• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ರಮೇಶ್‌ ಜಾರಕಿಹೊಳಿ V/S ಡಿ.ಕೆ.ಶಿವಕುಮಾರ್‌; ಸಾಹುಕಾರನನ್ನು ಬಿಜೆಪಿ ದೂರ ಇಟ್ಟಿದ್ದಾಯಿತು! ಇನ್ನು ಕನಕಪುರ ಬಂಡೆಗೆ ಕಾದಿದೆಯಾ ಕಾಂಗ್ರೆಸ್‌ ಪಕ್ಷದಲ್ಲಿನ ಟ್ರಬಲ್‌

P K Channakrishna by P K Channakrishna
March 27, 2021
in POLITICS, STATE
Reading Time: 1 min read
0
ಶಿರಾ ಗೆದ್ದು ರಾಜ್ಯವನ್ನು ಗೆಲ್ಲುತ್ತೇವೆ; ಆದರೆ, ಉಪ ಚುನಾವಣೆಯಿಂದ ಸರಕಾರ ಬೀಳಲ್ಲ ಎಂದ ಡಿಕೆಶಿ
915
VIEWS
FacebookTwitterWhatsuplinkedinEmail

ಬೆಂಗಳೂರು: ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಪ್ರಕರಣವು ಶನಿವಾರ ಸಂಜೆ ಹೊತ್ತಿಗೆ ಮಹಾನ್‌ ಬ್ರೇಕ್‌ ಪಡೆದು ಕ್ಲೈಮ್ಯಾಕ್ಸ್ ಲೆವೆಲ್ಲಿಗೆ ಬಂದು ಮುಟ್ಟಿದ್ದು, ಮಹಾನಾಯಕ ಯಾರು? ಎಂಬ ಕುತೂಹಲಕ್ಕೆ ತೆರೆಬಿದ್ದಿದೆ.

ಆ ಯುವತಿಯ ಪೋಷಕರು ಹಾಗೂ ರಮೇಶ ಜಾರಕಿಹೊಳಿ ಆ ಮಹಾನ್‌ ನಾಯಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕಮಾರ್‌ ಎಂಬ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ಈ ವಿಷಯ ಬಹಿರಂಗವಾದ ನಂತರ ಕಾಂಗ್ರೆಸ್‌-ಬಿಜೆಪಿ ಪಕ್ಷಗಳಲ್ಲಿ ಬರುಸಿನ ಚಟುವಟಿಕೆಗಳು ಆರಂಭವಾಗಿವೆ.

ಕಾಂಗ್ರೆಸ್‌ ಮಹಾನ್‌ ನಾಯಕನ ಹೆಸರು ರಿವೀಲ್‌ ಆಗಿದ್ದಾಯಿತು. ಇನ್ನು ಬಿಜೆಪಿ ಮಹಾನ್‌ ನಾಯಕನ ಹೆಸರು ಬಹಿರಂಗ ಯಾವಾಗ? ಎಂಬ ಪ್ರಶ್ನೆ ಈಗ ಎಲ್ಲರನ್ನೂ ಕಾಡುತ್ತಿದೆ.

ಶನಿವಾರದ ಇಡೀ ಬೆಳವಣಿಗೆಗಳು ಡಿ.ಕೆ.ಶಿವಕುಮಾರ್‌ ಅವರ ಸುತ್ತವೇ ಗಿರಕಿ ಹೊಡೆದವಲ್ಲದೆ, ಸಂಜೆ ಹೊತ್ತಿಗೆ ಒಂದು ಅಂತಿಮ ಚಿತ್ರಣವೂ ಸಿಕ್ಕಿತು. ನೇರವಾಗಿ ಕನಕಪುರ ಬಂಡೆಗೆ ಡಿಚ್ಚಿ ಹೊಡೆದ ಬೆಳಗಾವಿ ಸಾಹುಕಾರ ಕನಕಪುರದಲ್ಲಿಯೇ ಖುದ್ದು ಬಂಡೆಯ ವಿರುದ್ಧ ಅಖಾಡಕ್ಕಿಳಿಯುವೆ ಎಂದು ತೊಡೆತಟ್ಟಿದರು.

ಇದೊಂದು ಕಡೆಯಾದರೆ, ಆ ಯುವತಿ ಹಾಗೂ ಸೀಡಿ ಗ್ಯಾಂಗ್‌ ಜತೆ ಡಿಕೆಶಿ ಸಂಬಂಧ ಸ್ಪಷ್ಟವಾದ ಹಿನ್ನೆಲೆಯಲ್ಲಿ ಬಿಜೆಪಿ ಹೇಗಾದರೂ ಮಾಡಿ ಬೆಳಗಾವಿ ಲೋಕಸಭೆ, ಎರಡು ವಿಧಾನಸಭೆ ಕ್ಷೇತ್ರಗಳ ಚುನಾವಣಾ ಪ್ರಚಾರ ಕಣದಿಂದ ಅವರನ್ನು ದೂರ ಇಡಲು ಹಸ್ತಪಾಳಯದಲ್ಲಿ ದಾಳಗಳು ಉರುಳತೊಡಗಿವೆ.

ಬೆಳಗಾವಿಗೆ ಬರದಂತೆ ತಡೆಯುವ ಯತ್ನ

ಮುಖ್ಯವಾಗಿ ಬೆಳಗಾವಿಗೆ ಯಾವ ಕಾರಣಕ್ಕೂ ಡಿಕೆಶಿ ಬರದಂತೆ ತಡೆಯಲು ಸ್ವತಃ ಕಾಂಗ್ರೆಸ್‌ ನಾಯಕರೇ ಪ್ಲ್ಯಾನ್‌ ಮಾಡುತ್ತಿದ್ದಾರೆಂಬ ಮಾಹಿತಿ ಹೊರಬಿದ್ದಿದೆ. ಉಪ ಚುನಾವಣೆಯನ್ನು ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಾತ್ರ ಎದುರಿಸಬೇಕು ಎಂದು ಫಿಕ್ಸ್‌ ಆಗಿರುವ ಒಂದು ಗುಂಪು, ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ್ಯೂ ಸೀಡಿ ಬಲೆಯಲ್ಲಿ ಸಿಕ್ಕಿಬಿದ್ದಿರುವ ಡಿಕೆಶಿ ವಿರುದ್ಧ ಹೀಗೆ ಜಿದ್ದು ತೀರಿಸಿಕೊಳ್ಳಲು ಕಸರತ್ತು ನಡೆಸಿದೆ.

ಈಗಾಗಲೇ ಡಿಕೆಶಿ ಹಾಗೂ ಸೀಡಿ ಗ್ಯಾಂಗ್‌ ನಡುವಿನ ಸಂಬಂಧದ ಬಗ್ಗೆ ಪಕ್ಷದ ಕೆಲವರು ಹೈಕಮಾಂಡ್‌ ಕಿವಿ ಕಚ್ಚಿದ್ದು, ಆದರೆ, ದಿಲ್ಲಿಯಲ್ಲಿ ತನ್ನ ವಿರೋಧಿಗಳಿಗಿಂತ ಡಿಕೆಶಿಯೇ ಹೆಚ್ಚು ಪ್ರಭಾವ ಹೊಂದಿದ್ದಾರೆ. ಹೀಗಾಗಿ ಡಿಕೆಶಿಗೆ ರಾಜ್ಯದಲ್ಲಿಯೇ ಮುಜುಗರ ಉಂಟು ಮಾಡಬೇಕು. ಅವರ ವಿರುದ್ಧ ಹೆಚ್ಚೆಚ್ಚು ಪ್ರಚಾರ ಆಗುವಂತೆ ಮಾಡುವ ಹವಣಿಕೆಯಲ್ಲಿ ಕೆಲವರಿದ್ದಾರೆ.

ಅದಕ್ಕೆ ಪೂರಕವಾಗಿ ಬಿಜೆಪಿ ಕೂಡ ಚುನಾವಣಾ ಪ್ರಚಾರ ಕಣಕ್ಕೆ ಡಿಕೆಶಿ ಬರದಂತೆ ಮಾಡುವುದು ಹಾಗೂ ಒಂದು ವೇಳೆ ಅವರು ಬಂದರೂ ಸೀಡಿ ಸ್ಟೋರಿಯನ್ನೇ ಇಟ್ಟುಕೊಂಡು ಕಾಂಗ್ರೆಸ್‌ ಪಕ್ಷವನ್ನು ಹಣಿಯುವ ಐಡಿಯಾವನ್ನು ಹಾಕಿಕೊಂಡಿದೆ. ಶನಿವಾರ ಬೆಳಗ್ಗೆಯಿಂದ ಡಿಕೆಶಿಯನ್ನು ಟಾರ್ಗೆಟ್‌ ಮಾಡಿಕೊಂಡು ಬಿಜೆಪಿ ಸಂದಿಸಿದ ಟ್ವಿಟ್ಟರ್‌ ಬಾಣಗಳು ಕಾಂಗ್ರೆಸ್‌ಗೆ ಆಳವಾಗಿ ನಾಟಿವೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ಸೂ ಟ್ವಿಟ್ಟರ್‌ ಬಾಣಗಳನ್ನೂ ಹೂಡಿತಾದರೂ ಅಷ್ಟು ಪರಿಣಾಮಕಾರಿ ಅನಿಸಲಿಲ್ಲ.

ಸದನದಲ್ಲಿ ಆ ಯುವತಿ ಪರವಾಗಿ ಹೋರಾಟ ನಡೆಸಿದ್ದ ಕಾಂಗ್ರೆಸ್‌ ಪಕ್ಷದ ನಾಯಕರಿಗೆ, ಇದೀಗ ಪಕ್ಷದ ಅಧ್ಯಕ್ಷರೇ ಸೀಡಿ ಗ್ಯಾಂಗ್‌ಗೆ ಆಪ್ತರಾಗಿರುವುದು ತೀವ್ರ ಇರಿಸುಮುರಿಸು ಆಗುವಂತೆ ಮಾಡಿದೆ. ಈ ಹಿನ್ನೆಲೆಯಲ್ಲಿ ಡಿಕೆಶಿ ಮೇಲೆ ಸೇಡು ತೀರಿಸಿಕೊಳ್ಳಲು ಒಂದು ಗುಂಪು ಎಲ್ಲ ಪ್ಲ್ಯಾನ್‌ ಮಾಡಿಕೊಂಡಿದೆ ಎಂದು ಅತ್ಯಂತ ವಿಶ್ವಸನೀಯ ಮೂಲಗಳು ತಿಳಿಸಿವೆ.

ವೈಯಕ್ತಿಕ ನೆಲೆಗಟ್ಟಿನ ಜಗಳ

ರಮೇಶ್‌ ಜಾರಕಿಹೊಳಿ ಹಾಗೂ ಡಿ.ಕೆ.ಶಿವಕುಮಾರ್‌ ನಡುವಿನ ತಿಕ್ಕಾಟ ಪಕ್ಷಕ್ಕಿಂತ ವೈಯಕ್ತಿಕ ಮಟ್ಟದಲ್ಲಿ ನಡೆಯುತ್ತಿದ್ದು, ಇದರಿಂದ ಅಂತರ ಕಾಯ್ದುಕೊಳ್ಳಲು ಸಿದ್ದರಾಮಯ್ಯ ನಿರ್ಧಸಿದ್ದಾರೆ ಎಂಬ ಮಾಹಿತಿಯೂ ಬಂದಿದೆ. ಅಲ್ಲದೆ, ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರಕಾರ ಇದ್ದಾಗ ಬೆಳಗಾವಿ ರಾಜಕಾರಣದಲ್ಲಿ ಅಗತ್ಯಕ್ಕಿಂತ ಹೆಚ್ಚು ಹಸ್ತಕ್ಷೇಪ ಮಾಡುತ್ತಿದ್ದ ಡಿಕೆಶಿ ಮೇಲೆ ಅಸಮಾಧಾನಗೊಂಡಿದ್ದವರೆಲ್ಲ ಇದೀಗ ಸಿದ್ದರಾಮಯ್ಯ ಪಕ್ಕದಲ್ಲಿ ನಿಂತು, ಸೀಡಿ ಕೆಸರು ತಮ್ಮ ಮೇಲೆ ಬೀಳಿಸಿಕೊಳ್ಳುವುದು ಬೇಡ ಎಂಬ ಎಚ್ಚರಿಕೆ ವಹಿಸುತ್ತಿದ್ದಾರೆ. ಅಲ್ಲಿಗೆ ಪಕ್ಷದಲ್ಲಿ ಡಿಕೆಶಿ ಒಂಟಿಯಾಗುತ್ತಿದ್ದಾರಾ? ಎಂಬ ಪ್ರಶ್ನೆಯೂ ಮೂಡಿದೆ.

ಸಂತ್ರಸ್ಥೆಯನ್ನು ಕೂಡಿಹಾಕುವ ಪೂರ್ವ ತಯಾರಿ ಕೆಪಿಸಿಸಿ ಕಚೇರಿಯಲ್ಲೇ ನಡೆದಿದ್ದಾ?

ಸಂತ್ರಸ್ಥೆಯ ಪೋಷಕರು ನೇರವಾಗಿ @DKShivakumar ಮೇಲೆ ಆರೋಪ ಮಾಡಿದ್ದಾರೆ.

ಸೆಕ್ಷನ್‌ ಸ್ಪೆಷಲಿಸ್ಟ್ @siddaramaiah ಅವರೇ, ರಾಜಕೀಯ ಆಟಕ್ಕೆ ಸಂತ್ರಸ್ಥೆಯನ್ನು ಬಳಸಿಕೊಂಡದ್ದು ಯಾವ ಸೆಕ್ಷನ್‌ನಲ್ಲಿ ಅಪರಾಧ ಎಂದು ಬಿಡಿಸಿ ಹೇಳುವಿರಾ?#DKShiMustResign

— BJP Karnataka (@BJP4Karnataka) March 27, 2021

ಜಾರಕಿಹೊಳಿಯಿಂದಲೂ ಬಿಜೆಪಿ ಅಂತರ

ಇನ್ನೊಂದೆಡೆ ಡಿಕೆಶಿ ಮತ್ತು ಕಾಂಗ್ರೆಸ್‌ ಮೇಲೆ ಟ್ವಿಟ್ಟರ್‌ ವಾರ್‌ ಮಾಡುತ್ತಿರುವ ಬಿಜೆಪಿ ಕೂಡ ಇದೀಗ ರಮೇಶ್‌ ಜಾರಕಿಹೊಳಿ ಅವರಿಂದ ಸಂಪೂರ್ಣ ಡಿಸ್ಟೆನ್ಸ್‌ ಮೆಂಟೇನ್‌ ಮಾಡಲು ನಿರ್ಧರಿಸಿದೆ. ಜಾರಕಿಹೊಳಿ ಪ್ರಕರಣವನ್ನು ಸಮರ್ಥಿಸುವ ಅಥವಾ ರಮೇಶ್‌ ಇಲ್ಲವೇ ಬಾಲಚಂದ್ರ ಜಾರಕಿಹೊಳಿ ಹೇಳಿಕೆಗಳನ್ನು ಸಮರ್ಥನೆ ಮಾಡುವ ಯಾವ ಹೇಳಿಕೆಗಳಿಗೆ ಒತ್ತಾಸೆಯಾಗಿ ನಿಲ್ಲಬಾರದು ಎಂದು ಪಕ್ಷವು ಎಲ್ಲರಿಗೂ ಖಡಕ್ಕಾಗಿಯೇ ತಾಕೀತು ಮಾಡಿದ್ದಾರೆ.

ಆಡಳಿತಾತ್ಮಕವಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರೊಬ್ಬರನ್ನು ಬಿಟ್ಟರೆ ಉಳಿದ ಯಾವ ನಾಯಕನೂ ಜಾರಕಿಹೊಳಿ ಪರ ಬ್ಯಾಟಿಂಗ್‌ ಮಾಡುತ್ತಿಲ್ಲ. ಸೀಡಿ ಲೀಕ್‌ ಆದ ಒಂದೆರಡು ದಿನ ಸಂಪುಟದಲ್ಲಿರುವ ಮುಂಬಯಿ ಗೆಳೆಯರು ಬಿಟ್ಟರೆ ಉಳಿದಾವ ಸಚಿವರೂ ರಮೇಶ್‌ ಬೆಂಬಲಕ್ಕೆ ನಿಲ್ಲಲಿಲ್ಲ. ಕ್ರಮೇಣ, ನ್ಯಾಯಾಲಯಕ್ಕೆ ಮೊರೆ ಹೋಗಿ ತಡೆಯಾಜ್ಞೆ ತಂದಿರುವ ಆರು ಸಚಿವರು ಕೂಡ ಜಾರಕಿಹೊಳಿ ಪ್ರಶ್ನೆ ಬಂದ ಕೂಡಲೇ ಮೆಲ್ಲಗೆ ಜಾರಿಕೊಳ್ಳುತ್ತಿದ್ದಾರೆ.

ಇದೆಲ್ಲವನ್ನು ಗಮನಿಸುತ್ತಾ ಹೋದರೆ ಬಿಜೆಪಿಯಲ್ಲಿ ರಮೇಶ್‌ ಜಾರಕಿಹೊಳಿ ಸೈಡ್‌ಲೈನಾಗುತ್ತಿರುವ ರೀತಿಯಲ್ಲಿಯೇ ಕಾಂಗ್ರೆಸ್‌ನಲ್ಲಿ ಡಿಕೆಶಿಯನ್ನೂ ಸೈಡಿಗೆ ತಳ್ಳಲು ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ.

Tags: cd caseDK Shivakumarkarnataka politicsramesh jarkiholi
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಮುಂದಿನ ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ? ಗುಟ್ಟುಬಿಟ್ಟುಕೊಟ್ಟ ಬಂಗಾರಪೇಟೆ ಶಾಸಕ ಎಸ್.ಎನ್‌.ನಾರಾಯಣಸ್ವಾಮಿ

ಮುಂದಿನ ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ? ಗುಟ್ಟುಬಿಟ್ಟುಕೊಟ್ಟ ಬಂಗಾರಪೇಟೆ ಶಾಸಕ ಎಸ್.ಎನ್‌.ನಾರಾಯಣಸ್ವಾಮಿ

Leave a Reply Cancel reply

Your email address will not be published. Required fields are marked *

Recommended

ಯುಪಿಎ ಅವಧಿಯ ಒಂದು ಮಹಾಮೋಸದ ಪ್ರಕರಣ; ಪಾಕಿಸ್ತಾನದ ವಕೀಲನಿಗೆ 1,400  ಕೋಟಿ ರೂಪಾಯಿ ದುಬಾರಿ ಶುಲ್ಕ ಮತ್ತು ಬೆಳಕಿಗೆ ಬಾರದ ಚಿದಂಬರ ರಹಸ್ಯ!!

ಯುಪಿಎ ಅವಧಿಯ ಒಂದು ಮಹಾಮೋಸದ ಪ್ರಕರಣ; ಪಾಕಿಸ್ತಾನದ ವಕೀಲನಿಗೆ 1,400 ಕೋಟಿ ರೂಪಾಯಿ ದುಬಾರಿ ಶುಲ್ಕ ಮತ್ತು ಬೆಳಕಿಗೆ ಬಾರದ ಚಿದಂಬರ ರಹಸ್ಯ!!

4 years ago
ಸಿಎಂಗೆ ಕೌಂಟರ್‌; ಶಿರಾ ಕೆರೆಗಳಿಗೆ ನೀರು ತುಂಬಿಸದಿದ್ದರೆ ವಿಧಾನಸೌಧವರೆಗೂ ಪಾದಯಾತ್ರೆ ಮಾಡುವೆ ಎಂದ ಎಚ್‌ಡಿಕೆ

ಸಿಎಂಗೆ ಕೌಂಟರ್‌; ಶಿರಾ ಕೆರೆಗಳಿಗೆ ನೀರು ತುಂಬಿಸದಿದ್ದರೆ ವಿಧಾನಸೌಧವರೆಗೂ ಪಾದಯಾತ್ರೆ ಮಾಡುವೆ ಎಂದ ಎಚ್‌ಡಿಕೆ

5 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ