• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ರಾಜಕಾರಣ ಮಾಡುವ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಎಂದ ಶಾಸಕರು; ಕತ್ತಲಲ್ಲೇ ನಡೆದ ಕೆಡಿಪಿ ಸಭೆ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಬಡವರಿಗೆ ಸಿಗದ ನಿವೇಶನ

cknewsnow desk by cknewsnow desk
February 25, 2021
in CHIKKABALLAPUR
Reading Time: 1 min read
0
ರಾಜಕಾರಣ ಮಾಡುವ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಎಂದ ಶಾಸಕರು; ಕತ್ತಲಲ್ಲೇ ನಡೆದ ಕೆಡಿಪಿ ಸಭೆ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಬಡವರಿಗೆ ಸಿಗದ ನಿವೇಶನ
924
VIEWS
FacebookTwitterWhatsuplinkedinEmail

ಗುಡಿಬಂಡೆ: ತಾಲ್ಲೂಕು ಪಂಚಾಯತಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿಯ ಪಿಡಿಒಗಳ ನಿರ್ಲಕ್ಷ್ಯದಿಂದ ತಾಲ್ಲೂಕಿನಲ್ಲಿ ಕಡು ಬಡವರು ನಿವೇಶನ ವಂಚಿತರಾಗಿದ್ದಾರೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಇಒ ರವೀಂದ್ರ ಅವರಿಗೆ ತರಾಟೆ ತೆಗೆಕೊಂಡರು.

ಪಟ್ಟಣದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು; ತಾಲೂಕಿನಲ್ಲಿ ಸೂರಿಲ್ಲದವರಿಗೆ ಸೂರು ಕಲ್ಪಿಸುವ ಉದ್ದೇಶದಿಂದ ಕಳೆದ ಸುಮಾರು ೫ ವರ್ಷಗಳ ಹಿಂದೆ ಕಂದಾಯ ಇಲಾಖೆಯಿಂದ ೩೨ ಎಕರೆ ಜಮೀನು ವಸತಿ ನಿವೇಶನಗಳಿಗೆ ನೀಡಲಾಗಿದೆ. ಆದರೂ ಇದುವರೆವಿಗೂ ಕಾರ್ಯರೂಪಕ್ಕೆ ಬರಲಿಲ್ಲ. ಇದರಿಂದ ಸುಮಾರು ೮೦೦ಕ್ಕೂ ಹೆಚ್ಚು ಬಡವರು ನಿವೇಶನ ವಂಚಿತರಾಗಿದ್ದಾರೆ ಎಂದರು.

ತಾಲೂಕಿನಲ್ಲಿ 2219 ವಸತಿರಹಿತರಿದ್ದು, 1,400 ನಿವೇಶನ ಇರುವ ಫಲಾನುಭವಿಗಳು ತಾಲೂಕಿನಲ್ಲಿ ಇದ್ದಾರೆರೆ ಎಂದು ಇಒ ರವೀಂದ್ರ ಸಭೆಯಲ್ಲಿ ಮಾಹಿತಿ ನೀಡಿದರು.

ಗುಂಡ್ಲಹಳ್ಳಿ ನೂತನ ಶಾಲೆ ಪ್ರಾರಂಭ

ಕೊವಿಡ್ ನಿಯಮಗಳನ್ನು ಪಾಲಿಸಿ ಗುಂಡ್ಲಹಳ್ಳಿಯಲ್ಲಿ ನೂತನ ಶಾಲೆಯನ್ನು ಪ್ರಾರಂಭ ಮಾಡಲಾಗಿದ್ದು, ಇದುವರೆವಿಗೂ ಯಾವುದೇ ಕೊವಿಡ್ ಪಾಸಿಟಿವ್ ಪ್ರಕರಣ ಕಂಡುಬಂದಿಲ್ಲ ಎಂದು ಬಿಇಒ ವೆಂಕಟೇಶಪ್ಪ ಸಭೆಗೆ ಮಾಹಿತಿ ನೀಡಿದರು.

ತಾಲೂಕಿನ ಪ್ರಾಥಮಿಕ ಶಾಲೆಯಲ್ಲಿ 63 ಶಿಕ್ಷಕರು ಖಾಲಿ ಹುದ್ದೆಗಳಿವೆ. ಪ್ರೌಢಶಾಲೆಯಲ್ಲಿ 6 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದ ಅವರು, ಮಕ್ಕಳ ಸಂಖ್ಯೆಗೆ ಅನುಗುಣವಾಗಿ ತಾಲೂಕಿನ ಗುಂಡ್ಲಹಳ್ಳಿ ಗ್ರಾಮಕ್ಕೆ ನೂತನ ಪ್ರಾಥಮಿಕ ಶಾಲೆಯನ್ನು ಸರಕಾರ ಮಂಜೂರು ಮಾಡಿದೆ ಎಂದು ಮಾಹಿತಿ ನೀಡಿದರು.

ರಾಜಕೀಯ ಚಟುವಟಿಕೆಗಳಲ್ಲಿ ಶಿಕ್ಷಕರು

ಪ್ರಾಥಮಿಕ ಶಾಲೆಯ ಶಿಕ್ಷಕರು ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿ ಸರಿಯಾಗಿ ಶಾಲೆಯಲ್ಲಿ ಪಾಠಗಳನ್ನು ಮಾಡುತ್ತಿಲ್ಲ. ಜತೆಗೆ ಸರಿಯಾದ ಸಮಯಕ್ಕೆ ಶಾಲೆಗೂ ಹೊಗುತ್ತಿಲ್ಲ ಬೇಕಾಬಿಟ್ಟಿ ಶಾಲೆಗಳಿಗೆ ಹೊಗುತ್ತಿದ್ದಾರೆ ಎಂಬ ದೂರುಗಳು ಬಂದಿದ್ದು ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾವುದೆಂದು ಶಾಸಕರು ಎಚ್ಚರಿಸಿದರು.

19 ಕ್ವಾರಿಗಳು, 9 ಕ್ರಷರ್‌ಗಳು

ತಾಲೂಕಿನಲ್ಲಿ ಆಕ್ರಮ ಕಲ್ಲು ಗಣಿಗಾರಿಕೆಗೆ ನಡೆಯುತ್ತಿದ್ದು ಸೂಕ್ತ ಕಠಿವಾಣ ಹಾಕಿ ಎಂದು ತಹಸಿಲ್ದಾರ್ ಸಿಗ್ಬತುಲ್ಲಾ ಅವರಿಗೆ ಶಾಸಕರು ಸೂಚಿಸಿದರು. ತಾಲೂಕಿನ ಎಲ್ಲೋಡು, ಪಲ್ಲೈಗಾರಹಳ್ಳಿ ಬಳಿ ಗಣಿಗಾರಿಕೆ ನಡೆಯುತ್ತಿದ್ದು ತಾಲೂಕಿನಲ್ಲಿ 19 ಕ್ವಾರಿಗಳು, 9 ಕ್ರಷರ್‌ಗಳು ಇವೆ ಎಂದರು ಶಾಸಕರು.

ತಾಲ್ಲೂಕು ಕಚೇರಿಯಲ್ಲಿ ಪೌತಿ ಖಾತೆ ಬದಲಾವಣೆಗೆ 35 ರೂ. ಸರಕಾರಿ ಶುಲ್ಕ ಮಾತ್ರ ಪಾವತಿಸಿ, ಒಂದು ವೇಳೆ ಕಂದಾಯ ಇಲಾಖೆಯ ಗ್ರಾಮ ಲೇಕ್ಕಾಧಿಕಾರಿಗಳು, ರಾಜಸ್ವ ನೀರಿಕ್ಷಕರು ಹಣಕ್ಕಾಗಿ ಬೇಡಿಕೆ ಇಟ್ಟರೆ ನನ್ನ ಗಮನಕ್ಕೆ ತನ್ನಿ ಎಂದು ಶಾಸಕರು ತಿಳಿಸಿದರು.

ಸರಕಾರಿ ಜಮೀನಿನಲ್ಲಿ ಮನೆ ನಿರ್ಮಾಣ ಮಾಡಿಕೊಂಡವರಿಗೆ ಆಕ್ರಮ-ಸಕ್ರಮ ಯೋಜನೆಯಲ್ಲಿ ಮನೆ ಮಂಜೂರು ಮಾಡಿಸಿಕೊಳ್ಳಬಹುದು. ಬಡವರು, ನಿರ್ಗತಿಕರು ಇದರ ಪ್ರಯೋಜನ ಪಡೆಯಬಹುದು ಎಂದು ಅವರು ಹೇಳಿದರು.

ಕತ್ತಲಲ್ಲಿ ನಡೆದ ಕೆಡಿಪಿ ಸಭೆ

ಸುಮಾರು ತಿಂಗಳ ನಂತರ ನಡೆದ ಕೆಡಿಪಿ ಸಭೆ ವಿದ್ಯುತ್ ಇಲ್ಲದೆ ಕತ್ತಲ್ಲಲ್ಲೇ ನಡೆಯಿತು. ಸಭೆ ಪ್ರಾರಂಭದಿಂದ ಮುಗಿಯುವವರೆಗೂ ಬೆಸ್ಕಾಂ ಎಇಇ ದಯಾನಂದ ಎಷ್ಟೇ ಪ್ರಯತ್ನಿಸಿದರು ವಿದ್ಯುತ್ ಬರಲಿಲ್ಲ.

ಈ ಸಭೆಯಲ್ಲಿ ತಹಸಿಲ್ದಾರ್ ಸಿಗ್ಬತುಲ್ಲಾ, ತಾ.ಪಂ ಅಧ್ಯಕ್ಷೆ ವರಲಕ್ಷೀ ಕೃಷ್ಣೆಗೌಡ, ಉಪಾಧ್ಯಕ್ಷ ಬೈರಾರೆಡ್ಡಿ ಇದ್ದರು.

Tags: chikkaballapurgudibandekdp meetingsn subbareddy
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

by cknewsnow desk
July 23, 2024
0

ಸಂಸದರಿಗೆ ಅಭಿನಂದನೆ ಸಲ್ಲಿಸಿದ ಆರ್.ಮಿಥುನ್ ರೆಡ್ಡಿ; ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ನಿಂದ ಬಾಗೇಪಲ್ಲಿಗೆ ಹೆಚ್ಚು ಅನುಕೂಲ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

by cknewsnow desk
July 23, 2024
0

ಶ್ರೀ ಯೋಗಿನಾರೇಯಣ ಬಲಿಜ ಟ್ರಸ್ಟ್ ವತಿಯಿಂದ ಆಚರಣೆ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

by cknewsnow desk
April 14, 2024
0

ಎನ್'ಡಿಎ ಅಭ್ಯರ್ಥಿ ಡಾ.ಕೆ ಸುಧಾಕರ್ ಗೆಲ್ಲಿಸುವುದೇ ನಮ್ಮ ಗುರಿ

ದ್ವಿತೀಯ ಪಿಯುಸಿ ಫಲಿತಾಂಶ; ಗುಡಿಬಂಡೆ ಕಾಲೇಜ್ ಉತ್ತಮ ಸಾಧನೆ

ದ್ವಿತೀಯ ಪಿಯುಸಿ ಫಲಿತಾಂಶ; ಗುಡಿಬಂಡೆ ಕಾಲೇಜ್ ಉತ್ತಮ ಸಾಧನೆ

by cknewsnow desk
April 10, 2024
0

ವಿಜ್ಞಾನ ವಿಭಾಗದಲ್ಲಿ ಶೇ.79 ಫಲಿತಾಂಶ

ದೇಶಕ್ಕೆ ಭಷ್ಟಾಚಾರಕ್ಕಿಂತ ವಾತಾವರಣ ಬದಲಾವಣೆಯಿಂದ ಭಾರೀ ನಷ್ಟವಾಗುತ್ತಿದೆ: ಪ್ರೊ.ಸುರೇಶ್

ದೇಶಕ್ಕೆ ಭಷ್ಟಾಚಾರಕ್ಕಿಂತ ವಾತಾವರಣ ಬದಲಾವಣೆಯಿಂದ ಭಾರೀ ನಷ್ಟವಾಗುತ್ತಿದೆ: ಪ್ರೊ.ಸುರೇಶ್

by cknewsnow desk
April 9, 2024
0

ರಣಬಿಸಿಲನ್ನು ತಡೆಯುವ ಶಕ್ತಿ ಕೇವಲ ಮರಗಿಡಗಳಿಗೆ ಮಾತ್ರ ಇದೆ

ಗುಡಿಬಂಡೆ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಬ್ಲಾಸ್ಟಿಂಗ್

ಗುಡಿಬಂಡೆ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಬ್ಲಾಸ್ಟಿಂಗ್

by cknewsnow desk
March 6, 2024
0

ಸ್ಥಳಕ್ಕೆ ದಿಢೀರ್ ಭೇಟಿ ನೀಡಿದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

Next Post
ಸಚಿವರೆಂದರೆ ದೇವಲೋಕದಿಂದ ಇಳಿದು ಬಂದವರಾ? ನಾವೇನು ಬಿಟ್ಟಿ ಬಿದ್ದಿದ್ದೀವಾ? ಫೋನ್‌ ಕಾಲ್‌ ಪಿಕ್‌ ಮಾಡದ ಸಚಿವ ಡಾ.ಸುಧಾಕರ್‌ ವಿರುದ್ಧ ಶಾಸಕ ರೇಣುಕಾಚಾರ್ಯ ಗರಂ

ಸಚಿವರೆಂದರೆ ದೇವಲೋಕದಿಂದ ಇಳಿದು ಬಂದವರಾ? ನಾವೇನು ಬಿಟ್ಟಿ ಬಿದ್ದಿದ್ದೀವಾ? ಫೋನ್‌ ಕಾಲ್‌ ಪಿಕ್‌ ಮಾಡದ ಸಚಿವ ಡಾ.ಸುಧಾಕರ್‌ ವಿರುದ್ಧ ಶಾಸಕ ರೇಣುಕಾಚಾರ್ಯ ಗರಂ

Leave a Reply Cancel reply

Your email address will not be published. Required fields are marked *

Recommended

ತಲ್ಲಣಿಸಿದ ಕೆಂಪೇಗೌಡ ಏರ್‌ಪೋರ್ಟ್‍

ತಲ್ಲಣಿಸಿದ ಕೆಂಪೇಗೌಡ ಏರ್‌ಪೋರ್ಟ್‍

3 years ago
ಕೊನೆಗೂ ಸೂಪರ್‌ಸ್ಟಾರ್‌ ರಜನೀಕಾತ್‌ ಪೊಲಿಟಿಕಲ್‌ ಎಂಟ್ರಿ; ಈ ತಿಂಗಳ 31ರಂದೇ ಹೊಸಪಕ್ಷ, 2021 ಎಲೆಕ್ಷನ್‌ಗೆ ತಯಾರಿ

ಕೊನೆಗೂ ಸೂಪರ್‌ಸ್ಟಾರ್‌ ರಜನೀಕಾತ್‌ ಪೊಲಿಟಿಕಲ್‌ ಎಂಟ್ರಿ; ಈ ತಿಂಗಳ 31ರಂದೇ ಹೊಸಪಕ್ಷ, 2021 ಎಲೆಕ್ಷನ್‌ಗೆ ತಯಾರಿ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ