• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಕೋವಿಡ್‌ ನಂತರದ ಕಾಲದಲ್ಲಿ ಹಳ್ಳಿಹಳ್ಳಿಗೂ ವಿಸ್ತರಿಸಲಿದೆ ಸ್ಮಾರ್ಟ್‌ ಕ್ಲಿನಿಕ್‌ ಪರಿಕಲ್ಪನೆ, ಡಿಜಿಟಲ್‌ ಕನ್ಸಲ್‌ಟೇಶನ್‌ಗೂ ಅವಕಾಶ ಕೊಟ್ಟ ರಾಜ್ಯ ಸರಕಾರ

cknewsnow desk by cknewsnow desk
February 14, 2021
in COVID-19, STATE
Reading Time: 1 min read
0
ಕೋವಿಡ್‌ ನಂತರದ ಕಾಲದಲ್ಲಿ ಹಳ್ಳಿಹಳ್ಳಿಗೂ ವಿಸ್ತರಿಸಲಿದೆ ಸ್ಮಾರ್ಟ್‌ ಕ್ಲಿನಿಕ್‌ ಪರಿಕಲ್ಪನೆ, ಡಿಜಿಟಲ್‌ ಕನ್ಸಲ್‌ಟೇಶನ್‌ಗೂ ಅವಕಾಶ ಕೊಟ್ಟ ರಾಜ್ಯ ಸರಕಾರ
918
VIEWS
FacebookTwitterWhatsuplinkedinEmail

ಬೆಂಗಳೂರು: ಎಲ್ಲ ಕ್ಷೇತ್ರಗಳಲ್ಲಿಯೂ ಮುಂಚೂಣಿಯಲ್ಲಿರುವ ರಾಜ್ಯದಲ್ಲಿ ಆರೋಗ್ಯ ಕ್ಷೇತ್ರವನ್ನು ಸಾಕಷ್ಟು ಕಡೆಗಣಿಸಲಾಗಿತ್ತು. ಆದರೆ, ಕೋವಿಡ್‌ ಮಹಾಮಾರಿ ವಕ್ಕರಿಸಿದ ನಂತರ ಈ ಕ್ಷೇತ್ರದ ಮಹತ್ವದ ಎಲ್ಲರಿಗೂ ಗೊತ್ತಾಯಿತಲ್ಲದೆ ಮುಂದಿನ ದಿನಗಳಲ್ಲಿ ಸ್ಮಾರ್ಟ್‌ ಕ್ಲಿನಿಕ್‌ ಹಾಗೂ ಡಿಜಿಟಲ್‌ ಕನ್ಸಲ್‌ಟೇಶನ್‌ ಯುಗ ಆರಂಭವಾಗಲಿದೆ ಎಂದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ‌ಅಶ್ವತ್ಥನಾರಾಯಣ ಹೇಳಿದರು.

  • ಸಾಯಿರಾಮ್‌ ಆಸ್ಪತ್ರೆಯನ್ನು ಉದ್ಘಾಟಿಸಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ.

ಬೆಂಗಳೂರಿನಲ್ಲಿ ಭಾನುವಾರದಂದು ಭನ್ನೇರುಘಟ್ಟದ ಕೃಷ್ಣ ಕುಟೀರದ ಸಮೀಪ ಸ್ಥಾಪಿಸಲಾಗಿರುವ ಶ್ರೀ ಸಾಯಿರಾಮ್‌ ಆಸ್ಪತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು; ವೈದ್ಯರೆಲ್ಲರೂ ನಗರ ಪ್ರದೇಶಗಳೇ ಬೇಕು ಎನ್ನುತ್ತಿದ್ದಾರೆ. ಹೀಗಾಗಿ ಆರೋಗ್ಯ ಸೇವೆಯಲ್ಲಿ ನಗರ-ಗ್ರಾಮೀಣ ಪ್ರದೇಶಗಳ ನಡುವೆ ಕಂದಕ ಸೃಷ್ಟಿಯಾಗಿದೆ. ಕೋವಿಡ್‌ ನಂತರ ಈ ಕಂದಕ ಬಹುತೇಕ ನಿವಾರಣೆಯಾಗುತ್ತಿದ್ದು, ಸ್ಮಾರ್ಟ್‌ ಕ್ಲಿನಿಕ್‌ ವ್ಯವಸ್ಥೆ ಹೆಚ್ಚಿದಂತೆಲ್ಲ ಡಿಜಿಟಲ್‌ ಕನ್ಸಲ್‌ಟೇಶನ್‌ ಜನಪ್ರಿಯವಾಗುತ್ತಿದೆ. ರೋಗಿ ಎಲ್ಲೇ ಇದ್ದರೂ ಆನ್‌ಲೈನ್‌ ಮೂಲಕವೇ ಚಿಕಿತ್ಸೆಯನ್ನು ಪಡೆಯಬಹುದು. ಹಿಂದೆ ಡಿಜಿಟಲ್‌ ಕನ್ಸಲ್‌ಟೇಶನ್‌ಗೆ ಕಾನೂನಿನಲ್ಲಿ ಅವಕಾಶ ಇರಲಿಲ್ಲ. ಈಗ ಅವಕಾಶ ಕಲ್ಪಿಸಲಾಗಿದೆ ಎಂದರು.

ಸ್ಮಾರ್ಟ್‌ ಕ್ಲಿನಿಕ್‌ ವ್ಯವಸ್ಥೆ ಹಾಗೂ ಡಿಜಿಟಲ್‌ ಕನ್ಸಲ್‌ಟೇಶನ್‌ಗೆ ಇಪ್ಪತ್ತು ನಾಲ್ಕು ಗಂಟೆ ವಿದ್ಯುತ್‌ ಹಾಗೂ ಹೈಸ್ಪೀಡ್‌ ಇಂಟರ್‌ನೆಟ್‌ ಕನೆಕ್ಟಿವಿಟಿ ಅಗತ್ಯ. ಅದಕ್ಕೆ ಬೇಕಾದ ಎಲ್ಲ ವ್ಯವಸ್ಥೆಗಳನ್ನು ಸರಕಾರ ಮಾಡುತ್ತಿದೆ ಎಂದು ಡಿಸಿಎಂ ನುಡಿದರು.

ಆರೋಗ್ಯ ಕ್ಷೇತ್ರ ಕಡೆಗಣನೆ ಇಲ್ಲ

“ನಾವು ರಸ್ತೆ, ನೀರು, ವಿದ್ಯುತ್‌ ಮತ್ತಿತರೆ ಮೂಲಸೌಕರ್ಯಗಳಿಗೆ ಹೆಚ್ಚು ಒತ್ತು ನೀಡಿ ಮತನಾಡುತ್ತೇವೆ. ಸರಕಾರಗಳು ಕೂಡ ಇಂಥ ವಿಷಯಗಳಿಗೇ ಹೆಚ್ಚು ಆದ್ಯತೆ ನೀಡಿವೆ ನಿಜ. ಆದರೆ, ಆರೋಗ್ಯ ಕ್ಷೇತ್ರಕ್ಕೂ ಇಷ್ಟೇ ಮಹತ್ವ ನೀಡಲೇಬೇಕು. ಈ ಅಂಶವನ್ನು ರಾಜ್ಯ ಸರಕಾರ ಮನಗಂಡಿದ್ದು ವೈದ್ಯಕೀಯ ಕ್ಷೇತ್ರದಲ್ಲಿ ಅನೇಕ ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ ಎಂದರು.

ಕೋವಿಡ್‌ ಬಂದಾಗ ನಮ್ಮಲ್ಲಿದ್ದ ಆರೋಗ್ಯ ವ್ಯವಸ್ಥೆಯ ಶಕ್ತಿ ಏನೆಂಬುದರ ಅರಿವಾಯಿತು. ಸರಕಾರಿ ಆಸ್ಪತ್ರೆಗಳಲ್ಲಿ ಐಸಿಯು ಬೆಡ್‌ಗಳ ಮಾತಿರಲಿ ಸಾಮಾನ್ಯ ಬೆಡ್‌ಗಳೇ ಇಲ್ಲದಂಥ ಪರಿಸ್ಥಿತಿ ಇತ್ತು. ಆಕ್ಸಿಜನ್‌ ಸೌಲಭ್ಯ, ಎಮರ್ಜೆನ್ಸಿ ಸೌಲಭ್ಯ ಹೀಗೆ ಯಾವುದೇ ಸೌಲಭ್ಯ ಬೇಕಾದರೂ ಜನರು ಹುಡುಕಾಡುವ ಸನ್ನಿವೇಶ ಇತ್ತು. ಈಗ ಅಂಥ ಸಮಸ್ಯೆಗಳೇ ಇಲ್ಲ. ಎಲ್ಲ ಆಸ್ಪತ್ರೆಗಳಿಗೂ ತಜ್ಞ ವೈದ್ಯರನ್ನು ನಿಯೋಜಿಸಲಾಗಿದೆ, ಐಸಿಯು ವ್ಯವಸ್ಥೆ ಮಾಡಲಾಗಿದೆ. ಅಗತ್ಯವಾದ ಅರೆವೈದ್ಯ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ ಎಂದು ಡಿಸಿಎಂ ನುಡಿದರು.

ಯುರೋಪ್‌ ಉದಾಹರಣೆ

ರಾಜ್ಯದಲ್ಲಿ ಕೋವಿಡ್‌ ಹಾವಳಿ ಹೆಚ್ಚಿದಾಗ ಬೆಂಗಳೂರಿನಲ್ಲಿ ಪ್ರತಿಷ್ಠಿತ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದ ಸುಮಾರು ಮೂರ್ನಾಲ್ಕು ಲಕ್ಷಕ್ಕೂ ಹೆಚ್ಚು ವಿದೇಶಿ ನಾಗರೀಕರು ತಮ್ಮ ಸ್ವದೇಶಗಳಿಗೆ ವಾಪಸ್‌ ಹೋದರು. ಇಲ್ಲಿ ನಮ್ಮ ಪ್ರಾಣಕ್ಕೆ ರಕ್ಷಣೆ ಇಲ್ಲ ಎಂಬ ಭಾವನೆ ಅವರಲ್ಲಿತ್ತು. ಅದೇ ಯುರೋಪ್‌ನಲ್ಲಿ ಕೆಲಸ ಮಾಡುತ್ತಿದ್ದ ಯಾವ ವಿದೇಶಿ ನಾಗರೀಕರೂ ಅಲ್ಲಿಂದ ಕದಲಿಲ್ಲ. ಅಲ್ಲಿನ ಆರೋಗ್ಯ ವ್ಯವಸ್ಥೆಯ ಮೇಲೆ ಅವರಿಗೆ ಗಾಢವಾದ ನಂಬಿಕೆ ಇತ್ತು. ಅಂಥದ್ದೇ ನಂಬಿಕೆ ಮತ್ತು ಭರವಸೆಯನ್ನು ನಾವು ಸೃಷ್ಟಿ ಮಾಡಬೇಕಾಗಿದೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

ಯಾವುದೇ ಕಾರಣಕ್ಕೂ ಆರೋಗ್ಯ ಕ್ಷೇತ್ರವನ್ನು ಕಡೆಗಣಿಸಬಾರದು ಎಂಬುದು ನಮ್ಮ ಸರಕಾರದ ಬದ್ಧತೆ. ಸಮಾಜವನ್ನು ಕಾಪಾಡಿಕೊಳ್ಳಬೇಕಾದರೆ ಆರೋಗ್ಯ ಕ್ಷೇತ್ರವನ್ನು ಚೆನ್ನಾಗಿ ಇಟ್ಟುಕೊಳ್ಳಬೇಕು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರಕಾರ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಿದೆ ಮಾತ್ರವಲ್ಲದೆ, ಮಾನವ ಸಂಪನ್ಮೂಲ ಕೊರತೆ ಆಗದಂತೆ ನೋಡಿಕೊಂಡಿದೆ. ಜತೆಗೆ; ವೈದ್ಯಕೀಯ ಕೋರ್ಸಿನಲ್ಲಿ ಸ್ನಾತಕೋತ್ತರ ಪದವಿ ಪಡೆಯಲು ದೊಡ್ಡ ಪ್ರಮಾಣದ ಅವಕಾಶ ಮಾಡಿಕೊಡಲಾಗಿದೆ ಎಂದು ಡಿಸಿಎಂ ನುಡಿದರು.

ಕರ್ನಾಟಕ ಅವಕಾಶಗಳ ಹೆಬ್ಬಾಗಿಲು

ಕೋವಿಡ್‌ ನಂತರ ಕರ್ನಾಟಕವನ್ನು ಇಡೀ ಜಗತ್ತು ಅಮೆರಿಕವನ್ನು ನೋಡುವಂತೆ ನೋಡತ್ತಿದೆ. ಹಿಂದೆ ನಮ್ಮ ದೇಶದ ಜನರು ಅವಕಾಶಗಳಿಗಾಗಿ ಅಮೆರಿಕದತ್ತ ನೋಡುತ್ತಿದ್ದರು. ಈಗ ಕರ್ನಾಟಕದತ್ತ ನೋಡುತ್ತಿದ್ದಾರೆ. ಇಡೀ ಭಾರತವನ್ನು ಬೆಂಗಳೂರು ಮೂಲಕ ನೋಡುತ್ತಿದೆ. ಅನೇಕ ಪ್ರತಿಭಾವಂತರು ಬೆಂಗಳೂರಿಗೆ ಧಾವಿಸಿ ಬರುತ್ತಿದ್ದಾರೆ ಎಂದು ಡಿಸಿಎಂ ಹೇಳಿದರು.

ಶಾಸಕ ಸತೀಶ್‌ ರೆಡ್ಡಿ, ಖ್ಯಾತ ಹೃದ್ರೋಗ ತಜ್ಞ ವಿವೇಕ್‌ ಜವಳಿ, ವಿಧಾನ ಪರಿಷತ್‌ ಸದಸ್ಯ ಯು.ಬಿ.ವೆಂಕಟೇಶ್‌, ಕೆನರಾ ಬ್ಯಾಂಕ್‌ ಅಧಿಕಾರಿ ನಯನ, ಬಿಬಿಎಂಪಿ ಮಾಜಿ ಸದಸ್ಯರಾದ ಮುರಳಿ, ಪುರುಷೋತ್ತಮ್, ಭಾಗ್ಯಲಕ್ಷ್ಮೀ ಹಾಗೂ ಡಾ.ವಿವೇಕಾನಂದ ಶೆಟ್ಟಿ, ವಿಷ್ಣುಭಟ್‌, ಡಾ.ಬಾಲಕೃಷ್ಣ ಶೆಟ್ಟಿ, ಮುಂತಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Lead photo: Negative-space from Pexels

Tags: digital consultation Karnatakadr cn ashwath narayansmart clinics
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಒತ್ತುವರಿಯಾಗಿ ಹಾಳಾಗಿದ್ದ ಉದ್ಯಾನವನಕ್ಕೆ ಹೊಸ ರೂಪ ನೀಡಿದ ನಗರಸಭೆ; ಲೋಕಾರ್ಪಣೆ ಮಾಡಿದ ಜಿಲ್ಲಾಧಿಕಾರಿ

ಒತ್ತುವರಿಯಾಗಿ ಹಾಳಾಗಿದ್ದ ಉದ್ಯಾನವನಕ್ಕೆ ಹೊಸ ರೂಪ ನೀಡಿದ ನಗರಸಭೆ; ಲೋಕಾರ್ಪಣೆ ಮಾಡಿದ ಜಿಲ್ಲಾಧಿಕಾರಿ

Leave a Reply Cancel reply

Your email address will not be published. Required fields are marked *

Recommended

ಕೋವಿಡ್‌ ಸುಳಿಯಲ್ಲಿ ಸ್ಯಾಂಡಲ್‌ವುಡ್‌; ನೆರವಿಗೆ ಮುಂದಾದ ಸರಕಾರ

ಕೋವಿಡ್‌ ಸುಳಿಯಲ್ಲಿ ಸ್ಯಾಂಡಲ್‌ವುಡ್‌; ನೆರವಿಗೆ ಮುಂದಾದ ಸರಕಾರ

5 years ago
ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಎಸ್‌ಸಿ ಒಳ ಮೀಸಲಿಗೆ ಕೈ ಹಾಕಿದ ಸರಕಾರ

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಎಸ್‌ಸಿ ಒಳ ಮೀಸಲಿಗೆ ಕೈ ಹಾಕಿದ ಸರಕಾರ

1 year ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ