• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಗುಡಿಬಂಡೆ ಅದೃಷ್ಟದ ತಾಲ್ಲೂಕು, ಅಂದುಕೊಂಡಿದ್ದೆಲ್ಲ ಆಗುತ್ತಿದೆ!! 35 ಕೋಟಿ ರೂ. ವೆಚ್ಚದಲ್ಲಿ ಮನೆಮನೆಗೂ ಶುದ್ಧ ಕುಡಿಯುವ ನೀರು ಕೊಡಲಾಗುವುದು ಎಂದ ಶಾಸಕ ಎಸ್‌.ಎನ್.ಸುಬ್ಬಾರೆಡ್ಡಿ

cknewsnow desk by cknewsnow desk
March 20, 2021
in CHIKKABALLAPUR, NEWS & VIEWS
Reading Time: 1 min read
0
ಗುಡಿಬಂಡೆ ಅದೃಷ್ಟದ ತಾಲ್ಲೂಕು, ಅಂದುಕೊಂಡಿದ್ದೆಲ್ಲ ಆಗುತ್ತಿದೆ!! 35 ಕೋಟಿ ರೂ. ವೆಚ್ಚದಲ್ಲಿ ಮನೆಮನೆಗೂ ಶುದ್ಧ ಕುಡಿಯುವ ನೀರು ಕೊಡಲಾಗುವುದು ಎಂದ ಶಾಸಕ ಎಸ್‌.ಎನ್.ಸುಬ್ಬಾರೆಡ್ಡಿ
923
VIEWS
FacebookTwitterWhatsuplinkedinEmail

ಚಿಕ್ಕಬಳ್ಳಾಪುರ/ಗುಡಿಬಂಡೆ: “ನಾನು ಗುಡಿಬಂಡೆಯನ್ನು ಅದೃಷ್ಟದ ತಾಲೂಕು ಎಂದೇ ಭಾವಿಸಿದ್ದೇನೆ. ಈ ತಾಲೂಕಿನ ಅಭಿವೃದ್ಧಿ ವಿಚಾರದಲ್ಲಿ ಏನೇ ಅಂದುಕೊಂಡರೂ ಅದು ಯಶಸ್ವಿಯಾಗುತ್ತಿದೆ.”

ಹೀಗೆಂದವರು ಶಾಸಕ ಎಸ್‌.ಎನ್.ಸುಬ್ಬಾರೆಡ್ಡಿ. ಜಿಲ್ಲಾಡಳಿತ, ಕಂದಾಯ ಇಲಾಖೆ ಹಾಗೂ ತಾಲೂಕು ಆಡಳಿತ ವತಿಯಿಂದ ತಮ್ಮ ವಿಧಾನಸಭಾ ಕ್ಷೇತ್ರದ ಹಂಪಸಂದ್ರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಗ್ರಾಮ ವಾಸ್ತವ್ಯದ ಸವಲತ್ತು ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಾಲೂಕಿನಲ್ಲಿ ಎಲ್ಲಾ ಗ್ರಾಮಗಳಿಗೂ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಗುರಿ ಈ ವರ್ಷವೇ ಪೂರ್ಣಗೊಳಿಸುತ್ತೇನೆ. ಹಂಪಸಂದ್ರ ಗ್ರಾಮ ಒಳಗೊಂಡಂತೆ ಗುಡಿಬಂಡೆ ತಾಲೂಕಿನಲ್ಲಿ ಸುಮಾರು 35 ಕೋಟಿ ರೂ. ವೆಚ್ಚದಲ್ಲಿ ಮನೆ ಮನೆಗೂ ಗಂಗೆ ಯೋಜನೆಯಡಿ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಕಲ್ಪಿಸುವ ಹಾಗೂ ತಾಲೂಕನ್ನು ಹೊಗೆಮುಕ್ತ ತಾಲೂಕು ಮಾಡುವ ಗುರಿ ಹೊಂದಲಾಗಿದೆ ಎಂದ ಅವರು, ಎಲ್ಲರೂ ಶೌಚಾಲಯಗಳನ್ನು ಬಳಕೆ ಮಾಡಬೇಕು. ಗ್ರಾಮದ ಸ್ವಚ್ಛತೆ ಕಾಪಾಡಬೇಕು ಎಂದು ಕಿವಿಮಾತು ಹೇಳಿದರು.

ಮನೆ ಬಾಗಿಲಿಗೆ ಸರಕಾರ

ಗ್ರಾಮೀಣ ಭಾಗದ ಜನರು ಮುಗ್ಧರು, ಅನಕ್ಷರಸ್ಥರಿಗೆ ಸರಕಾರ ಸೌಲಭ್ಯಗಳ ಬಗ್ಗೆ ಅರಿವಿನ ಕೊರತೆ ಇದರಿಂದ ಅವು ಅವರಿಗೆ ಸಿಗುತ್ತಿಲ್ಲ. ಇದನ್ನು ಮನಗಂಡ ಸರಕಾರ, ಮನೆ ಬಾಗಿಲಿಗೆ ಸರಕಾರದ ಸೌಲಭ್ಯಗಳನ್ನು ತಲುಪಿಸುವ ಸದುದ್ದೇಶದಿಂದ ಈ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ರೂಪಿಸಿದ್ದು, ಸಾರ್ವಜನಿಕರು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಎಸ್.ಎನ್.ಸುಬ್ಬಾರೆಡ್ಡಿ ಹೇಳಿದರು.

ಗಡಿ ಭಾಗದ ಗ್ರಾಮಸ್ಥರು ಯಾವುದಾದರೂ ಸರಕಾರಿ ಸೌಲಭ್ಯ ಪಡೆಯಬೇಕೆಂದರೆ ಜಿಲ್ಲಾ ಕೇಂದ್ರಕ್ಕೆ ಹೋಗಿ ಬರಲು ಒಂದು ದಿನವೆಲ್ಲಾ ಆಗುತ್ತಿತ್ತು. ಆದರೂ ಹೋದ ಕೆಲಸಗಳು ಆಗುತ್ತಿರಲಿಲ್ಲ. ಇದರಿಂದ ಗ್ರಾಮೀಣ ಜನ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದರು. ಈ ಕಾರಣದಿಂದ ಸರಕಾರ ಜಿಲ್ಲಾಡಳಿತವನ್ನೇ ಗ್ರಾಮೀಣ ಭಾಗಕ್ಕೆ ತಂದು ಸಾರ್ವಜನಿಕರ ಕೆಲಸಗಳು ಮಾಡಿಕೊಡಲು ಈ ವಾಸ್ತವ್ಯ ಕಾರ್ಯಕ್ರಮ ರೂಪಿಸಿದೆ. ಇದನ್ನು ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕರು ಮನವಿ ಮಾಡಿದರು.

ಕಾನೂನು ಮಿತಿಯಲ್ಲಿರದ ಸೌಲಭ್ಯಗಳನ್ನು ಕೊಡಲು ಸರಕಾರಗಳಿಂದಾಗಲೀ, ಅಧಿಕಾರಿಗಳಿಂದಾಗಲೀ ಅಥವಾ ಬೇರೆ ಯಾರಿಂದಲೂ ಕೊಡಲು ಸಾಧ್ಯವಾಗಲ್ಲ. ಹಾಗಾಗಿ ಸಾರ್ವಜನಿಕರು ಅದನ್ನು ಅರಿತುಕೊಳ್ಳಬೇಕು. ಕಾನೂನು ಪ್ರಕಾರ ಇರುವ ಸಮಸ್ಯೆಗಳ ಬಗ್ಗೆ ಜನಪ್ರತಿಗಳು, ಅಧಿಕಾರಿಗಳ ಬಳಿ ಹೋಗಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಅವರು ಹೇಳಿದರು.

ಪರಿಶ್ರಮದಿಂದ ಮಾತ್ರ ಯಶಸ್ಸು ಸಾಧ್ಯ. ಪೋಷಕರು ತಮ್ಮ ಮಕ್ಕಳ ಬಗ್ಗೆ ಹೆಚ್ಚು ಮುತುವರ್ಜಿ ವಹಿಸಬೇಕು. ಮಗುವಿನ ಶಿಕ್ಷಣದ ಬಗ್ಗೆ ಆಗಿದ್ಧಾಗ್ಗೆ ತಿಳಿದುಕೊಳ್ಳಬೇಕು. ಗ್ರಾಮೀಣ ಭಾಗದ ಜನ ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕೀಯ ಮಾಡಬೇಕು. ಚುನಾವಣೆ ಮುಗಿದ ಬಳಿಕ ಎಲ್ಲರೂ ಒಂದೇ ಎಂಬ ಭಾವನೆ ಇರಬೇಕು. ಆಗ ಮಾತ್ರ ಆ ಗ್ರಾಮಗಳು ಅಭಿವೃದ್ಧಿ ಆಗಲು ಸಾಧ್ಯ ಎಂದು ಶಾಸಕರು ಅಭಿಪ್ರಾಯಪಟ್ಟರು.

ಸರಕಾರದ ಯೋಜನೆಗಳ ಬಗ್ಗೆ ತಿಳಿಯಿರಿ

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್ ಮಾತನಾಡಿ, “ಗ್ರಾಮೀಣ ಜನರ ಕಲ್ಯಾಣಕ್ಕಾಗಿ ಸರಕಾರಗಳಿಂದ ಕಾಲಕಾಲಕ್ಕೆ ವಿನೂತನ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ. ಸೌಲಭ್ಯಗಳಿಂದ ವಂಚಿತ ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಅವರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶ ಇದಾಗಿದ್ದು, ಜನರು ಮೊದಲು ಸರಕಾರದ ಯೋಜನೆಗಳ ಬಗ್ಗೆ ತಿಳುವಳಿಕೆ ಬೆಳಸಿಕೊಳ್ಳಬೇಕು. ತಿಳಿದುಕೊಂಡರೆ ಅವುಗಳನ್ನು ಪ್ರಶ್ನೆ ಮಾಡಿ, ಪಡೆದುಕೊಳ್ಳಬಹುದು” ಎಂದರು.

ಇತ್ತೀಚಿಗೆ ಬೇರೆ ರಾಜ್ಯಗಳಲ್ಲಿ ಕೋವಿಡ್ ಮಹಾಮಾರಿ ಹೆಚ್ಚುತ್ತಿದ್ದು, ಈ ಬಗ್ಗೆ ಎಚ್ಚರವಿರಲಿ. ಮುಂಜಾಗ್ರತಾ ಕ್ರಮಗಳನ್ನು ಚಾಚೂ ತಪ್ಪದೇ ಪಾಲಿಸಿ, ಸರಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸಲಹೆ ನೀಡಿದರು.

ಕೋವಿಡ್‌ ಎರಡನೇ ಅಲೆ, ಇರಲಿ ಎಚ್ಚರ

ಅಪರ ಜಿಲ್ಲಾಧಿಕಾರಿ ಎಚ್.ಅಮರೇಶ್ ಅವರು ಮಾತನಾಡಿ, “ಜಿಲ್ಲೆಯ ಪ್ರತಿ ತಾಲೂಕಿನಲ್ಲೂ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಸರಕಾರದ ಆಡಳಿತ ಗ್ರಾಮಗಳ ಮೂಲಕ ಜನರ ಅನಿಸಿಕೆಗಳನ್ನು ಆಲಿಸಿ ಬಗೆಹರಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಸಾರ್ವಜನಿಕರು ಯೋಜನೆ ಸೌಲಭ್ಯಗಳನ್ನು ತಿಳಿದುಕೊಳ್ಳಬೇಕು” ಎಂದರು.

ಕೊರೋನಾ ಎರಡನೇ ಅಲೆ ಆತಂಕ ಶುರುವಾಗುತ್ತಿದೆ. ಜಿಲ್ಲಾಡಳಿತ ಜೊತೆ ಸಹಕಾರ ನೀಡಬೇಕು. ಎಲ್ಲರೂ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. 45 ವರ್ಷದೊಳಗಿನ ಎಲ್ಲರೂ ತಪ್ಪದೇ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು. ಲಸಿಕೆ ಬಗ್ಗೆ ಯಾವುದೇ ಗೊಂದಲ, ಆತಂಕ, ಊಹಾ ಪೋಹಗಳಿಗೆ ಕಿವಿ ಕೊಡಬೇಡಿ, ಧೈರ್ಯವಾಗಿ ಲಸಿಕೆ ಪಡೆಯಿರಿ. ಎಲ್ಲಾ ಆರೋಗ್ಯ ಕೇಂದ್ರಗಳು, ಸಾರ್ವಜನಿಕ ಆಸ್ಪತ್ರೆಗಳಲ್ಲಿ ಲಸಿಕೆ ಹಾಕಿಸಿಕೊಳ್ಳಬಹುದಾಗಿದೆ ಎಂದು ಕರೆ ಕೊಟ್ಟರು.

ಕಾರ್ಯಕ್ರಮದಲ್ಲಿ ಸ್ಥಳದಲ್ಲೇ 29 ಮಂದಿಗೆ ವಿವಿಧ ವೇತನ ಮಂಜೂರು ಮಾಡಲಾಯಿತು. ಅಲ್ಲದೆ 6 ಪೌತಿ ಖಾತೆ, 11 ಸಾಗುವಳಿ ಚೀಟಿ ಹಕ್ಕುಪತ್ರ ವಿತರಣೆ ಮಾಡಲಾಯಿತು. ಇದೇ ವೇಳೆ ವಿವಿಧ ಇಲಾಖೆಗಳಿಂದ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಗಾಯತ್ರಿ ನಂಜುಂಡಪ್ಪ, ಉಪ ವಿಭಾಗಾಧಿಕಾರಿ ರಘುನಂದನ್, ಜಿಲ್ಲಾ ಆರೋಗ್ಯಾಧಿಕಾರಿಗಳಾದ ಇಂದಿರಾ ಕಬಾಡೆ, ತಹಸೀಲ್ದಾರ್ ಸಿಗ್ಬತ್ತುಲ್ಲಾ, ಶಿರಸ್ಥೇದಾರ್ ಶಿಲ್ಪಾ ಹಾಗೂ ಅನೇಕ ಜನಪ್ರತಿನಿಧಿಗಳಿದ್ದರು.

Tags: chikkaballapurDC’s Village Staygudibandehampasandrakarnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಜಿಲ್ಲಾ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷರಾಗಿ ಚಿಕ್ಕಬಳ್ಳಾಪುರದ ಡಾ.ಎಂ.ವಿ.ಸದಾಶಿವ & ಶಿಡ್ಲಘಟ್ಟದ ನರ್ಮದಾ ಶಿವಕುಮಾರ್ ನೇಮಕ

ಜಿಲ್ಲಾ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷರಾಗಿ ಚಿಕ್ಕಬಳ್ಳಾಪುರದ ಡಾ.ಎಂ.ವಿ.ಸದಾಶಿವ & ಶಿಡ್ಲಘಟ್ಟದ ನರ್ಮದಾ ಶಿವಕುಮಾರ್ ನೇಮಕ

Leave a Reply Cancel reply

Your email address will not be published. Required fields are marked *

Recommended

ವಿಷ ವಿಲೇವಾರಿಗೆ ಅಡ್ಡಿಪಡಿಸಿದ ಹಳ್ಳಿಗರಿಗೆ ಹಣದ ಆಮಿಷ!

ವಿಷ ವಿಲೇವಾರಿಗೆ ಅಡ್ಡಿಪಡಿಸಿದ ಹಳ್ಳಿಗರಿಗೆ ಹಣದ ಆಮಿಷ!

4 years ago
ಮಕ್ಕಳಿಗೆ ಪರೀಕ್ಷೆ ಟೆನ್ಷನ್;‌ ಬೆಲೆ ಏರಿಕೆ‌ ಬಿಸಿ

ಮಕ್ಕಳಿಗೆ ಪರೀಕ್ಷೆ ಟೆನ್ಷನ್;‌ ಬೆಲೆ ಏರಿಕೆ‌ ಬಿಸಿ

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ