• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ರಮೇಶ್‌ ಜಾರಕಿಹೊಳಿ ಪ್ರಕರಣದಲ್ಲಿ ₹ 5 ಕೋಟಿ ಡೀಲ್ ನಡೆದಿದೆ;‌ ಇಂಥ ಸಿ.ಡಿ.ಗಳಿವೆ ಎನ್ನುವವರನ್ನು ಒದ್ದು ಒಳಗಾಕಿ ಎರೋಪ್ಲೇನ್ ಹತ್ತಿಸಿ ಎಂದು ಗುಡುಗಿದ ಎಚ್‌ಡಿಕೆ

cknewsnow desk by cknewsnow desk
March 5, 2021
in STATE
Reading Time: 1 min read
0
ಕೋಲಾರದಲ್ಲಿ ನಿಂತು ಕೋಡಿಹಳ್ಳಿ ಚಳಿಬಿಡಿಸಿದ ಕುಮಾರಸ್ವಾಮಿ; ಡೋಂಗಿಗಳಿಂದ ಪಾಠ ಕಲಿಯಬೇಕಿಲ್ಲ ಎಂದ ದಳಪತಿ
912
VIEWS
FacebookTwitterWhatsuplinkedinEmail

ರಾಜಕಾರಣಿಗಳ ಸಿ.ಡಿ.ಗಳಿವೆ ಎಂದು ಹೇಳುವವರನ್ನು ಕೂಡಲೇ ಬಂಧಿಸಿ, ಆ ಸಿ.ಡಿ.ಗಳನ್ನು ಸರಕಾರವೇ ಬಿಡುಗಡೆ ಮಾಡಲಿ. ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಪ್ರಕರಣದಲ್ಲಿ ₹ 5 ಕೋಟಿ ರೂಪಾಯಿ ಡೀಲ್ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.


ಬೆಂಗಳೂರು: ರಾಜಕಾರಣಿಗಳ ಸಿ.ಡಿ.ಗಳಿವೆ ಇವೆ ಎನ್ನುವವರನ್ನು ಮೊದಲು ಒದ್ದು ಒಳಗಾಕಿ ಎರೋಪ್ಲೇನ್ ಹತ್ತಿಸಿ. ಅಂಥವರನ್ನು ಬಂಧಿಸಿ ಅವರ ಬಳಿ ಇರುವ ಸಿ.ಡಿ.ಗಳನ್ನು ಸರಕಾರವೇ ಜನರ ಮುಂದೆ ಬಿಡುಗಡೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರಕಾರವನ್ನು ಒತ್ತಾಯ ಮಾಡಿದ್ದಾರೆ.

ಸಿ.ಡಿ. ಇದೆ ಎಂದು ಹೇಳಿಕೊಂಡು ಕೆಲವರು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ. ಇದು ಬ್ಲ್ಯಾಕ್‌ಮೇಲ್‌ನ ಕಾರ್ಯತಂತ್ರ. ರಾಜಕಾರಣಿಗಳ ಸಿ.ಡಿ. ಇದೆ ಎನ್ನುವವರನ್ನು ಮೊದಲು ಒದ್ದು ಒಳಕ್ಕೆ ಹಾಕಿ. ಅಂಥವರನ್ನು ಪ್ರೋತ್ಸಾಹಿಸಬೇಡಿ, ಬೆಳೆಸಬೇಡಿ ಎಂದು ಅವರು ಮೈಸೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡುತ್ತಾ ಹೇಳಿದರು.

ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಪ್ರಕರಣದಲ್ಲಿ ₹ 5 ಕೋಟಿ ರೂಪಾಯಿ ಡೀಲ್ ನಡೆದಿದೆ. ಇದು ನನಗಿರುವ ಮಾಹಿತಿ. ಕಳೆದು ಮೂರು ತಿಂಗಳಿನಿಂದ ಈ‌ ಡೀಲ್ ವ್ಯವಹಾರ ನಡೆದಿದೆ. ದೊಡ್ಡ ದೊಡ್ಡವರೇ ಈ ಪ್ರಕರಣದಲ್ಲಿ ಇದ್ದಾರೆ. ಸರಿಯಾಗಿ ತನಿಖೆ ಮಾಡಿಸುವ ಜವಬ್ದಾರಿ ಸರಕಾರದ್ದು. ನಾನು ಈ ಪ್ರಕರಣ ನೋಡಿ ಖುಷಿ ಪಡುವವನಲ್ಲ ಎಂದರು ಎಚ್‌ಡಿಕೆ.

ಸರಕಾರ ಬೀಳಿಸಿದರು ಎನ್ನುವ ಕಾರಣಕ್ಕೆ ನಾನು ಒಂದು ಕಲ್ಲು ಹೊಡೆಯಬೇಕು ಅಂತ ಹೊಡೆಯೋದಿಲ್ಲ. ಇದೀಗ ಹಲವು ರೀತಿಯ ವ್ಯಾಖ್ಯಾನ ಶುರುವಾಗಿದೆ. ಆ ಮಂತ್ರಿಯ ರಾಜೀನಾಮೆ ಕೊಡಿಸಬೇಕೆಂಬ ಉದ್ದೇಶ ಇತ್ತು ಕೆಲವರಿಗೆ. ಈಗ ಆ ರಾಜೀನಾಮೆ ಕೊಡಿಸುವಲ್ಲಿ ಅವರು ಸಫಲರಾಗಿದ್ದಾರೆ. ಈಗ ಆ ಹೆಣ್ಣು ಮಗಳನ್ನ ಕಟ್ಟಿಕೊಂಡು ಅವರಿಗೆ ಏನಾಗಬೇಕು? ಎಂದು ಅವರು ಪ್ರಶ್ನಿಸಿದರು.

ಅವರಿಬ್ಬರೇ ಆ ವಿಡಿಯೋ ಮಾಡಿಕೊಂಡಿದ್ದಾರೆ. ಆದರೆ, ಆ ವಿಡಿಯೋ ಹೊರಗೆ ಕೊಟ್ಟವರು ಯಾರು? ಗೊತ್ತಿಲ್ಲ? ಇಂತಹ ವಿಚಾರದಲ್ಲಿ ಸುಮ್ಮನ್ನೇ ಕಲ್ಲು ಹೊಡೆಯಬಾರದು. ಇವತ್ತು ರಾಜಕೀಯ ತುಂಬಾ ಕಲುಷಿತವಾಗಿದೆ. ಕೆಸರು ನಮ್ಮ‌ ಮೇಲೆ ನಾವೇ ಎರಚಿಕೊಂಡ ಹಾಗೆ. ಇಂತಹ ಪ್ರಕರಣದಿಂದ ನಮ್ಮ‌ನ್ನು ಜನ ತಪ್ಪಾಗಿ ತಿಳಿದುಕೊಳ್ಳುತ್ತಾರೆ. ಮೊದಲು ಸಿ.ಡಿ.ಗಳನ್ನು ನೋಡಿಕೊಂಡು ಓಡಾಡುವ ಇಂಥವರನ್ನು ಒದ್ದು ಒಳಗೆ ಹಾಕಬೇಕು ಎಂದು ಆಗ್ರಹಪಡಿಸಿದರು.

ಮಾಜಿ ಮುಖ್ಯಮಂತ್ರಿ ಅಂದರೆ, ಯಾರು?

ಇಂಥ ಸಿ.ಡಿ. ರಿಲೀಸ್‌ ಮಾಡುವ ವ್ಯಕ್ತಿಗಳನ್ನು ಪ್ರೋತ್ಸಾಹ ಮಾಡಬಾರದು. ಅದ್ಯಾರೋ ಒಬ್ಬ ಮಾಜಿ ಸಿಎಂ ಅದೆಲ್ಲೋ ಹೋಗಿ ಬರುತ್ತಾರೆ. ಅದರ ಸಿ.ಡಿ. ನನ್ನ ಬಳಿ ಇದೆ ಅಂತಾನೆ. ರಾಜ್ಯದಲ್ಲಿ ದೇವೇಗೌಡ, ಎಸ್‌ಎಂ ಕೃಷ್ಣ, ಸದಾನಂದಗೌಡ, ಜಗದೀಶ್‌ ಶೆಟ್ಟರ್‌ ಹಾಗೂ ನಾನು ಇದ್ದೀವಿ. ಯಾರು ಆ ಮಾಜಿ ಸಿಎಂ ಎಂಬುದನ್ನು ಮೊದಲು ಬಾಯಿ ಬಿಡಿಸಿ ಎಂದು ಎಚ್‌ಡಿಕೆ ಒತ್ತಾಯ ಮಾಡಿದರು.

ಸುಮ್ಮನೆ ನಾವು ಹೊರಗೆ ಓಡಾಡುವಾಗ ಮುಜುಗರ ತರಬೇಡಿ. ಹಿಂದೆ ಅದ್ಯಾವುದೋ ಆಂಕರ್ ವಿಚಾರದಲ್ಲೂ ನನ್ನ ಹೆಸರು ತಂದರು. ಆಗಲು ಸರಿಯಾಗಿ ಝಾಡಿಸಿದ್ದೇ‌ನೆ. ನನಗೆ ಈ ವಿಚಾರದಲ್ಲಿ ಯಾವುದೇ ಭಯವಿಲ್ಲ. ನಾನು ತುಂಬಾ ಕ್ಲೀನ್ ಆಗಿದ್ದೇನೆ. ನನ್ನ ಉದ್ದೇಶ ಏನೆಂದರೆ ಇಂತಹ ಬ್ಲ್ಯಾಕ್‌ಮೇಲ್‌ಗಳು ನಿಲ್ಲಬೇಕು. ಇಂತಹ ಪ್ರಕರಣಗಳು ಹೆಸಿಗೆ ಬರುವಂತ ಸ್ಥಿತಿ ನಿರ್ಮಾಣ ಮಾಡಿವೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ತನ್ವೀರ್‌ ಸೇಠ್‌ ತಬ್ಬಲಿಯಲ್ಲ

ಮೈಸೂರು ಮೇಯರ್ ಚುನಾವಣೆ ಮೈತ್ರಿ ವಿಚಾರದಲ್ಲಿ ತನ್ವೀರ್ ಸೇಠ್ ರಾಜಕೀಯವಾಗಿ ತಬ್ಬಲಿಯಾದರೆ ಅವರಿಗೆ ಜೆಡಿಎಸ್ ರಕ್ಷಣೆ ಕೊಡಲಿದೆ. ಅವರನ್ನು ಕೈಬಿಡುವ ಪ್ರಶ್ನೆಯೇ ಇಲ್ಲ. ಆದರೆ, ತನ್ವೀರ್ ಅವರಿಗೆ ಈಗ ರಕ್ಷಣೆಯ ಅವಶ್ಯಕತೆ ಇಲ್ಲ. ಅವರನ್ನ ಸೋಲಿಸಲು ನಾವು ಪ್ರಯತ್ನಪಟ್ಟಿದ್ದೇವೆ, ಬೇರೆಯವರೂ ಪ್ರಯತ್ನಿಸಿದ್ದಾರೆ. ಆಗಿಲ್ಲ. ಆದರೆ ಆ ಕ್ಷೇತ್ರದಲ್ಲಿ ಅವರದ್ದೇ ಶಕ್ತಿ ಇದೆ ಎಂದರು ಕುಮಾರಸ್ವಾಮಿ.

ಜೆಡಿಎಸ್‌ ಅಭ್ಯರ್ಥಿಯನ್ನು ಮೇಯರ್ ಮಾಡಲು ಸಹಕರಿಸಿದ ತನ್ವೀರ್‌ಗೆ ಅನಾನುಕೂಲ ಆದರೆ ಜೆಡಿಎಸ್‌ ಅವರ ಜತೆ ಇರಲಿದೆ. ತನ್ವೀರ್ ಸೇಠ್ ಕೋಮುವಾದಿಗಳನ್ನು ದೂರ ಇಡಲು ತೆಗೆದುಕೊಂಡ ನಿರ್ಧಾರ ಅಂತ ಹೇಳಿದ್ದಾರೆ. ಆದರೆ, ಕೋಮುವಾದ, ಜಾತ್ಯತೀತವಾದ ಎಲ್ಲ ಢೋಂಗಿ. ನಾನು ಇದ್ಯಾವುದರ ಬಗ್ಗೆ ಮಾತನಾಡೋದಿಲ್ಲ ಎಂದ ಅವರು; ತನ್ವೀರ್ ನಾವು ಜತೆಯಲ್ಲೆ ನಾವು ಇದ್ದೀವಿ. ಕೆಟ್ಟ ಶಕ್ತಿಗಳನ್ನ ದೂರ ಇಡುವ ನಿಟ್ಟಿನಲ್ಲಿ ಅವರ ನಿರ್ಧಾರ ಸರಿಯಾಗಿದೆ. ಬಿಜೆಪಿಯನ್ನು ದೂರ ಇಡಬೇಕು, ಜೆಡಿಎಸ್‌ ದೂರ ಇಡಬೇಕು ಅಂತ ಹೇಳುವವರು ತನ್ವೀರ್ ಸೇಠ್ ನಿರ್ಧಾರದ ಬಗ್ಗೆ ಸರ್ಟಿಫಿಕೇಟ್ ಕೊಡಲು ಹೊರಟಿದ್ದಾರೆ‌. ಇದೇಲ್ಲವನ್ನು ನಾನು ಗಮನಿಸಿದ್ದೇನೆ. ಮೇಯರ್ ಚುನಾವಣೆ ವಿಚಾರದಲ್ಲಿ ಜೆಡಿಎಸ್‌ ತನ್ವೀರ್ ಜತೆಗಿದೆ ಎಂದರು.

ಒನ್ ನೇಷನ್ ಒನ್ ಎಲೆಕ್ಷನ್; ಕಾಂಗ್ರೆಸ್ ಯೂ ಟರ್ನ್

ಮೊದಲು ಹಣದಿಂದ ಚುನಾವಣೆ ನಡೆಯೋದು ನಿಲ್ಲಲ್ಲಿ. ಚುನಾವಣೆಯ ವ್ಯವಸ್ಥೆಯ ಲೋಪ ತೊಲಗಲಿ. ಹಣವಿದ್ದವರಿಗೆ ಮಾತ್ರ ಚುನಾವಣೆ ಅನ್ನೋದು ನಿಲ್ಲಬೇಕು. ಆಮೇಲೆ ಮಾತಾಡೋಣ. ನನ್ನನ್ನು ಒಳಗೊಂಡಂತೆ ಬಿಜೆಪಿ, ಕಾಂಗ್ರೆಸ್ ಆತ್ಮವಿಮರ್ಶೆ ಮಾಡಿಕೊಳ್ಳಬೇಕು.
ʼಒನ್ ನೇಷನ್-ಒನ್ ಎಲೆಕ್ಷನ್ʼ ವಿಚಾರದಲ್ಲಿ ಕಾಂಗ್ರೆಸ್ ಯೂ ಟರ್ನ್ ಹೊಡೆದಿದೆ. ಈ ವಿಚಾರದ ಚರ್ಚೆಯಲ್ಲಿ ಕಾಂಗ್ರೆಸ್ ಮೊದಲು ಭಾಗವಹಿಸಿತ್ತು. ಆ ನಂತರ ಸದನದಲ್ಲಿ ಯು ಟರ್ನ್ ಹೊಡೆಯಿತು. ಇದು ಯಾಕೆ ಅಂತ ಗೊತ್ತಾಗಲಿಲ್ಲ. ಪ್ರಸ್ತುತ ರಾಜಕಾರಣದ ಸ್ಥಿತಿ ಪ್ರಜಾಪ್ರಭುತ್ವದ ವ್ಯವಸ್ಥೆ ಬುಡಮೇಲು ಮಾಡಲಿದೆ. ಮೊದಲು ಅದು ಕೊನೆಯಾಗಬೇಕು ಎಂದು ಅವರು ಹೇಳಿದರು.

Tags: hd kumaraswamykarnatakaminister videomysoreramesh jarkiholi
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಗಡಿ ಪ್ರದೇಶಗಳ ತಾರತಮ್ಯ ಸಲ್ಲದು

3ನೇ ಹಂತದಲ್ಲಿ ಎಚ್‌ಎನ್‌ ವ್ಯಾಲಿ ನೀರು ಸಂಸ್ಕರಣೆ ಆಗಬೇಕು; ಜಲಮಂಡಳಿ ಅಧ್ಯಕ್ಷರಿಗೆ ಪತ್ರ ಬರೆದ ಚಿಕ್ಕಬಳ್ಳಾಪುರ 8ನೇ ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷ ಕೆ.ಅಮರನಾರಾಯಣ

Leave a Reply Cancel reply

Your email address will not be published. Required fields are marked *

Recommended

ಸಂಸತ್ ಭವನ ಬಿಜೆಪಿ ಅಥವಾ ಆರೆಸ್ಸೆಸ್ ಕಚೇರಿ ಅಲ್ಲ

DMK ಪಕ್ಷಕ್ಕೆ ದೇವೇಗೌಡರ ಸಡ್ಡು; ಮೇಕೆದಾಟು ಕಟ್ಟುತ್ತೇವೆ ಎಂದು JDS ಪ್ರಣಾಳಿಕೆಯಲ್ಲಿ ಹಾಕುತ್ತೇವೆ, ಕಾಂಗ್ರೆಸ್‌ & ಬಿಜೆಪಿಯೂ ಹಾಕಲಿ

1 year ago
ದೇವರಾಜ ಅರಸು ಆಶಯ ಉಲ್ಟಾ ಮಾಡಿದ ಬಿಜೆಪಿ!!

ಸಾಲ ಮಾಡಿ ಅದ್ಧೂರಿ ಮದುವೆ ಮಾಡಿಕೊಳ್ಳಬೇಡಿ

2 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ