• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಈ ಅನ್ಯಾಯಕ್ಕೆ ಕೊನೆ ಇಲ್ಲವೆ? ನೀರಿದ್ದವರಿಗೇ ಮತ್ತೆ ಎಲ್ಲಾ‌ ಮೀಸಲಿಟ್ಟು ಚಿಕ್ಕಬಳ್ಳಾಪುರ, ಕೋಲಾರ ಸೇರಿ ಇಡೀ ಬಯಲು ಸೀಮೆಗೆ ಸೊನ್ನೆ ಸುತ್ತಿ ತಾರತಮ್ಯ ಎಸಗಿದ ಬಜೆಟ್‌!

cknewsnow desk by cknewsnow desk
March 9, 2021
in CHIKKABALLAPUR, KOLAR, STATE
Reading Time: 1 min read
0
ಈ ಅನ್ಯಾಯಕ್ಕೆ ಕೊನೆ ಇಲ್ಲವೆ? ನೀರಿದ್ದವರಿಗೇ  ಮತ್ತೆ ಎಲ್ಲಾ‌ ಮೀಸಲಿಟ್ಟು ಚಿಕ್ಕಬಳ್ಳಾಪುರ, ಕೋಲಾರ ಸೇರಿ ಇಡೀ ಬಯಲು ಸೀಮೆಗೆ ಸೊನ್ನೆ ಸುತ್ತಿ ತಾರತಮ್ಯ ಎಸಗಿದ ಬಜೆಟ್‌!
913
VIEWS
FacebookTwitterWhatsuplinkedinEmail

ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್.‌ಆಂಜನೇಯ ರೆಡ್ಡಿ ಆಕ್ರೋಶ

Karnataka Budget 2021-22

ಚಿಕ್ಕಬಳ್ಳಾಪುರ: ಸಮಾನ ಅಭಿವೃದ್ಧಿಯ ಮಂತ್ರವನ್ನು ಪಠಿಸುತ್ತಲೇ 2021-22ನೇ ಸಾಲಿನ ರಾಜ್ಯ ಮುಂಗಡಪತ್ರದಲ್ಲಿ ಬರಪೀಡಿತ ಬಯಲುಸೀಮೆಗೆ ಮತ್ತೆ ಅನ್ಯಾಯ ಎಸಗಲಾಗಿದೆ ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್.‌ಆಂಜನೇಯ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೈಜತೆ, ನಿಖರತೆ, ಪ್ರಾಮಾಣಿಕತೆ, ದೂರದೃಷ್ಟಿಯ ಕೊರತೆಯಿಂದ ಬಯಲುಸೀಮೆ ಪಾಲಿಗೆ ಮರೀಚಿಕೆಯಾದ ಶಾಶ್ವತ ನೀರಾವರಿ ಎಂದು ಯಡಿಯೂರಪ್ಪ ಅವರು ಸೋಮವಾರ ಮಂಡಿಸಿದ ಬಜೆಟ್‌ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.

ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ಬಯಲುಸೀಮೆಯ ಒಟ್ಟು ಹದಿನಾಲ್ಕು ಜಿಲ್ಲೆಗಳಿಗೆ ಅನ್ಯಾಯ ಎಸಗಲಾಗಿದೆ ಎಂದಿರುವ ಅವರು ವಿವರವಾಗಿ ಹೇಳಿದ್ದಿಷ್ಟು;

  • ನೀರಾವರಿಗೆ ಒಳಪಟ್ಟ ಕೃಷ್ಣಾ , ಕಾವೇರಿ ಅಚ್ಚುಕಟ್ಟು ಪ್ರದೇಶಗಳು ಹಾಗೂ ನೀರಾವರಿ ವಂಚಿತ, ಮಳೆಯಾಶ್ರಿತ ಬಯಲುಸೀಮೆಯ ಪ್ರದೇಶಗಳ ತಾರತಮ್ಯವು ಈ ಬಜೆಟ್‌ನಲ್ಲೂ ಮುಂದುವರಿದಿದೆ.
  • ಬಯಲುಸೀಮೆಗೆ ಹರಿಸಬೇಕಾದ ಜಿ.ಎಸ್.ಪರಮಶಿವಯ್ಯ ಅವರ ವರದಿ ಆಧಾರಿತ ಪಶ್ಚಿಮವಾಹಿನಿ ನದಿಗಳ ನೀರಿಗೆ ಕಿಂಡಿ ಅಣೆಕಟ್ಟುಗಳ ನಿರ್ಮಾಣದಿಂದ ಬಯಲುಸೀಮೆ ಅತಂತ್ರ ಪರಿಸ್ಥಿತಿಗೆ ಬೀಳಲಿದೆ.
  • ಬಯಲುಸೀಮೆಯ ದಾಹ ನೀಗಿಸಲಾಗದ ಅವೈಜ್ಞಾನಿಕ ಎತ್ತಿನ ಹೊಳೆಯ ಜಲವಿಜ್ಞಾನವನ್ನು CWC ಕೇಂದ್ರೀಯ ಜಲ ಆಯೋಗದಿಂದ ಮರು ಅಧ್ಯಯನಕ್ಕೊಳಪಡಿಸದೇ, ಯೋಜನೆ ಪೂರ್ಣಗೊಳಿಸಲು ಆದ್ಯತೆ ಕೊಟ್ಟಿರುವುದರಿಂದ, ಭ್ರಷ್ಟರ ಜೋಳಿಗೆ ತುಂಬುತ್ತದೆಯೇ ಹೊರತು ನಮ್ಮ ಕೆರೆಗಳಿಗೆ ನೀರು ಹರಿಯುವುದಿಲ್ಲ.
  • ಆರ್.ಆಂಜನೇಯ ರೆಡ್ಡಿ

ಕೃಷ್ಣಾ ನದಿ ನೀರನ್ನು ಬಯಲುಸೀಮೆಗೆ ಹರಿಸಲು ಆಲಮಟ್ಟಿ ಮತ್ತು ಪೆನ್ನಾರ್ ಜೋಡಣೆಗೆ NWDA (ನ್ಯಾಷನಲ್ ವಾಟರ್ ಡೆವಲಪಮೆಂಟ್ ಏಜನ್ಸಿ) ಈಗಾಗಲೇ ಅಧ್ಯಯನ ವರದಿ ಸಿದ್ದಪಡಿಸಿ, ಹಸಿರು ನಿಶಾನೆ ತೋರಿಸಿದ್ದರೂ ಸಹಾ, ಕೃಷ್ಣಾ ನೀರನ್ನು ಮತ್ತೆ ಉತ್ತರ ಕರ್ನಾಟಕಕ್ಕೆ ಮೀಸಲಿಟ್ಟು ಬಯಲುಸೀಮೆಗೆ ಸೊನ್ನೆ ಸುತ್ತಲಾಗಿದೆ.

-ಆರ್.‌ಆಂಜನೇಯ ರೆಡ್ಡಿ

  • ರಾಜ್ಯ ಸರಕಾರ ಬಹಳ ಉದಾರತೆಯಿಂದ ಬರಪೀಡಿತ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಆಯ್ದ ಕೆಲ ಕೆರೆಗಳಿಗೆ ಹರಿಸುತ್ತಿರುವ ಬೆಂಗಳೂರು ನಗರದ ತ್ಯಾಜ್ಯ ನೀರನ್ನು ಕೇಂದ್ರ ಸರಕಾರದ ಮಾನದಂಡಕ್ಕನುಗುಣವಾಗಿ ಮೂರನೇ ಹಂತಕ್ಕೆ ಶುದ್ದೀಕರಿಸುವಲ್ಲಿ ಸರಕಾರದಲ್ಲಿ ಚಿತ್ತಶುದ್ಧಿ ಮರೆಯಾಗಿದೆ.
  • ಅಂತರ್ಜಲ ಆಧಾರಿತ ಕೃಷಿ ಮಾಡುವ ಬಯಲು ಸೀಮೆ ರೈತರ ಲಕ್ಷಾಂತರ‌ ಕೊಳವೆ ಬಾವಿಗಳು ವಿಫಲವಾಗಿವೆ. ಇವುಗಳ ಮರುಪೂರಣ, ಪುನಶ್ಚೇತನಕ್ಕೆ ವಿಶೇಷ ಅನುದಾನ ಒದಗಿಸುವುದನ್ನು ಮರೆತಿದ್ದಾರೆ ಮುಖ್ಯಮಂತ್ರಿಗಳು.
  • ಸಾವಿರಾರು ಕೆರೆಗಳಿರುವ ಬಯಲುಸೀಮೆಯ ಕೆರೆಗಳ ಜಲಾನಯನ ಪ್ರದೇಶದ ಒತ್ತುವರಿ ತೆರುವು, ರಾಜ ಕಾಲುವುವೆಗಳ ಪುನರುಜ್ಜೀವನಗೊಳಿಸಿ, ಅಂತರ್ಜಲ ಅಭಿವೃದ್ದಿಪಡಿಸುವ ಯಾವುದೇ ನಿಖರವಾದ ವೈಜ್ಞಾನಿಕ ಯೋಜನೆಗಳ ಕಡೆ ಗಮನಹರಿಸದೆ, ಓಬಿರಾಯನ ಹಳೆಯ ಪದ್ಧತಿಗಳಿಗೆ ಜೋತು ಬಿದ್ದಿರುವುದರಿಂದ ಬಯಲುಸೀಮೆಗೆ ಯಾವುದೇ ಉಪಕಾರವಾಗುವುದಿಲ್ಲ.
  • ಬಯಲು ಸೀಮೆಯ ಜಿಲ್ಲೆಗಳಲ್ಲಿ ರಾಡಾರ್ ಆಧಾರಿತ ಹವಾಮಾನ ಮತ್ತು ಮಳೆ ಮುನ್ಸೂಚನಾ ಕೇಂದ್ರಗಳನ್ನು ಸ್ಥಾಪಿಸಿದರೆ, ಕೃಷಿಯಲ್ಲಿ ಅಂತರ್ಜಲದ ಉಳಿತಾಯ, ಜಲ ಸಂರಕ್ಷಣೆ, ಬರ ನಿರ್ವಹಣೆ ಮತ್ತು ಬೆಳೆಗಳ ರೋಗ ನಿರ್ವಹಣೆಗೆ ಅನುಕೂಲವಾಗುತ್ತಿತ್ತು.
  • ಈ ಬಜೆಟ್ ಬಯಲುಸೀಮೆಯ ಪಾಲಿಗೆ ಹೊಸ ಬಾಟಲಿಯಲ್ಲಿ ಹಳೇ ಮದ್ಯ ಎಂಬಂತಿದೆ.

Lead photo: BNMK Photographs

Tags: bayaluseemebs-yediyurappabudget 2021-22chikkaballapurkarnatakakolar
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಕೋವಿಡ್‌ ಲಸಿಕೆಯ ಪಿಂಕ್‌ ಬೂತ್‌ಗೆ ಚಾಲನೆ; ನವಜಾತ ಶಿಶು ಮತ್ತು ತಾಯಂದಿರ ಪ್ರಮಾಣವನ್ನು ಶೂನ್ಯಕ್ಕೆ ತರುವ ಹಾಕಿಕೊಂಡ ಸರಕಾರ

ಕೋವಿಡ್‌ ಲಸಿಕೆಯ ಪಿಂಕ್‌ ಬೂತ್‌ಗೆ ಚಾಲನೆ; ನವಜಾತ ಶಿಶು ಮತ್ತು ತಾಯಂದಿರ ಪ್ರಮಾಣವನ್ನು ಶೂನ್ಯಕ್ಕೆ ತರುವ ಹಾಕಿಕೊಂಡ ಸರಕಾರ

Leave a Reply Cancel reply

Your email address will not be published. Required fields are marked *

Recommended

ಇಂದು ತಿಲಕರ ಜನ್ಮದಿನ; ತಿಲಕರ ಬಗ್ಗೆ ಇನ್ನಷ್ಟು ತಿಳಿದುಕೊಳ್ಳೋಣ

ಇಂದು ತಿಲಕರ ಜನ್ಮದಿನ; ತಿಲಕರ ಬಗ್ಗೆ ಇನ್ನಷ್ಟು ತಿಳಿದುಕೊಳ್ಳೋಣ

4 years ago
ಲಸಿಕೆ ಬಗ್ಗೆ ಅಪಪ್ರಚಾರ ಮಾಡಿದ್ರೆ ಕ್ರಿಮಿನಲ್ ಕೇಸ್: ಕಿಡಿಗೇಡಿಗಳಿಗೆ ಎಚ್ಚರಿಕೆ ಕೊಟ್ಟ ಗುಡಿಬಂಡೆ ತಹಶೀಲ್ದಾರ್ ಸಿಬ್ಗತ್ ವುಲ್ಲಾ

ಲಸಿಕೆ ಬಗ್ಗೆ ಅಪಪ್ರಚಾರ ಮಾಡಿದ್ರೆ ಕ್ರಿಮಿನಲ್ ಕೇಸ್: ಕಿಡಿಗೇಡಿಗಳಿಗೆ ಎಚ್ಚರಿಕೆ ಕೊಟ್ಟ ಗುಡಿಬಂಡೆ ತಹಶೀಲ್ದಾರ್ ಸಿಬ್ಗತ್ ವುಲ್ಲಾ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ