• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home ET CINEMA

ಬಾಹುಬಲಿ ಪ್ರಭಾಸ್‌ ನಟನೆಯ #ಸಲಾರ್‌ ಸಿನಿಮಾಗೆ ಹೈದರಾಬಾದ್‌ನಲ್ಲಿ ಮುಹೂರ್ತ; ರಾಮಾನಾಯ್ಡು ಸ್ಟುಡಿಯೋ‌ದಲ್ಲಿ ಕನ್ನಡ-ತೆಲುಗು ಸಿನಿಜಗತ್ತಿನ ಮಹಾ ಸಮ್ಮಿಲನ, ಸೆಟ್ಟೇರಿದ ಇಂಡಿಯನ್‌ ಸಿನಿಮಾ ಡ್ರೀಮ್‌ ಪ್ರಾಜೆಕ್ಟ್‌

cknewsnow desk by cknewsnow desk
January 15, 2021
in ET CINEMA, NATION, STATE
Reading Time: 3 mins read
0
ಬಾಹುಬಲಿ ಪ್ರಭಾಸ್‌ ನಟನೆಯ #ಸಲಾರ್‌ ಸಿನಿಮಾಗೆ ಹೈದರಾಬಾದ್‌ನಲ್ಲಿ ಮುಹೂರ್ತ; ರಾಮಾನಾಯ್ಡು ಸ್ಟುಡಿಯೋ‌ದಲ್ಲಿ ಕನ್ನಡ-ತೆಲುಗು ಸಿನಿಜಗತ್ತಿನ ಮಹಾ ಸಮ್ಮಿಲನ, ಸೆಟ್ಟೇರಿದ ಇಂಡಿಯನ್‌ ಸಿನಿಮಾ ಡ್ರೀಮ್‌ ಪ್ರಾಜೆಕ್ಟ್‌
923
VIEWS
FacebookTwitterWhatsuplinkedinEmail
  • ಸಲಾರ್‌ ಚಿತ್ರದ ಮುಹೂರ್ತದ ವೇಳೆ ಯಶ್‌ ಮತ್ತು ಪ್ರಭಾಸ್.‌‌ / ಮೇಲಿನ ಚಿತ್ರ

ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಪ್ರಭಾಸ್‌, ಯಶ್‌, ವಿಜಯ್‌ ಕಿರಗಂದೂರು, ಪ್ರಶಾಂತ್‌ ನೀಲ್‌ ಮತ್ತು ಟೀಮ್‌ ಕೆಜಿಎಫ್ ಭಾಗಿ

  • ಯಶ್, ವಿಜಯ್‌ ಕಿರಗಂದೂರು, ಪ್ರಶಾಂತ್‌ ನೀಲ್‌, ಪ್ರಭಾಸ್

ಹೈದರಾಬಾದ್:‌ ಕನ್ನಡ ಚಿತ್ರರಂಗದ ಸ್ಥಾಯಿಯನ್ನು ದಿಗಂತಕ್ಕೆ ವಿಸ್ತರಿಸುವ ಹಾಗೂ ಇಡೀ ಭಾರತೀಯ ಚಿತ್ರರಂಗದಲ್ಲಿ ಕನ್ನಡ ಪ್ರತಿಭೆಗಳ ಶಕ್ತಿಯನ್ನು ಸಾಕ್ಷಾತ್ಕರಿಸುವ ವರದಿಯೊಂದು ಇಂದು ಹೈದರಾಬಾದ್‌ನ ರಾಮಾನಾಯ್ಡು ಸ್ಟುಡಿಯೋದಿಂದ ಬಂದಿದೆ.

ಬಾಹುಬಲಿ ಖ್ಯಾತಿಯ ಪ್ರಭಾಸ್‌ ನಟಿಸುತ್ತಿರುವ, ʼಕೆಜಿಎಫ್‌ʼ ಚಿತ್ರದಂಥ ಬಿಗ್‌ ಬಜೆಟ್‌ ಇಂಡಿಯನ್‌ ಸಿನಿಮಾವನ್ನು ನಿರ್ಮಾಣ ಮಾಡಿದ ಪ್ರತಿಷ್ಠಿತ ಹೊಂಬಾಳೆ ಫಿಲ್ಮ್ಸ್‌ನ ವಿಜಯ್‌ ಕಿರಗಂದೂರು ನಿರ್ಮಿಸುತ್ತಿರುವ ಹಾಗೂ ಅದೇ ʼಕೆಜಿಎಫ್‌ʼ ಚಿತ್ರವನ್ನು ನಿರ್ದೇಶಿಸಿ ಮೊದಲ ಟೀಸರ್‌ನಿಂದಲೇ ಜಗತ್ತಿನ ಎಲ್ಲ ದಾಖಲೆಗಳನ್ನು ಬ್ರೇಕ್‌ ಮಾಡಿರುವ ಪ್ರಶಾಂತ್‌ ನೀಲ್‌ ನಿರ್ದೇಶನದ ʼಸಲಾರ್‌ʼ ಚಿತ್ರಕ್ಕೆ ರಾಮಾನಾಯ್ಡು ಸ್ಟುಡಿಯೋದಲ್ಲಿ ಶುಕ್ರವಾರ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.

ಮಕರ ಸಂಕ್ರಮಣದ ನಂತರದ ದಿನವೇ ಕನ್ನಡ ಚಿತ್ರರಂಗಕ್ಕೆ, ಭಾರತೀಯ ಚಿತ್ರಪ್ರೇಮಿಗಳಿಗೆ ಭರ್ಜರಿ ಸುದ್ದಿ ನೀಡಿರುವ ʼಸಲಾರ್‌ʼ ಚಿತ್ರತಂಡದ ಸಂಭ್ರಮದಲ್ಲಿ ಕರ್ನಾಟಕದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಭಾಗಿಯಾಗಿದ್ದರು. ಬೆಳಗ್ಗೆ 11 ಗಂಟೆಗೆ ಸರಿಯಾಗಿ ಮುಹೂರ್ತದ ಪೂಜೆ ನೆರವೇರಿತು. ಚಿತ್ರದ ಹೀರೋ ಪ್ರಭಾಸ್‌, ತೆಲುಗು ಮತ್ತು ಕನ್ನಡ ಚಿತ್ರರಂಗಗಳ ಅನೇಕ ಗಣ್ಯರು, ತಾರೆಯರು ಪಾಲ್ಗೊಂಡು ಶುಭ ಹಾರೈಸಿದರು. ʼಸಲಾರ್‌ʼ ಚಿತ್ರದ ಮುಹೂರ್ತದ ಸುದ್ದಿ ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದ್ದು, ರಾಷ್ಟ್ರ ಮಟ್ಟದಲ್ಲಿ ದೊಡ್ಡ ಸುದ್ದಿಯಾಗಿ ಹೊರಹೊಮ್ಮಿದೆ.

  • ವಿಜಯ್‌ ಕಿರಗಂದೂರು, ಡಾ.ಸಿ.ಎನ್.ಅಶ್ವತ್ಥನಾರಾಯಣ, ಪ್ರಭಾಸ್

ಶುಭ ಹಾರೈಸಿದ ಡಿಸಿಎಂ

ಈ ಸಂದರ್ಭದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಾ.ಸಿಎ.ಎನ್.ಅಶ್ವತ್ಥನಾರಾಯಣ; “ಕನ್ನಡದಲ್ಲಿ ತಮ್ಮ ಹೊಂಬಾಳೆ ಫಿಲ್ಮ್ಸ್‌ ವತಿಯಿಂಧ ʼಕೆಜಿಎಫ್ ಚಾಪ್ಟರ್‌-1ʼ, ʼಕೆಜಿಎಫ್‌ ಚಾಪ್ಟರ್-‌2ʼ ಅದಕ್ಕೂ ಹಿಂದೆ ಹಲವು ಯಶಸ್ವಿ ಚಿತ್ರಗಳನ್ನು ನಿರ್ಮಾಣ ಮಾಡಿರುವ ವಿಜಯ್‌ ಕಿರಗಂದೂರು ʼಸಲಾರ್‌ʼ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಹಾಗೆಯೇ ಕೆಜಿಎಫ್‌ ಸರಣಿ ಚಿತ್ರಗಳ ಮೂಲಕ ಇಡೀ ಭಾರತೀಯ ಚಿತ್ರರಂಗವೇ ಕನ್ನಡ ಚಿತ್ರರಂಗದತ್ತ ನೋಡುವಂತೆ ಮಾಡಿದ ಪ್ರಶಾಂತ್‌ ನೀಲ್‌ ಅವರು ʼಸಲಾರ್‌ʼ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಅದರಲ್ಲೂ ಪ್ರಭಾಸ್‌ ಅವರು ಈ ಚಿತ್ರದಲ್ಲಿ ನಟಿಸುತ್ತಿರುವುದು ತುಂಬಾ ಸಂತೋಷ ಉಂಟು ಮಾಡಿದೆ. ಈ ಮೂಲಕ ಭಾಷೆ, ಗಡಿಗಳನ್ನು ಮೀರಿ ಕನ್ನಡ-ತೆಲುಗು ಚಿತ್ರರಂಗಗಳು ಒಂದಾಗಿ ಮುಂದೆ ಹೋಗುತ್ತಿರುವುದಕ್ಕೆ ಆನಂದವಾಗಿದೆ. ಇಡೀ ಚಿತ್ರತಂಡಕ್ಕೆ ಶುಭವಾಗಲಿ. ʼಬಾಹುಬಲಿʼ ಚಿತ್ರದಿಂದ ಕನ್ನಡದ ಅಭಿಮಾನಿಗಳ ಮನಗೆದ್ದಿರುವ ಪ್ರಭಾಸ್‌ ಅವರು ʼಸಲಾರ್‌ʼ ಚಿತ್ರದಿಂದ ಕನ್ನಡಿಗರಿಗೆ ಇನ್ನಷ್ಟು ಹತ್ತಿರವಾಗಲಿದ್ದಾರೆ” ಎಂದರು.

  • ಕೆಳಗೆ ನೋಡಿ ಸಲಾರ್‌ ಚಿತ್ರದ ಮುಹೂರ್ತ ದೃಶ್ಯಗಳ ಸ್ಲೈಡ್‌ ಶೋ..

ಪ್ರಭಾಸ್‌ ಜತೆ ಚಿತ್ರ ಖುಷಿ ಸಂಗತಿ ಎಂದ ವಿಜಯ್

“ನಾನು ʼಬಾಹುಬಲಿʼ ಚಿತ್ರವನ್ನು ನೋಡಿ ಪ್ರಭಾಸ್‌ ಅವರಿಗೆ ಫಿದಾ ಆಗಿದ್ದೆ. ಈಗ ಅವರ ಜತೆಯಲ್ಲೇ ಸಿನಿಮಾ ಮಾಡುವ ಅವಕಾಶ ಸಿಕ್ಕಿದೆ. ಇದರಿಂದ ನನಗೆ ತುಂಬಾ ಖುಷಿಯಾಗಿದೆ. ಈ ಮೂಲಕ ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿಯಲ್ಲಿ ಏಕಕಾಲಕ್ಕೆ ʼಸಲಾರ್‌ʼ ಚಿತ್ರವನ್ನು ತಯಾರು ಮಾಡುತ್ತಿದ್ದೇವೆ. ನಮ್ಮ ʼಕೆಜಿಎಫ್‌ʼ ಚಿತ್ರವನ್ನು ಡೈರೈಕ್ಟ್‌ ಮಾಡಿರುವ ಪ್ರಶಾಂತ್‌ ನೀಲ್‌ ಅವರೇ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ ಎಂದರು ನಿರ್ಮಾಪಕ ವಿಜಯ್‌ ಕಿರಗಂದೂರು.

ಮುಹೂರ್ತದಲ್ಲಿ ಪ್ರಭಾಸ್‌ ಭಾಗಿ

ʼಸಲಾರ್‌ʼ ಚಿತ್ರಕ್ಕೆ ಪ್ರಭಾಸ್‌ ಅವರ ಹೊರತಾಗಿ ನಾಯಕ ನಟಿ, ಇನ್ನಿತರೆ ತಾರಾಬಳಗ ಆಯ್ಕೆಯಾಗಿಲ್ಲ. ಚಿತ್ರವನ್ನು ಅನೌನ್ಸ್‌ ಮಾಡಿದಾಗ ಹೊರಬಿದ್ದ ಸಲಾರ್‌ ಫಸ್ಟ್‌ಲುಕ್‌ ದೇಶದೆಲ್ಲೆಡೆ ವೈರಲ್‌ ಆಗಿತ್ತು. ಪ್ರಭಾಸ್‌ ಈಗಾಗಲೇ ʼರಾಧೆ ಶ್ಯಾಂʼ ಚಿತ್ರದಲ್ಲಿ ನಟಿಸುತ್ತಿದ್ದು, ಅದರ ಚಿತ್ರೀಕರಣ ಕೊನೆ ಹಂತದಲ್ಲಿದೆ. ʼಆದಿಪುರುಷ್‌ʼ ಚಿತ್ರದ ಶೂಟಿಂಗ್‌ ಇನ್ನೇನು ಆರಂಭವಾಗಬೇಕಿದೆ. ಇದರ ಜತೆಯಲ್ಲೇ ಈಗ ʼಸಲಾರ್‌ʼ ಚಿತ್ರವೂ ಟೇಕಾಫ್‌ ಆಗಿದೆ. ನಟ ಯಶ್, ರವಿ ಬಸ್ರೂರ್​, ಭುವನ್​ ಗೌಡ ಸೇರಿದಂತೆ ಕೆಜಿಎಫ್‌ ಚಿತ್ರತಂಡದ ಅನೇಕರು ಪಾಲ್ಗೊಂಡಿದ್ದರು. ಅದರಲ್ಲೂ ಯಶ್‌ ಪ್ರಮುಖ ಆಕರ್ಷಣೆಯಾಗಿದ್ದರು.

ʼಈಶ್ವರ್‌ʼ ಚಿತ್ರದಿಂದ ಮೊದಲುಗೊಂಡು ʼಸಾಹೋʼ ತನಕ ಪ್ರಭಾಸ್‌‌ ನಟಿಸಿದ ಒಟ್ಟು 19 ಚಿತ್ರಗಳು ರಿಲೀಸ್‌ ಆಗಿವೆ. ಈ ಪೈಕಿ ʼಬಾಹುಬಲಿ-ದಿ ಬಿಗಿನಿಂಗ್‌ʼ ಹಾಗೂ ʼಬಾಹುಬಲಿ-ಕನ್‌ಕ್ಲೂಶನ್‌ʼ ಭಾರತ ಮಾತ್ರವಲ್ಲದೆ ಜಾಗತಿಕವಾಗಿಯೂ ಸದ್ದು ಮಾಡಿದ್ದವು. ಇದೀಗ ಅವರು ನಟಿಸುತ್ತಿರುವ ʼಸಲಾರ್‌ʼ ಸಿನಿಮಾ ಜಾಗತಿಕ ಮಟ್ಟದಲ್ಲಿ ಭಾರೀ ಕ್ರೇಜ್‌ ಸೃಷ್ಟಿ ಮಾಡಿದೆ.‌

  • ಸಲಾರ್‌ ಚಿತ್ರದ ಮುಹೂರ್ತದಲ್ಲಿ ಪಾಲ್ಗೊಂಡಿದ್ದ ಗಣ್ಯರು.

#Prabhas, @prashanth_neel , @VKiragandur and @TheNameIsYash at #Salaar Launch.#SalaarSagaBegins pic.twitter.com/2MVyFBT8se

— Prabhas FC (@PrabhasRaju) January 15, 2021
https://twitter.com/prashanth_neel/status/1349976826261618690

ದಿಶಾ ಪಟಾನಿ ಮತ್ತು ಜಾನ್‌ ಅಬ್ರಹಾಂ

  • ಸದ್ಯಕ್ಕೆ ಪ್ರಭಾಸ್‌ ಹೊರತುಪಡಿಸಿ ಬೇರೆ ನಟರನ್ನು ಇನ್ನೂ ಪ್ರಶಾಂತ್‌ ನೀಲ್‌ ಆಯ್ಕೆ ಮಾಡಿಲ್ಲ. ಆದರೆ, ಈ ಚಿತ್ರದಲ್ಲಿ ಪ್ರಭಾಸ್‌ ನಾಯಕಿಯಾಗಿ ಬಾಲಿವುಡ್‌ ಗ್ಲಾಮರ್‌ ಬೆಡಗಿ ದಿಶಾ ಪಟಾನಿ ನಟಿಸುವ ಸಾಧ್ಯತೆ ಇದೆ. ಇನ್ನು ವಿಲನ್‌ ಪಾತ್ರದಲ್ಲಿ ಬಾಲಿವುಡ್‌ ಹೀರೋ ಜಾನ್‌ ಅಬ್ರಹಾಂ ಕಾಣಿಸಿಕೊಳ್ಳುವ ನಿರೀಕ್ಷೆ ಇದೆ ಎಂದು ಗೊತ್ತಾಗಿದೆ. ಉಳಿದಂತೆ ಕೆಜಿಎಫ್‌ ಚಿತ್ರಗಳಿಗೆ ಕೆಲಸ ಮಾಡಿದ ಟೆಕ್ನಿಕಲ್‌ ಟೀಮ್‌ ಹಾಗೆಯೇ ಇರಲಿದೆ ಎಂಬ ಮಾಹಿತಿ ಸಿಕ್ಕಿದೆ.

Tags: indian cinemaprabhasprashanth neelsalaarsalaar pooja ceremonyyash
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ರಾಮಮಂದಿರ ನಿರ್ಮಾಣ ದೇಶ ಒಗ್ಗೂಡಿಸುವ ಕಾರ್ಯ ಎಂದ ಸಚಿವ ಡಾ.ಕೆ.ಸುಧಾಕರ್ ಅವರಿಂದ ಚಿಂತಾಮಣಿಯಲ್ಲಿ ಆರೆಸ್ಸೆಸ್‌ ಕಚೇರಿ ಲೋಕಾರ್ಪಣೆ

ರಾಮಮಂದಿರ ನಿರ್ಮಾಣ ದೇಶ ಒಗ್ಗೂಡಿಸುವ ಕಾರ್ಯ ಎಂದ ಸಚಿವ ಡಾ.ಕೆ.ಸುಧಾಕರ್ ಅವರಿಂದ ಚಿಂತಾಮಣಿಯಲ್ಲಿ ಆರೆಸ್ಸೆಸ್‌ ಕಚೇರಿ ಲೋಕಾರ್ಪಣೆ

Leave a Reply Cancel reply

Your email address will not be published. Required fields are marked *

Recommended

ಮಂಡ್ಯ ಲೋಕಸಭೆ ಅಭ್ಯರ್ಥಿ ಯಾರು?; ಸೋಮವಾರ ಸಂಜೆಯೊಳಗೆ ಹೆಚ್.ಡಿ.ಕುಮಾರಸ್ವಾಮಿ ನಿರ್ಧಾರ

ಮಂಡ್ಯ ಲೋಕಸಭೆ ಅಭ್ಯರ್ಥಿ ಯಾರು?; ಸೋಮವಾರ ಸಂಜೆಯೊಳಗೆ ಹೆಚ್.ಡಿ.ಕುಮಾರಸ್ವಾಮಿ ನಿರ್ಧಾರ

1 year ago
ಸ್ವಿಗ್ಗಿ, ಝೋಮ್ಯಾಟೊ ಇನ್ ಡೇಂಜರ್

ಸ್ವಿಗ್ಗಿ, ಝೋಮ್ಯಾಟೊ ಇನ್ ಡೇಂಜರ್

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ