• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಸೋಶಿಯಲ್‌ ಮೀಡಿಯಾ ಮೂಲಕ ಜನರಿಗೆ ಇನ್ನಷ್ಟು ಹತ್ತಿರವಾಗಲು ಕಮಲ ಪಾಳೆಯ ಮಾಸ್ಟರ್‌ ಪ್ಲ್ಯಾನ್‌; ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಮೇಲೂ ಕಣ್ಣು

cknewsnow desk by cknewsnow desk
February 7, 2021
in STATE
Reading Time: 1 min read
0
ಸೋಶಿಯಲ್‌ ಮೀಡಿಯಾ ಮೂಲಕ ಜನರಿಗೆ ಇನ್ನಷ್ಟು ಹತ್ತಿರವಾಗಲು ಕಮಲ ಪಾಳೆಯ ಮಾಸ್ಟರ್‌ ಪ್ಲ್ಯಾನ್‌; ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಮೇಲೂ ಕಣ್ಣು
913
VIEWS
FacebookTwitterWhatsuplinkedinEmail

ಬೆಂಗಳೂರು: ರಾಜ್ಯ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ಇನ್ನೂ ದೂರವಿದ್ದರೂ ಪಕ್ಷವನ್ನು ತಾಲ್ಲೂಕು-ಜಿಲ್ಲಾ ಪಂಚಾಯತಿ ಚುನಾವಣೆಗಳಿಗೆ ಅಣಿಗೊಳಿಸಲು ಸೀರಿಯಸ್ಸಾಗಿ ಫೀಲ್ಡಿಗಿಳಿದಿರುವ ಬಿಜೆಪಿ, ಇದೀಗ ಎಲ್ಲ ಜಿಲ್ಲೆಗಳ ಮಟ್ಟದಲ್ಲಿ ಪ್ರತಿಭಾವಂತರನ್ನು ಗುರುತಿಸಿ ಸೋಶಿಯಲ್‌ ಮೀಡಿಯಾ ವಿಭಾಗದಲ್ಲಿ ಭರ್ಜರಿ ಟ್ರೈನಿಂಗ್‌ ನೀಡುತ್ತಿದೆ. ಮುಂದಿನ ಸಾರ್ವತ್ರಿಕ ಚುನಾವಣೆಗಳ ಹೊತ್ತಿಗೆ ಇಡೀ ಪಕ್ಷವನ್ನು ರಾಜ್ಯದಲ್ಲಿ ಸರ್ವಸನ್ನದ್ಧ ಮಾಡಲು ಕಮಲ ಪಾಳೆಯ ಮಾಸ್ಟರ್‌ ಪ್ಲ್ಯಾನ್‌ ಹಾಕಿಕೊಂಡಿದೆ.

ಸೋಶಿಯಲ್‌ ಮೀಡಿಯಾವನ್ನು ಬಳಸುವಲ್ಲಿ ಈಗಾಗಲೇ ಸಿದ್ಧಹಸ್ತವಾಗಿರುವ ಬಿಜೆಪಿ, ಅದಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಕೆಲ ದಿನಗಳ ಹಿಂದೆಯಷ್ಟೇ ರಾಜ್ಯ ಪದಾಧಿಕಾರಿಗಳಿಗೆ ಮಾಧ್ಯಮ ನಿರ್ವಹಣೆಯ ಬಗ್ಗೆ ಕಾರ್ಯಾಗಾರ ನಡೆಸಲಾಗಿತ್ತು. ಇದೀಗ ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡುವ ಬಗ್ಗೆಯೂ ಜಿಲ್ಲಾ ಮಟ್ಟದ ಆಯ್ದ ಪದಾಧಿಕಾರಿಗಳಿಗೆ ಬೆಂಗಳೂರಿನಲ್ಲಿ ಭಾನುವಾರ ಮಹತ್ತ್ವದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.

ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಭಾನುವಾರದ ಸೋಶಿಯಲ್‌ ಮೀಡಿಯಾ ಕಾರ್ಯಾಗಾರದಲ್ಲಿ ಪಾಲ್ಗೊಂಡು ಪಕ್ಷದ ಕಟ್ಟಾಳುಗಳಿಗೆ ಸೋಶಿಯಲ್‌ ಮೀಡಿಯಾವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಬಗ್ಗೆ ಭರ್ಜರಿ ಕ್ಲಾಸ್‌ ಕೊಟ್ಟರು.

ಇಬ್ಬರು ನಾಯಕರು ಹೇಳಿದ್ದು ಒಂದೇ. ಪಕ್ಷವು ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ಇನ್ನಷ್ಟು ಹತ್ತಿರವಾಗಬೇಕು. ಸಾಂಪ್ರದಾಯಿಕ ಮಾಧ್ಯಮಗಳಿಗಿಂತ ಜಾಲತಾಣಗಳ ಪ್ರಭಾವ ಹೆಚ್ಚುತ್ತಿರುವುದನ್ನು ಗುರುತಿಸಬೇಕು ಎಂದು ಅವರಿಬ್ಬರೂ ಪ್ರತಿಪಾದಿಸಿದರು. ಟ್ವಿಟ್ಟರ್‌ನಲ್ಲಿ ಲಕ್ಷಾಂತರ ಫಾಲೋವರುಗಳನ್ನು ಹೊಂದಿರುವ ಇವರಿಬ್ಬರೂ ಪಕ್ಷದಲ್ಲಿ ನವಮಾಧ್ಯಮಗಳ ಬಳಕೆ ಇನ್ನೂ ಹೆಚ್ಚಾಗಬೇಕು ಎಂದು ಹೇಳಿದರು.

ಉಳಿದಂತೆ ಬಿಜೆಪಿಯು ಟ್ವಿಟ್ಟರ್‌, ಫೇಸ್‌ಬುಕ್‌, ಟೆಲಿಗ್ರಾಂ, ಇನ್‌ಸ್ಟಾಗ್ರಾಂ ಸೇರಿದಂತೆ ಇನ್ನು ಹತ್ತಾರು ಡಿಜಿಟಲ್‌ ವೇದಿಕೆಗಳಲ್ಲಿ ಪ್ರಬಲವಾದ ಅಸ್ತಿತ್ವ ಹೊಂದಿದೆ. ಆದಾಗ್ಯೂ ಇದರ ಪ್ರಭಾವ ಮತ್ತಷ್ಟು ಹೆಚ್ಚಬೇಕು ಎಂಬುದು ಪಕ್ಷದ ಉದ್ದೇಶವಾಗಿದೆ.

ಡಿಸಿಎಂ ಹೇಳಿದ್ದೇನು?

ಸರಕಾರ ರೂಪಿಸುವ ಜನಪರ ಕಾರ್ಯಕ್ರಮಗಳನ್ನು, ಪಕ್ಷ ಹಮ್ಮಿಕೊಳ್ಳುವ ಕಾರ್ಯಕ್ರಮಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ನೇರವಾಗಿ, ಸರಳವಾಗಿ ದಾಟಿಸಬಹುದು. ಆದರೆ, ಇದೆಲ್ಲವನ್ನು ಸಮರ್ಥವಾಗಿ ಮಾಡುವಲ್ಲಿ ನಾವು ಕೊಂಚ ಹಿಂದೆ ಬಿದ್ದಿದ್ದೇವೆ ಎಂಬ ಅಂಶವನ್ನು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಬೊಟ್ಟು ಮಾಡಿ ಹೇಳಿದರು.

ಒಂದೆಡೆಯಾದರೆ, ಸಾಮಾಜಿಕ ಜಾಲತಾಣಗಳ ರೂಪದಲ್ಲಿ ನವ ಮಾಧ್ಯಮಗಳು ವೇಗವಾಗಿ ಬೆಳೆಯುತ್ತಿವೆ. ಇಂಥ ಸಂದರ್ಭದಲ್ಲಿ ಇಂಥ ಜಾಲತಾಣಗಳಲ್ಲಿ ಪಕ್ಷದ ಧ್ವನಿಯನ್ನು ಮೊಳಗಿಸಬೇಕಾದರೆ ಅದಕ್ಕೆ ಅಗತ್ಯವಾದ ಜ್ಞಾನ, ಅಧ್ಯಯನ, ಪೂರ್ವಸಿದ್ಧತೆ ಬೇಕಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕಿದೆ ಎಂದು ಡಿಸಿಎಂ ಒತ್ತಿ ಹೇಳಿದರು.

ಪ್ರಣಾಳಿಕೆಯೇ ಭಗವದ್ಗೀತೆ: ಡಾ.ಸುಧಾಕರ್‌

ಸರಕಾರದ ಸಾಧನೆ, ವೈಯಕ್ತಿಕ ಸಾಧನೆ, ಯೋಜನೆಗಳ ಬಗ್ಗೆ ತಪ್ಪು ಕಲ್ಪನೆ ನಿವಾರಿಸಲು ಸಾಮಾಜಿಕ ಜಾಲತಾಣವನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು ಎಂಬುದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರ ಅಭಿಪ್ರಾಯವಾಗಿದೆ.

ಹಿಂದೆ ಪತ್ರಿಕೋದ್ಯಮವು ಸರಕಾರವನ್ನೇ ಬದಲಿಸುವಷ್ಟು ಬಲವಾಗಿತ್ತು. ನಂತರ ಬಂದ ದೃಶ್ಯ ಮಾಧ್ಯಮ ಕೂಡ ಇನ್ನಷ್ಟು ಬಲವಾಗಿ ಬೆಳೆದಿದೆ. ಈಗ ಸಾಮಾಜಿಕ ಮಾಧ್ಯಮವೂ ಬಲವಾಗಿ ಬೆಳದಿದೆ. ಇದರಲ್ಲಿ ಪ್ರತಿಯೊಬ್ಬರೂ ತಮ್ಮ ಸಂದೇಶವನ್ನು ನಿರ್ಭೀತಿಯಿಂದ ನೀಡಬಹುದು. ರಾಜಕೀಯದಲ್ಲಿ ಸಾಮಾಜಿಕ ಜಾಲತಾಣವನ್ನು ಯಶಸ್ವಿಯಾಗಿ ಬಳಸಬಹುದು. ಚುನಾವಣೆ ಮಾತ್ರವಲ್ಲದೆ, ಬೇರೆ ಸಮಯದಲ್ಲೂ ಇದನ್ನು ಬಳಸಬಹುದು. ಜನಪ್ರತಿನಿಧಿ ತಾವು ಮಾಡುವ ಕೆಲಸಗಳನ್ನು ಸಾಮಾಜಿಕ ಜಾಲತಾಣದಲ್ಲಿ ಸದಾ ಹಂಚಿಕೊಳ್ಳಬೇಕು. ಕೆಲ ಮತದಾರರು ಸಂದರ್ಭಕ್ಕನುಗುಣವಾಗಿ ಮತ ಹಾಕುತ್ತಾರೆ. ಇಂತಹ ಮತದಾರರು 40% ರಿಂದ 50% ರಷ್ಟಿರುತ್ತಾರೆ. ಇಂತಹವರಿಗೆ ನಾವು ಮಾಡುವ ಅಭಿವೃದ್ಧಿ ಕೆಲಸಗಳ ಬಗ್ಗೆ ತಿಳಿಸಲು ಸಾಮಾಜಿಕ ಜಾಲತಾಣವನ್ನು ಬಳಸಿಕೊಳ್ಳಬೇಕು ಎಂದು ಅವರು ಹೇಳಿದರು.

ಬಿಜೆಪಿಯಲ್ಲಿ ಪಕ್ಷದ ಪ್ರಣಾಳಿಕೆಯೇ ನಮಗೆ ಭಗವದ್ಗೀತೆಯಾಗಿದ್ದು, ಅದನ್ನು ಈಡೇರಿಸದಿದ್ದರೆ ಜನರು ತಿರಸ್ಕರಿಸುತ್ತಾರೆ. ಜನರು ಬೆಳಗೆದ್ದರೆ ಮೊಬೈಲ್ ನೋಡುವುದು ಹವ್ಯಾಸವಾಗಿದ್ದು, ಎಲ್ಲರೂ ಸಾಮಾಜಿಕ ಜಾಲತಾಣ ಬಳಸುತ್ತಾರೆ. ಇದನ್ನು ಸಮಗ್ರವಾಗಿ ಬಳಸಿಕೊಂಡರೆ ಪಕ್ಷ ಹಾಗೂ ಮುಖಂಡರಿಗೆ ಚುನಾವಣೆಗೆ ನೆರವಾಗುತ್ತದೆ ಎಂದರು.

ನಾನು ಕೂಡ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಳ್ಳುತ್ತೇನೆ. ಪ್ರಧಾನಿ ಮೋದಿಯವರಿಗೆ ಸಾಮಾಜಿಕ ಜಾಲತಾಣದಲ್ಲಿ ಸುಮಾರು 10 ಕೋಟಿ ಫಾಲೋವರ್ಸ್ ಇದ್ದಾರೆ. ಇದು ನಮಗೆ ಮಾದರಿಯಾಗಬೇಕು. ಬಿಜೆಪಿ ಪಕ್ಷದಲ್ಲಿ ಮೋದಿಯವರಂತಹ ದಿಟ್ಟ ನಾಯಕತ್ವ, ಉತ್ತಮ ಕಾರ್ಯಕರ್ತರ ಪಡೆ ಇದೆ. ಇದನ್ನು ಜನರಿಗೆ ತಿಳಿಸಬೇಕು. ಕೃಷಿ ಕಾನೂನು ವಿಚಾರದಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮಾಹಿತಿ ನೀಡಲಾಗುತ್ತಿದೆ. ಇದು ರೈತ ವಿರೋಧಿಯಲ್ಲ ಎಂಬ ಮಾಹಿತಿಯನ್ನು ತಿಳಿಸಬೇಕು ಎಂದರು.

Tags: bjpbjp social media celldr k sudhakarsocial media
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಎಲ್ಲಿಗೆ ಬೇಕಾದರೂ ಸುಲಭವಾಗಿ ಶಿಫ್ಟ್‌ ಮಾಡಬಹುದಾದ ಅತ್ಯಾಧುನಿಕ ಮಾಡ್ಯೂಲರ್‌ ಐಸಿಯು ಜನರಿಗೆ ಮುಕ್ತಗೊಳಿಸಿದ ಸಿಎಂ; ದೇಶದಲ್ಲೇ ಮೊದಲು, ಹೆಲ್ತ್‌ ಎಮರ್ಜೆನ್ಸಿ ಸಮಯದಲ್ಲಿ ಪರಿಣಾಮಕಾರಿ

ಎಲ್ಲಿಗೆ ಬೇಕಾದರೂ ಸುಲಭವಾಗಿ ಶಿಫ್ಟ್‌ ಮಾಡಬಹುದಾದ ಅತ್ಯಾಧುನಿಕ ಮಾಡ್ಯೂಲರ್‌ ಐಸಿಯು ಜನರಿಗೆ ಮುಕ್ತಗೊಳಿಸಿದ ಸಿಎಂ; ದೇಶದಲ್ಲೇ ಮೊದಲು, ಹೆಲ್ತ್‌ ಎಮರ್ಜೆನ್ಸಿ ಸಮಯದಲ್ಲಿ ಪರಿಣಾಮಕಾರಿ

Leave a Reply Cancel reply

Your email address will not be published. Required fields are marked *

Recommended

ಕಾಳು ಮೆಣಸಿನ ರಾಣಿ ಚೆನ್ನಭೈರಾದೇವಿಯ ಕೋಟೆ ಪುನರುತ್ಥಾನ: ಸಿಎಂ

ಕಾಳು ಮೆಣಸಿನ ರಾಣಿ ಚೆನ್ನಭೈರಾದೇವಿಯ ಕೋಟೆ ಪುನರುತ್ಥಾನ: ಸಿಎಂ

3 years ago
ಕೆನಡಾದಲ್ಲಿ ಕನ್ನಡ ಕಂಪು; ಹೆಜ್ಜೆ ಗೆಜ್ಜೆಗಳ ನಾದದೊಳಗೆ ಮೊಳಗಿದ ಕನ್ನಡ ಡಿಂಡಿಮ

ಕೆನಡಾದಲ್ಲಿ ಕನ್ನಡ ಕಂಪು; ಹೆಜ್ಜೆ ಗೆಜ್ಜೆಗಳ ನಾದದೊಳಗೆ ಮೊಳಗಿದ ಕನ್ನಡ ಡಿಂಡಿಮ

5 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ