• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಎಸ್‌ಟಿ ಮೀಸಲು ಚಳವಳಿ: ಶೇ.7.5ರಷ್ಟು ನೀಡದಿದ್ದರೆ ಹಳ್ಳಿಹಳ್ಳಿಗಳಲ್ಲೂ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಸಮುದಾಯ, ವಾಲ್ಮೀಕಿ ಗುರುಪೀಠದಲ್ಲಿ ಮಹತ್ತ್ವದ ನಿರ್ಧಾರ

cknewsnow desk by cknewsnow desk
April 3, 2021
in STATE
Reading Time: 1 min read
0
ಎಸ್‌ಟಿ ಮೀಸಲು ಚಳವಳಿ: ಶೇ.7.5ರಷ್ಟು ನೀಡದಿದ್ದರೆ ಹಳ್ಳಿಹಳ್ಳಿಗಳಲ್ಲೂ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಸಮುದಾಯ, ವಾಲ್ಮೀಕಿ ಗುರುಪೀಠದಲ್ಲಿ ಮಹತ್ತ್ವದ ನಿರ್ಧಾರ
938
VIEWS
FacebookTwitterWhatsuplinkedinEmail

ನಮ್ಮ ಸಮುದಾಯದ ನಾಯಕರಿಗೆ ಮೊದಲು ಬುದ್ಧಿ ಬರಬೇಕು. ಒಬ್ಬರಿಗೂ ಚಳವಳಿಯ ಬಗ್ಗೆ, ಸಮುದಾಯದ ಹಿತದ ಬಗ್ಗೆ ಕಾಳಜಿ ಇಲ್ಲ ಎಂದು ಬೇಸರಿಸಿಗೊಂಡ ಶ್ರೀಗಳು.


ದಾವಣಗೆರೆ/ರಾಜನಹಳ್ಳಿ: ಪರಿಶಿಷ್ಟ ವರ್ಗಕ್ಕೆ ಈ ಬಾರಿ ಶೇ.7.5 ಮೀಸಲಾತಿ ನೀಡದಿದ್ದರೆ ರಾಜ್ಯದ ಮೂಲೆ ಮೂಲೆಯ ಹಳ್ಳಿಹಳ್ಳಿಗಳಿಂದ ಉಗ್ರ ಹೋರಾಟಕ್ಕೆ ವೇದಿಕೆ ಸಜ್ಜುಗೊಳಿಸಲು ವಾಲ್ಮೀಕಿ ಸಮುದಾಯ ತೀರ್ಮಾನಿಸಿದೆ.

ದಾವಣಗೆರೆ ಜಿಲ್ಲೆಯ ವಾಲ್ಮೀಕಿ ಗುರುಪೀಠ ರಾಜನಹಳ್ಳಿ ಆಶ್ರಮದಲ್ಲಿ ವಾಲ್ಮೀಕಿ ಗುರುಪೀಠದ ಸಂಸ್ಥಾಪಕರಾದ ಪುಣ್ಯಾನಂದಪುರಿ ಸ್ವಾಮೀಜಿಯವರು 14ನೇ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ವಿವಿಧ ಜಿಲ್ಲೆಗಳಿಂದ ಆಗಮಿಸಿದ ವಾಲ್ಮೀಕಿ ಧರ್ಮದರ್ಶಿಗಳು, ಪ್ರಮುಖ ಮುಖಂಡರ ಸಭೆಯಲ್ಲಿ ಪುಣ್ಯಾನಂದಪುರಿ ಶ್ರೀಗಳ ಸ್ಮರಣೆ ಮಾಡಲಾಯಿತು.

ಈ ಸಮಯದಲ್ಲಿ ಮೀಸಲಾತಿ ಬಗ್ಗೆ ಚರ್ಚೆ ಆರಂಭವಾಯಿತು. ಆಗ ಮಾತನಾಡಿದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ, ನಮ್ಮ ಸಮುದಾಯದ ನಾಯಕರಿಗೆ ಮೊದಲು ಬುದ್ಧಿ ಬರಬೇಕು. ಒಬ್ಬರಿಗೂ ಚಳವಳಿಯ ಬಗ್ಗೆ, ಸಮುದಾಯದ ಹಿತದ ಬಗ್ಗೆ ಕಾಳಜಿ ಇಲ್ಲ. ನಾನೇ ಹಲವು ಬಾರಿ ವಿಧಾನ ಸೌಧದ ಮೆಟ್ಟಿಲು ಹತ್ತಿದರೂ ಸ್ಪಂದಿಸುತ್ತಿಲ್ಲ. ಸಮಾಜಕ್ಕೆ ಸ್ಪಷ್ಟ ಸಂದೇಶ ನೀಡುತ್ತಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ ಒತ್ತಡ ಹೇರಲು ಮುಂದಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತ್ರಿಸದಸ್ಯ ಸಮಿತಿಯಿಂದ ಕೈ ಬಿಡಲು ಒತ್ತಾಯ

ಪರಿಶಿಷ್ಟ ವರ್ಗದ ಮೀಸಲಾತಿ ಪ್ರಮಾಣ ಹೆಚ್ಚಿಸಲು ಆಗ್ರಹಿಸಿ 30 ವರ್ಷದಿಂದ ಹೋರಾಟ ನಢಯುತ್ತಿದೆ. ನಾನು ಪಾದಯಾತ್ರೆ ಮಾಡಿದೆ. ಫ್ರೀಡಂ ಪಾರ್ಕ್ʼನಲ್ಲಿ ಧರಣಿ ಕುಳಿತೆ. ಆದರೆ ನಮ್ಮವರೇ ನಾಯಕರು ಭರವಸೆ ನೀಡಿ ಹೋರಾಟ ಹಿಂಪಡೆಯುವಂತೆ ಮಾಡಿದರು. ಅದಾದ ಬಳಿಕ ಹಲವು ಬಾರಿ ಸಭೆ ನಡೆಸಿದರೂ ಪರಿಶಿಷ್ಟ ವರ್ಗ ಮದ ಮೀಸಲಾತಿ ವಿಚಾರವನ್ನು ತ್ರಿ ಸದಸ್ಯ ಸಮಿತಿ ವ್ಯಾಪ್ತಿಯಿಂದ ಹೊರಗಿಡಲು ಒತ್ತಡ ಹೇರಲು ಎಲ್ಲ ಶಾಸಕರಿಗೂ ಹಲವು ಸಭೆಗಳಲ್ಲಿ ಹೇಳಿದ್ದೇವೆ. ಆದರೆ ನಮ್ಮವರೇ ಸಮುದಾಯದ ಪರವಾದ ಬದ್ಧತೆ ಪ್ರದರ್ಶಿಸುತ್ತಿಲ್ಲ ಎಂದು ಪ್ರಸನ್ನಾನಂದಪುರಿ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದರು.

ಜೆಡಿಎಸ್ ನಾಯಕ ಹೊದಿಗೆರೆ ರಮೇಶ್ ಮಾತನಾಡಿ, “ಸಮುದಾಯವನ್ನ ಇಂದು ಹಲವು ಮಜಲುಗಳಲ್ಲಿ ಕಟ್ಟಿ ಬೆಳೆಸಬೇಕಿದೆ. ಇಂದು ಸಮಾಜ ಕಲ್ಯಾಣ ಇಲಾಖಡ ಸಚಿವರಾದ ಶ್ರೀರಾಮುಲು ಪ್ರತಿ ಭಾರಿ ಮೀಸಲಾತಿ ಪಡೆಯುತ್ತೇವೆ ಎನ್ನುತ್ತಿದ್ದಾರೆ. ಮೀಸಲಾತಿಗಾಗಿ ಸಂಪುಟ ಉಪ ಸಮಿತಿ ರಚಿಸಿರುವುದು ನಿಮ್ಮ ನೇತೃತ್ವದಲ್ಲಿ. ಆದರೆ ಮತ್ತೊಂದು ತ್ರಿ ಸದಸ್ಯ ಸಮಿತಿ ರಚನೆಗೆ ಯಾಕೆ ಅವಕಾಶ ಮಾಡಿಕೊಟ್ರಿ? ನಿಮಗೆ ಬುದ್ದಿ ಇರಲಿಲ್ಲವಾ?” ಎಂದು ಪ್ರಶ್ನಿಸಿದರು.

ದಲಿತ ನಾಯಕರ ದಮನಕ್ಕೆ ಕುತಂತ್ರ

ಕರ್ನಾಟಕ ನಾಯಕರ ಒಕ್ಕೂಟದ ಸಂಸ್ಥಾಪಕ ರಮೇಶ್ ಹಿರೇಜಂಬೂರು ಮಾತನಾಡಿ, “ನಾಯಕ ಸಮಾಜದ ಎಲ್ಲ ಶಾಸಕರು ಒಟ್ಟಾಗಬೇಕು. ಮೀಸಲಾತಿ ವಿಚಾರದಲ್ಲಿ ಸ್ಪಷ್ಟ ನಿಲುವು ತಳೆಯಬೇಕು. ಸಭೆ ಕರೆದಾಗೆಲ್ಲ ಶಾಸಕರು ತಪ್ಪಿಸಿಕೊಳ್ಳುತ್ತಾರೆ. ಕೇವಲ ಒಬ್ಬ ಶಾಸಕರು ಕೂಡ ಸದನದಲ್ಲಿ ಶೇ.7.5 ಮೀಸಲಾತಿ ಬಗ್ಗೆ ಧ್ವನಿ ಎತ್ತಲಿಲ್ಲ. ಚರ್ಚೆಗೆ ಅವಕಾಶವನ್ನೂ ನೀಡಲಿಲ್ಲ. ಇದರ ಅರ್ಥ ತೆರೆ ಮರೆಯಲ್ಲಿ ದಲಿತ ನಾಯಕರನ್ನ ಪೌರೋಹಿತ್ಯ ಶಾಹಿ ವರ್ಗ ದಮನಗೊಳಿಸುವ ತಂತ್ರ ಮಾಡುತ್ತಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳಿಗೆ ನೀಡುತ್ತಿರುವ ಮೀಸಲಾತಿ ಕಿತ್ತೊಗೆದು ಆರ್ಥಿಕ ಮೀಸಲಾತಿ ಜಾರಿಗೆ ತರುವ ಹುನ್ನಾರವನ್ನ ವ್ಯವಸ್ಥಿತವಾಗಿ ಮಾಡಲಾಗುತ್ತಿದೆ‌. ಆದ್ದರಿಂದ ಪರಿಶಿಷ್ಟ ಜಾತಿ ಹಾಗೂ ವರ್ಗದ ನಾಯಕರು ಒಟ್ಟಾಗಿ ಇದರ ಬಗ್ಗೆ ಜಾಗೃತಿ ಮೂಡಿಸಬೇಕು. ಜಾಗೇ ಹೋರಾಟ ನಡೆಸಬೇಕು” ಎಂದರು.

ಸುಪ್ರೀಂ ಕೋರ್ಟ್ ಇನ್ನು ಎಷ್ಟು ತಲೆಮಾರಿಗೆ ಮೀಸಲಾತಿ ನೀಡ್ತೀರಿ ಎಂದು ಕೇಳುತ್ತೆ. ಆದರೆ ಸರ್ಕಾರಗಳು ಎಲ್ಲಿ ಸಮಾನತೆಯ ಹಾದಿಯಲ್ಲಿ ಅಭಿವೃದ್ಧಿ ಕೆಲಸಗಳನ್ನ ಮಾಡಿವೆ? ಇವುಗಳನ್ನ ನ್ಯಾಯಾಲಯಗಳಿಗೂ ಮನವರಿಕೆ ಮಾಡಿಕೊಡುವ ಕೆಲಸ ಆಗಬೇಕು. ಒಂದು ಕಡೆ ಮೀಸಲಾತಿ ತೆಗೆಯುವ ಕುತಂತ್ರ ಮತ್ತೊಂದೆಡೆ ದಲಿತ ನಾಯಕರ ಧ್ವನಿ ಅಡಗಿಸುವ ಹುನ್ನಾರ ನಡೆಯುತ್ತಿರುವುದರ ವಿರುದ್ಧ ಜಾಗೃತರಾಗಬೇಕು ಎಂದು ಅವರು ಎಚ್ಚರಿಸಿದರು.

ಸಭೆಯಲ್ಲಿ ಶಾಸಕರಾದ ರಾಮಚಂದ್ರಪ್ಪ, ಧರ್ಮದರ್ಶಿಗಳಾದ ಟಿ. ಓಬಳಪ್ಪ, ಡಾ. ವಾಲ್ಮೀಕಿ, ಡಾ. ಕೆ.ಆರ್. ಪಾಟೀಲ್, ಜಂಬಯ್ಯ ನಾಯಕ, ಎ.ಬಿ. ರಾಮಚಂದ್ರಪ್ಪ, ವೆಂಕಟರಮಣಪ್ಪ ಕೋಲಾರ, ಟ್ರಸ್ಟಿಗಳಾದ ಮಲ್ಲಪ್ಪ ಕೌಜಲಗಿ, ನಾಗರಾಜಪ್ಪ, ಶಾಂತಕುಮಾರ್ ಸುರಪುರ, ಕಾಂಗ್ರೆಸ್ ನಾಯಕಿ ನಾಗವೇಣಿ, ತುಮಕೂರು ಜಿ.ಪಂ. ಮಾಜಿ ಅಧ್ಯಕ್ಷೆ ಕುಸುಮಾ ಜಗನ್ನಾಥ್, ಜಂಬೂರು ನಾಯಕರ ಪಡೆ ರಾಜ್ಯಾಧ್ಯಕ್ಷ ಹಾಗಲವಾಡಿ ಶಂಕರ್, ಸೈನಿಕ ಶಿವಾಜಿ, ರಾಮಚಂದ್ರ ಚಾ.ನಗರ ಮತ್ತಿತರರು ಉಪಸ್ಥಿತರಿದ್ದರು.

ಹಕ್ಕ-ಬುಕ್ಕರು ವಾಲ್ಮೀಕಿ ಸಮುದಾಯದವರಾ?

ಮುಮ್ಮಡಿ ಸೀಗನಾಯಕ ಅವರ ಮಗ ವೀರ ಕಂಪಿಲರಾಯ, ಅವರ ಮಗ‌ ಗಂಡುಗಲಿ ಕುಮಾರರಾಮ, ಆತನ ಸೋದರಿ ಮಾರೆವ್ವ ನಾಯಕ ಸಮುದಾಯದ ಕುಡಿಗಳು. ಕುರಗೋಡು ಸಂಸ್ಥಾನದ ಭೂಪನಾಯಕ ಹಾಗೂ ಅವರ ಪುತ್ರ  ಸಂಗಮ ವಂಶಸ್ತರು ನಾಯಕ ಸಂಗಮ ನಾಯಕ ಸಮುದಾಯದವರು. ಹೀಗಿದ್ದಮೇಲೆ ಮಾರೆವ್ವ – ಸಂಗಮನ ಮಕ್ಕಳಾದ ಹಕ್ಕ-ಬುಕ್ಕ ಹೇಗೆ ಬೇರೆ ಸಮುದಾಯದವರಾಗ್ತಾರೆ? ಹಕ್ಕ-ಬುಕ್ಕ ಇಬ್ಬರೂ ವಾಲ್ಮೀಕಿ ಸಮುದಾಯದವರು. ಇತ್ತೀಚೆಗೆ ಇತಿಹಾಸ ತಿರುಚಲಾಗುತ್ತಿದೆ‌. ಹೀಗಾಗಿ ರಾಜ್ಯದ ಎಲ್ಲಡೆ 18-04ರಂದು ವಿಜಯನಗರ ಸಾಮ್ರಾಜ್ಯ ಸಂಸ್ಥಾಪನಾ ದಿನವನ್ನು ಆಚರಿಸಬೇಕು ಎಂದು ಕರೆ ನೀಡಲು ಪ್ರಾಸ್ತಾವಿಕ ನುಡಿಯಲ್ಲಿ ಹರ್ತಿಕೋಟೆ ವೀರೇಂದ್ರ ಸಿಂಹ ಆಗ್ರಹಿಸಿದರು. ಅದನ್ನು ಸಭೆ ಒಪ್ಪಿಗೆ ಸೂಚಿಸಿತು.

ಲೆಕ್ಕಪತ್ರ ಮುಂದಿಟ್ಟ ಶ್ರೀಗಳು

ವಾಲ್ಮೀಕಿ ಜಾತ್ರಾ ಮಹೋತ್ಸವದ ಖರ್ಚು ವೆಚ್ಚಗಳನ್ನು ಪ್ರಸನ್ನಾನಂದಪುರಿ ಸ್ವಾಮೀಜಿ ಸಭೆಯ ಮುಂದಿಟ್ಟರು. 2020ರಲ್ಲಿ 3.37 ಕೋಟಿ ಹಣ ಸಂಗ್ರಹವಾಗಿತ್ತು. ಆಗ ಜಾತ್ರಾ ಮಹೋತ್ಸವ ನಡೆಸಿ 1.61 ಕೋಟಿ ಉಳಿತಾಯ ಮಾಡಿದ್ದು, ಸಮುದಾಯದ ವಿದ್ಯಾರ್ಥಿಗಳಿಗೆ ಏಕಲವ್ಯ ವಿದ್ಯಾ ನಿಧಿಗಾಗಿ 1.5 ಕೋಟಿ ರೂ. ಫಿಕ್ಸೆಡ್ ಡೆಪಾಸಿಟ್ ಇಡಲಾಗಿದೆ. ಈ ಬಾರಿ ಜಾತ್ರಾ ಮಹೋತ್ಸವಕ್ಕೆ 2,02,73,859 ರೂ. ಸಂಗ್ರಹವಾಗಿದ್ದು, 1,72,79,788 ರೂ. ಉಳಿತಾಯ ಮಾಡಿರುವುದಾಗಿ ವಿವರಣೆ ನೀಡಿದರು.

Tags: karnatakarajenahallist reservation in karnatakavalmiki gurupeeta
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ದುಡ್ಡು ಖರ್ಚು ಮಾಡಿ ಚುನಾವಣೆಗಳನ್ನು ಗೆಲ್ಲುತ್ತಿಲ್ಲ ಎಂದ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ದುಡ್ಡು ಖರ್ಚು ಮಾಡಿ ಚುನಾವಣೆಗಳನ್ನು ಗೆಲ್ಲುತ್ತಿಲ್ಲ ಎಂದ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್

Leave a Reply Cancel reply

Your email address will not be published. Required fields are marked *

Recommended

KSRTC ನೌಕರರಿಗೆ ಒಳ್ಳೆಯ ಸುದ್ದಿ

ಶಕ್ತಿ ಯೋಜನೆ: ಆಧಾರ್ ನಕಲು, ಡಿಜಿ ಲಾಕರ್ ಪ್ರತಿ ತೋರಿದರೂ ಮಹಿಳೆಯರ ಪ್ರಯಾಣಕ್ಕೆ ಅವಕಾಶ

2 years ago
ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಜನ್ಮದಿನ; ಗುಡಿಬಂಡೆಯಲ್ಲಿ ಅನ್ನದಾನ

ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಜನ್ಮದಿನ; ಗುಡಿಬಂಡೆಯಲ್ಲಿ ಅನ್ನದಾನ

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ