• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ನ್ಯಾಯಾಲಯಕ್ಕೆ ಹೋಗಿರುವ ಎಲ್ಲ ಸಚಿವರನ್ನು ಸಂಪುಟದಿಂದ ವಜಾ ಮಾಡಿ ಎಂದು ಡಿಮಾಂಡ್‌ ಮಾಡಿದ ಜೆಡಿಎಸ್‌; ಅಧಿವೇಶನದಲ್ಲೂ ಒತ್ತಾಯಿಸಲು ನಿರ್ಧಾರ

cknewsnow desk by cknewsnow desk
March 6, 2021
in POLITICS, STATE
Reading Time: 1 min read
0
ನ್ಯಾಯಾಲಯಕ್ಕೆ ಹೋಗಿರುವ ಎಲ್ಲ ಸಚಿವರನ್ನು ಸಂಪುಟದಿಂದ ವಜಾ ಮಾಡಿ ಎಂದು ಡಿಮಾಂಡ್‌ ಮಾಡಿದ ಜೆಡಿಎಸ್‌; ಅಧಿವೇಶನದಲ್ಲೂ ಒತ್ತಾಯಿಸಲು ನಿರ್ಧಾರ
942
VIEWS
FacebookTwitterWhatsuplinkedinEmail

ಬಿಜೆಪಿ ಮತ್ತು ವಲಸಿಗ ಸಚಿವರು ಸಿಡಿ ತಲೆಬಿಸಿಯಲ್ಲಿದ್ದರೆ, ಜೆಡಿಎಸ್‌ ಮಾತ್ರ ಹೊಸ ಬಾಂಬ್‌ ಸಿಡಿಸಿದೆ. ನ್ಯಾಯಾಲಯಕ್ಕೆ ಅರ್ಜಿ ಹಾಕಿರುವ ಎಲ್ಲ ಸಚಿವರನ್ನು ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿದೆ. ಜೆಡಿಎಸ್ ‌ ಆಗ್ರಹಗಳಿಗೆ ಅರ್ಥಗಳೇ ಬೇರೆ!!


ಮೈಸೂರು: ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ಸುದ್ದಿಗಳು ಬರದಂತೆ ತಡೆಯಾಜ್ಞೆ ತರಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವ ಎಲ್ಲ ಸಚಿವರನ್ನು ಸಂಪುಟದಿಂದ ಕೂಡಲೇ ವಜಾ ಮಾಡಬೇಕು ಎಂದು ಒಂದು ಕಾಲದ ಬಿಜೆಪಿ ಮಿತ್ರಪಕ್ಷ ಜೆಡಿಎಸ್‌ ಒತ್ತಾಯ ಮಾಡಿದೆ!

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮೈಸೂರಿಗೆ ತೆರಳಿದ್ದ ಒಂದು ದಿನದ ನಂತರ, ಜೆಡಿಎಸ್‌ ಶಾಸಕ ಸಾ.ರಾ.ಮಹೇಶ್‌ ಈ ಆಗ್ರಹ ಮಾಡಿದ್ದಾರೆ. ಈ ಮೂಲಕ ರಮೇಶ್‌ ಜಾರಕಿಹೊಳಿ ಪ್ರಕರಣದಿಂದ ಮೊದಲೇ ರಾಜಕೀಯ ಷಡ್ಯಂತ್ರದ ಭೀತಿಯಲ್ಲಿರುವ ವಲಸಿಗರು ಬೇಗುದಿಗೆ ಈಗ ಹೊಸ ಟ್ವಿಸ್ಟ್‌ ಸಿಕ್ಕಂತಾಗಿದೆ.

ಮೈಸೂರಿನಲ್ಲಿ ಶನಿವಾರ ಸಾ.ರಾ.ಮಹೇಶ್ ಮಾಧ್ಯಮ ಪ್ರತಿನಿಧಿಗಳೂಂದಿಗೆ ಮಾತನಾಡಿ, ನ್ಯಾಯಾಲಯಕ್ಕೆ ಹೋಗಿರುವ ಸಚಿವರನ್ನು ಸಂಪುಟದಿಂದ ತೆಗೆದುಹಾಕಬೇಕು. ಸದನದಲ್ಲೂ ನಮ್ಮ ಪಕ್ಷ ಇದೇ ಒತ್ತಾಯ ಮಾಡುತ್ತದೆ ಎಂದರು.

ಅಂಗೈ ಹುಣ್ಣಿಗೆ ಕನ್ನಡಿ ಬೇಕೇ?

ನ್ಯಾಯಾಲಯಕ್ಕೆ ಅರ್ಜಿ ಹಾಕಿರೋದೆ ನಾವೇಲ್ಲ ತಲೆ ತಗ್ಗಿಸುವ ವಿಚಾರ. ಇದೇಲ್ಲದರ ಹಿಂದೆ ಒಂದು ಷಡ್ಯಂತ್ರ ಇದೆ, ಅದು ಆಚೆಗೆ ಬರಬೇಕು ಎಂದು ಸಾ.ರಾ.ಮಹೇಶ್‌ ಹೇಳಿದರು.

ಬಾಂಬೆಯಲ್ಲಿ ಅಷ್ಟು ಟೈಟ್ ಸೆಕ್ಯೂರಿಟಿ ಇಟ್ಟುಕೊಂಡು ಐಷಾರಾಮಿ ಹೊಟೇಲ್‌ನಲ್ಲಿ ಇದ್ದವರು ಯಾಕೆ ಅರ್ಜಿ ಹಾಕಿದ್ದೀರಿ? ಎಂದು ಪ್ರಶ್ನಿಸಿದ ಅವರು, ಇವರನ್ನ ಇಟ್ಟುಕೊಂಡು ಬ್ಲಾಕ್‌ಮೆಲ್ ಮಾಡುವ ಷಡ್ಯಂತ್ರ ಮೊದಲೇ ಆಗಿತ್ತಾ? ಎಂಬ ಅನುಮಾನವನ್ನು ಅವರು ವ್ಯಕ್ತಪಡಿಸಿದರು.

ಸಚಿವರನ್ನೆ ಬ್ಲಾಕ್‌ಮೇಲ್ ಮಾಡುವುದಾದರೆ ಜನಸಾಮಾನ್ಯರ ಗತಿ ಏನು? ಸಿಎಂ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ನಮ್ಮ ಸ್ನೇಹಿತರು ಹಿಂದೆ ಹೇಳಿದಾಗ ಸುಳ್ಳು ಅಂದುಕೊಂಡೆ.
ಹುಣಸೂರಿನಿಂದ ಬಾಂಬೆವರೆಗೆ ಪುಸ್ತಕ ಬರೀತೀನಿ ಅಂದಿದ್ರು. ಬಹುಶಃ ಅದರಲ್ಲಿ ಈ ಎಲ್ಲ ಅಂಶಗಳ ಉಲ್ಲೇಖ ಆಗಬಹುದು ಎಂದು ವ್ಯಂಗ್ಯವಾಡಿದರು ಅವರು.

ಬಾಂಬೆಯಲ್ಲಿ ಏನ್ ಮಾಡ್ತಿದ್ರು ಅಂತ ಈಗ ಹೇಳಲಿ

ಜನಪರ ಸರಕಾರ ತರಲು ಬಾಂಬೆಗೆ ಹೋಗಿದ್ವಿ ಅಂದಿದ್ರು ಎಲ್ಲರು. ಬಾಂಬೆಯಲ್ಲಿ ಏನ್ ಮಾಡ್ತಿದ್ರು ಅಂತ ಈಗ ಹೇಳಲಿ. ಅದನ್ನ ಮಾತನಾಡೋಕು ಅಸಹ್ಯ ಆಗುತ್ತೆ. ವಿಡಿಯೋ ಪ್ರಸಾರಕ್ಕೆ ತಡೆ ಕೋರಿ ಅರ್ಜಿ ಹಾಕಿರುವುದು ಶಾಸಕಾಂಗಕ್ಕೆ ಮಾಡಿದ ಅಪಮಾನ‌ ಎಂದು ಸಾ.ರಾ.ಮಹೇಶ್‌ ಹೇಳಿದರು.

ನಿಮಗೆ ಯಾಕೆ ಅನುಮಾನ. ಮೊನ್ನೆಯು ಅನೇಕ ಶಾಸಕರ ವಿಡಿಯೋ ಇದೆ ಅಂತ ಯಾರೋ ಹೇಳಿದ್ದರು. ಆ ಹೇಳಿಕೆ ನೀಡಿದವರನ್ನು ತಕ್ಷಣ ಯಾಕೆ ಅರೆಸ್ಟ್ ಮಾಡಲಿಲ್ಲ ಎಂದ ಅವರು, ಬಾಂಬೆಗೆ ಹೋದವರ ಬಗ್ಗೆ ಇನ್ನು ಏನೇನು ಇದೇಯೋ? ಈ ರೀತಿಯ ಸರಕಾರ ತರೋಕಾ ಬಾಂಬೆಗೆ ಹೋಗಿದ್ದು. ಇದೇನಾ ನಿಮ್ಮ ಘನಕಾರ್ಯ ಎಂದು ಪ್ರಶ್ನಿಸಿದರು.

ಶುಕ್ರವಾರವಷ್ಟೇ ಮೈಸೂರಿನಲ್ಲಿದ್ದ ಎಚ್.ಡಿ.ಕುಮಾರಸ್ವಾಮಿ; ಸಿ.ಡಿ. ಪುರಾಣದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಜತೆಗೆ, ಇಂಥ ಸಿ.ಡಿ.ಗಳು ಇವೆ ಎನ್ನುವವರನ್ನು ಮೊದಲು ಬಂಧಿಸಿ ಎಂದು ಗುಡುಗಿದ್ದರು. ಆದರೆ, ಅದಕ್ಕಿಂತ ಮಿಗಿಲಾಗಿ ಸಾ,ರಾ.ಮಹೇಶ್‌ ಜತೆ ಮಹತ್ವದ ಮಾತುಕತೆ ನಡೆಸಿದ್ದರು. ಆ ಮಾತುಕತೆ ಫಲಶ್ರುತಿಯಾ ಸಾ.ರಾ.ಮಹೇಶ್‌ ಇವತ್ತಿನ ಹೇಳಿಕೆಯಾ ಎಂಬ ಅನುಮಾನ ವ್ಯಕ್ತವಾಗುತ್ತಿದೆ.

Lead photo coutesy: @Sa Ra Mahesh

Tags: bjpbjp ministershd kumaraswamyjds demandkarnatakaSa Ra Maheshsex video case
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ನಮ್ಮ ದೇಶದಲ್ಲೇ ತಯಾರಾದ ಕೊರೊನಾ ಲಸಿಕೆ ಕುರಿತು ಅಗೌರವ ಬೇಡ; ಭಾರತ್ ಬಯೋಟೆಕ್ ನಂಬಿಕೆಗೆ ಅರ್ಹವಾದ ಕಂಪನಿ ಎಂದ ಡಾ.ಕೆ.ಸುಧಾಕರ್

ಮಹಾಮಾರಿ ವಿರುದ್ಧ ಹೋರಾಟ: ಸೋಮವಾರದಿಂದ 3 ಸಾವಿರ ಕೇಂದ್ರಗಳಲ್ಲಿ ಕೋವಿಡ್ ಲಸಿಕೆ; ದಿನಕ್ಕೆ ಒಂದೂವರೆ ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ, 8 ಜಿಲ್ಲೆಗಳಲ್ಲಿ ಕಟ್ಟೆಚ್ಚರ

Leave a Reply Cancel reply

Your email address will not be published. Required fields are marked *

Recommended

ಅನುಮತಿ ಇಲ್ಲದೇ ಅಕ್ರಮ ಗಣಿಗಾರಿಕೆ ಮಾಡುತ್ತಿದ್ದಾರೆ:  ಸುಮಲತಾ ಆರೋಪ

ಅನುಮತಿ ಇಲ್ಲದೇ ಅಕ್ರಮ ಗಣಿಗಾರಿಕೆ ಮಾಡುತ್ತಿದ್ದಾರೆ: ಸುಮಲತಾ ಆರೋಪ

4 years ago
ರಾಜ್ಯೋತ್ಸವ ಪ್ರಶಸ್ತಿಗೆ ಆನ್ಲೈನ್ ಮೂಲಕ ನಾಮಿನೇಟ್‌ ಮಾಡಿ

ಚಿಕ್ಕಬಳ್ಳಾಪುರದ ಡಾ.ಜಿ.ಜ್ಞಾನಾನಂದ, ಕೋಲಾರದ ಸಿ.ತ್ಯಾಗರಾಜು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ