• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಹೃದಯಕ್ಕೆ ಒಳ್ಳೆಯದು ಮಾಡುವ ಸೂರ್ಯ ನಮಸ್ಕಾರಕ್ಕೂ ರಥಸಪ್ತಮಿಗೂ ಸಂಬಂಧ ಏನು? ಮಾಘ ಮಾಸದಲ್ಲಿ ಭಾಸ್ಕರನಿಗೆ ನಮಸ್ಕರಿಸಿ ನೋಡಿ..

cknewsnow desk by cknewsnow desk
February 9, 2021
in CHIKKABALLAPUR, EDITORS'S PICKS
Reading Time: 1 min read
0
ಹೃದಯಕ್ಕೆ ಒಳ್ಳೆಯದು ಮಾಡುವ ಸೂರ್ಯ ನಮಸ್ಕಾರಕ್ಕೂ ರಥಸಪ್ತಮಿಗೂ ಸಂಬಂಧ ಏನು? ಮಾಘ ಮಾಸದಲ್ಲಿ ಭಾಸ್ಕರನಿಗೆ ನಮಸ್ಕರಿಸಿ ನೋಡಿ..
913
VIEWS
FacebookTwitterWhatsuplinkedinEmail

ಚಿಕ್ಕಬಳ್ಳಾಪುರ: ಮಾಘ ಮಾಸದ ರಥಸಪ್ತಮಿ ವೇಳೆ ಮಾಡುವ ಸೂರ್ಯ ನಮಸ್ಕಾರಗಳು ಅತ್ಯಂತ ಶ್ರೇಷ್ಠ ಎಂದು ಭಾರತ್ ಸ್ವಾಭಿಮಾನ್ ಸಂಸ್ಥೆಯ ಜಿಲ್ಲಾಧ್ಯಕ್ಷ ಪಿ.ವಿ.ರಾಮಚಂದ್ರ ರೆಡ್ಡಿ ಹೇಳಿದ್ದಾರೆ.

ಚಿಕ್ಕಬಳ್ಳಾಪುರದ ಪತ್ರಕರ್ತರ ಭವನದಲ್ಲಿ ಪತಂಜಲಿ ಯೋಗ ಸಮಿತಿಯು ರಥಸಪ್ತಮಿ ಅಂಗವಾಗಿ ಹಮ್ಮಿಕೊಂಡಿದ್ದ ʼ108 ಸೂರ್ಯ ನಮಸ್ಕಾರʼ ಎಂಬ ಸೂರ್ಯೊಪಾಸನ ಯೊಗಾಭ್ಯಾಸದಲ್ಲಿ ಸೂರ್ಯ ನಮಸ್ಕಾರ ಮಾಡಿಸಿದ ನಂತರ ಮಾತನಾಡಿದ ಅವರು, ಸೂರ್ಯ ನಮಸ್ಕಾರವನ್ನು ಕ್ರಮಬದ್ದವಾಗಿ ಮಾಡುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ಕಲೆ ಸಂಸ್ಕೃತಿ, ನಾಡು-ನುಡಿ ಹೇಗೆ ಪ್ರಸಿದ್ಧವೋ ಹಾಗೆಯೇ ಒಂದೊಂದು ಹಬ್ಬವೂ ಒಂದೊಂದು ರೀತಿಯ ವಿಶೇಷತೆಯ ಸಂಕೇತವಾಗಿರುತ್ತದೆ. ಅದರಂತೆ ಮಾಘ ಮಾಸದ ರಥಸಪ್ತಮಿಯ ವೇಳೆ 108 ಸೂರ್ಯ ನಮಸ್ಕಾರ ಮಾಡುವುದರಲ್ಲಿ ತುಂಬಾ ವಿಶೇಷತೆ ಇದೆ ಎಂದರು ಅವರು.

ಹೃದಯಕ್ಕೆ ಒಳ್ಳೆಯ ವ್ಯಾಯಾಮ

ಸೂರ್ಯ ನಮಸ್ಕಾರದ ರೂಪದಲ್ಲಿ 12 ಪ್ರಬಲ ಯೋಗಾಸನಗಳ ಸರಣಿಯು ವಿಶೇಷವಾಗಿ ಹೃದಯಕ್ಕೆ ಒಳ್ಳೆಯ ವ್ಯಾಯಾಮ ನೀಡುತ್ತದೆ. ಈ ಆಸನಗಳು ದೇಹವನ್ನು ಸುಸ್ವರೂಪದಲ್ಲಿ ಇರಿಸಲು ಮತ್ತು ಮನಸ್ಸನ್ನು ಶಾಂತವಾಗಿರಿಸಲು ಉತ್ತಮ ಮಾರ್ಗವಾಗಿದೆ. ಅದೇ ರೀತಿ ಸೂರ್ಯ ನಮಸ್ಕಾರಗಳನ್ನು ಖಾಲಿ ಹೊಟ್ಟೆಯಲ್ಲಿ ಸೂರ್ಯೋದಯದ ಸಮಯದಲ್ಲಿ ಮಾಡುವುದು ಅತ್ಯುತ್ತಮವಾದುದು. ನಾವು ಒಳ್ಳೆಯ ಆರೋಗ್ಯವನ್ನು ಪಡೆದುಕೊಳ್ಳಲು ಸರಳವಾದರೂ ಆರೋಗ್ಯದ ಮೇಲೂ ಒಳ್ಳೆಯ ಗುಣಾತ್ಮಕತೆ ಪಡೆದುಕೊಳ್ಳುವ ಸೂರ್ಯ ನಮಸ್ಕಾರಗಳನ್ನು ರೂಡಿಸಿಕೊಳ್ಳುವುದು ಒಳ್ಳೆಯ ಬೆಳವಣಿಗೆ ಎಂದು ರಾಮಚಂದ್ರ ರೆಡ್ಡಿ ವಿವರಿಸಿದರು.

ಸೂರ್ಯ ದೇವನಿಗೆ ಕೃತಜ್ಞತೆ

ಬೆಂಗಳೂರು ವಿಶ್ವವಿದ್ಯಾಲಯ ಚಿಕ್ಕಬಳ್ಳಾಪುರ ಶಿಕ್ಷಣ ಕಾಲೇಜಿನ ಪ್ರಾದ್ಯಾಪಕ ಹಾಗೂ ಪತಂಜಲಿ ಯೋಗ ಸಮಿತಿ ಜಿಲ್ಲಾ ಸಂಚಾಲಕ ಡಾ.ಎನ್.ಲೋಕನಾಥ್ ಮಾತನಾಡಿ; ಸೂರ್ಯ ನಮಸ್ಕಾರಗಳು ಉತ್ತಮ ಆರೋಗ್ಯ ಮಾತ್ರವಲ್ಲದೆ, ಈ ಭೂಮಿಯನ್ನು ತನ್ನ ಶಕ್ತಿಯಿಂದ ಜೀವಂತವಾಗಿರಿಸಿರುವ ಸೂರ್ಯ ದೇವನಿಗೆ ನಮ್ಮ ಕೃತಜ್ಞತೆಯನ್ನು ಅರ್ಪಿಸಲು ಕೂಡ ಸೂರ್ಯ ನಮಸ್ಕಾರವು ಒಂದು ಸದಾವಕಾಶವಾಗಿರಲಿದೆ, ಮುಂದಿನ 10 ದಿನಗಳವರೆವಿಗೆ ಸೂರ್ಯನ ಚೈತನ್ಯದೆಡೆಗೆ ಕೃತಜ್ಞತೆಯ ಭಾವನೆಯನ್ನು ಮೂಡಿಸಿಕೊಳ್ಳುವುದರ ಜತೆಗೆ ನಮ್ಮ ದಿನಚರಿಯನ್ನು ಲವಲವಿಕೆಯಿಂದಿರಿಸಲು ಸಾದ್ಯವಾಗಲಿದೆ ಎಂದರು.

ಇದೇ ವೇಳೆ, ಲೋಕನಾಥ್ ಅವರು ಸೂರ್ಯ ನಮಸ್ಕಾರಗಳ ನಂತರ ಇನ್ನಿತರ ಯೋಗಾಸನಗಳನ್ನು ಮಾಡಿ ನಂತರ ದೀರ್ಘವಾದ ಯೋಗನಿದ್ರೆ ವಿಶ್ರಮಿಕೆ ಮಾಡಿಸಿದರಲ್ಲದೆ ಇವೆಲ್ಲವುಗಳಿಂದ ಆರೋಗ್ಯ ಆನಂದ ಮತ್ತು ನೆಮ್ಮದಿಯನ್ನು ಕಂಡುಕೊಳ್ಳಲು ಬಹು ಉಪಯೋಗಿ ಯೋಗಾಸನವಾಗಿದೆ ಎಂದು ಸೂರ್ಯ ನಮಸ್ಕಾರಗಳ ಅದೂ ಈ ಸಂದರ್ಭದ ಮಹತ್ವವನ್ನು ವಿವರಿಸಿದರು.

ಮಹಿಳೆಯರಿಗೂ ಸೂರ್ಯ ನಮಸ್ಕಾರ ಒಳ್ಳೆಯದು

ಮಹಿಳಾ ಪತಂಜಲಿ ಯೋಗ ಸಮಿತಿ ಜಿಲ್ಲಾ ಅಧ್ಯಕ್ಷೆ ಕೆ.ವೀಣಾ ಲೋಕನಾಥ್ ಮಾತನಾಡಿ ಸೂರ್ಯ ನಮಸ್ಕಾರಗಳು ಬಹಳಷ್ಟು ಮಹತ್ವ ಪಡೆದುಕೊಂಡಿದೆ. ಜತೆಗೆ, ಜನಪ್ರಿಯತೆಯೂ ಹೌದು, ಇದು ಆರೋಗ್ಯವೃದ್ದಿಗೆ ಹಾಗೂ ಮನೋಭಾವವನ್ನು ಹೆಚ್ಚಿಸುವುದಕ್ಕೆ ಅದರಲ್ಲೂ ಮಹಿಳೆಯರಿಗೆ ಸಾಕಷ್ಟು ಪ್ರಯೋಜನಕಾರಿಯಾಗಲಿದೆ. ಅಲ್ಲದೆ ಸೂರ್ಯ ನಮಸ್ಕಾರವು ಆರೋಗ್ಯ ಸ್ಥಿತಿಯಲ್ಲಿ ಧನಾತ್ಮಕ ಬದಲಾವಣೆ ತರುವುದಲ್ಲದೆ, ರೋಗ ಪ್ರತಿರೋಧಕ ಶಕ್ತಿ ಸಾಮರ್ಥ್ಯ ಮತ್ತು ಜೀವನಾಸಕ್ತಿಯನ್ನು ಹೆಚ್ಚಿಸಲಿದೆ ಎಂದ ಅವರು, ಒಟ್ಟಾರೆಯಾಗಿ ವ್ಯಕ್ತಿತ್ವದ ಸರ್ವತೋಮುಖ ಅಭಿವೃದ್ದಿಗೆ ಪೂರಕವಾಗಿರುವ ಸೂರ್ಯ ನಮಸ್ಕಾರಗಳು ಜಾತಿ, ಮತ, ಪಂಥಗಳನ್ನು ಮೀರಿ ಎಲ್ಲಾ ವಯೋಮಾನದವರಿಗೂ ಅನ್ವಯವಾಗುವಂಥ ಒಂದು ವಿಶಿಷ್ಟ ಪೂರ್ಣ ವ್ಯಾಯಾಮ ಇದಾಗಿದೆ. ಪತಂಜಲಿ ಯೋಗ ಸಮಿತಿಯು ಪ್ರತಿ ವರ್ಷದಂತೆ ಪ್ರಸಕ್ತ ಸಾಲಿನಲ್ಲೂ ಸೂರ್ಯ ನಮಸ್ಕಾರಾಭ್ಯಾಸ ಮಾಡಿಸುವುದರ ಜೊತೆಗೆ ಅದರ ಲಾಭದ ಮಾಹಿತಿ ಒದಗಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಮಾಜಿ ಸದಸ್ಯ ಮೊಬೈಲ್ ಬಾಬು, ಯೋಗ ಪಟುಗಳಾದ ಅನಿಲ್, ವಾಪಸಂದ್ರ ನಾಗರತ್ನಮ್ಮ, ಉಮಾ ಶಂಕರ್, ನಾಗಭೂಷಣ್, ನಾಗವೇಣಿ ಸೇರಿದಂತೆ ಇನ್ನಿತರರು ಯೊಗಭ್ಯಾಸದಲ್ಲಿ ನಿರತರಾಗಿದ್ದರು.

Tags: chikkaballapurratha saptamisurya namaskaryoga
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಜೈಲಿನಿಂದ ಹೊರಬಂದ ಕೂಡಲೇ ಮೀಡಿಯಾ ಮುಂದೆ ಕುಳಿತ ಅಲ್ಲು ಅರ್ಜುನ್‌

ಜೈಲಿನಿಂದ ಹೊರಬಂದ ಕೂಡಲೇ ಮೀಡಿಯಾ ಮುಂದೆ ಕುಳಿತ ಅಲ್ಲು ಅರ್ಜುನ್‌

by cknewsnow desk
December 14, 2024
0

ಅರೆಸ್ಟ್ ಆದ 24 ಗಂಟೆಗಳಲ್ಲೇ ಜೈಲಿನಿಂದ ರಿಲೀಸ್; ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸುತ್ತಿದೆ ಪುಷ್ಪಾ - 2

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

by cknewsnow desk
July 23, 2024
0

ಸಂಸದರಿಗೆ ಅಭಿನಂದನೆ ಸಲ್ಲಿಸಿದ ಆರ್.ಮಿಥುನ್ ರೆಡ್ಡಿ; ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ನಿಂದ ಬಾಗೇಪಲ್ಲಿಗೆ ಹೆಚ್ಚು ಅನುಕೂಲ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

by cknewsnow desk
July 23, 2024
0

ಶ್ರೀ ಯೋಗಿನಾರೇಯಣ ಬಲಿಜ ಟ್ರಸ್ಟ್ ವತಿಯಿಂದ ಆಚರಣೆ

ಉದ್ಯೋಗ & ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಸ

ಉದ್ಯೋಗ & ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಸ

by cknewsnow desk
July 23, 2024
0

ಪ್ರಧಾನಿ ಕನಸಿನ 'ವಿಕಸಿತ ಭಾರತ' ನಿರ್ಮಾಣಕ್ಕೆ ಶಕ್ತಿ ತುಂಬುವ ಬಜೆಟ್

ಹಾಸನ ಪೆನ್‍ಡ್ರೈವ್ ಪ್ರಕರಣ; ಅಶ್ಲೀಲ ವಿಡಿಯೋ ಲೀಕ್‌ ಹಿಂದೆ DCM ಡಿಕೆಶಿ ಕೈ ಚಳಕ

ಹಾಸನ ಪೆನ್‍ಡ್ರೈವ್ ಪ್ರಕರಣ; ಅಶ್ಲೀಲ ವಿಡಿಯೋ ಲೀಕ್‌ ಹಿಂದೆ DCM ಡಿಕೆಶಿ ಕೈ ಚಳಕ

by cknewsnow desk
May 6, 2024
0

ನಾಗಮಂಗಲದ ಎಲ್.‌ಆರ್.‌ಶಿವರಾಮೇಗೌಡ ಮಧ್ಯಸ್ಥಿಕೆ; ಮೊಬೈಲ್‌ ಸಂಭಾಷಣೆ ಆಡಿಯೋ ಬಿಡುಗಡೆ

Next Post
ರಾಜ್ಯದ ಮೂಲಭೂತ ಸೌಕರ್ಯ ಸ್ಥಿತಿಗತಿ ಬಗ್ಗೆ  ಶ್ವೇತಪತ್ರ; ಪ್ರತಿಹಳ್ಳಿಗೂ ಹೈಸ್ಪೀಡ್‌ ಇಂಟರ್‌ನೆಟ್‌, 24×7 ವಿದ್ಯುತ್‌ ಗುಣಮಟ್ಟದ ಪೂರೈಕೆ, ಬೆಂಗಳೂರು ನಗರದ ಹೊರಗೂ ಐಟಿ ಕ್ಷೇತ್ರ ಬೆಳವಣಿಗೆಗೆ ಸ್ಪಷ್ಟ ಮುನ್ನುಡಿ

ರಾಜ್ಯದ ಮೂಲಭೂತ ಸೌಕರ್ಯ ಸ್ಥಿತಿಗತಿ ಬಗ್ಗೆ ಶ್ವೇತಪತ್ರ; ಪ್ರತಿಹಳ್ಳಿಗೂ ಹೈಸ್ಪೀಡ್‌ ಇಂಟರ್‌ನೆಟ್‌, 24x7 ವಿದ್ಯುತ್‌ ಗುಣಮಟ್ಟದ ಪೂರೈಕೆ, ಬೆಂಗಳೂರು ನಗರದ ಹೊರಗೂ ಐಟಿ ಕ್ಷೇತ್ರ ಬೆಳವಣಿಗೆಗೆ ಸ್ಪಷ್ಟ ಮುನ್ನುಡಿ

Leave a Reply Cancel reply

Your email address will not be published. Required fields are marked *

Recommended

ರಾಜ್ಯದಲ್ಲಿ ದಿನೇದಿನೆ ಹೆಚ್ಚುತ್ತಿರುವ ಡಿಮಾಂಡ್: 2 ಕೋಟಿ ಕೋವಿಡ್ ಲಸಿಕೆ ಖರೀದಿಗೆ ಜಾಗತಿಕ ಟೆಂಡರ್‌,  ಈ ಮೊದಲೇ 3 ಕೋಟಿ ಡೋಸ್‌ಗೆ ಸರಕಾರದಿಂದ ಆರ್ಡರ್

ಶೇ 65.14ರಷ್ಟು ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ; ಕಾಲೇಜು ಆರಂಭ ಸದ್ಯಕ್ಕಿಲ್ಲ

4 years ago
ಜೆಡಿಎಸ್’ನಿಂದ ಜನತಾ ಜಲಧಾರೆ

ಜೆಡಿಎಸ್’ನಿಂದ ಜನತಾ ಜಲಧಾರೆ

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ