• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಮಾತು ಕೇಳದ ಜನರಿಗೆ ಬಿಸಿ: ಕೋವಿಡ್‌ 2ನೇ ಅಲೆ ನಿಯಂತ್ರಣಕ್ಕೆ ಮತ್ತೆ ಬಿಗಿ ನಿರ್ಬಂಧ ಹೇರಿದ ಸರಕಾರ, ಥಿಯೇಟರ್​ಗಳಲ್ಲಿ 50% ಪ್ರೇಕ್ಷಕರು; ಜಿಮ್, ಈಜುಕೊಳ ಸಂಪೂರ್ಣ ಬಂದ್

cknewsnow desk by cknewsnow desk
April 2, 2021
in COVID-19, STATE
Reading Time: 1 min read
0
4 ಶೋಗಳಿಗೆ 154 ಪ್ರೇಕ್ಷಕರು! ಟೋಟಲ್‌ ಕಲೆಕ್ಷನ್‌ 5ರಿಂದ  6 ಸಾವಿರ ಮಾತ್ರ!!
912
VIEWS
FacebookTwitterWhatsuplinkedinEmail

ಬೆಂಗಳೂರು: ಸರಕಾರ ಹೇಳುತ್ತಲೇ ಇದೆ, ಜನರು ಮಾತು ಕೇಳುತ್ತಿಲ್ಲ. ಪರಿಣಾಮ ಸರಕಾರ ಮತ್ತಷ್ಟು ಬಿಗಿ ಕ್ರಮಗಳನ್ನು ಕೈಗೊಂಡಿದೆ.

ಕೋವಿಡ್‌ ನಿಯಂತ್ರಣ ಸರ್ವ ಪ್ರಯತ್ನಗಳನ್ನೂ ಮಾಡುತ್ತಿರುವ ಸರಕಾರ, ಸೋಂಕು ನಿಯಂತ್ರಣಕ್ಕಾಗಿ ಲಸಿಕೆ ಹಾಕುವುದನ್ನು ಚುರುಕುಗೊಳಿಸಲು ನಿರ್ಧರಿಸಿದೆ.

ಮತ್ತೊಂದೆಡೆ, ಆರ್ಥಿಕತೆಗೆ ಪೆಟ್ಟು ಬೀಳದಂತೆ ಎಚ್ಚರ ವಹಿಸಿರುವ ಸರಕಾರ, ಮತ್ತೆ ಲಾಕ್ಡೌನ್, ಸೆಮಿ ಲಾಕ್ಡೌನ್‌ ಹಾಗೂ ನೈಟ್ ಕರ್ಫ್ಯೂ ವಿಧಿಸದಿರಲು ನಿರ್ಧರಿಸಿದೆ. ಆದರೆ ಚಲನಚಿತ್ರ ಮಂದಿರಗಳಲ್ಲಿ ಶೇ.50ರಷ್ಟು ಮಾತ್ರ ಸೀಟಿಂಗ್ ಆಸನ ವ್ಯವಸ್ಥೆಗೆ ಅವಕಾಶ ನೀಡಲಾಗಿದೆ. ಬೆಂಗಳೂರು ನಗರ ಸೇರಿ ಒಟ್ಟು 8 ಜಿಲ್ಲೆಗಳಲ್ಲಿ ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ಕೊಡಲಾಗಿದೆ.

ಜತೆಗೆ; ಎಲ್ಲ ಜಿಲ್ಲೆಗಳಲ್ಲಿ 6-9ನೇ ತರಗತಿಗಳು ಬಂದ್ ಮಾಡಲಾಗಿದೆ. ಜಿಮ್​, ಈಜುಕೊಳ ಮುಚ್ಚುವಂತೆ ಆದೇಶಿಸಲಾಗಿದೆ. ಇನ್ನು; ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳು, ರಾಜಕೀಯ ಸಭೆ, ಪ್ರಚಾರ ಸಭೆಗಳಿಗೆ ಜನ ಸೇರುವಿಕೆಯ ಮೇಲೆ ಮಿತಿ ಹೇರಲಾಗಿದೆ.

ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಈ ಮೇಲಿನ ಸಂಗತಿಗಳನ್ನು ತಿಳಿಸಿದರು. ಅದಕ್ಕೂ ಮೊದಲು ಅವರು ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖಾಧಿಕಾರಿಗಳ ಜತೆ ಮಹತ್ತ್ವದ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಒಂದು ಮಾತನ್ನು ಸ್ಪಷ್ಟವಾಗಿ ಹೇಳಿದ ರವಿಕುಮಾರ್‌ ಅವರು; “ಎಚ್ಚರ ತಪ್ಪುವುದರಲ್ಲಿ ಅರ್ಥವಿಲ್ಲ. ಎಚ್ಚರ ವಹಿಸಿದರೆ ಅಮೂಲ್ಯ ಜೀವವೂ ಉಳಿಯುತ್ತದೆ. ಜೀವನವೂ ಸಾಗುತ್ತದೆ. ಸೋಂಕು ನಿಯಂತ್ರಣಕ್ಕಾಗಿ ಸರಕಾರ ಜಾರಿ ಮಾಡಿರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದೊಂದೇ ದಾರಿ” ಎಂದರು.

ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ ಅನುಸಾರ ಎಲ್ಲ ಕ್ರಮಗಳನ್ನು ಕೈಗೊಂಡು ಹೊಸ ನಿಯಮಗಳನ್ನು ಜಾರಿ ಮಾಡಲಾಗಿದೆ. ಕಾಯ್ದೆ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು ಅವರು ಎಚ್ಚರಿಕೆ ನೀಡಿದರು

ಉಳಿದಂತೆ ಕೈಗಾರಿಕಾ ಪ್ರದೇಶ ಮತ್ತು ಅಪಾರ್ಟ್‌ಮೆಂಟ್ʼಗಳಲ್ಲಿ ಲಸಿಕೆ ನೀಡಲು ನಿರ್ಧರಿಸಲಾಗಿದೆ. ಮನೆಮನೆಗೂ ತೆರಳಿ ಲಸಿಕೆ ಹಾಕುವ ಸ್ಥಿತಿ ಬರುತ್ತದೆ ಎಂದ ಅವರು; ಕೇಂದ್ರ ಸರಕಾರವು ಮಾಸ್ಕ್, ದೈಹಿಕ ಅಂತರ, ಸ್ಯಾನಿಟೈಸೇಷನ್‌ ಮತ್ತಿತರೆ ನಿಯಮಗಳ ಪಾಲನೆಗೆ ಬಿಗಿಸೂಚನೆ ನೀಡಿದೆ. ಕೋವಿಡ್‌ ಮಾರ್ಗಸೂಚಿಯನ್ನು ಪಾಲಿಸದೆ ಅನ್ಯಮಾರ್ಗವಿಲ್ಲ ಎಂದು ರವಿಕುಮಾರ್‌ ಅವರು ತಿಳಿಸಿದರು.

ಕೊರೊನಾ ಎರಡನೇ ಅಲೆ ನಿಯಂತ್ರಿಸಲು ನೂತನ ಮಾರ್ಗಸೂಚಿಗಳನ್ನು ರೂಪಿಸಲಾಗಿದ್ದು ಸಾರ್ವಕಜನಿಕರು ಈ ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಿ ಕೊರೊನಾ ಹಿಮ್ಮೆಟ್ಟಿಸಲು ಸಹಕರಿಸಬೇಕೆಂದು ಕೋರುತ್ತೇನೆ.

ಲಸಿಕೆ ಹಾಕಿಸಿ, ಮುನ್ನೆಚ್ಚರಿಕೆಯೂ ಪಾಲಿಸಿ. pic.twitter.com/T1QYRkC3Xj

— Dr Sudhakar K (Modi ka Parivar) (@DrSudhakar_) April 2, 2021

ಹೊಸ ಮಾರ್ಗಸೂಚಿ

  • ರಾಜ್ಯಾದ್ಯಂತ ಜಿಮ್, ಸ್ವಿಮ್ಮಿಂಗ್ ಫೂಲ್ ಸಂಪೂರ್ಣ ಬಂದ್.
  • ಸಾರಿಗೆ ಬಸ್ಸುಗಳಲ್ಲಿ ನಿಗದಿತ ಆಸನದ ಮೀತಿ ಮೀರುವಂತಿಲ್ಲ.
  • ಎಲ್ಲ ಜಿಲ್ಲೆಗಳಲ್ಲಿ ವಿದ್ಯಾಗಮ ಸೇರಿ ಎಲ್ಲಾ ಶೈಕ್ಷಣಿಕ ಚಟುವಟಿಕೆ ಸ್ಥಗಿತ.
  • ೩೦ ಜಿಲ್ಲೆಗಳಲ್ಲಿ 6ರಿಂದ 9ನೇ ತರಗತಿ ನಡೆಯುವುದಿಲ್ಲ.
  • ಪ್ರಥಮ, ದ್ವಿತೀಯ ಪಿಯುಸಿ ತರಗತಿಗಳು ಈಗಿರುವಂತೆಯೇ ನಡೆಯುತ್ತವೆ. ಈ ತರಗತಿಗಳಿಗೆ ವೈಯಕ್ತಿಕವಾಗಿ ಹಾಜರಾಗುವುದು ಕಡ್ಡಾಯವಲ್ಲ.
  • ಪರೀಕ್ಷಾ ಮಂಡಲೀ, ವಿವಿ ಪರೀಕ್ಷೆಗಳು, ಆರೋಗ್ಯ ವಿಜ್ಞಾನಗಳ ತರಗತಿಗಳನ್ನು ಹೊರತುಪಡಿಸಿ ಉನ್ನತ ಹಾಗೂ ವೃತ್ತಿಪರ ಕೋರ್ಸ್‌ಗಳ ತರಗತಿಗಳ ಸ್ಥಗಿತ
  • ಉನ್ನತ ಶಿಕ್ಷಣ, ವೃತ್ತಿಪರ ಕೋರ್ಸ್‌ಗಳ ವಿದ್ಯಾರ್ಥಿ ನಿಲಯಗಳನ್ನು ಬಿಟ್ಟು ಇತರೆ ಬೋರ್ಡಿಂಗ್ ಶಾಲೆಗಳು, ವಸತಿ ನಿಲಯಗಳನ್ನು ಮುಚ್ಚಲು ಸೂಚನೆ.
  • ಪ್ರತಿಭಟನಾ ರ್ಯಾಲಿ, ಮುಷ್ಕರಗಳನ್ನು ನಡೆಸುವಂತಿಲ್ಲ ಹಾಗೂ ಧಾರ್ಮಿಕ ಆಚರಣೆ, ಜಾತ್ರೆಗಳಿಗೂ ಅವಕಾಶ ಇಲ್ಲ.
  • ಪೂಜಾ ಸ್ಥಳಗಳಲ್ಲಿ ವ್ಯಕ್ತಿಗಳಿಗೆ ಮಾತ್ರ ಅವಕಾಶ, ಪ್ರಾರ್ಥನೆ ಸಲ್ಲಿಸಲು ಮಾತ್ರ ಅನುಮತಿ. ಸಂತೋಷ ಕೂಟಗಳಿಗೆ ನಿರ್ಬಂಧ.
  • ಅಪಾರ್ಟ್‌ಮೆಂಟ್‌, ವಸತಿ ಸಂಕೀರ್ಣಗಳಲ್ಲಿ ಜಿಮ್, ಪಾರ್ಟಿ ಹಾಲ್, ಕ್ಲಬ್ ಹೌಸ್, ಈಜು‌ಕೊಳ ಇತ್ಯಾದಿಗಳ ಕಡ್ಡಾಯ ಬಂದ್.‌
  • ವರ್ಕ್‌ ಫ್ರಂ ಹೋಂ ಮತ್ತೆ ಶುರು ಮಾಡಲು ಕಚೇರಿಗಳಿಗೆ ಸೂಚನೆ.
  • ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಕಲ್ಬುರ್ಗಿ, ದಕ್ಷಿಣ ಕನ್ನಡ, ಉಡುಪಿ, ಬೀದರ್ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಮಾತ್ರ ಥಿಯೇಟರ್‌ಗಳಲ್ಲಿ ಗರಿಷ್ಠ 50%ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ.
  • ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಕಲ್ಬುರ್ಗಿ, ದಕ್ಷಿಣ ಕನ್ನಡ, ಉಡುಪಿ, ಬೀದರ್ ಮತ್ತು ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ಪಬ್‌, ಬಾರ್‌, ಕ್ಲಬ್‌ ಮತ್ತು ರೆಸ್ಟೋರೆಂಟ್‌ಗಳಲ್ಲಿ ಗ್ರಾಹಕರ ಸಂಖ್ಯೆ ಶೇ.50 ಮೀರುವಂತಿಲ್ಲ.

Lead Photo by CDC from Pexels

Tags: cinemaCovid second wavecovid19karnatakalockdown night curfew
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ತವರು ಜಿಲ್ಲೆ ಉಸ್ತುವಾರಿ ‌ಆಪರೇಷನ್: ಸಚಿವ ಡಾ.ಕೆ.ಸುಧಾಕರ್‌ ಕೈತಪ್ಪುತ್ತಾ ಚಿಕ್ಕಬಳ್ಳಾಪುರ ಜಿಲ್ಲಾ ಹೊಣೆಗಾರಿಕೆ

50% ಆಸನ ಭರ್ತಿ: ʼಯುವರತ್ನʼ ಚಿತ್ರತಂಡದ ಮನವಿ ಪುಸ್ಕರಿಸದ ಸರಕಾರ; ಯಾವ ಕಾರಣಕ್ಕೂ ಕೋವಿಡ್‌ ಹೊಸ ಮಾರ್ಗಸೂಚಿ ಬದಲಾವಣೆ ಇಲ್ಲ ಎಂದ ಡಾ.ಸುಧಾಕರ್‌

Leave a Reply Cancel reply

Your email address will not be published. Required fields are marked *

Recommended

ಶಿಕ್ಷಣದಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಹೇಗೆ? ಡಾ.ಕಸ್ತೂರಿ ರಂಗನ್‌ ಅವರು ಹೇಳಿದ್ದೇನು?

ಶಿಕ್ಷಣದಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಹೇಗೆ? ಡಾ.ಕಸ್ತೂರಿ ರಂಗನ್‌ ಅವರು ಹೇಳಿದ್ದೇನು?

5 years ago
ಉಳುವವನಿಂದ ಉಳ್ಳವನಿಗೆ ಭೂಮಿ! ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಲ್ಲಿ ಏನಿದೆ ಸ್ವಾಮಿ?

ಉಳುವವನಿಂದ ಉಳ್ಳವನಿಗೆ ಭೂಮಿ! ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಲ್ಲಿ ಏನಿದೆ ಸ್ವಾಮಿ?

6 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ