• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಗಡಿ ಜಿಲ್ಲೆ ಚಿಕ್ಕಬಳ್ಳಾಪುರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನ ಚುನಾವಣೆಗೆ ಹೊಸ ತಿರುವು; ಕೋಡಿ ರಂಗಪ್ಪ ಆಯ್ಕೆಗೆ ಸಹಮತ, ಒಮ್ಮತ ಆದರೆ ಸರಿ ಎಂದ ಪ್ರೊಫೆಸರ್‌

cknewsnow desk by cknewsnow desk
January 31, 2021
in CHIKKABALLAPUR, EDITORS'S PICKS, STATE
Reading Time: 1 min read
0
ಗಡಿ ಜಿಲ್ಲೆ ಚಿಕ್ಕಬಳ್ಳಾಪುರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನ ಚುನಾವಣೆಗೆ ಹೊಸ ತಿರುವು; ಕೋಡಿ ರಂಗಪ್ಪ ಆಯ್ಕೆಗೆ ಸಹಮತ, ಒಮ್ಮತ ಆದರೆ ಸರಿ ಎಂದ ಪ್ರೊಫೆಸರ್‌
1k
VIEWS
FacebookTwitterWhatsuplinkedinEmail

exclusive

M Krishnappa Chikkaballapur

ಚಿಕ್ಕಬಳ್ಳಾಪುರ: ಅಂಕೆ ಮೀರಿದ ಆಕಾಂಕ್ಷಿಗಳ ಕಾರಣಕ್ಕೆ ಅಳೆದು ತೂಗಿ, ತೂಗಿ ಅಳೆದು ಕೊನೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಪ್ರೊ.ಕೋಡಿ ರಂಗಪ್ಪ ಅವರನ್ನು ಬೆಂಬಲಿಸಲು ಸರ್ವಾನುಮತದಿಂದ ತೀರ್ಮಾನ ಕೈಗೊಳ್ಳಲಾಗಿದೆ.

ಚುನಾವಣೆಯೇ ಇಲ್ಲದೆ ಜಿಲ್ಲಾ ಕಸಾಪ ಅಧ್ಯಕ್ಷ ಸ್ಥಾನಕ್ಕೆ ಅಧ್ಯಕ್ಷರನ್ನು ಅವಿರೋಧ ಆಯ್ಕೆ ಮಾಡಬೇಕೆಂಬ ಉದ್ದೇಶದಿಂದ ನಡೆದ ಸಾಹಿತ್ಯಾಸಕ್ತರ ಸಭೆಯ ಆಶಯಕ್ಕೆ ಕೊಂಚ ಬಲ ಬಂದಿದ್ದು, ರಾಜ್ಯದಲ್ಲಿಯೇ ಮಾದರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆಗಬೇಕೆಂಬ ಉದ್ದೇಶ ಸಾಕಾರವಾಗುವ ಸಾಧ್ಯತೆ ಬಹುತೇಕ ಗೋಚರಿಸಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಹಿರಿಯ ಸಾಹಿತಿಗಳು, ಸಾಹಿತ್ಯಾಸಕ್ತರು ಹಾಗೂ ಕನ್ನಡ ಮನಸ್ಸಿನ ವ್ಯಕ್ತಿಗಳೆಲ್ಲ ಸೇರಿ ಈವರೆಗೂ ನಾಲ್ಕೈದು ಸಭೆಗಳನ್ನು ನಡೆಸಿ ಅಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆಯನ್ನೇ ಎತ್ತಿಹಿಡಿಯಬೇಕು ಎಂಬ ಅಭಿಪ್ರಾಯಕ್ಕೆ ಈ ಹಿಂದಿನಂತೆ ಈ ಬಾರಿಯೂ ಬಂದಿದ್ದಾರೆ.

ಒಟ್ಟು 14 ಜನರು ಅಧ್ಯಕ್ಷ ಪದವಿಯ ಆಕಾಂಕ್ಷಿಗಳಿದ್ದು, ಈ ಪೈಕಿ ಯಾರನ್ನು ಅಧ್ಯಕ್ಷರನ್ನಾಗಿ ಮಾಡಬೇಕು ಎಂಬ ಗೊಂದಲ ಏರ್ಪಟ್ಟಿತ್ತು. ಇಷ್ಟೆಲ್ಲ ಆಕಾಕ್ಷಿಗಳ ಪೈಕಿ ಓರ್ವ ಸಮರ್ಥರನ್ನು ಆಯ್ಕೆ ಮಾಡಿ ಬೆಂಬಲಿಸುವ ನಿರ್ಧಾರ ಸಭೆಯಿಂದ ಹೊರಹೊಮ್ಮಿದ್ದು, ಸಾಹಿತ್ಯಾಸಕ್ತರಿಗೆ ಸಂತಸ ಉಂಟು ಮಾಡಿದೆ.

ಸಮಾನ ಮನಸ್ಕರ ಸಮಿತಿ

ವಿಶ್ರಾಂತ ಪ್ರಾಂಶುಪಾಲ ಪ್ರೊ.ನಿಂಗಪ್ಪ, ಹಿರಿಯ ಪತ್ರಕರ್ತ ಶಿವರಾಮು, ಹಿರಿಯ ಸಾಹಿತಿ ಗೋಪಾಲಗೌಡ ಕಲ್ವಮಂಜಲಿ ಸೇರಿದಂತೆ ಇನ್ನಷ್ಟು ಬಹುತೇಕ ಸಾಹಿತಿಗಳು, ಹಿರಿಯರು ಕಟ್ಟಿ ಬೆಳೆಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತನ್ನು ಇನ್ನಷ್ಟು ಬಲಪಡಿಸಿ ಅದನ್ನು ರಾಜ್ಯದಲ್ಲಿಯೇ ಮಾದರಿ ಪರಿಷತ್ತನ್ನಾಗಿ ರೂಪಿಸುವ ಪ್ರಯತ್ನಗಳ ನಡುವೆಯೇ ಕೇಂದ್ರ ಸಾಹಿತ್ಯ ಪರಿಷತ್ತಿನ ಚುನಾವಣೆಯ ಪ್ರಕ್ರಿಯೆಗಳು ಪ್ರಾರಂಭಿಸಲು ಹಸಿರು ನಿಶಾನೆ ಸಿಕ್ಕ ಬೆನ್ನಲ್ಲೆ ಇದೀಗ ಚಿಕ್ಕಬಳ್ಳಾಪುರ ಕಸಾಪ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡಲು ಸಮಾನ ಮನಸ್ಕರ ಸಮಿತಿಯೊಂದನ್ನು ರಚಿಸಲಾಗಿತ್ತು. ಈ ಸಮಿತಿಗೆ ಕೋಡಿ ರಂಗಪ್ಪ ಅವರನ್ನೇ ಅಧ್ಯಕ್ಷರನ್ನಾಗಿ ಮಾಡಲಾಗಿತ್ತು.

ಶನಿವಾರದಂದು ಚಿಕ್ಕಬಳ್ಳಾಪುರದಲ್ಲಿ ಸಭೆ ಸೇರಿದ ಈ ಸಮಿತಿಯು, ಬೆಳಗ್ಗೆ ಸಭೆ ನಡೆಸಿ ಸಮಗ್ರವಾಗಿ 14 ಜನ ಆಕಾಂಕ್ಷಿಗಳ ಬಗ್ಗೆ ಸಮಾಲೋಚನೆ ನಡೆಸಿತು. ಗಮನಾರ್ಹವೆಂದರೆ; ಸಮಿತಿ ಸಭೆಯ ನಂತರ ಆಕಾಂಕ್ಷಿಗಳೊಂದಿಗೆ ಒಂದು ಸಭೆಯನ್ನು ಆಯೋಜಿಸಿತ್ತು. ಸುದೀರ್ಘವಾಗಿ ನಡೆದ ಚರ್ಚೆಯ ನಂತರ ಮಧ್ಯಾಹ್ನ ನಡೆದ 14 ಮಂದಿಯ ಆಕಾಂಕ್ಷಿಗಳಲ್ಲಿ ಯಾರನ್ನು ಅಧ್ಯಕ್ಷ ಸ್ಥಾನಕ್ಕೆ ಬೆಂಬಲಿಸಬೇಕು? ಯಾರನ್ನು ಬಿಡಬೇಕು? ಎನ್ನುವ ಕೌತುಕಗಳೇ ಬೆಳಗ್ಗೆ ನಡೆದ ಸಮಿತಿ ಸಭೆಯ ಸದಸ್ಯರಲ್ಲಿ ಹೆಚ್ಚಾಗತೊಡಗಿದ್ದವು. ಮಧ್ಯಾಹ್ನದ ಹೊತ್ತಿಗೆ ಆಕಾಂಕ್ಷಿಗಳ ಸಮ್ಮುಖದಲ್ಲಿ ಕೊನೆಗೆ ಸಮಿತಿ ಅಧ್ಯಕ್ಷ ಕೋಡಿ ರಂಗಪ್ಪ ಅವರನ್ನೇ ಮುಂದಿನ ಜಿಲ್ಲಾ ಕಸಾಪ ಚುನಾವಣೆಯಲ್ಲಿ ಒಮ್ಮತದ ಅಭ್ಯರ್ಥಿಯನ್ನಾಗಿಸಿ ಅವರನ್ನೇ ಬೆಂಬಲಿಸಲು ಅಚ್ಚರಿಯ ನಿರ್ಧಾರ ಕೈಗೊಳ್ಳಲಾಯಿತು.

ಈ ಸಮಿತಿಯಲ್ಲಿ ಕೋಡಿ ರಂಗಪ್ಪ, ವೈ.ಎಲ್.ಹನುಮಂತರಾವ್‌, ವಿ.ಕೃಷ್ಣ, ರೂಪಸಿ ರಮೇಶ್‌, ಎಸ್.ವಿ.ನಾಗರಾಜರಾವ್, ಗೋಪಾಲಗೌಡ ಕಲ್ವಮಂಜಲಿ, ದ್ವಾರಕಾನಾಥ ನಾಯ್ಡು, ಪ್ರೇಮಲೀಲಾ ವೆಂಕಟೇಶ್, ಸರಸಮ್ಮ, ಬಿ.ಆರ್.ಕೃಷ್ಣ, ಸುಧಾ ವೆಂಕಟೇಶ್‌, ಮಂಜುನಾಥ್‌, ಕುಂಟಗಡ್ಡೆ ಲಕ್ಷ್ಮಣ್ ಸೇರಿದಂತೆ ಇನ್ನಿತರರು ಇದ್ದರು.

ಕೋಡಿ ರಂಗಪ್ಪ ಅವರೇ ಏಕೆ?

ಸದ್ಯಕ್ಕೆ ಜಿಲ್ಲೆಯಲ್ಲಿ ಸಚಿವ ಡಾ.ಕೆ.ಸುಧಾಕರ್‌ ಅವರು ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಗಡಿ ಜಿಲ್ಲೆಯಾದ ಚಿಕ್ಕಬಳ್ಳಾಪುರದಲ್ಲಿ ಕನ್ನಡದ ಚಟುವಟಿಕೆಗಳಿಗೆ ಕಸುವು ತುಂಬುವುದು ಎಲ್ಲ ತಾಲ್ಲೂಕುಗಳ ಕಸಾಪ ಘಟಕಗಳ ಮುಖ್ಯಸ್ಥರು, ಸಾಹಿತಿಗಳ ಉದ್ದೇಶವಾಗಿದೆ. ಜೊತೆಗೆ, ಹಾವೇರಿಯಲ್ಲಿ ಫೆಬ್ರವರಿ 26ರಿಂದ 28ರವರೆಗೆ 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, ೮೭ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಜಿಲ್ಲೆಯಲ್ಲೇ ಆತಿಥ್ಯ ನೀಡುವ ಆಲೋಚನೆಯೂ ಇರುವ ಹಿನ್ನೆಲೆಯಲ್ಲಿ ಕೋಡಿ ರಂಗಪ್ಪ ಅವರೇ ಇದಕ್ಕೆಲ್ಲ ಸಮರ್ಥ ವ್ಯಕ್ತಿ ಎಂಬ ಅಭಿಪ್ರಾಯ ಸಮಾನ ಮನಸ್ಕರ ಸಭೆಯಲ್ಲಿ ಬಲವಾಗಿ ವ್ಯಕ್ತವಾಯಿತು. ಅದರಂತೆ ಕೋಡಿ ರಂಗಪ್ಪ ಅವರು ಜಿಲ್ಲಾ ಸಚಿವರು, ಜಿಲ್ಲೆಯ ಹಿರಿಯ ಅಧಿಕಾರಿಗಳ ಹಾಗೂ ಪರಿಷತ್ತಿನ ಕೇಂದ್ರ ಸಮಿತಿ ಜತೆ ಸಮರ್ಥವಾಗಿ ವ್ಯವಹರಿಸುವ ಚಾಕಚಕ್ಯತೆಯನ್ನು ಹೊಂದಿದ್ದು, ಅವರ ನೇತೃತ್ವದಲ್ಲೇ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತನ್ನು ಮತ್ತಷ್ಟು ಬಲಪಡಿಸುವ ಉದ್ದೇಶವನ್ನು ಸಭೆ ವ್ಯಕ್ತಪಡಿಸಿದೆ. ಇದಕ್ಕೆ ಕೋಡಿ ರಂಗಪ್ಪ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಒಮ್ಮತವಾದರೆ ಇರಲಿ ಎಂದ ಪ್ರೊಫೆಸರ್

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಚುಕ್ಕಾಣಿ ಹಿಡಿಯಲು ಸಿದ್ಧ ಎಂದಿರುವ ಕೋಡಿ ರಂಗಪ್ಪ‌ ಅವರು, ಅದಕ್ಕೊಂದು ಷರತ್ತು ಹಾಕಿದ್ದಾರೆ. ಅವಿರೋಧವಾಗಿ ಆಯ್ಕೆ ಮಾಡುವುದಾದರೆ ಆಗಲಿ, ಇಲ್ಲವಾದರೆ ಬೇಡ ಎಂದು ಕಡ್ಡಿತುಂಡು ಮಾಡಿದ ಹಾಗೆ ಹೇಳಿದರಾದರೂ ಸಭೆಯ ನಿರ್ಧಾರಕ್ಕೆ ತಲೆಬಾಗುವ ಇಂಗಿತವನ್ನೂ ವ್ಯಕ್ತಪಡಿಸಿದರು.

ಈ ಬಗ್ಗೆ ಸಿಕೆನ್ಯೂಸ್‌ ನೌ ಜತೆ ಅಭಿಪ್ರಾಯ ಹಂಚಿಕೊಂಡ ಅವರು;
“ಒಮ್ಮತವಾಗಿ ಆಯ್ಕೆಯಾದರೆ ಕೆಲಸ ಮಾಡಲು ಖುಷಿ ಇರುತ್ತದೆ. ಎಲ್ಲರ ಬೆಂಬಲವೂ ಇರುತ್ತದೆ. ಇಲ್ಲವಾದರೆ ಅನಗತ್ಯವಾಗಿ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ. ಅಂತಹ ಅಧ್ಯಕ್ಷ ಪಟ್ಟ ಖಂಡಿತಾ ಬೇಡ. ಕನ್ನಡದ ಕೆಲಸ ಮಾಡಬೇಕಾದರೆ ಎಲ್ಲ ಕೈಗಳು ಒಟ್ಟಾಗಬೇಕು. ಎಲ್ಲರೊಳಗೊಂದಾಗಿ ನಾನು ಇರುವೆ” ಎಂದಿದ್ದಾರೆ.

ಆಕಾಂಕ್ಷಿಗಳು ಯಾರು ಯಾರು?

ಮಂಚನಬಲೆ ಶ್ರೀನಿವಾಸ್, ಎಂ.ಕೆಂಪಣ್ಣ, ದೇವತಾ ದೇವರಾಜು, ಕುಂದಲಗುರ್ಕಿ ಮಂಜುನಾಥ್, ಕೆ.ವಿ.ಪ್ರಕಾಶ್, ಎ.ಎಂ.ತ್ಯಾಗರಾಜ್, ವೈ.ಎನ್.ರಾಮಚಂದ್ರ ರೆಡ್ಡಿ, ಟಿ.ವಿ.ಚಂದ್ರಶೇಖರ್, ಪಿ.ಎಂ.ಚಲಪತಿಗೌಡ, ಬಿ.ವಿ.ಶ್ರೀರಾಮಯ್ಯ, ಯಲುವಹಳ್ಳಿ ಸೊಣ್ಣೇಗೌಡ, ಸಿ.ಮಲ್ಲಿಕಾರ್ಜುನಯ್ಯ, ಮುಂತಾದವರು ಜಿಲ್ಲಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆಂಬ ಮಾಹಿತಿ ಇದೆ. ಒಟ್ಟಾರೆಯಾಗಿ ಚಿಕ್ಕಬಳ್ಳಾಪುರ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯ ವಿಚಾರದಲ್ಲಿ ರಾಜ್ಯಕ್ಕೆ ಮಾದರಿಯಾಗುವ ಹಾಗೂ ಗುಣಾತ್ಮಕವಾದ ಸಂದೇಶ ಸಾರುವ ಒಮ್ಮತದ ಅಭಿಪ್ರಾಯ ವ್ಯಕ್ತವಾಯಿತು.

ಯಾರಾದರೂ ಸ್ಪರ್ಧಿಸಲು ಬಯಸಿದರೆ..

ಒಂದು ವೇಳೆ ಮುಂದಿನ ದಿನಗಳಲ್ಲಿ ಜಿಲ್ಲಾ ಕಸಾಪ ಆಧ್ಯಕ್ಷ ಗಾದಿಗೆ ಯಾರಾದರೂ ಸ್ಪರ್ಧೆ ಮಾಡಲು ಬಯಸಿದರೆ ಅವರ ಮನವೊಲಿಸುವ ಕೆಲಸ ನಾವೆಲ್ಲರೂ ಮಾಡೊಣ. ಆದಾಗ್ಯೂ ಸ್ಪರ್ಧೆಯೇ ಎದುರಾದರೆ ನಾವೆಲ್ಲಾ ಒಟ್ಟಾಗಿ ಮತದಾರರ ಮನೆಮನೆಗೂ ಹೋಗಿ ಕೋಡಿ ರಂಗಪ್ಪ ಅವರ ಪರವಾಗಿಯೇ ಮತ ಕೇಳುವ ನಿರ್ಧಾರವನ್ನೂ ಶನಿವಾರದ ಸಭೆಯಲ್ಲಿ ಕೈಗೊಳ್ಳಲಾಯಿತು.

ಕನ್ನಡ ಕೆಲಸ ಮಾಡುವ ವಿಚಾರದಲ್ಲಿ ವಿರೋಧ -ಪ್ರತಿರೋಧ ಎನ್ನುವುದು ಇರಬಾರದು. ಎಲ್ಲರೂ ಒಟ್ಟಿಗೆ ಸೇರಿದರೆ ಜಿಲ್ಲೆಯಲ್ಲಿ ಒಂದಿಷ್ಟು ಕೆಲಸಗಳನ್ನು ಮಾಡಬಹುದು. ಈ ವಿಷಯ ಎಲ್ಲರಿಗೂ ಗೊತ್ತಿದೆ. ಸಮಿತಿಯಲ್ಲಿದ್ದ ಪ್ರತಿಯೊಬ್ಬರೂ ನನ್ನನ್ನು ಬೆಂಬಲಿಸಿದ್ದಾರೆ.

-ಪ್ರೊ.ಕೋಡಿ ರಂಗಪ್ಪ
Tags: chikkaballapurkannada sahitya parishat election 2021kodi rangappa
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಚಿಕ್ಕಬಳ್ಳಾಪುರದ ವಾಣಿಜ್ಯೋದ್ಯಮಿ ಎಸ್.ಟಿ.ಸುಂಕಪ್ಪ ಇನ್ನಿಲ್ಲ; ಅಂತಿಮ ನಮನ ಸಲ್ಲಿಸಿದ ಗಣ್ಯರು

ಚಿಕ್ಕಬಳ್ಳಾಪುರದ ವಾಣಿಜ್ಯೋದ್ಯಮಿ ಎಸ್.ಟಿ.ಸುಂಕಪ್ಪ ಇನ್ನಿಲ್ಲ; ಅಂತಿಮ ನಮನ ಸಲ್ಲಿಸಿದ ಗಣ್ಯರು

Leave a Reply Cancel reply

Your email address will not be published. Required fields are marked *

Recommended

ಶಿರಾ ಗೆದ್ದು ರಾಜ್ಯವನ್ನು ಗೆಲ್ಲುತ್ತೇವೆ; ಆದರೆ, ಉಪ ಚುನಾವಣೆಯಿಂದ ಸರಕಾರ ಬೀಳಲ್ಲ ಎಂದ ಡಿಕೆಶಿ

ಶಿರಾ ಗೆದ್ದು ರಾಜ್ಯವನ್ನು ಗೆಲ್ಲುತ್ತೇವೆ; ಆದರೆ, ಉಪ ಚುನಾವಣೆಯಿಂದ ಸರಕಾರ ಬೀಳಲ್ಲ ಎಂದ ಡಿಕೆಶಿ

5 years ago
ಕಲ್ಯಾಣ ಕರ್ನಾಟಕಕ್ಕೆ ರೂ. 3,000 ಕೋಟಿ

ಕಲ್ಯಾಣ ಕರ್ನಾಟಕಕ್ಕೆ ರೂ. 3,000 ಕೋಟಿ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ