• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಕುವೆಂಪು ಅವರ ‘ಮಲೆಗಳಲ್ಲಿ ಮದುಮಗಳು’ ಆಯಿತು, ಈಗ ರಂಗದ ಮೇಲೆ ಎಸ್.ಎಲ್. ಭೈರಪ್ಪನವರ ಕಾದಂಬರಿ ‘ಪರ್ವ’; ಏಳೂವರೆ ಗಂಟೆ ನಾಟಕದಲ್ಲಿ 40ಕ್ಕೂ ಹೆಚ್ಚು ಕಲಾವಿದರು

cknewsnow desk by cknewsnow desk
February 3, 2021
in STATE
Reading Time: 1 min read
0
ಕುವೆಂಪು ಅವರ ‘ಮಲೆಗಳಲ್ಲಿ ಮದುಮಗಳು’ ಆಯಿತು, ಈಗ ರಂಗದ ಮೇಲೆ ಎಸ್.ಎಲ್. ಭೈರಪ್ಪನವರ ಕಾದಂಬರಿ ‘ಪರ್ವ’; ಏಳೂವರೆ ಗಂಟೆ ನಾಟಕದಲ್ಲಿ 40ಕ್ಕೂ ಹೆಚ್ಚು ಕಲಾವಿದರು
928
VIEWS
FacebookTwitterWhatsuplinkedinEmail

ಮೈಸೂರು: ಕನ್ನಡ ರಂಗಭೂಮಿ ಇನ್ನೊಂದು ಎತ್ರರದತ್ತ ಹೊರಟಿದೆ. ಕುವೆಂಪು ಅವರ ʼಮಲೆಗಳಲ್ಲಿ ಮದುಮಗಳುʼ ಕಾದಂಬರಿಯ ರಂಗ ಪ್ರಯೋಗವಾದ ಮೇಲೆ ಕನ್ನಡದ ಶ್ರೇಷ್ಟ ಕೃತಿಗಳಲ್ಲಿ ಒಂದಾದ, ಪ್ರಖ್ಯಾತ ಕಾದಂಬರಿಕಾರ ಎಸ್.ಎಲ್.ಭೈರಪ್ಪ ಅವರ ಬರೆದಿರುವ ʼಪರ್ವʼ ಬೃಹತ್ ಕಾದಂಬರಿ ನಾಟಕವಾಗಿ ಮೂಡಿಬರುತ್ತಿದೆ.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು, ಪರ್ವ ಕಾದಂಬರಿಯ ರಂಗ ಪ್ರಯೋಗವು ಮಹತ್ತ್ವಪೂರ್ಣವಾದದ್ದು ಎಂದರು.

ಕನ್ನಡದ ಮಹಾನ್ ಕಾದಂಬರಿಕಾರ ಡಾ.ಎಸ್.ಎಲ್.ಭೈರಪ್ಪನವರ ಪರ್ವ ಬೃಹತ್ ಕಾದಂಬರಿಯನ್ನು ಖ್ಯಾತ ನಿರ್ದೇಶಕ ಪ್ರಕಾಶ್ ಬೆಳವಾಡಿಯವರು ರಂಗಪಠ್ಯವನ್ನಾಗಿಸಿದ್ದಾರೆ. ನಿರ್ದೇಶನದಲ್ಲಿ ಏಳೂವರೆ ಗಂಟೆಗಳ ನಾಟಕವಾಗಿ ಪರ್ವ ಪ್ರದರ್ಶನಕ್ಕೆ ಸಿದ್ಧವಾಗುತ್ತಿದೆ. 40ಕ್ಕೂ ಹೆಚ್ಚು ಕಲಾವಿದರು ವಿವಿಧ ಪಾತ್ರಗಳನ್ನು ಮಾಡುತ್ತಿದ್ದು, ಎಲ್ಲರೂ ಅಭ್ಯಾಸದಲ್ಲಿ ನಿರತರಾಗಿದ್ದಾರೆ ಎಂದು ಅವರು ಹೇಳಿದರು.

ಈ ರಂಗಪಠ್ಯದ ಪೂರ್ವರಂಗವಾಗಿ ಮತ್ತು ಪರ್ವ ರಂಗ ಪ್ರಸ್ತುತಿಯ ಚಟುವಟಿಕೆಗಳ ಹಿನ್ನೆಲೆಯಲ್ಲಿ ಪರ್ವ ಕಾದಂಬರಿ ಮತ್ತು ರಂಗಪಠ್ಯದ ವಿಚಾರ ಸಂಕಿರಣವನ್ನು ನಡೆಸಲಾಗುತ್ತಿದೆ ಎಂದು ಅಡ್ಡಂಡ ಸಿ.ಕಾರ್ಯಪ್ಪ ತಿಳಿಸಿದರು.

ಇದೇ ಫೆ. 21ರಂದು ನಗರದ ಕಲಾಮಂದಿರದಲ್ಲಿ ಪರ್ವ ವಿರಾಟ್ ದರ್ಶನ ಶೀರ್ಷಿಕೆಯಡಿ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದ ಅವರು; 21ರಂದು ಬೆಳಗ್ಗೆ 10ಕ್ಕೆ ವಿಚಾರ ಸಂಕಿರಣ ಉದ್ಘಾಟನೆ ನಡೆಯಲಿದ್ದು, ಶತಾವಧಾನಿ ಆರ್. ಗಣೇಶ್ ಉಪನ್ಯಾಸ ನೀಡಲಿದ್ದಾರೆ. ಮಧ್ಯಾಹ್ನ 2.15ರಿಂದ ಪರ್ವ ರಂಗರೂಪದ ಬೀಜ ಚಿಗುರೊಡೆದ ಬಗೆ ಕುರಿತು ನಾಟಕ ನಿರ್ದೇಶಕ ಪ್ರಕಾಶ್ ಬೆಳವಾಡಿ ಮಾತನಾಡಲಿದ್ದಾರೆ. 3.15ಕ್ಕೆ ಪರ್ವ ಕಾದಂಬರಿಕಾರರಾದ ಡಾ.ಎಸ್.ಎಲ್.ಭೈರಪ್ಪ ಮಾತನಾಡಲಿದ್ದಾರೆಂದು ತಿಳಿಸಿದರು.

ರಾಜ್ಯ ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಕ ಗಿರಿಜನ ಉಪಯೋಜನೆಯಡಿಯಲ್ಲಿ ರಂಗಾಯಣ ಮೈಸೂರು ಪ.ಪಂಗಡ ಜನಾಂಗಗಳು ವಾಸವಿರುವ ಹಾಡಿಗಳಲ್ಲಿ ಸಾಮಾಜಿಕ ಅರಿವು ಮೂಡಿಸಲು ಗಿರಿಪಯಣ, ನಮ್ಮ ಜನ ನಮ್ಮ ಸಂಸ್ಕೃತಿ ಗಿರಿಜನೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಕೊಡಗು ಜಿಲ್ಲೆಯ ನಾಗರಹೊಳೆ ಸಮೀಪ ಬೊಮ್ಮಾಡು ಹಾಡಿಯಲ್ಲಿನ ಗಿರಿಜನ ವಸತಿ ಶಾಲೆಯಲ್ಲಿ 12 ಜನರನ್ನು ಆಯ್ಕೆ ಮಾಡಿದ ಗಿರಿಜನ ಶಿಬಿರಾರ್ಥಿಗಳಿಗೆ 10 ದಿನಗಳ ಅರಿವಿನೆಡೆಗೆ ಆದಿವಾಸಿ ಎಂಬ ಸಾಮಾಜಿಕ ಅರಿವು ಮೂಡಿಸುವ ಬೀದಿನಾಟಕ ನಿರ್ದೇಶನ ಮಾಡಲಾಗಿದೆ. ಬುಧವಾರ ಸಂಜೆ 6 ಗಂಟೆಗೆ ಬೊಮ್ಮಾಡಿ ಹಾಡಿಯಲ್ಲಿ ಉದ್ಘಾಟನಾ ಪ್ರದರ್ಶನವಿದೆ ಎಂದವರು ತಿಳಿಸಿದರು.

ಕೊಡಗು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿರುವ ಕಾರ್ಮಾಡು ಎಂಬ ಹಳ್ಳಿಯಲ್ಲಿ ಬುಡಕಟ್ಟು ಜನರ ಸಾಂಸ್ಕೃತಿಕ ಜನಪದ ಕಲೆ ಬಿಂಬಿಸುವ ಕಾರ್ಯಕ್ರಮ ನಮ್ಮ ಜನ ನಮ್ಮ ಸಂಸ್ಕೃತಿ- ಗಿರಿಜನೋತ್ಸವ ರಾಜ್ಯದ ವಿವಿಧೆಡೆಗಳಿಂದ ಆಹ್ವಾನಿತ ಬುಡಕಟ್ಟು ತಂಡಗಳ ಜನಪದ ಕಲೆಗಳ ಪ್ರದರ್ಶನವನ್ನು ಫೆ. 23ರ ಮಂಗಳವಾರ ಬೆಳಗ್ಗೆ 10ರಿಂದ ಸಂಜೆ 6ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ. ಈ ಉತ್ಸವದಲ್ಲಿ ವನವಾಸಿ ಕಲ್ಯಾಣಕ್ಕಾಗಿ ದುಡಿಯುತ್ತಿರುವ ರಾಜ್ಯ ವಿಧಾನಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು ಸ್ಥಳೀಯ ಶಾಸಕ ಕೆ.ಜಿ.ಬೋಪಯ್ಯ ಮತ್ತು ಕೊಡಗಿನ ಬುಡಕಟ್ಟು ಜನಾಂಗದ ಜನಪ್ರತಿನಿಧಿಗಳು ಉಪಸ್ಥಿತರಿರುತ್ತಾರೆ. ವನವಾಸಿ ಕಲ್ಯಾಣ ಕೇಂದ್ರದ ದಕ್ಷಿಣ ಪ್ರಾಂತ್ಯ ರಾಜ್ಯ ಅಧ್ಯಕ್ಷ ಕೃಷ್ಣಮೂರ್ತಿ ವಿಚಾರ ಸಂಕಿರಣ ನಡೆಸಿಕೊಡುತ್ತಾರೆಂದು ಅವರು ಹೇಳಿದರು.

ಎಸ್ ಎಲ್ ಭೈರಪ್ಪ ಸಾಹಿತ್ಯ ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಜಿ.ಎಲ್.ಶೇಖರ್, ಪರ್ವ ನಾಟಕದ ನಿರ್ದೇಶಕ ಪ್ರಕಾಶ್ ಬೆಳವಾಡಿ, ರಂಗಾಯಣದ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನ ಅವರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

sl bhyrappa photo courtesy: wikipedia

Tags: mysoreparvaparva novelrangayanasl bhyrappa
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
4 ವಾರಗಳವರೆಗೆ ಚಿತ್ರಮಂದಿರಗಳ ಹೌಸ್‌ಫುಲ್‌ಗೆ ಅವಕಾಶ; ಒಂದು ವೇಳೆ ಪ್ರೇಕ್ಷಕರಲ್ಲಿ ಕೊರೊನ  ಸೋಂಕು ಕಂಡುಬಂದರೆ ಈ ನಿರ್ಧಾರ ಬದಲು ಎಂದ ಸಚಿವ ಡಾ.ಕೆ.ಸುಧಾಕರ್

4 ವಾರಗಳವರೆಗೆ ಚಿತ್ರಮಂದಿರಗಳ ಹೌಸ್‌ಫುಲ್‌ಗೆ ಅವಕಾಶ; ಒಂದು ವೇಳೆ ಪ್ರೇಕ್ಷಕರಲ್ಲಿ ಕೊರೊನ ಸೋಂಕು ಕಂಡುಬಂದರೆ ಈ ನಿರ್ಧಾರ ಬದಲು ಎಂದ ಸಚಿವ ಡಾ.ಕೆ.ಸುಧಾಕರ್

Leave a Reply Cancel reply

Your email address will not be published. Required fields are marked *

Recommended

ಬರಪೀಡಿತ ಗುಡಿಬಂಡೆ ಈಗ ಜಲಪೀಡಿತ!

ಚಿಕ್ಕಬಳ್ಳಾಪುರ ಜನರಿಗೆ ಎಚ್ಚರಿಕೆ ಕೊಟ್ಟ ಎಸ್ಪಿ

4 years ago
ಕನ್ನಡ ಬಿಗ್‌ಬಾಸ್ ಸೀಸನ್ 3 ಸ್ಪರ್ಧಿ, ಕನ್ನಡ್ ಗೊತ್ತಿಲ್ಲ, ಉಪ್ಪು ಹುಳಿ ಖಾರ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಇನ್ನಿಲ್ಲ; ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ನಟಿ

ಕನ್ನಡ ಬಿಗ್‌ಬಾಸ್ ಸೀಸನ್ 3 ಸ್ಪರ್ಧಿ, ಕನ್ನಡ್ ಗೊತ್ತಿಲ್ಲ, ಉಪ್ಪು ಹುಳಿ ಖಾರ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಇನ್ನಿಲ್ಲ; ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ನಟಿ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ