• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS

ಮುನಿರತ್ನ ಇಲ್ಲದೆ ಏಳು ಸಚಿವರು ಪ್ರಮಾಣ ಸ್ವೀಕರಿಸಿದ್ದೇನೋ ಸರಿ! ಆದರೆ, ನಾಗೇಶ್ ವಿಕೆಟ್ ಪತನವಾಗಿದ್ದೇಕೆ? ಅನ್ಯಾಯ ಆಗಿದ್ದು ಕೋಲಾರಕ್ಕೆ, ಖುಷಿಯಾಗಿದ್ದು ವಿರೋಧಿಗಳಿಗೆ

cknewsnow desk by cknewsnow desk
January 13, 2021
in NEWS & VIEWS, STATE
Reading Time: 1 min read
0
ಮುನಿರತ್ನ ಇಲ್ಲದೆ ಏಳು ಸಚಿವರು ಪ್ರಮಾಣ ಸ್ವೀಕರಿಸಿದ್ದೇನೋ ಸರಿ! ಆದರೆ, ನಾಗೇಶ್ ವಿಕೆಟ್ ಪತನವಾಗಿದ್ದೇಕೆ? ಅನ್ಯಾಯ ಆಗಿದ್ದು ಕೋಲಾರಕ್ಕೆ, ಖುಷಿಯಾಗಿದ್ದು ವಿರೋಧಿಗಳಿಗೆ
914
VIEWS
FacebookTwitterWhatsuplinkedinEmail

ಬೆಂಗಳೂರು/ಕೋಲಾರ: ಕೋಲಾರ ಜಿಲ್ಲೆಯ ಮುಳಬಾಗಿಲು ಶಾಸಕ ಹಾಗೂ ಬುಧವಾರ ಬೆಳಗ್ಗೆವರೆಗೂ ಅಬಕಾರಿ ಸಚಿವರಾಗಿದ್ದ ಎಚ್.ನಾಗೇಶ್ ಅವರ ರಾಜೀನಾಮೆ ಪಡೆದ ಬೆನ್ನಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಸಂಪುಟವನ್ನು ವಿಸ್ತರಣೆ ಮಾಡಿದ್ದಾರೆ.

ಗಜ ಪ್ರಸವದಂತೆ ಆಗಿಬಿಟ್ಟ ಈ ವಿಸ್ತರಣೆಯ ತಥಂಗದಲ್ಲಿ ಬಿಜೆಪಿಯ ಹಳಬರು ಮತ್ತು ವಲಸಿಗರು ಸೇರಿ ಏಳು ಜನ ಸಚಿವರಾಗಿ ಪ್ರಮಾಣ ಸ್ವೀಕಾರ ಮಾಡಿದ್ದಾರೆ. ಹಿರಿಯ ಶಾಸಕ ಉಮೇಶ್ ಕತ್ತಿ, ಸಿ.ಪಿ.ಯೋಗೇಶ್ವರ್, ಎಂ.ಟಿ.ಬಿ. ನಾಗರಾಜ್, ಅರವಿಂದ ಲಿಂಬಾವಳಿ, ಮುರುಗೇಶ್ ನಿರಾಣಿ, ಎಸ್.ಅಂಗಾರ, ಆರ್.ಶಂಕರ್ ಸಂಪುಟ ದರ್ಜೆ  ಸಚಿವರಾಗಿ ಪ್ರಮಾಣ‌ ವಚನ ಸ್ವೀಕರಿಸಿದ್ದಾರೆ.

’ರಾಜ್ಯದ ಸಚಿವ ಸಂಪುಟದ ಸದಸ್ಯರಾಗಿ ಇಂದು ಘನತೆವೆತ್ತ ರಾಜ್ಯಪಾಲ ಶ್ರೀ ವಜುಭಾಯಿ ವಾಲಾ ರವರಿಂದ ಪ್ರಮಾಣವಚನ ಸ್ವೀಕರಿಸಿದ ಎಲ್ಲ ಶಾಸಕರಿಗೂ ಹೃತ್ಪೂರ್ವಕ ಅಭಿನಂದನೆಗಳು. ರಾಜ್ಯದ ಅಭಿವೃದ್ಧಿ ನಿಟ್ಟಿನಲ್ಲಿ, ಜನರ ನಿರೀಕ್ಷೆಗಳಿಗೆ ತಕ್ಕಂತೆ ನಮ್ಮ ಕರ್ತವ್ಯಗಳನ್ನು ನಿರ್ವಹಿಸೋಣ’ : ಮುಖ್ಯಮಂತ್ರಿ @BSYBJP. pic.twitter.com/xRgOnjiZp6

— CM of Karnataka (@CMofKarnataka) January 13, 2021

ರಾಜಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲ ಈ ಏಳೂ ಮಂದಿಗೆ ಗೌಪ್ಯತೆಯ ಪ್ರತಿಜ್ಞಾವಿಧಿ ಬೋಧಿಸಿದರು.

ಪ್ರಮಾಣ ಸ್ವೀಕಾರ ಮಾಡಿದವರ ಪೈಕಿ ವಿಧಾನ ಪರಿಷತ್ ಸದಸ್ಯರಾದ ಹೊಸಕೋಟೆಯ ಎಂಟಿಬಿ ನಾಗರಾಜ್ ಅವರು ಕಾಂಗ್ರೆಸ್‌ನಿಂದ ಬಿಜೆಪಿಗೆ ವಲಸೆ ಬಂದವರು. ರಾಣೆಬೆನ್ನೂರು ಕ್ಷೇತ್ರದಿಂದ ಪಕ್ಷೇತರರಾಗಿ ಗೆದ್ದು ಬಂದಿದ್ದ ಆರ್.ಶಂಕರ್‌ ಹಿಂದಿನ ಸಮ್ಮಿಶ್ರ ಸರಕಾರದಲ್ಲೂ ಮಂತ್ರಿಯಾಗಿದ್ದರು. ಸಿ.ಪಿ.ಯೋಗೀಶ್ವರ್‌ ಚನ್ನಪಟ್ಟಣದಲ್ಲಿ ಸೋತು ಆಪರೇಷನ್‌ ಕಮಲಕ್ಕೆ ಹೆಗಲು ಕೊಟ್ಟವರು. ಇನ್ನು ಉಮೇಶ್ ಕತ್ತಿ ಎಂಟನೇ ಬಾರಿಗೆ ಶಾಸಕರಾದವರು. ಮೂಲ ಬಿಜೆಪಿಗರಲ್ಲದಿದ್ದರೂ ಯಡಿಯೂರಪ್ಪ ಕಾರಣಕ್ಕಾಗಿ ಬಹಳ ದಿನಗಳ ಹಿಂದೆಯೇ ಕಮಲ ಪಾಳಯಕ್ಕೆ ಬಂದಿದ್ದವರು. ಇನ್ನು ಅರವಿಂದ ಲಿಂಬಾವಳಿ, ಮುರುಗೇಶ್‌ ನಿರಾಣಿ ಹಾಗೂ ಸುಳ್ಯದ ಅಂಗಾರ ಅವರು ಬಿಜೆಪಿಯ ಪಕ್ಕಾ ಮೂಲ ನಿವಾಸಿಗಳು.

ಒಂದೆಡೆ ತಮ್ಮನ್ನು ನಂಬಿ ಬಂದ ಎಂಟಿಬಿ, ಶಂಕರ್‌ ಅವರ ಹಿತವನ್ನು ಸಿಎಂ ರಕ್ಷಣೆ ಮಾಡಿದ್ದಾರೆ. ಯೋಗೀಶ್ವರ್‌ ಅವರಿಗೆ ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ. ಈ ಪೈಕಿ ಮುರುಗೇಶ್‌ ನಿರಾಣಿ ಸಂಪುಟಕ್ಕೆ ಸೇರಿದ ಬಗ್ಗೆ ಅನೇಕ ಚರ್ಚೆಗಳು ನಡೆಯುತ್ತಿವೆ. ಕೊನೆ ಕ್ಷಣದಲ್ಲಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಯಿತಾ? ಎಂದು ಕೇಳಲಾಗುತ್ತಿದೆ. ಸ್ವಪಕ್ಷೀಯ ಕೋಟಾದಲ್ಲಿ ನಿಜಕ್ಕೂ ಅರ್ಹತೆ ಇದ್ದ ಅಂಗಾರ ಕೊನೆಗೂ ಮಂತ್ರಿಯಾಗಿದ್ದಾರೆ. ಅರವಿಂದ ಲಿಂಬಾವಳಿ ಸಂಪುಟಕ್ಕೆ ಸೇರಿದ ಕಾರಣಗಳ ಬಗ್ಗೆ ಯಾರು ತುಟಿ ಬಿಚ್ಚುತ್ತಿಲ್ಲವಾದರೂ, ನಿರಾಣಿ ಎಂಟ್ರಿಯೇ ಹೆಚ್ಚು ಚರ್ಚೆಯಾಗುತ್ತಿದೆ. ಕತ್ತಿಗೆ ಮೊದಲೇ ಸ್ವತಃ ಸಿಎಂ ಅವರೇ ಭರವಸೆ ನೀಡಿದ್ದರು.

ಮುನಿರತ್ನಗೆ ತಪ್ಪಿದ ಅವಕಾಶ

ಸಂಪುಟ ಸೇರಲೇಬೇಕೆಂದು ಪಣ ತೊಟ್ಟಿದ್ದ, ಕಾಂಗ್ರೆಸ್‌ನಿಂದ ವಲಸೆ ಬಂದು ಕಳೆದ ವಿಧಾನಸಭೆ ಚುನಾವಣೆಯ ಉಪ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಮುನಿರತ್ನ ಅವರಿಗೆ ಇನ್ನಿಲ್ಲದ ನಿರಾಶೆಯಾಗಿದೆ. ಅವರನ್ನು ಮನವೊಲಿಸಿ ಏಳು ಜನರ ಪ್ರಮಾಣ ವಚನ ಶಾಸ್ತ್ರ ಮುಗಿಸಲು ಸಿಎಂ ಹರಸಾಹಸವನ್ನೇ ನಡೆಸಬೇಕಾಯಿತು. ಸುಪ್ರೀಂ ಕೋರ್ಟ್‌ನಲ್ಲಿದ್ದ ಪ್ರಕರಣವನ್ನು ಮುಂದಿಕ್ಕಿ ಅವರನ್ನು ಸಂಪುಟದಿಂದ ದೂರ ಇಡಲಾಯಿತು. ಈ ಬಗ್ಗೆ ಸಿಟ್ಟಾಗಿರುವ ಮುನಿರತ್ನ ತನಗೆ ಅನ್ಯಾಯವಾಗಿದೆ ಎಂದು ಆಪ್ತರ ಮುಂದೆ ಬೇಸರ ವ್ಯಕ್ತಪಡಿಸಿದ್ದಾರೆ.

ನಾಗೇಶ್‌ಗೆ ಅಲ್ಲ, ಕೋಲಾರಕ್ಕೆ ಅನ್ಯಾಯ

ಮುಳಬಾಗಿಲು ಮೀಸಲು ವಿಧಾನಸಭೆ ಕ್ಷೇತ್ರದಿಂದ ಅನಿರೀಕ್ಷಿತವಾಗಿ ಗೆದ್ದುಬಂದ ಎಚ್.ನಾಗೇಶ್ ಅತಂತ್ರ ಫಲಿತಾಂಶ ಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರಕಾರದಲ್ಲಿ ಕ್ಯಾಬಿನೇಟ್‌ ಮಂತ್ರಿಯಾಗಿದ್ದವರು. ಆಪರೇಷನ್‌ ಕಮಲ ಯಶಸ್ವಿಯಾದ ಮೇಲೆ ಎಚ್‌ಡಿಕೆ ಸರಕಾರಕ್ಕೆ ಮೊದಲು ಕೈಕೊಟ್ಟವರು ಇದೇ ನಾಗೇಶ್.‌ ಎಲ್ಲರಿಗಿಂತ ಮೊದಲೇ ಬಿಜೆಪಿ ಪಾಳಯದಲ್ಲಿ ಕಾಣಿಸಿಕೊಂಡಿದ್ದ ಅವರನ್ನು ನಂತರ ಸೇರಿಕೊಂಡವರು ಆರ್.ಶಂಕರ್. ಯಡಿಯೂರಪ್ಪ ಸರಕಾರದಲ್ಲಿ ಭರ್ಜರಿಯಾದ ಅಬಕಾರಿ ಖಾತೆಯೇ ಅವರಿಗೆ ಸಿಕ್ಕಿತು.

ನಾಗೇಶ್‌ ಅವರ ರಾಜೀನಾಮೆ ಪಡೆದ ನಂತರ ಸಂಪುಟದಲ್ಲಿ ಕೋಲಾರ ಜಿಲ್ಲೆಗೆ ಪ್ರಾತಿನಿಧ್ಯ ಇಲ್ಲದಂತಾಗಿದೆ. ಸರಕಾರ ರಚನೆ ಮಾಡಲು ನನ್ನ ಪಾತ್ರವೂ ಇತ್ತು. ‌ಸಮ್ಮಿಶ್ರ ಸರಕಾರದಲ್ಲಿ ಸಚಿವ ಸ್ಥಾನವಿದ್ದರೂ ನಾನು ರಾಜೀನಾಮೆ ನೀಡಿ ಯಡಿಯೂರಪ್ಪ ಅವರಿಗೆ ಬೆಂಬಲ ನೀಡಿದ್ದೆ. ಈಗ ಬಹುಮತ ಇದೆ ಎಂದು ನನಗೆ ಅನ್ಯಾಯ ಮಾಡಲಾಗಿದೆ. ನನ್ನ ಸಮುದಾಯವನ್ನು ವಂಚಿಸಲಾಗಿದೆ ಎಂದು ಅವರು ಅಲವತ್ತುಕೊಂಡಿದ್ದಾರೆ. ಅವರ ಗೋಳನ್ನು ಬಿಜೆಪಿ ಕೇಳುವ ಸ್ಥಿತಿಯಲ್ಲಿ ಇಲ್ಲ. ಯಾಕೆಂದರೆ, ಅಕ್ಕಪಕ್ಕದ ಪಕ್ಷಗಳಿಂದ ಶಾಸಕರು ಬಿಜೆಪಿಗೆ ಗುಳೆ ಬಂದ ಮೇಲೆ ಪಕ್ಷೇತರ ಶಾಸಕ ನಾಗೇಶ್‌ ಕಿಮ್ಮತ್ತು ಕಡಿಮೆಯಾಗಿದೆ. ಎಲ್ಲರ ವಿಷಯದಲ್ಲೂ ಮಾತು ಉಳಿಸಿಕೊಳ್ಳುತ್ತಿರುವ ಯಡಿಯೂರಪ್ಪ ನಾಗೇಶ್‌ ವಿಷಯದಲ್ಲಿ ಮಾತ್ರ ಹೀಗೆ ಮಾಡುತ್ತಿರುವುದು ಕೋಲಾರದ ಪಾಲಿಗೆ ಅನ್ಯಾಯವೇ ಸರಿ ಎನ್ನುತ್ತಾರೆ ಬಿಜೆಪಿ ಹಿರಿಯ ನಾಯಕರೊಬ್ಬರು.

ಇಲ್ಲಿ ಅನ್ಯಾಯವಾಗಿರುವುದು ನಾಗೇಶ್‌ ಅವರಿಗಲ್ಲ. ಕೋಲಾರ ಜಿಲ್ಲೆಗೆ ಎನ್ನುತ್ತಿದ್ದಾರೆ ಅವರ ಬೆಂಬಲಿಗರು. ಸಂಸದ ಮುನಿಸ್ವಾಮಿ, ಜಿಲ್ಲೆಯ ಕೆಲ ಬಿಜೆಪಿ ನಾಯಕರು ನಾಗೇಶ್‌ ಅವರಿಗೆ ಕೈಕೊಟ್ಟರು. ನಿರಂತರವಾಗಿ ಅವರು ಪಕ್ಷದ ನಾಯಕರಿಗೆ ದೂರು ನೀಡುತ್ತಿದ್ದರು ಅನ್ನುತ್ತಾರೆ ಅವರು. ಅಷ್ಟೇ ಅಲ್ಲ, ಇತ್ತೀಚೆಗೆ ಅಬಕಾರಿ ಇಲಾಖೆ ಹಿರಿಯ ಅಧಿಕಾರಿಯೊಬ್ಬರ ವರ್ಗಾವಣೆಗೆ ನಾಗೇಶ್‌ ಹಣ ಕೇಳಿದ್ದರು ಎಂಬ ವಿಷಯ ಬಹಿರಂಗವಾಗಿತ್ತು. ಈ ಬಗ್ಗೆ ಆ ಅಧಿಕಾರಿಯ ಪುತ್ರಿ ಪ್ರಧಾನಿ ಮೋದಿ ಅವರಿಗೆ ದೂರು ನೀಡಿದ್ದರು. ಈ ಕಾರಣಕ್ಕೆ ನಾಗೇಶ್‌ ವಿಕೆಟ್‌ ಪತನವಾಗಿರಬಹುದಾ? ಎಂಬ ಚರ್ಚೆ ಜಿಲ್ಲೆಯ ಆಜುಬಾಜಿನಲ್ಲಿ ನಡೆಯುತ್ತಿದೆ. ಇನ್ನೊಂದೆಡೆ ನಾಗೇಶ್‌ ರಾಜೀನಾಮೆ ನೀಡುತ್ತಿದ್ದಂತೆಯೇ ಮುಳಬಾಗಿಲಿನಲ್ಲಿ ಕೆಲವರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಅವರು ಮಾಜಿ ಶಾಸಕ ಕೊತ್ತನೂರು ಮಂಜುನಾಥ್‌ ಬೆಂಬಲಿಗರು ಎನ್ನಲಾಗಿದೆ. ಇದು ಕೋಲಾರ ಜಿಲ್ಲೆಯ ಸದ್ಯದ ಸ್ಥಿತಿ. ನಮಗೆ ಒಂದು ಕಣ್ಣು ಹೋದರೂ ಪರವಾಗಿಲ್ಲ, ಪಕ್ಕದವನ ಎರಡೂ ಕಣ್ಣು ಹೋಗಲಿ ಎನ್ನುವ ಜಾಯಮಾನ ಇದೆಂದರೆ ತಪ್ಪೇನಲ್ಲ.

ಸಂಜೆ ಹೊತ್ತಿಗೆ ಹೊಸ ಟ್ವಿಸ್ಟ್‌

ಮಂತ್ರಿ ಮಂಡಲ ವಿಸ್ತರಣೆಯಾಗಿ ಸಂಜೆ ಹೊತ್ತಿಗೆ ಭಿನ್ನಮತದ ಬೆಂಕಿ ಹೊತ್ತಿಕೊಳ್ಳುವ ಹೊತ್ತಿಗೆ ಎಚ್.ನಾಗೇಶ್‌ ಅವರನ್ನು ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಅಧ್ಯಕ್ಷಗಿರಿಯನ್ನು ನೀಡಿ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಆದೇಶ ಹೊರಡಿಸಿದ್ದಾರೆ. ಈ ಎಲ್ಲ ತೆರೆಮರೆಯ ಕಸರತ್ತುಗಳಲ್ಲಿ ನಾಗೇಶ್‌ಗೆ ಜತೆಯಾಗಿ ನಿಂತವರು ಹಿರಿಯ ಸಚಿವ ಅಶೋಕ್.‌ ಒಲ್ಲದ ಮನಸ್ಸಿನಿಂದಲೇ ಅವರು ನಿಗಮವನ್ನು ಒಪ್ಪಿಕೊಂಡಿದ್ದಾರೆಂದು ಗೊತ್ತಾಗಿದೆ.

Tags: bjpbs yediyurappakarnataka cabinet expansion
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ನಮ್ಮ ದೇಶದಲ್ಲೇ ತಯಾರಾದ ಕೊರೊನಾ ಲಸಿಕೆ ಕುರಿತು ಅಗೌರವ ಬೇಡ; ಭಾರತ್ ಬಯೋಟೆಕ್ ನಂಬಿಕೆಗೆ ಅರ್ಹವಾದ ಕಂಪನಿ ಎಂದ ಡಾ.ಕೆ.ಸುಧಾಕರ್

ಜನವರಿ 16ರಂದು ಲಸಿಕೆ ವಿತರಣೆ; ಕೊಟ್ಟ ಲಸಿಕೆ ಪಡೆಯಬೇಕು, ಅದೇ ಬೇಕು-ಇದೇ ಬೇಕೆಂದು ಡಿಮಾಂಡ್‌ ಮಾಡುವಂತಿಲ್ಲ

Leave a Reply Cancel reply

Your email address will not be published. Required fields are marked *

Recommended

ಇಟ್ಟಿಗೆರಾಯನ ದುರ್ಗವೆಂಬ 700 ವರ್ಷಗಳ ಐತಿಹಾಸಿಕ ಕೋಟೆ! ಆಡಳಿತ ನಡೆಸುವವರ ಅನಾದರಕ್ಕೆ ಪರಾಕಾಷ್ಠೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೊಂದು ಹಾಳುಹಂಪೆ!!

ಇಟ್ಟಿಗೆರಾಯನ ದುರ್ಗವೆಂಬ 700 ವರ್ಷಗಳ ಐತಿಹಾಸಿಕ ಕೋಟೆ! ಆಡಳಿತ ನಡೆಸುವವರ ಅನಾದರಕ್ಕೆ ಪರಾಕಾಷ್ಠೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೊಂದು ಹಾಳುಹಂಪೆ!!

4 years ago
ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಉಚಿತ ವಿದ್ಯುತ್

ಲೋಕಸಭೆ ಚುನಾವಣೆ ನಂತರ ಗ್ಯಾರಂಟಿ ಯೋಜನೆ ರದ್ದು ಹೇಳಿಕೆ; ಬ್ಲ್ಯಾಕ್’ಮೇಲ್ ರಾಜಕಾರಣ ಎಂದ ಹೆಚ್.ಡಿ.ಕುಮಾರಸ್ವಾಮಿ

1 year ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ