಮಹಿಳೆಯರು ಆಯ್ಕೆಯಾದರೆ ಅವರ ಪತಿ ರಾಜ್ಯಭಾರ ಮಾಡಬಾರದು. ಮಹಿಳೆಯರೇ ಖುದ್ದಾಗಿ ಧೈರ್ಯದಿಂದ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಗ್ರಾಮ ಪಂಚಾಯಿತಿ ಸದಸ್ಯರು ಕಾನೂನು ಓದಿಕೊಂಡು ಅಧಿಕಾರಿಗಳಿಗಿಂತ ಹೆಚ್ಚು ಮಾಹಿತಿ ತಿಳಿದುಕೊಂಡು ಕಾರ್ಯನಿರ್ವಹಿಸಬೇಕು. ಇಲ್ಲದಿದ್ದರೆ ಅಧಿಕಾರಿಗಳು ದಿಕ್ಕು ತಪ್ಪಿಸುತ್ತಾರೆ ಎಂದು ಸಲಹೆ ನೀಡಿದರು.

ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ನಡೆದ ಜನಸೇವಕ ಸಮಾವೇಶ ಅದ್ದೂರಿಯಾಗಿ ನಡೆಯಿತು. ಪಕ್ಷದ ಜಿಲ್ಲಾಧ್ಯಕ್ಷರಾದ ರಾಮಲಿಂಗಪ್ಪ, ರಾಜ್ಯ ಕಾರ್ಯದರ್ಶಿ ಮತ್ತು ಜನಸೇವಕ ಸಮಾವೇಶ ಸಂಚಾಲಕ ಅನೀಲ್ ಕುಮಾರ್, ಪಕ್ಷದ ರಾಜ್ಯ ಕಾರ್ಯದರ್ಶಿ ಹಾಗೂ ವಿಭಾಗದ ಪ್ರಭಾರಿ ಕೇಶವ ಪ್ರಸಾದ್, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಕಾಂತರಾಜ್, ವಿಧಾನ ಪರಿಷತ್‌ ಸದಸ್ಯರಾದ ವೈ.ಎನ್.ನಾರಾಯಣ ಸ್ವಾಮಿ, ಚಿದಾನಂದಗೌಡ, ಚಿಕ್ಕಬಳ್ಳಾಪುರ ಉಸ್ತುವಾರಿ ಕೃಷ್ಣಾರೆಡ್ಡಿ, ಮಾಜಿ ಜಿಲ್ಲಾಧ್ಯಕ್ಷರಾದ ಡಾ.ಜಿ.ವಿ.ಮಂಜುನಾಥ್ ಹಾಗೂ ಜಿಲ್ಲೆಯ ಎಲ್ಲ ಪದಾಧಿಕಾರಿಗಳು ಮತ್ತು ಮಂಡಲ ಅಧ್ಯಕ್ಷರು, ಜಿಲ್ಲಾ ಮತ್ತು ಮಂಡಲ ಮೋರ್ಚಾ ಅಧ್ಯಕ್ಷರು, ಜಿಲ್ಲಾ ಮತ್ತು ಮಂಡಲ ಪದಾಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿ ಸದಸ್ಯರು, ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Tags: bjpchikkaballapurdr k sudhakarjana sevak samavesha
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

by cknewsnow desk
July 23, 2024
0

ಸಂಸದರಿಗೆ ಅಭಿನಂದನೆ ಸಲ್ಲಿಸಿದ ಆರ್.ಮಿಥುನ್ ರೆಡ್ಡಿ; ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ನಿಂದ ಬಾಗೇಪಲ್ಲಿಗೆ ಹೆಚ್ಚು ಅನುಕೂಲ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

by cknewsnow desk
July 23, 2024
0

ಶ್ರೀ ಯೋಗಿನಾರೇಯಣ ಬಲಿಜ ಟ್ರಸ್ಟ್ ವತಿಯಿಂದ ಆಚರಣೆ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

by cknewsnow desk
April 14, 2024
0

ಎನ್'ಡಿಎ ಅಭ್ಯರ್ಥಿ ಡಾ.ಕೆ ಸುಧಾಕರ್ ಗೆಲ್ಲಿಸುವುದೇ ನಮ್ಮ ಗುರಿ

ದ್ವಿತೀಯ ಪಿಯುಸಿ ಫಲಿತಾಂಶ; ಗುಡಿಬಂಡೆ ಕಾಲೇಜ್ ಉತ್ತಮ ಸಾಧನೆ

ದ್ವಿತೀಯ ಪಿಯುಸಿ ಫಲಿತಾಂಶ; ಗುಡಿಬಂಡೆ ಕಾಲೇಜ್ ಉತ್ತಮ ಸಾಧನೆ

by cknewsnow desk
April 10, 2024
0

ವಿಜ್ಞಾನ ವಿಭಾಗದಲ್ಲಿ ಶೇ.79 ಫಲಿತಾಂಶ

ದೇಶಕ್ಕೆ ಭಷ್ಟಾಚಾರಕ್ಕಿಂತ ವಾತಾವರಣ ಬದಲಾವಣೆಯಿಂದ ಭಾರೀ ನಷ್ಟವಾಗುತ್ತಿದೆ: ಪ್ರೊ.ಸುರೇಶ್

ದೇಶಕ್ಕೆ ಭಷ್ಟಾಚಾರಕ್ಕಿಂತ ವಾತಾವರಣ ಬದಲಾವಣೆಯಿಂದ ಭಾರೀ ನಷ್ಟವಾಗುತ್ತಿದೆ: ಪ್ರೊ.ಸುರೇಶ್

by cknewsnow desk
April 9, 2024
0

ರಣಬಿಸಿಲನ್ನು ತಡೆಯುವ ಶಕ್ತಿ ಕೇವಲ ಮರಗಿಡಗಳಿಗೆ ಮಾತ್ರ ಇದೆ

ಗುಡಿಬಂಡೆ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಬ್ಲಾಸ್ಟಿಂಗ್

ಗುಡಿಬಂಡೆ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಬ್ಲಾಸ್ಟಿಂಗ್

by cknewsnow desk
March 6, 2024
0

ಸ್ಥಳಕ್ಕೆ ದಿಢೀರ್ ಭೇಟಿ ನೀಡಿದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

Next Post
ಮಂಚೇನಹಳ್ಳಿ; ಫಸಲು ಕೈಗೆ ಬರುವ ಹೊತ್ತಿನಲ್ಲಿ ರಾತ್ರೋರಾತ್ರಿ ಬೀನ್ಸ್‌ ಬೆಳೆಯನ್ನು ಸರ್ವನಾಶ ಮಾಡಿ ವಿಕೃತಿ ಮೆರೆದ ಕಿಡಿಗೇಡಿಗಳು

ಮಂಚೇನಹಳ್ಳಿ; ಫಸಲು ಕೈಗೆ ಬರುವ ಹೊತ್ತಿನಲ್ಲಿ ರಾತ್ರೋರಾತ್ರಿ ಬೀನ್ಸ್‌ ಬೆಳೆಯನ್ನು ಸರ್ವನಾಶ ಮಾಡಿ ವಿಕೃತಿ ಮೆರೆದ ಕಿಡಿಗೇಡಿಗಳು

Leave a Reply Cancel reply

Your email address will not be published. Required fields are marked *

Recommended

30,000 ಜನರಿಗೆ ಒಂದೇ ಪ್ರಾಥಮಿಕ ಆರೋಗ್ಯ ಕೇಂದ್ರ! ಉತ್ತಮ ಆರೋಗ್ಯ ಸೇವೆಗಾಗಿ ಪಿಎಚ್‌ಸಿಗಳಿಗೆ ಫುಲ್ ಟ್ರೀಟ್‌ಮೆಂಟ್ ಕೊಡಲಾಗುವುದು ಎಂದ ಡಾಕ್ಟರ್‌ ಸುಧಾಕರ್‌

30,000 ಜನರಿಗೆ ಒಂದೇ ಪ್ರಾಥಮಿಕ ಆರೋಗ್ಯ ಕೇಂದ್ರ! ಉತ್ತಮ ಆರೋಗ್ಯ ಸೇವೆಗಾಗಿ ಪಿಎಚ್‌ಸಿಗಳಿಗೆ ಫುಲ್ ಟ್ರೀಟ್‌ಮೆಂಟ್ ಕೊಡಲಾಗುವುದು ಎಂದ ಡಾಕ್ಟರ್‌ ಸುಧಾಕರ್‌

4 years ago
ಚಿಕ್ಕಬಳ್ಳಾಪುರ, ಕೋಲಾರವನ್ನು ಭೂ ರಣಹದ್ದುಗಳಿಗಿಟ್ಟ ಬಿಜೆಪಿಯಿಂದ ಈಗ ಗ್ರಾಮ ಸ್ವರಾಜ್ಯದ ಭಜನೆ!

ಗ್ರೇಟರ್‌ ಹೈದರಾಬಾದ್ ಚುನಾವಣೆಯಲ್ಲಿ‌ ಐವತ್ತರ ಹತ್ತಿರಕ್ಕೆ ಬಂದು ನಿಂತ ಬಿಜೆಪಿಗೆ ಇದು ಜಸ್ಟ್‌ ಬಿಗಿನಿಂಗ್‌ ಮಾತ್ರವೇ!

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ