• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಬರಪೀಡಿತ ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಗಳಲ್ಲಿ ಪಾತಾಳಕ್ಕೆ ಕುಸಿಯುತ್ತಿರುವ ಗಂಗೆಯ ಸರಾಸರಿ ಪ್ರಮಾಣ ಎಷ್ಟು? ಬೆಚ್ಚಿಬೀಳುವ ಮಾಹಿತಿ ಹಂಚಿಕೊಂಡ ಜಲವಿಜ್ಞಾನಿ ಡಾ.ವಿ.ಎಸ್. ಪ್ರಕಾಶ್‌

cknewsnow desk by cknewsnow desk
March 22, 2021
in CHIKKABALLAPUR, KOLAR, STATE
Reading Time: 2 mins read
0
ಬರಪೀಡಿತ ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಗಳಲ್ಲಿ ಪಾತಾಳಕ್ಕೆ ಕುಸಿಯುತ್ತಿರುವ ಗಂಗೆಯ ಸರಾಸರಿ ಪ್ರಮಾಣ ಎಷ್ಟು? ಬೆಚ್ಚಿಬೀಳುವ ಮಾಹಿತಿ ಹಂಚಿಕೊಂಡ ಜಲವಿಜ್ಞಾನಿ ಡಾ.ವಿ.ಎಸ್. ಪ್ರಕಾಶ್‌
916
VIEWS
FacebookTwitterWhatsuplinkedinEmail
  • ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆ ಮಾತ್ರವಲ್ಲದೆ ಇಡೀ ಬಯಲುಸೀಮೆಯ ನೀರಾವರಿ ಮಾಹಿತಿಯ ಕಣಜವೊಂದು ಚಿಕ್ಕಬಳ್ಳಾಪುರದಲ್ಲಿ ಸಾಕಾರವಾಗಿದೆ. ಖ್ಯಾತ ನೀರಾವರಿ ತಜ್ಞ ಡಾ.ಜಿ.ಎಸ್.ಪರಮಶಿವಯ್ಯ ಅವರ ಸ್ಮರಣಾರ್ಥ ಶಾಶ್ವತ ನೀರಾವರಿ ಸಮಿತಿ ಈ ಕಾರ್ಯವನ್ನು ಮಾಡಿದೆ.

ಚಿಕ್ಕಬಳ್ಳಾಪುರ: ಅವಿಭಜಿತ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಅಂತರ್ಜಲದ ಮಟ್ಟದ ವರ್ಷಕ್ಕೆ ಸರಾಸರಿ 6 ಮೀಟರ್‌ (20 ಅಡಿ)ನಷ್ಟು ಕುಸಿಯುತ್ತಿದೆ. ಇನ್ನು ಕೆಲ ಗಂಬೀರ ಪ್ರದೇಶಗಳಲ್ಲಿ 20ರಿಂದ 30 ಮೀಟರ್‌ವರೆಗೂ ಅಂತರ್ಜಲ ಕುಸಿಯುತ್ತಿದೆ. ಇದು ಅತ್ಯಂತ ಕಳವಳಕಾರಿ ಎಂದು ಖ್ಯಾತ ಜಲ ವಿಜ್ಞಾನಿ ಡಾ.ವಿ.ಎಸ್. ಪ್ರಕಾಶ್‌ ಅವರು ಹೇಳಿದರು,

ವಿಶ್ವ ಜಲ ದಿನಾಚರಣೆ ನಿಮಿತ್ತ ಚಿಕ್ಕಬಳ್ಳಾಪುರದಲ್ಲಿ ಖ್ಯಾತ ನೀರಾವರಿ ತಜ್ಞ ಡಾ.ಜಿ.ಎಸ್.ಪರಮಶಿವಯ್ಯ ಅವರ ಸ್ಮರಣಾರ್ಥ ಶಾಶ್ವತ ನೀರಾವರಿ ಸಮಿತಿ ವತಿಯಿಂದ ಸ್ಥಾಪನೆ ಮಾಡಲಾಗಿರುವ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ಲೋಕಾರ್ಪಣೆ ನೆರೆವೇರಿಸಿ ಮಾತನಾಡಿದರು ಅವರು.

ಇಡೀ ದೇಶದಲ್ಲಿ ನೀರಿಗೆ ಸಂಬಂಧಿಸಿದ ಸಮಸ್ಯೆಗಳಿಂದ ಹೆಚ್ಚು ಸಾವುಗಳು ಸಂಭವಿಸುತ್ತಿವೆ. ಈ ಕೂಡಲೇ ಎಚ್ಚೆತ್ತುಕೊಳ್ಳದಿದ್ದರೆ ಇದು ಇನ್ನೂ ಹೆಚ್ಚಾಗಲಿದೆ. 2030ರ ಹೊತ್ತಿಗೆ ನಮಗೆ ಲಭ್ಯತೆ ಇರುವ ನೀರಿನಲ್ಲಿ ಅರ್ಧದಷ್ಟು ಕಡಿಮೆಯಾಗಲಿದೆ ಎಂಬ ಅಧ್ಯಯನಗಳೂ ಬಂದಿವೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಜಲ ಅಧ್ಯಯನಕ್ಕೆ 400 ಶತಕೋಟಿ ಡಾಲರ್‌

ನೀರಿನ ಸಂರಕ್ಷಣೆ, ಆಧ್ಯಯನಕ್ಕಾಗಿ ನಮ್ಮ ದೇಶವೂ ಸೇರಿ ಜಾಗತಿಕ ಮಟ್ಟದಲ್ಲಿ 400 ಶತಕೋಟಿ ಡಾಲರ್‌ನಷ್ಟು ಬೃಹತ್‌ ಮೊತ್ತವನ್ನು ಹೂಡಿಕೆ ಮಾಡಲಾಗುತ್ತಿದೆ. ಈ ಅಧ್ಯಯನವೇ ದೊಡ್ಡ ಮಾರುಕಟ್ಟೆಯಾಗಲಿದೆ. ಬಳಿಕ ಅಲ್ಲಿ ಒಳ್ಳೆಯ ವರದಿಗಳು ಬರುತ್ತವೆ. ಅಂಥ ಸಮಯದಲ್ಲಿ ನಮಗೆ ಬೇಕಾದ ಅಂಶಗಳನ್ನು ಹೆಕ್ಕಿ ತೆಗೆದು ಕಾರ್ಯಕ್ರಮಗಳನ್ನು ಹಾಕಿಕೊಳ್ಳಬೇಕು. ಇಲ್ಲವಾದರೆ ಮುಂದೆ ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಡಾ.ಪ್ರಕಾಶ್‌ ಅವರು ಹೇಳಿದರು.

ಯೋಜನೆಗಳಲ್ಲಿ ಅಡಗಿವೆ ಹಿತಾಸಕ್ತಿಗಳು

ನಮ್ಮಲ್ಲಿ ಯೋಜನೆಗಳನ್ನು ರೂಪಿಸಬೇಕಾದರೆ ಹಿತಾಸಕ್ತಿಗಳೇ ಹೆಚ್ಚಾಗಿ ಪರಿಗಣಿಸಲ್ಪಡುತ್ತವೆ. ಎಲ್ಲ ಯೋಜನೆಗಳಲ್ಲೂ ಸ್ವಹಿತಾಸಕ್ತಿಗಳು ಅಡಗಿವೆ. ಇದು ದುರದೃಷ್ಟಕರ ಸಂಗತಿ. ತಮಗೆ ಬೇಕಾದ ಹಾಗೆ ಯೋಜನಾ ವರದಿಗಳನ್ನು ತಯಾರು ಮಾಡಲಾಗುತ್ತದೆ. ಯಾವ ವರದಿ ಸರಿ? ಯಾವುದು ತಪ್ಪು? ಎನ್ನುವುದೇ ದೊಡ್ಡ ಪ್ರಶ್ನೆಯಾಗಿದೆ. ಅಂಥ ವರದಿಗಳ ಬಗ್ಗೆ ಈ ಗ್ರಂಥಾಯದಲ್ಲಿ ಕೂತು ಅಧ್ಯಯನ ಮಾಡಿ ಸತ್ಯ ಸಂಗತಿಯನ್ನು ತಿಳಿಯಬಹುದು ಎಂದರು ಡಾ.ಪ್ರಕಾಶ್.

ನೀರಿನ ವಿಷಯದಲ್ಲಿ ಕಾಲ ಕಾಲಕ್ಕೆ ದೊಡ್ಡ ಪ್ರಮಾಣದ ಬದಲಾವಣೆ ಆಗುತ್ತಾ ಬಂದಿದೆ. ಆದರೆ, ಆ ಬದಲಾವಣೆಯನ್ನು ನಾವು ಗ್ರಹಿಸಿಕೊಂಡಿದ್ದೇವೆಯೇ? ಇಲ್ಲ. ನೀರಿನ ನಿರ್ವಹಣೆಯಲ್ಲಿ, ಕಲಿಕೆಯಲ್ಲಿ ನಾವಿನ್ನೂ ಬ್ರಿಟೀಷರ ಕಾಲದಲ್ಲೇ ಇದ್ದೇವೆ‌ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಈ ಗ್ರಂಥಾಯಲಯ ಅತ್ಯಂತ ವಿಶಿಷ್ಟ್ಯವಾದದ್ದು. ನೀರಿಗಾಗಿಯೇ ಮೀಸಲಾದ ಒಂದು ಅಧ್ಯಯನ ಕೇಂದ್ರವೂ ಹೌದು. ಅದರಲ್ಲೂ ಡಾ.ಜಿ.ಎಸ್.ಪರಮಶಿವಯ್ಯ ಅವರ ಹೆಸರಿನಲ್ಲಿ ಸ್ಥಾಪನೆ ಮಾಡಿರುವುದು ಶ್ಲಾಘನೀಯ. ಅರಿವು, ಜ್ಞಾನ, ಒಳನೋಟ, ಹೊರನೋಟ, ಅಧ್ಯಯನ, ತಪ್ಪು, ತಿದ್ದುಪಡಿ ಇತ್ಯಾದಿ ಅಂಶಗಳ ಬಗ್ಗೆ ಈ ಗ್ರಂಥಾಲಯ ದೊಡ್ಡ ಕಾಣಿಕೆ ನೀಡುತ್ತದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಸಮಗ್ರ ಮಾಹಿತಿ ಸಂಗ್ರಹವಾಗಲಿ

ನಾಯನಹಳ್ಳಿ ತೋಟದಲ್ಲಿ ಸ್ಥಾಪನೆಯಾಗಿರುವ ಈ ಗ್ರಂಥಾಲಯ ಸಣ್ಣ ಪ್ರಮಾಣದ ಜಲ ಸಂಸ್ಥೆ ರೀತಿಯಲ್ಲಿದೆ. ಈ ಜಿಲ್ಲೆ ಹಾಗೂ ಬಯಲುಸೀಮೆ ನೀರಿನ ಸ್ಥಿತಿಗತಿಗೆ ಸಂಬಂಧಿಸಿದ ಎಲ್ಲ ಮಾಹಿತಿ ಈ ಕೇಂದ್ರದಲ್ಲಿರಬೇಕು. ಅಧ್ಯಯನಾಸಕ್ತರಿಗೆ ಸಮಗ್ರ ಮಾಹಿತಿ ಸಿಗಬೇಕು. ಡೇಟಾ ಸಂಗ್ರಹ ಮಾಡುವುದರ ಜತೆಗೆ ಅರಿವು ಮೂಡಿಸಬೇಕು ಎಂದು ರಾಜ್ಯ ಜಲ ಸಂಸ್ಥೆಯ ನಿರ್ದೇಶಕ ಡಾ.ಎಂ. ಇನಾಯತುಲ್ಲಾ ಹೇಳಿದರು.

ಸುಪ್ರೀಂ ಕೋರ್ಟ್‌ ವಿಶ್ರಾಂತ ನ್ಯಾಯಮೂರ್ತಿಗಳಾದ ವಿ.ಗೋಪಾಲಗೌಡರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಲತಜ್ಞರು ಹಾಗೂ CSIR-Fourth Paradigm Institute ಮುಖ್ಯಸ್ಥರಾದ ಡಾ.ವಿದ್ಯಾಧರ ಮುದ್ಕವಿ, ವಿಶ್ರಾಂತ ಅರಣ್ಯ ಮತ್ತು ಪರಿಸರ ಸಂರಕ್ಷಣಾಧಿಕಾರಿ ಡಾ.ಎಂ.ಎಚ್.ಸ್ವಾಮಿನಾಥ್‌ ಮಾತನಾಡಿದರು.

ನೀರಿನ ಭದ್ರತೆ ಮರೀಚಿಕೆ!

ಕಾರ್ಯಕ್ರಮದ ಆರಂಭದಲ್ಲಿ ಪ್ರಾಸ್ತಾವಿಕ ಮಾತುಗಳನ್ನಾಡಿದ ಶಾಶ್ವತ ನೀರಾವರಿ ಸಮಿತಿ ಅಧ್ಯಕ್ಷ ಆರ್.ಆಂಜನೇಯ ರೆಡ್ಡಿ ಅವರು; “ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ಬಯಲುಸೀಮೆಯ ಅನೇಕ ಜಿಲ್ಲೆಗಳಲ್ಲಿ ನೀರಾವರಿ ಉದ್ದೇಶ ಇಟ್ಟುಕೊಂಡು ನೂರಾರು, ಸಾವಿರಾರು ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ. ಆದರೆ, ಫಲಶ್ರುತಿ ಮಾತ್ರ ಶೂನ್ಯವಾಗಿದೆ. ನೀರಿನ ಭದ್ರತೆಯೂ ಸಿಕ್ಕಲ್ಲ” ಎಂದರು.

ಈ ಭಾಗದಲ್ಲಿ ಪರಿಶುದ್ಧವಾದ ಕುಡಿಯುವ ನೀರು ಸಿಗುತ್ತಿಲ್ಲ ಎಂಬ ಅಂಶವನ್ನು ಸರಕಾರದ ವರದಿಗಳು, ಅಂಕಿ-ಅಂಶಗಳೇ ಹೇಳುತ್ತವೆ. ಸಾಗುವಳಿ ನೀರಿಲ್ಲದೆ ಹಾಹಾಕಾರ ಉಂಟಾಗಿದೆ. ವರ್ಷದಿಂದ ವರ್ಷಕ್ಕೆ ಅಂತರ್ಜಲದ ಮಟ್ಟ ಪಾತಾಳಕ್ಕೆ ಹೋಗುತ್ತಲೇ ಇದೆ. ಮುಂದಿನ ಕೆಲವೇ ವರ್ಷಗಳಲ್ಲಿ ಈ ಭಾಗವೆಲ್ಲ ಮರುಭೂಮಿಯಾಗಿ ಪರಿವರ್ತನೆಯಾಗುವ ಅಪಾಯವೂ ಇದೆ. ಈ ಎಲ್ಲ ಎಚ್ಚರಿಕೆ ಗಂಟೆಯೂ ನಮ್ಮ ಮುಂದಿದೆ ಎಂದು ರೆಡ್ಡಿ ಕಳವಳ ವ್ಯಕ್ತಪಡಿಸಿದರು.

ಆದರೆ ಈ ಭಾಗದಲ್ಲಿ ವಾಸ ಮಾಡುವ ನಾವು ಎಚ್ಚರಿಕೆ ತಪ್ಪುತ್ತಿದ್ದೇವೆ ಎಂಬ ಭಯ ನನ್ನನ್ನು ಕಾಡುತ್ತಿದೆ. ಪುರಾಣ ಕಾಲದಲ್ಲಿ ಭಗೀರಥ ಮಹರ್ಷಿ ಗಂಗೆಯನ್ನು ಧರೆಗೆ ತಂದಂತೆ, ಈಗಲೂ ರಯಾರಾದರೊಬ್ಬರು ಭಗೀರಥರು ಬರುತ್ತಾರೆಂಬ ಭ್ರಮೆ ಬೇಡ. ನಮ್ಮ ನೀರನ ಹಕ್ಕುಗಳಿಗಾಗಿ ನಾವು ಹೋರಾಟ ನಡೆಸಲೇಬೇಕಿದೆ ಎಂದು ಅವರು ಹೇಳಿದರು.

ನಮ್ಮ ಭಾಗದ ನೀರಾವರಿಗೆ ಸಂಬಂಧಿಸಿದ ಮಾಹಿತಿ, ಕಾರ್ಯಗತವಾಗಿರುವ ಯೋಜನೆಗಳು, ವಿಫಲವಾಗಿರುವ ಯೋಜನೆಗಳು, ಮಾಡಿರುವ ಖರ್ಚು, ವಿವಿಧ ಇಲಾಖೆಗಳ ಕಾರ್ಯಚಟುವಟಿಕೆ, ವಿಜ್ಞಾನಿಗಳು ಮತ್ತು ಸರಕಾರದ ಸಂಘ-ಸಂಸ್ಥೆಗಳು ನೀಡಿರುವ ವರದಿಗಳು ಇತ್ಯಾದಿಗಳ ಸಂಪೂರ್ಣ ಮಾಹಿತಿ ಈ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ಲಭ್ಯವಾಗಲಿದೆ ಎಂದು ಆಂಜನೇಯ ರೆಡ್ಡಿ ಹೇಳಿದರು.

ರೈತಪರ ಹೋರಾಟಗಾರ ಎಸ್.ಲಕ್ಷ್ಮಯ್ಯ, ಮಳ್ಳೂರು ಹರೀಶ್, ಸುಷ್ಮಾ ಶ್ರೀನಿವಾಸ್, ಪ್ರಭಾ ನಾರಾಯಣಗೌಡ, ಆಯಿಷಾ ಸೇರಿದಂತೆ ಯುವ ಶಕ್ತಿ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು.

Tags: chikkaballapurdr gs paramashivaiahjustice v gopala gowdawater information centerworld water day 2021
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
3 ಕೃಷಿ ಕಾಯ್ದೆಗಳನ್ನು ಏಕಪಕ್ಷೀಯವಾಗಿ  ಪಾಸ್‌ ಮಾಡಿಕೊಂಡ ಕೇಂದ್ರ ಸರಕಾರವು ಸಂವಿಧಾನಕ್ಕೆ ಅಪಚಾರ ಮಾಡಿತಾ? ವಿಶ್ರಾಂತ ನ್ಯಾಯಮೂರ್ತಿ ವಿ.ಗೋಪಾಲಗೌಡರು ಹೇಳಿದ್ದೇನು?

3 ಕೃಷಿ ಕಾಯ್ದೆಗಳನ್ನು ಏಕಪಕ್ಷೀಯವಾಗಿ ಪಾಸ್‌ ಮಾಡಿಕೊಂಡ ಕೇಂದ್ರ ಸರಕಾರವು ಸಂವಿಧಾನಕ್ಕೆ ಅಪಚಾರ ಮಾಡಿತಾ? ವಿಶ್ರಾಂತ ನ್ಯಾಯಮೂರ್ತಿ ವಿ.ಗೋಪಾಲಗೌಡರು ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

Recommended

ಮದುವೆಯಾದ ಐದೇ ತಿಂಗಳಿಗೆ ಭೂಮಿಗೆ ಬಂದ ಕಂದನ ಕಥೆ ಇದು; ಅನುಮಾನಪಟ್ಟ ಅಪ್ಪ, ಮಾರಿಕೊಂಡ ಅಮ್ಮ, ಅಕ್ಕರೆ ಮರೆತ ಅಜ್ಜ-ಅಜ್ಜಿ

ಮದುವೆಯಾದ ಐದೇ ತಿಂಗಳಿಗೆ ಭೂಮಿಗೆ ಬಂದ ಕಂದನ ಕಥೆ ಇದು; ಅನುಮಾನಪಟ್ಟ ಅಪ್ಪ, ಮಾರಿಕೊಂಡ ಅಮ್ಮ, ಅಕ್ಕರೆ ಮರೆತ ಅಜ್ಜ-ಅಜ್ಜಿ

4 years ago
ಶಿರಾದಲ್ಲಿ ಬಿಜೆಪಿ ನಿಗೂಢ ಹೆಜ್ಜೆ; ಯಾರಿಗೂ ಗೊತ್ತಿಲ್ಲದೆ ಗಡಿ ದಾಟಿದ ಉಪ ಮುಖ್ಯಮಂತ್ರಿ!

BMS ಟ್ರಸ್ಟ್ ಅಕ್ರಮ: ಸಚಿವ ಅಶ್ವತ್ಥನಾರಾಯಣ + ಒಂದು ಕಾಣದ ಕೈ

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ