• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಮುಳಬಾಗಲು ಪಟ್ಟಣದಲ್ಲಿ ಶಾಲೆ ಆಗಿರುವ ಡಿವಿಜಿ ಅವರ ಮನೆಗೆ ಕಾಯಕಲ್ಪ; ಎದುರಾಗಿದ್ದ ಅಡ್ಡಿಗಳನ್ನು ತಿಳಿಗೊಳಿಸಿದ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌

cknewsnow desk by cknewsnow desk
March 25, 2021
in EDITORS'S PICKS, KOLAR, STATE
Reading Time: 1 min read
0
ಮುಳಬಾಗಲು ಪಟ್ಟಣದಲ್ಲಿ ಶಾಲೆ ಆಗಿರುವ ಡಿವಿಜಿ ಅವರ ಮನೆಗೆ ಕಾಯಕಲ್ಪ; ಎದುರಾಗಿದ್ದ ಅಡ್ಡಿಗಳನ್ನು ತಿಳಿಗೊಳಿಸಿದ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌
931
VIEWS
FacebookTwitterWhatsuplinkedinEmail

ಮುಳಬಾಗಿಲು: ಕನ್ನಡ ಆಧುನಿಕ ಸಾಹಿತ್ಯದ ಸರ್ವಜ್ಞ ಡಿ.ವಿ.ಗುಂಡಪ್ಪ (ಡಿವಿಜಿ) ಅವರ 134ನೇ ಜನ್ಮದಿನದ ಕಳೆದ 9 ದಿನಗಳಾದ ನಂತರ ರಾಜ್ಯ ಸರಕಾರ ಒಂದು ಸಾರ್ಥಕ ಕೆಲಸಕ್ಕೆ ಮುಂದಾಗಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದಲ್ಲಿ ಡಿವಿಜಿ ಅವರು ಬದುಕಿಬಾಳಿದ ಮನೆ ಶಾಲೆಯಾಗಿ ನಡೆಯುತ್ತಿದ್ದು, ಅದನ್ನು ಆಧುನೀಕರಣಗೊಳಿಸಿ ಶಾಲೆ ಮತ್ತು ಸ್ಮಾರಕವನ್ನು ನಿರ್ಮಾಣ ಮಾಡಲು ಮುಂದೆ ಬಂದಿರುವ ಖಾಸಗಿ ಸಂಸ್ಥೆಯೊಂದಕ್ಕೆ ಎದುರಾಗಿದ್ದ ಅಡ್ಡಿಗಳನ್ನು ಪ್ರಾಥಮಿಕ ಮತ್ತು ಪ್ರೌಢಕ್ಷಣ ಖಾತೆ ಸಚಿವ ಎಸ್.‌ಸುರೇಶ್‌ಕುಮಾರ್‌ ಅವರು ನಿವಾರಿಸಿದ್ದಾರೆ.

ಒನ್‌ ಸ್ಕೂಲ್‌ ಅಟ್‌ ಎ ಟೈಮ್‌ (ಓಸಾಟ್‌) ಅನ್ನುವ ಖಾಸಗಿ ಸಂಸ್ಥೆ ಈ ಶಾಲೆಯನ್ನು ಪುನರುದ್ಧಾರ ಮಾಡಲು ಮುಂದೆ ಬಂದಿದೆ. ಆದರೆ, ಇದಕ್ಕೆ ಕೆಲ ಅಡ್ಡಿಗಳು ಎದುರಾಗಿದ್ದವು, ಶಾಲೆಯ ಜತೆಗೆ ಡಿವಿಜಿ ಸ್ಮಾರಕವೂ ನಿರ್ಮಾಣವಾಗಲಿ ಎಂದು ಕೆಲವರು ಪ್ರತಿಪಾದಿಸಿದ್ದರು. ಹಳೆಯದಾದ ಕಟ್ಟಡವು ಶಿಥಿಲವಾಗುತ್ತಿದೆ. ಜತೆಗೆ ಸ್ಮಾರಕ ಮಾಡುವ ಬಗ್ಗೆಯೂ ಗೊಂದಲಗಳಿದ್ದವು.

ಈ ಹಿನ್ನೆಲೆಯಲ್ಲಿ ಗುರುವಾರ ಮುಳಬಾಗಿಲು ಪಟ್ಟಣದಲ್ಲಿರುವ ʼಸರಕಾರಿ ಕನ್ನಡ ಡಿವಿಜಿ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆʼಗೆ ಭೇಟಿ ನೀಡಿದ ಸಚಿವರು; ಸ್ಥಳೀಯರು, ಪಟ್ಟಣದ ಪ್ರಮುಖರು, ಶಿಕ್ಷಕರು, ಜಿಲ್ಲೆ ಮತ್ತು ತಾಲ್ಲೂಕಿನ ಅಧಿಕಾರಿಗಳ ಜತೆ ಮಾತನಾಡಿದ ಉಂಟಾಗಿದ್ದ ಗೊಂದಲವನ್ನು ತಿಳಿಗೊಳಿಸಿದರು.

ಮಾತುಕತೆಯ ನಂತರ ಸುರೇಶ್‌ಕುಮಾರ್‌ ಅವರು ಹೇಳಿದ್ದಿಷ್ಟು;

“ಒನ್‌ ಸ್ಕೂಲ್‌ ಅಟ್‌ ಎ ಟೈಮ್‌ ಅನ್ನುವ ಖಾಸಗಿ ಸಂಸ್ಥೆ ಸರಕಾರಿ ಶಾಲೆಗಳನ್ನು ಮರು ನಿರ್ಮಾಣ ಮಾಡಿ ಜೀರ್ಣೋದ್ಧಾರ ಮಾಡುವ ಕೆಲಸ ಮಾಡುತ್ತಿದೆ. ಈವರೆಗೆ 41 ಶಾಲೆಗಳನ್ನು ಸುಂದರವಾಗಿ ಕಟ್ಟಿಕೊಟ್ಟಿದೆ. ಹತ್ತು ದಿನಗಳ ಹಿಂದೆ ಮಾಲೂರಿನಲ್ಲಿ ಈ ಸಂಸ್ಥೆ ಕಟ್ಟಿದ್ದ ಶಾಲೆಯನ್ನು ನಾನೇ ಲೋಕಾರ್ಪಣೆ ಮಾಡಿದ್ದೆ.”

ಆಗ ಸಂಸ್ಥೆಯ ಪ್ರತಿನಿಧಿಗಳು ಕನ್ನಡ ಪ್ರಾತಃಸ್ಮರಣೀಯರೂ ಆದ ಮುಳಬಾಗಿಲಿನಲ್ಲಿರುವ ಡಿವಿಜಿ ಅವರ ಮನೆ ಈಗ ಶಾಲೆಯಾಗಿದೆ. ಅದು ಶಿಥಿಲವಾಗುತ್ತಿದೆ. ಅದನ್ನು ಮರು ನಿರ್ಮಾಣ ಮಾಡುವ ಉದ್ದೇಶ ನಮಗಿದೆ. ಆದರೆ ಅಲ್ಲಿ ಕೆಲ ಸಮಸ್ಯೆಗಳಿವೆ. ಮನೆ-ಶಾಲೆ ಇದೆ. ಹೇಗೆ ಮಾಡುವುದು ಅಂತ ಗೊತ್ತಾಗುತ್ತಿಲ್ಲ ಎಂದು ಹೇಳಿದ್ದರು. ಆಯಿತು, ನಾನೇ ಬರ್ತೀನಿ. ಊರಿನ ಪ್ರಮುಖರ ಜತೆ ಮಾತಾಡ್ತೀನಿ ಎಂದು ಹೇಳಿದ್ದೆ. ಅದರಂತೆ ಇವತ್ತು ಬಂದು ಎಲ್ಲರ ಜತೆ ಮಾತನಾಡಿದ್ದೇನೆ. ಶಾಲೆಯ ಒಂದು ಭಾಗವನ್ನು ಭಾವನಾತ್ಮಕ ಕಾರಣದಿಂದ ಸ್ಮಾರಕವನ್ನಾಗಿ ಉಳಿಸಿಕೊಂಡು ಉಳಿದ ಭಾಗದಲ್ಲಿ ಶಾಲೆಯನ್ನು ಮರು ನಿರ್ಮಾಣ ಮಾಡಲು ಎಲ್ಲರೂ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ”

“ಇಲ್ಲಿ ಡಿವಿಜಿ ಸ್ಮಾರಕದ ಜತೆಗೆ ಅವರ ಪ್ರತಿಮೆಯನ್ನು ಮಾಡಲಾಗುವುದು. ‌ಇದೊಂದು ಉತ್ತಮ ಕಾರ್ಯವಾಗಿದ್ದು, ಎಲ್ಲರ ಸಹಕಾರ ಅಗತ್ಯವಿದೆ. ಪ್ರಸ್ತುತ ಶಾಲೆಯ ಕಟ್ಟಡ ಶಿಥಿಲಾವಸ್ಥೆಯಲ್ಲಿ ಇರುವುದರಿಂದ ಅದನ್ನು ಮರು ನಿರ್ಮಾಣ ಮಾಡುವುದು ಒಳ್ಳೆಯ ಕೆಲಸ.”

ದೇಶಾದ್ಯಂತ 41 ಶಾಲೆಗಳ ನಿರ್ಮಾಣ

ಒನ್‌ ಸ್ಕೂಲ್‌ ಅಟ್‌ ಎ ಟೈಮ್‌ ದೇಶಾದ್ಯಂತ ಈ ಸಂಸ್ಥೆ 41ಕ್ಕೂ ಹೆಚ್ಚು ಶಾಲೆಗಳನ್ನು ಮರು ನಿರ್ಮಾಣ ಮಾಡಿದ್ದು, ಆ ಪೈಕಿ ರಾಜ್ಯದಲ್ಲಿ 28 ಶಾಲೆಗಳನ್ನು ನಿರ್ಮಾಣ ಮಾಡಿದೆ. ಮಹಾರಾಷ್ಟ್ರ, ತಮಿಳುನಾಡು, ಆಂಧ್ರ ಪ್ರದೇಶ, ಉತ್ತರ ಪ್ರದೇಶ, ಮಣಿಪುರದಲ್ಲೂ ಶಾಲೆಗಳನ್ನು ಕಟ್ಟಿದ್ದೇವೆ. ಕೋಲಾರ ಜಿಲ್ಲೆಯಲ್ಲಿ 5 ಶಾಲೆಗಳನ್ನು ನಿರ್ಮಿಸಿದೆ. ಇನ್ನೆರಡು ವರ್ಷಗಳಲ್ಲಿ ಈ ಯೋಜನೆ ಮುಗಿಯಲಿದೆ ಎಂದು ಸಂಸ್ಥೆ ಪ್ರತಿನಿಧಿಯೊಬ್ಬರು ತಿಳಿಸಿದರು.

ತಮ್ಮ ಹಿರಿಯರು, ಪತ್ನಿ ಭಾಗೀರಥಮ್ಮ ಅವರೊಂದಿಗೆ ಬಾಳಿ ಬದುಕಿದ ಈ ಮನೆಯನ್ನು ಡಿವಿಜಿ ಅವರು 1928ರಲ್ಲಿ ಶಾಲೆಗೆ ದಾನ ಮಾಡಿದ್ದರು. ಈ ಅಪರೂಪ ತಾಣವನ್ನು ಡಿವಿಜಿ ಅವರ ಹೆಸರಿನಲ್ಲಿಯೇ ಚಿರಸ್ಥಾಯಿಗೊಳಿಸುವ ಪ್ರಯತ್ನ ಈಗ ನಡೆದಿದೆ.

  • (ಡಿವಿಜಿ ಕಲಾಕೃತಿ ಕೃಪೆ: ಮೋಹನ್‌ ವೆರ್ಣೀಕರ್)
  • ಡಿವಿಜಿ ಅವರ ಕುರಿತ ಲೇಖನ ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ…
ಬದುಕು ಜಟಕಾಬಂಡಿ, ವಿಧಿಯದರ ಸಾಹೇಬ ಎಂದ ಭಾರತೀಯ ಸಾಹಿತ್ಯದ ಅಶ್ವತ್ಥವೃಕ್ಷ, ಆಧುನಿಕ ಸರ್ವಜ್ಞ ಹಾಗೂ ಜ್ಞಾನದ ದಿವ್ಯ ದೀವಿಗೆ ಡಿವಿಜಿ ಅವರಿಗೆ 134ನೇ ವಸಂತ
Tags: dv gundappadvgdvg school Mulbagaldvg school renovations suresh kumar
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಹೊಸ ಪ್ರಭೇದದ ಕೊರೊನಾ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿ, ಕೋವ್ಯಾಕ್ಸಿನ್ ಲಸಿಕೆಯ ಮೂರನೇ ಹಂತದ ಪ್ರಯೋಗ: ಡಾ.ಕೆ.ಸುಧಾಕರ್

ಕೋವಿಡ್ ಎರಡನೇ ಅಲೆ ಆರಂಭದ ಸೂಚನೆ ಸ್ಪಷ್ಟ, ಮುನ್ನೆಚ್ಚರಿಕೆ ವಹಿಸದಿದ್ದರೆ ಕಾದಿದೆ ಆಪತ್ತು; ರಾಷ್ಟ್ರೀಯ ಪಾಸಿಟಿವಿಟಿ ದರಕ್ಕಿಂತ ರಾಜ್ಯದ ಪಾಸಿಟಿವಿಟಿ ದರವೇ ಹೆಚ್ಚು!!

Leave a Reply Cancel reply

Your email address will not be published. Required fields are marked *

Recommended

ಕೋವಿಡ್‌ ನಡುವೆ ವಿಮಾನ ವಿಹಾರ ಮಾಡುವಿರಾ? ಹಾಗಾದರೆ, ಈ ವರದಿ ಓದಿ..

ಕೋವಿಡ್‌ ನಡುವೆ ವಿಮಾನ ವಿಹಾರ ಮಾಡುವಿರಾ? ಹಾಗಾದರೆ, ಈ ವರದಿ ಓದಿ..

5 years ago
3 ದಿನ ಸಿಇಟಿ ಪರೀಕ್ಷೋತ್ಸವ

3 ದಿನ ಸಿಇಟಿ ಪರೀಕ್ಷೋತ್ಸವ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ