• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ಉನ್ನತ ಶಿಕ್ಷಣ: 6 ತಿಂಗಳಲ್ಲಿ 8,000 ಸ್ಮಾರ್ಟ್‌ಕ್ಲಾಸ್‌ ರೂಂ; ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಟ್ಯಾಬ್‌, ಪ್ರತಿ ಕಾಲೇಜಿಗೂ ಹೈಸ್ಪೀಡ್‌ ಇಂಟರ್‌ನೆಟ್‌

cknewsnow desk by cknewsnow desk
February 18, 2021
in NEWS IN USE, STATE
Reading Time: 1 min read
0
ಉನ್ನತ ಶಿಕ್ಷಣ: 6 ತಿಂಗಳಲ್ಲಿ 8,000 ಸ್ಮಾರ್ಟ್‌ಕ್ಲಾಸ್‌ ರೂಂ; ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಟ್ಯಾಬ್‌, ಪ್ರತಿ ಕಾಲೇಜಿಗೂ ಹೈಸ್ಪೀಡ್‌ ಇಂಟರ್‌ನೆಟ್‌
915
VIEWS
FacebookTwitterWhatsuplinkedinEmail

ಐದು ವರ್ಷಗಳಲ್ಲಿ ಹತ್ತು ದಶಲಕ್ಷ ಉದ್ಯೋಗ ಸೃಷ್ಟಿ: ಉಪ ಮುಖ್ಯಮಂತ್ರಿ

ಬೆಂಗಳೂರು: ಕೊವಿಡೋತ್ತರ ಕಾಲದಲ್ಲಿ ಡಿಜಿಟಲ್‌ ಕಲಿಕೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಇನ್ನು ಎರಡು ತಿಂಗಳಲ್ಲಿ ರಾಜ್ಯದ ಉನ್ನತ ಶಿಕ್ಷಣ ವ್ಯಾಪ್ತಿಯಲ್ಲಿ ಶಿಕ್ಷಣ ಸಂಸ್ಥೆಗಳ 2,500 ತರಗತಿ ಕೊಠಡಿಗಳನ್ನು ಸ್ಮಾರ್ಟ್‌ಕ್ಲಾಸ್‌ ರೂಮುಗಳನ್ನಾಗಿ ಪರಿವರ್ತನೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಪ್ರಕಟಿಸಿದರು.

ಬೆಂಗಳೂರು ಕಲಾ ಕಾಲೇಜ್‌ನಲ್ಲಿ ಗುರುವಾರ ನೂತನ ಜಿಮ್‌ ಹೌಸ್‌ ಹಾಗೂ ವಾರ್ಷಿಕ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ಕೋವಿಡ್‌ ಕಾರಣಕ್ಕೆ ಕಲಿಕೆಯ ಮಾದರಿಗಳೇ ಬದಲಾಗಿವೆ. ಹೀಗಾಗಿ ಸರಕಾರ ತಂತ್ರಜ್ಞಾನವನ್ನು ಬಳಸಿಕೊಂಡು ಸ್ಲಾರ್ಟ್‌ಕ್ಲಾಸ್‌ ರೂಂ ಪರಿಕಲ್ಪನೆಯನ್ನು ರೂಪಿಸಲಾಗಿದೆ. 2,500 ತರಗತಿ ಕೊಠಡಿಗಳು ಸ್ಮಾರ್ಟ್‌ ಕ್ಲಾಸ್‌ಗಳು ಆದ ನಂತರ ಮುಂಬರುವ 6 ತಿಂಗಳಲ್ಲಿ ಇನ್ನೂ 5,500 ತರಗತಿ ಕೊಠಡಿಗಳನ್ನು ಸ್ಮಾರ್ಟ್‌ಕ್ಲಾಸ್‌ ರೂಮುಗಳಾಗಿ ರೂಪಿಸಲಾಗುವುದು ಎಂದರು.

ಹೈಸ್ಪೀಡ್‌ ಇಂಟರ್‌ನೆಟ್‌, ಅತ್ಯಾಧುನಿಕ ಗುಣಮಟ್ಟದ ಟ್ಯಾಬ್‌ ನೀಡುವುದು ಹಾಗೂ ಸಮಗ್ರ ಕಲಿಕಾ ವ್ಯವಸ್ಥೆ (ಎಲ್‌ಎಂಎಸ್)ಯನ್ನು ಜಾರಿ ಮಾಡುವ ಮೂಲಕ ಸ್ಮಾರ್ಟ್‌ಕ್ಲಾಸ್‌ ರೂಂ ವ್ಯವಸ್ಥೆಯನ್ನು ಪರಿಪೂರ್ಣಗೊಳಿಸಲಾಗುವುದು. ಇದರಿಂದ ವಿದ್ಯಾರ್ಥಿಗಳ ಕಲಿಕೆಯ ಗತಿಯೇ ಬದಲಾಗುತ್ತದೆ. ಗುಣಮಟ್ಟದ ಕಲಿಕೆಯ ಕನಸು ಈ ಮೂಲಕ ಸಾಕಾರವಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಸಮಗ್ರ ಕಲಿಕಾ ವ್ಯವಸ್ಥೆ (ಎಲ್‌ಎಂಎಸ್)

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾರಿ ಮಾಡಲಾಗಿರುವ ಸಮಗ್ರ ಕಲಿಕಾ ವ್ಯವಸ್ಥೆಯು ಕ್ರಾಂತಿಕಾರಕ. ಇಡೀ ದೇಶದಲ್ಲಿ ಇಂಥ ವ್ಯವಸ್ಥೆ ಯಾವುದೇ ರಾಜ್ಯದಲ್ಲೂ ಇಲ್ಲ. ನಮ್ಮದೇ ಮಾನವ ಸಂಪನ್ಮೂಲ ಬಳಸಿಕೊಂಡು ಈ ವ್ಯವಸ್ಥೆಯನ್ನು ರೂಪಿಸಲಾಗಿದೆ. ಎಲ್ಲೇ ಇದ್ದರೂ ಟ್ಯಾಬ್‌ ಮತ್ತು ಇಂಟರ್‌ನೆಟ್‌ ಇದ್ದರೆ ಕಲಿಯಬಹುದು. ಜತೆಗೆ, ವಿದ್ಯಾರ್ಥಿ ಕಲಿಕೆಯ ಮಟ್ಟವನ್ನೂ ಬೋಧಕರು ಟ್ರ್ಯಾಕ್‌ ಮಾಡಬಹುದು ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

ಈ ಎಲ್ಲ ಉಪಕ್ರಮಗಳ ಮೂಲಕ ಸರಕಾರಿ ಕಾಲೇಜುಗಳು ಖಾಸಗಿ ಕ್ಷೇತ್ರದ ಶಿಕ್ಷಣ ಸಂಸ್ಥೆಗಳ ಜತೆ ಮಾತ್ರವಲ್ಲ, ಜಾಗತಿಕ ಶಿಕ್ಷಣ ಸಂಸ್ಥೆಗಳ ಜತೆಗೂ ಪೈಪೋಟಿ ನಡೆಸಲು ಸಜ್ಜಾಗುತ್ತಿವೆ. ಅದಕ್ಕೆ ಅಗತ್ಯವಾದ ಎಲ್ಲ ಉಪ ಕ್ರಮಗಳನ್ನು ಸರಕಾರ ಕೈಗೊಳ್ಳುತ್ತಿದೆ ಎಂದು ಅವರು ನುಡಿದರು.

ಪಠ್ಯ ಆಯ್ಕೆಯಲ್ಲಿ ಸ್ವಾತಂತ್ರ್ಯ

ಪ್ರಸಕ್ತ ಸಾಲಿನಿಂದಲೇ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗುತ್ತಿದೆ. ತದ ನಂತರ ವಿದ್ಯಾರ್ಥಿಗಳು ಪೂರ್ವ ನಿಗಧಿ ಮಾಡಿದ ಪಠ್ಯ ಆಯ್ಕೆ ಮಾಡಿಕೊಳ್ಳುವ ವ್ಯವಸ್ಥೆ ಇರುವುದಿಲ್ಲ. ಅಂದರೆ; ವಿದ್ಯಾರ್ಥಿಗಳ ಮೇಲೆ ಪಠ್ಯವನ್ನು ಹೇರುವ ವ್ಯವಸ್ಥೆ ಅಳಿಯಲಿದೆ. ಬದಲಿಗೆ ವಿದ್ಯಾರ್ಥಿಗಳೇ ತಮಗೆ ಆಸಕ್ತಿ ಇರುವ ಪಠ್ಯವನ್ನು ಆಯ್ಕೆ ಮಾಡಿಕೊಂಡು ವ್ಯಾಸಂಗ ಮಾಡುವ ವ್ಯವಸ್ಥೆ ಬರಲಿದೆ. ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಸರಕಾರ ಮಾಡಿಕೊಂಡಿದೆ ಎಂದು ಇದೇ ವೇಳೆ ಡಿಸಿಎಂ ಪ್ರಕಟಿಸಿದರು.

ಉದ್ಯೋಗ ಸೃಷ್ಟಿಯಲ್ಲಿ ಬೆಂಗಳೂರು ನಂ.1

  • ಉದ್ಯೋಗ ಸೃಷ್ಟಿಯಲ್ಲಿ ಬೆಂಗಳೂರು ನಗರ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಕೇವಲ ಔಷಧ ಕ್ಷೇತ್ರವೊಂದರಲ್ಲೇ ಪ್ರತಿ ವರ್ಷ 5 ಲಕ್ಷ ಉದ್ಯೋಗ ಸೃಷ್ಟಿಯಾಗುತ್ತಿದೆ. ಭವಿಷ್ಯ ನಿಧಿ ಖಾತೆಗಳಲ್ಲಿ ವರ್ಷಕ್ಕೆ 5 ಲಕ್ಷ ಜನ ನೋಂದಣಿ ಆಗುತ್ತಿದ್ದಾರೆ. ಜತೆಗೆ; ಇತರೆ ಕ್ಷೇತ್ರಗಳಲ್ಲಿ ಇನ್ನು ಎರಡು ಲಕ್ಷದಷ್ಟು ಉದ್ಯೋಗ ಸೃಷ್ಟಿ ಆಗುತ್ತಿದೆ. ವರ್ಷಕ್ಕೆ ಒಟ್ಟು 7 ಲಕ್ಷ ಉದ್ಯೋಗ ಸೃಷ್ಟಿ ನಮ್ಮ ಬೆಂಗಳೂರಿನಲ್ಲಿ ಆಗುತ್ತಿದೆ ಎಂದ ಅವರು; ಬೆಂಗಳೂರು ನಾಲೆಜ್‌ ಸಿಟಿ ಮಾತ್ರವಲ್ಲದೆ ಆವಿಷ್ಕಾರಕ್ಕೂ ಹೆಚ್ಚು ಒತ್ತಾಸೆ ನೀಡುತ್ತಿರುವುದರಿಂದ ಇದು ಸಾಧ್ಯವಾಗಿದೆ ಎಂದರು.
  • ಇನ್ನು ಮುಂದಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿ ಹತ್ತು ದಶಲಕ್ಷ ಉದ್ಯೋಗಳನ್ನು ಸೃಷ್ಟಿ ಮಾಡಲು ಗುರಿ ಹೊಂದಲಾಗಿದೆ. ಅದಕ್ಕೆ ಪೂರಕವಾಗಿ ದಿನದ 24 ಗಂಟೆ ವಿದ್ಯುತ್‌ ಹಾಗೂ ಎಲ್ಲ ಜಾಗದಲ್ಲೂ ಹೈಸ್ಪೀಡ್‌ ಇಂಟರ್‌ನೆಟ್‌ ಸಿಗುವ ಹಾಗೆ ಮಾಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿಗಳು ಹೇಳಿದರು.
  • ನಮ್ಮ ಅಕ್ಕಪಕ್ಕದ ರಾಜ್ಯಗಳಲ್ಲಿ ಈ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿ ಮಾಡುವ ಹಾಗೂ ಉದ್ಯಮಶೀಲತೆಯ ವಾತಾವರಣವನ್ನು ಸಾಧಿಸಲು ಸಾಧ್ಯವಾಗುತ್ತಿಲ್ಲ. ಆದರೆ ಬೆಂಗಳೂರಿಗೆ ಮಾತ್ರ ಇದು ಸಾಧ್ಯವಾಗುತ್ತಿದೆ. ನಮ್ಮ ರಾಜ್ಯದಲ್ಲಿ ಅತ್ಯುತ್ತಮ ಪ್ರತಿಭೆಗಳು ಹೊರಹೊಮ್ಮುತ್ತಿರುವ ಜತೆಗೆ ಹೊರರಾಜ್ಯಗಳಿಂದ ಪ್ರತಿಭಾವಂತ ಯುವಕರು ನಮ್ಮ ರಾಜ್ಯಕ್ಕೆ ಬರುತ್ತಿದ್ದಾರೆ ಎಂದು ಅವರು ನುಡಿದರು.

ಕಾರ್ಯಕ್ರಮದಲ್ಲಿ ಶಾಸಕ ರಿಜ್ವಾನ್‌ ಅರ್ಷದ್‌, ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ, ಕಾಲೇಜು ಶಿಕ್ಷಣ ಇಲಾಖೆಯ ಮುಖ್ಯ ಆಡಳಿತಾಧಿಕಾರಿ ಬಾಲಚಂದ್ರ, ಸರಕಾರಿ ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷ ಡಾ.ಟಿ.ಎಂ.ಮಂಜುನಾಥ, ಕಾಲೇಜಿನ ಪ್ರಾಂಶುಪಾಲ ಪ್ರೊ.ಕೋಡದ ರಾಜಶೇಖರಪ್ಪ, ಡಾ.ಶಶಿಕಲಾ ಮುಂತಾದವರು ಭಾಗಿಯಾಗಿದ್ದರು.

Tags: dr cn ashwath narayanhigher education department Karnatakasamrt class for students
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಚಿಕ್ಕಬಳ್ಳಾಪುರ ಜಿಲ್ಲಾಡಳಿತದಿಂದ ಶನಿವಾರ ಗ್ರಾಮ ವಾಸ್ತವ್ಯ; ಸಿದ್ಧತೆ ಕುರಿತು ತಹಸೀಲ್ದಾರ್‌ಗಳ ಜತೆ ವಿಡಿಯೋ ಸಂವಾದ, ಜಿಲ್ಲಾಧಿಕಾರಿ ಆಗಮನಕ್ಕಾಗಿ ಎದುರು ನೋಡುತ್ತಿದೆ ಬೋದಗೂರು

ಚಿಕ್ಕಬಳ್ಳಾಪುರ ಜಿಲ್ಲಾಡಳಿತದಿಂದ ಶನಿವಾರ ಗ್ರಾಮ ವಾಸ್ತವ್ಯ; ಸಿದ್ಧತೆ ಕುರಿತು ತಹಸೀಲ್ದಾರ್‌ಗಳ ಜತೆ ವಿಡಿಯೋ ಸಂವಾದ, ಜಿಲ್ಲಾಧಿಕಾರಿ ಆಗಮನಕ್ಕಾಗಿ ಎದುರು ನೋಡುತ್ತಿದೆ ಬೋದಗೂರು

Leave a Reply Cancel reply

Your email address will not be published. Required fields are marked *

Recommended

ದೀಪಾವಳಿಯ ಬೆಡಗು, ಜತೆಗೊಂದು ರಾಕೆಟ್ ಮತ್ತು ನಮ್ಮೂರಿನ ಪ್ಯಾಂಟ್‌ ಅಶ್ವತ್ಥಮ್ಮ

ದೀಪಾವಳಿಯ ಬೆಡಗು, ಜತೆಗೊಂದು ರಾಕೆಟ್ ಮತ್ತು ನಮ್ಮೂರಿನ ಪ್ಯಾಂಟ್‌ ಅಶ್ವತ್ಥಮ್ಮ

5 years ago
ಬೊಮ್ಮಾಯಿ ಈಗ ಬಿಜೆಪಿ ಬಾಹುಬಲಿ!

ಬೊಮ್ಮಾಯಿ ಈಗ ಬಿಜೆಪಿ ಬಾಹುಬಲಿ!

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ