• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಹುಂಡಿಯಲ್ಲಿ ಕೂಡಿಟ್ಟ ಹಣವನ್ನೂ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರಕ್ಕೆ ಅರ್ಪಿಸಿದ ಚಿಣ್ಣರ ರಾಮ ಭಕ್ತಿ ಕಂಡು ಚಕಿತರಾದ ಡಿಸಿಎಂ

cknewsnow desk by cknewsnow desk
January 26, 2021
in STATE
Reading Time: 1 min read
0
ಹುಂಡಿಯಲ್ಲಿ ಕೂಡಿಟ್ಟ ಹಣವನ್ನೂ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರಕ್ಕೆ ಅರ್ಪಿಸಿದ  ಚಿಣ್ಣರ ರಾಮ ಭಕ್ತಿ ಕಂಡು ಚಕಿತರಾದ ಡಿಸಿಎಂ
913
VIEWS
FacebookTwitterWhatsuplinkedinEmail

ರಾಮನಗರ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರಕ್ಕಾಗಿ ರಾಮನಗರದಲ್ಲಿಂದು ನಡೆದ ನಿಧಿ ಸಮರ್ಪಣಾ ಅಭಿಯಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಮನೆಮನೆಗೂ ತೆರಳಿ ನಿಧಿ ಸಂಗ್ರಹ ಮಾಡಿದರು.

ಜಿಲ್ಲಾ ಕೇಂದ್ರದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ, ನಗರದ ವಿವಿಧ ಭಾಗಗಳಲ್ಲಿ ಡಿಸಿಎಂ ಸಂಚರಿಸಿದರಲ್ಲದೆ, ಸಾರ್ವಜನಿಕರು ಶ್ರದ್ಧೆ-ಭಕ್ತಿಯಿಂದ ತಮ್ಮ ಕೈಲಾದ ಮಟ್ಟಿಗೆ ದೇಣಿಗೆಯನ್ನು ನೀಡಿದರು.

ಚಾಮುಂಡೇಶ್ವರಿ ಬಡಾವಣೆ, ಎಂ.ಜಿ.ರಸ್ತೆ, ನಗರಸಭೆ ಎದುರಿನ ಪ್ರದೇಶ, ಕೆಂಪೇಗೌಡ ವೃತ್ತ, ಪಂಚಮುಖಿ ಆಂಜನೇಯಸ್ವಾಮಿ ರಸ್ತೆ, ರೆಡ್ಡಿ ಸಾಮಿಲ್‌, ರಾಯರ ದೊಡ್ಡಿ ಪ್ರದೇಶಗಳಲ್ಲಿ ಸುಮಾರು 21ಕ್ಕೂ ಹೆಚ್ಚು ಮನೆಗಳಿಗೆ ಭೇಟಿ ನೀಡಿದ ಡಿಸಿಎಂ ಅವರಿಗೆ ಜನರು ಶ್ರೀರಾಮ ಮಂದಿರಕ್ಕೆ ದೇಣಿಗೆ ನೀಡಿದರು.

ತಮ್ಮ ಮನೆಗೆ ಬಂದ ಉಪ ಮುಖ್ಯಮಂತ್ರಿಯನ್ನು ಆದರದಿಂದ ಬರಮಾಡಿಕೊಂಡ ಜನರು, ಮಂದಿರ ನಿರ್ಮಾಣ ಆಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ಮುಖ್ಯವಾಗಿ ಹಿರಿಯ ನಾಗರೀಕರೂ, ಅದರಲ್ಲೂ ಮಹಿಳೆಯರು, ಅಯೋಧ್ಯೆಯಲ್ಲಿ ಮಂದಿರ ಸಾಕ್ಷಾತ್ಕಾರವಾಗುತ್ತಿರುವುದಕ್ಕೆ ಭಾವುಕರಾಗಿ ಪ್ರತಿಕ್ರಿಯಿಸಿದರು. ತಮ್ಮ ಉಳಿತಾಯದಲ್ಲಿದ್ದ ಹಣವನ್ನೂ ಅವರು ಡಿಸಿಎಂ ಅವರಿಗೆ ಹಸ್ತಾಂತರ ಮಾಡಿದರು.

ಪಾಕೆಟ್‌ ಮನಿ ಕೊಟ್ಟ ಚಿಣ್ಣರು

ವಿಶೇಷವೆಂದರೆ; ಚಿಣ್ಣರು ಕೂಡ ಅಪ್ಪ-ಅಮ್ಮ ತಮ್ಮ ಖರ್ಚಿಗಾಗಿ ನೀಡಿದ್ದ ಹಣವನ್ನೂ ಮಂದಿರ ನಿರ್ಮಾಣಕ್ಕೆ ದೇಣಿಗೆಯಾಗಿ ನೀಡಿ ಸಾರ್ಥಕತೆ ಮೆರೆದರು. ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ; “ರಾಮ ಮಂದಿರ ನಿರ್ಮಾಣಕ್ಕೆ ಹಣ ಕೊಡಿ ಎಂದು ಯಾರನ್ನು ಯಾರೂ ಕೇಳುತ್ತಿಲ್ಲ. ಆದರೆ ಜನರೇ ಸ್ವ-ಇಚ್ಛೆಯಿಂದ ಅಯೋಧ್ಯೆ ರಾಮನಿಗೆ ಮಂದಿರ ನಿರ್ಮಿಸಲು ಕೈಜೋಡಿಸುತ್ತಿದ್ದಾರೆ. ಅದರಲ್ಲೂ ಪುಟ್ಟ ಮಕ್ಕಳು ತಮ್ಮ ಖರ್ಚಿನ ಕಾಸನ್ನೂ ರಾಮರ ಸೇವೆಗೆ ಅರ್ಪಿಸಿದ್ದು ನನ್ನ ಮನಸ್ಸು ಉಕ್ಕಿ ಬರುವಂತೆ ಮಾಡಿತು” ಎಂದರು.

ದೇಣಿಗೆ ನೀಡುವ ಸಂದರ್ಭದಲ್ಲಿ ಭಾವುಕರಾದ ಹಿರಿಯ ನಾಗರೀಕರೊಬ್ಬರು; “ನಾನು ಬದುಕಿರುವಾಗಲೇ ಅಯೋಧ್ಯೆಯಲ್ಲಿ ನಮ್ಮ ರಾಮನಿಗೆ ಮಂದಿರ ನಿರ್ಮಾಣವಾಗುತ್ತಿದೆ. ನಮ್ಮ ಪಾಲಿಗೆ ಇದು ಅತ್ಯಂತ ಸಂತೋಷದ ಸಂಗತಿ. ಇದು ಆಗುವುದಿಲ್ಲವೇನೋ ಎಂಬ ಆತಂಕವಿತ್ತು. ಆದರೆ, ಎಲ್ಲವೂ ನಿರಾತಂಕವಾಗಿ ನಡೆಯುತ್ತಿದೆ” ಎಂದು ಡಿಸಿಎಂ ಅವರ ಕೈಹಿಡಿದು ಹೇಳಿದಾಗ ಸ್ವತಃ ಅಶ್ವತ್ಥನಾರಾಯಣ ಅವರೂ ಕ್ಷಣಕಾಲ ಭಾವುಕರಾದರು. ನಿಮ್ಮೆಲ್ಲರ ಅಭಿಲಾಶೆಯಂತೆ ರಾಮ ಮಂದಿರ ನಿರ್ಮಾಣವಾಗುತ್ತಿದೆ ಎಂದು ಆ ಹಿರಿಯರಿಗೆ ಡಿಸಿಎಂ ಹೇಳಿದರು.

ನಿಧಿ ಸಮರ್ಪಣಾ ಯಾತ್ರೆಯ ವೇಳೆ ಕೆಲ ಮನೆಗಳಲ್ಲಿ ರಾಮಪೂಜೆಯನ್ನು ಏರ್ಪಡಿಸಲಾಗಿತ್ತು. ಡಿಸಿಎಂ ಅವರು ಪೂಜೆಯಲ್ಲಿ ಭಾಗಿಯಾದರು. ಪಕ್ಷದ ಜಿಲ್ಲಾ ಮುಖಂಡರು, ಹಿರಿಯರು ಈ ಸಂದರ್ಭದಲ್ಲಿ ಡಿಸಿಎಂ ಜತೆಯಲ್ಲಿದ್ದರು.

raised funds for the construction of the rama mandir

Tags: ayodhya rama mandiradcm ashwath narayanfund risingramanagara
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಮಾತನಾಡುವ ಜನ ಬಹಳ ಇದ್ದಾರೆ! ಕೆಲಸ ಮಾಡುವವರು ಕಡಿಮೆ ಇದ್ದಾರೆ!! ಕೆಲಸ ಮಾಡುವವರು ಹೆಚ್ಚು ಬೇಕು ಎಂದ ಹೆಚ್.ವಿ.ರಾಜೀವ್

ಮಾತನಾಡುವ ಜನ ಬಹಳ ಇದ್ದಾರೆ! ಕೆಲಸ ಮಾಡುವವರು ಕಡಿಮೆ ಇದ್ದಾರೆ!! ಕೆಲಸ ಮಾಡುವವರು ಹೆಚ್ಚು ಬೇಕು ಎಂದ ಹೆಚ್.ವಿ.ರಾಜೀವ್

Leave a Reply Cancel reply

Your email address will not be published. Required fields are marked *

Recommended

ಬಡತನದಲ್ಲಿ ಹುಟ್ಟಿ ಬೆಳದ ಬದುಕಿನ ಕಥೆ ಹೇಳಿದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಬಡತನದಲ್ಲಿ ಹುಟ್ಟಿ ಬೆಳದ ಬದುಕಿನ ಕಥೆ ಹೇಳಿದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

5 years ago
ಆರೋಗ್ಯ ಕೈಕೊಟ್ಟಾಗ ಗೋಲ್ಡನ್‌ ಅವರ್‌ ಎನ್ನುವುದು ಬಹಳ ಮುಖ್ಯ

ಆರೋಗ್ಯ ಕೈಕೊಟ್ಟಾಗ ಗೋಲ್ಡನ್‌ ಅವರ್‌ ಎನ್ನುವುದು ಬಹಳ ಮುಖ್ಯ

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ